Home ಕರಾವಳಿ Archive by category ಪುತ್ತೂರು (Page 73)

ಪುತ್ತೂರಿನಲ್ಲಿ ಘನತ್ಯಾಜ್ಯ ವಿಲೇವಾರಿ ವಾಹನ ಹಸ್ತಾಂತರ

ಸ್ವಚ್ಛ ಭಾರತ ಮಿಷನ್ ಹಾಗೂ ಗ್ರಾ.ಪಂ.15 ನೇ ಹಣಕಾಸು ಯೋಜನೆಯಡಿ ತಾಲೂಕಿನ ಆರು ಗ್ರಾ.ಪಂ.ಗಳಿಗೆ ತಲಾ 7.80 ಲಕ್ಷ ರೂ. ವೆಚ್ಚದ ಘನ ತ್ಯಾಜ್ಯ ವಿಲೇವಾರಿ ವಾಹನ ಹಸ್ತಾಂತರ ಕಾರ್ಯಕ್ರಮ ಪುತ್ತೂರಿನ ಮಿನಿ ವಿಧಾನಸೌಧದ ಮುಂಭಾಗದಲ್ಲಿ ನಡೆಯಿತು. ಶಾಸಕ ಸಂಜೀವ ಮಠಂದೂರು ವಾಹನ ಹಸ್ತಾಂತರಿಸಿ ಮಾತನಾಡಿ, ಸ್ವಚ್ಛ ಭಾರತದಕಲ್ಪನೆ ಸಾಕಾರವಾಗಲು ಗ್ರಾಮ ಮಟ್ಟದಿಂದಲೇ ಜಾಗೃತಿಯ

ದರೋಡೆ ಪ್ರಕರಣ – ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ಪೊಲೀಸರು

ಪುತ್ತೂರು: 26 ವರ್ಷಗಳ ಹಿಂದೆ ಸಾಲ್ಮರದಲ್ಲಿ ನಿವೃತ್ತ ತಹಸೀಲ್ದಾರ್ ಲಿಂಗಪ್ಪ ಗೌಡ ಅವರ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ. ಕೇರಳದ ಎರ್ನಾಕುಲಂ ನಿವಾಸಿ ಜೊಡ್‌ಸನ್ ಎಂಬವರು ಆರೋಪಿ. ಜೊಡ್‌ಸನ್ ಅವರು 1995 ರಲ್ಲಿ ಪುತ್ತೂರು ಸಾಲ್ಮರದಲ್ಲಿ ನಿವೃತ್ತ ತಹಶೀಲ್ದಾರ್ ಲಿಂಗಪ್ಪ ಗೌಡ ಅವರ ಮನೆಗೆ ಹೋಗಿ ನೀರು ಕೇಳುವ ನೆಪದಲ್ಲಿ ಲಿಂಗಪ್ಪ

ಪುತ್ತೂರಿನಲ್ಲಿ ಅಕ್ರಮವಾಗಿ ದಾಸ್ತಾನಿಟ್ಟ ಮರದ ದಿಮ್ಮಿಗಳ ವಶ

ಪುತ್ತೂರು ತಾಲೂಕು ಅರಿಯಡ್ಕ ಗ್ರಾಮದ ಮಡ್ಯಂಗಳ ಎಂಬಲ್ಲಿ ಅರುಣ್ ಕುಮಾರ್ ಪಿ ರವರ ಮನೆಯಲ್ಲಿ ಅಕ್ರಮವಾಗಿ ಬೀಟೆ, ಸಾಗುವಾನಿ,ಹಲಸು ಹಾಗೂ ಇನ್ನಿತರ ಜಾತಿಯ ಸೈಜು ಮತ್ತು ದಿಮ್ಮಿಗಳನ್ನು ದಾಸ್ತಾನಿಟ್ಟ ಬಗ್ಗೆ ಬಂದ ಖಚಿತ ವರ್ತಮಾನದಂತೆ ಒಟ್ಟು 2.242 ಘನ ಮೀಟರ್ ಸೈಜುಗಳು ಮತ್ತು ಮೋಪನ್ನು ಹಾಗೂ ಅವುಗಳನ್ನು ಸಾಗಾಟ ಮಾಡಲು ಬಳಸಿದ ವಾಹನ ಜೀಪು ಸಂಖ್ಯೆ ಕೆಎ 31 ಎಮ್ 0446 ನ್ನು ಇಲಾಖಾ ಪರ ಅಮಾನತು ಪಡಿಸಿಕೊಳ್ಳಲಾಗಿದೆ. ಸೊತ್ತುಗಳ ಹಾಗೂ ವಾಹನ ಮೌಲ್ಯ 3 ಲಕ್ಷ […]

ಸೆ.27ರಿಂದ ಪುತ್ತೂರಿನ ಸೋಮವಾರ ಸಂತೆಗೆ ಚಾಲನೆ

ಪುತ್ತೂರು: ಕೋವಿಡ್ ಪ್ರಥಮ ಅಲೆಯಿಂದಾಗಿ ಒಂದು ವರ್ಷದ ಸ್ಥಗಿತಗೊಂಡು ಎ.26ಕ್ಕೆ ಪುನರಾರಂಭಗೊಂಡಿದ್ದರೂ, ಕೋವಿಡ್ 2ನೇ ಅಲೆಯಿಂದಾಗಿ ಮತ್ತೆ ಸ್ಥಗಿತಗೊಂಡಿದ್ದ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ನಡೆಯುವ ಸೋಮವಾರ ಸಂತೆ ಇದೀಗ ಮತ್ತೆ ಜೀವ ಪಡೆದು ಕೊಂಡಿದೆ. ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ಕಡಿಮೆ ಮತ್ತು ವಾರಾಂತ್ಯದ ಕರ್ಫ್ಯೂ ತೆರವಾದ್ದರಿಂದ ಸೆ.27 ರಂದು ಕಿಲ್ಲೆ ಮೈದಾನದ ಸೋಮವಾರದ ಸಂತೆಗೆ ಚಾಲನೆ ಸಿಗಲಿದೆ. ಕೋವಿಡ್ ಸೋಂಕು ಆರಂಭ ಆದ ಸಂದರ್ಭ ಕೋವಿಡ್ ಲಾಕ್‌ಡೌನ್

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಧರಣಿ ಸತ್ಯಾಗ್ರಹ : ಸೆ.27ರಂದು ಭಾರತ್ ಬಂದ್‍ಗೆ ಕರೆ

10 ತಿಂಗಳಿಂದ ದೆಹಲಿಯ ಗಡಿಗಳಲ್ಲಿ ರೈತರು ಹೋರಾಟ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಇದಕ್ಕೆಕಾಳಜಿ ತೋರಿಸುತ್ತಿಲ್ಲ.ನಿರ್ಲಕ್ಷ್ಯ ತೋರುತ್ತಿದೆ. ಇದರಿಂದ ರೈತರ ಬಗ್ಗೆ ಒಂದು ಕೆಟ್ಟ ವಾತಾವರಣನಿರ್ಮಾಣವಾಗಿದೆ.ಇದರಿಂದ 600 ರಷ್ಟು ರೈತರು ತೀರಿಕೊಂಡಿದ್ದು, ಅವರಿಗೆ ಪರಿಹಾರ ಏನೂ ಕೊಟ್ಟಲ್ಲ. ರೈತರನ್ನು ಸಮಾಧಾನಪಡಿಸುವ ಪ್ರಯತ್ನ ಕೂಡಾ ಸರಕಾರ ಮಾಡಿಲ್ಲ. ಹಾಗಾಗಿ ಸಂಯುಕ್ತ ಕಿಸಾನ್ ಮೋರ್ಚಾ ಇಡೀ ದೇಶಾದ್ಯಂತ ಭಾರತ ಬಂದ್‍ಗೆ ಕರೆ ಕೊಟ್ಟದೆ. ಅದರ ಪ್ರಯುಕ್ತ ನಾವು

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿದ ಸರ್ಕಾರಿ ಬಸ್

ಕಡಬ: ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಳೆಗೆ ಬಿದ್ದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪದ ಊರ್ನಡ್ಕ ಎಂಬಲ್ಲಿ ಗುರುವಾರ ಸಂಜೆ ಸಂಭವಿಸಿದೆ. ಚಳ್ಳಕೆರೆಯಿಂದ ಧರ್ಮಸ್ಥಳ ಮಾರ್ಗವಾಗಿ ಗುಂಡ್ಯ ಮೂಲಕ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಬಸ್ ಉದನೆ – ಎಂಜಿರ ಮಧ್ಯದ ಊರ್ನಡ್ಕ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ.

ಕುಮಾರಧಾರ ನದಿಯಲ್ಲಿ ಮೃತದೇಹ ಪತ್ತೆ

ಕಡಬ ಸೆಪ್ಟಂಬರ್ 22ರಂದು ಸ್ನಾನಕ್ಕೆಂದು ನದಿ ತೀರಕ್ಕೆ ತೆರಳಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹವು ಗುರುವಾರದಂದು ಪತ್ತೆಯಾಗಿದೆ. ನಾಪತ್ತೆಯಾದ ವ್ಯಕ್ತಿಯನ್ನು ಕಡಬ ತಾಲೂಕು ಕೊಯಿಲ ಗ್ರಾಮದ ಪರಂಗಾಜೆ ನಿವಾಸಿ ಚಂದಪ್ಪ ಗೌಡ(67) ಎಂದು ಗುರುತಿಸಲಾಗಿದೆ. ಇವರು ಮಂಗಳವಾರದಂದು ಮನೆ ಸಮೀಪ ಹರಿಯುತ್ತಿರುವ ಕುಮಾರಧಾರ ನದಿಗೆ ಸ್ನಾನಕ್ಕೆಂದು ಹೋದವರು ಕಾಣೆಯಾಗಿದ್ದರು. ಈ ಬಗ್ಗೆ ಮೃತರ ಪುತ್ರಿ ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇಂದು

ಪುತ್ತೂರಿನಲ್ಲಿ ಪೌರ ಕಾರ್ಮಿಕ ದಿನಾಚರಣೆ

ಪುತ್ತೂರು: ಪೌರ ಕಾರ್ಮಿಕರ ಜೊತೆಗೆ ನಾಗರಿಕರು ಸಹಕರಿಸಿದಾಗ ಮಾತ್ರ ಸ್ವಚ್ಚ ನಗರ ನಿರ್ಮಾಣ ಸಾಧ್ಯವಿದ್ದು, ನಮ್ಮ ಕಸವನ್ನು ನಾವೇ ನಿರ್ವಹಿಸುವಂತಹ ಮನೋಭಾವ ಪ್ರತಿಯೊಬ್ಬರಲ್ಲಿಯೂ ಬೆಳೆಯಬೇಕು ಎಂದು ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲ ಸೀತಾರಾಮ ಕೇವಳ ತಿಳಿಸಿದರು. ಅವರು ಪುತ್ತೂರಿನ ಪುರಭವನದಲ್ಲಿ ಗುರುವಾರ ನಡೆದ ಪೌರಕಾರ್ಮಿಕರ ದಿನಾಚರಣೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ಸ್ವಸ್ಥ ಸಮಾಜ ನಿರ್ಮಾಣದಲ್ಲಿ ನಾಗರಿಕ ಜವಾಬ್ದಾರಿ

ಕಡಬದ್ವಯ ಸಂಸ್ಮರಣಾ ಯಕ್ಷಗಾನ ಪ್ರಶಸ್ತಿ- 2021 : ಹಿರಿಯ ಹಿಮ್ಮೇಳನ ವಾದಕರಾದ ಮೋಹನ್ ಶೆಟ್ಟಿಗಾರ್ ಅವರಿಗೆ ಪ್ರಶಸ್ತಿ

ಕರಾವಳಿಯ ಹೆಮ್ಮೆಯ ಕಲೆಯಾಗಿರುವ ಯಕ್ಷಗಾನ ಕ್ಷೇತ್ರದ ತೆಂಕುತಿಟ್ಟಿನ ಹೆಸರಾಂತ ಹಿಮ್ಮೇಳ ವಾದಕರಾದ ಕಡಬ ನಾರಾಯಣ ಆಚಾರ್ಯರ ಸ್ಮರಣಾರ್ಥ ಕಡಬದ್ವಯ ಸಂಸ್ಮರಣಾ ಯಕ್ಷಗಾನ ಪ್ರಶಸ್ತಿ- 2021ನ್ನು ಮಂಗಳೂರಿನ ಹಿರಿಯ ಹಿಮ್ಮೇಳನ ವಾದಕರಾದ ಮೋಹನ್ ಶೆಟ್ಟಿಗಾರ್ ಮಿಜಾರು ಇವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಕಡಬ ಸ್ಮಾರಕ ಸಮಿತಿಯ ಬೆಳುವಾಯಿ ಸುಂದರ ಆಚಾರಿ ತಿಳಿಸಿದರು. ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು.

ಪುತ್ತೂರಿನ ಕೃಷ್ಣನಗರ ಚರ್ಚ್ ಬಳಿಯ ಅಂಗಡಿಗಳಿಂದ ಕಳವು

ಪುತ್ತೂರು: ಪುತ್ತೂರು ಉಪ್ಪಿನಂಗಡಿ ರಸ್ತೆಯ ಕೃಷ್ಣನಗರ ಚರ್ಚ್ ಬಳಿಯ ಎರಡು ಅಂಗಡಿಗಳಿಗೆ ಕಳ್ಳರು ನುಗ್ಗಿದ ಘಟನೆ ಸೆ.23 ರಂದು ಬೆಳಕಿಗೆ ಬಂದಿದೆ. ಕೃಷ್ಣನಗರ ಬಳಿಯ ಗೋಪಾಲ ಎಂಬವರ ಅಂಗಡಿಗೆ ಕಳ್ಳರು ಪಕ್ಕದ ಮರ ಏರಿ ಶೀಟ್ ಜಾರಿಸಿ ಒಳನುಗ್ಗಿ ಅಂಗಡಿಯಲ್ಲಿ ದಾಸ್ತಾನಿದ್ದ 2 ಗೋಣಿ ಸಿಗರೇಟು ಪ್ಯಾಕೇಟ್ ಮತ್ತು ಗುಡ್ಕಾ ಹಾಗು ಡ್ರಾವರ್ ನಲ್ಲಿ ಇದ್ದ ಚಿಲ್ಲರೆ ಹಣವನ್ನು ಕಳವು ಮಾಡಿದ್ದಾರೆ. ಪಕ್ಕದ ಲತೀಫ್ ಎಂಬವರ ತರಕಾರಿ ಅಂಗಡಿಯ ರೋಲಿಂಗ್ ಶೆಟರ್ ಮೂಲಕ ಒಳನುಗ್ಗಿದ