Home ಕರಾವಳಿ Archive by category ಪುತ್ತೂರು (Page 79)

ತಲೆಮರೆಸಿಕೊಂಡಿದ್ದ ಖೋಟಾ ನೋಟು ಪ್ರಕರಣದ ಆರೋಪಿಯ ಬಂಧನ

ಪುತ್ತೂರು: 19 ವರ್ಷಗಳ ಹಿಂದೆ ಖೋಟಾ ನೋಟು ಸಾಗಾಟದ ವೇಳೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಸೆಂಟ್ಯಾರ್‌ನಲ್ಲಿ ಸಂಪ್ಯ ಪೊಲೀಸರಿಂದ ಬಂಧಿತರಾಗಿದ್ದ ನಾಲ್ವರು ಆರೋಪಿಗಳ ಪೈಕಿ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೇರಳ ಮೂಲದ ಆರೋಪಿಯನ್ನು ಕುಂಬ್ಳೆಯಲ್ಲಿ ಸಂಪ್ಯ ಪೊಲೀಸರು ಬಂಧಿಸಿದ್ದಾರೆ. ಕಾಸರಗೋಡು ಮುಳಿಯಾರ್ ಬೋವಿಕ್ಕಾನ ಪರಪಿಡಕ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ, ಕದಿರು ವಿನಿಯೋಗ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಾದ್ರಪದ ಶುಕ್ಲ ಹಸ್ತಾ ನಕ್ಷತ್ರದ ಶುಭದಿನವಾದ  ಇಂದು ಸಂಪ್ರದಾಯದಂತೆ ಕದಿರು ವಿನಿಯೋಗ ಉತ್ಸವ ನಡೆಯಿತು. ಸಾಂಪ್ರದಾಯಿಕ ಪದ್ಧತಿಯಂತೆ ಬೆಳಗ್ಗೆ ದೇವಳದ ಒಳಾಂಗಣದಲ್ಲಿ ನಿತ್ಯ ಬಲಿ ಉತ್ಸವದೊಂದಿಗೆ ಸರ್ವ ವಾದ್ಯದೊಂದಿಗೆ ಕೆರೆಯ ಬಳಿಯ ಅಶ್ವತ್ಥಕಟ್ಟೆಯ ಬಳಿಗೆ ಆಗಮಿಸಿ ಕಟ್ಟೆಯಲ್ಲಿ ತೆನೆ ಪೂಜೆ ನಡೆಯಿತು. ಬಳಿಕ ತೆನೆ ಕಟ್ಟುಗಳೊಂದಿಗೆ ದೇವಳದ ಒಳಾಂಗಣ ಪ್ರವೇಶಿಸಿ ಪೂಜೆ ನಡೆಯಿತು.

ವಿಟ್ಲ ವ್ಯಾಪ್ತಿಯಲ್ಲಿ ಹಾದುಹೋಗಲಿರುವ 400ಕೆವಿ ವಿದ್ಯುತ್: ಕೃಷಿಕರಿಗೆ ತೊಂದರೆ

ವಿಟ್ಲ: ಉಡುಪಿ ಕಾಸರಗೋಡು 400ಕೆವಿ ವಿದ್ಯುತ್ ಮಾರ್ಗ ಸದ್ಯದ ಮಾಹಿತಿಯಂತೆ ವಿಟ್ಲ ಪಟ್ಟಣ ಪಂಚಾಯಿತಿಯ 4-5 ವಾರ್ಡ್ ಗಳಲ್ಲಿ ಹಾದುಹೋಗುತ್ತಿದೆ. ಕೃಷಿಕರಿಗೆ ಹಾಗೂ ಹಲವಾರು ಜಮೀನು ಮಾಲೀಕರಿಗೆ ಸಮಸ್ಯೆಯಾಗುತ್ತಿದ್ದರೂ, ಈ ಬಗ್ಗೆ ಶಾಸಕರಾಗಲಿ, ಈ ಭಾಗದ ಜನಪ್ರತಿನಿಧಿಗಳಾಗಲೀ ಸಂತ್ರಸ್ತ ಜನರ ಪರವಾಗಿ ಧ್ವನಿ ಎತ್ತುತ್ತಿಲ್ಲ ಎಂದು ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವಕ್ತಾರ ರಮಾನಾಥ ವಿಟ್ಲ ಆರೋಪಿಸಿದರು. ಬಂಟ್ವಾಳ ತಾಲೂಕಿನಲ್ಲಿ ಅಗಾಧ ಪ್ರಮಾಣದಲ್ಲಿ ರೈತರಿಗೆ

ವಿಟ್ಲದಲ್ಲಿ ಮೊಂತಿ ಫೆಸ್ಟ್ ಸಂಭ್ರಮ

ಸೂರಿಕುಮೇರು ಸೈಂಟ್ ಜೋಸೆಪ್ ಚರ್ಚ್ ನಲ್ಲಿ ಕೋವಿಡ್ ನಿಯಮ ಪಾಲಿಸಿಕೊಂಡು ಬಹಳ ಸರಳ ರೀತಿಯಲ್ಲಿ ತೆನೆ ಹಬ್ಬ ಆಚರಿಸಲಾಯಿತು. ಫಾದರ್ ಗ್ರೆ ಗರಿ ಪಿರೇರಾ ದಿವ್ಯ ಬಲಿ ಪೂಜೆಯ ನೇತೃತ್ವ ವಹಿಸಿದ್ದರು. ಕಥೊಲಿಕ್ ಸಭಾ ಸೂರಿಕುಮೇರು ಬೊರಿಮಾರ್ ಘಟಕದ ಅಧ್ಯಕ್ಷರಾದ ಸ್ಟೀವನ್ ಮಾರ್ಟಿಸ್ ರವರ ಮಾರ್ಗದರ್ಶನದಲ್ಲಿ ಭಕ್ತಾದಿಗಳಿಗೆ ಕಬ್ಬು ಹಂಚಲಾಯಿತು. ಇನ್ನು ಫಾತಿಮಾ ಮಾತೆಯ ದೇವಾಲಯ ಪೆರುವಾಯಿಯಲ್ಲೂ ಕೂಡ ಕೋವಿಡ್ ಮುನ್ನಚ್ಚರಿಕೆಗಳೊಂದಿಗೆ ಸರಳಾವಾಗಿ ಮೋಂತಿ ಹಬ್ಬ

ವಾಲ್ತಾಜೆಯ ಪರಂಬೋಕು ಹೊಳೆಯಲ್ಲಿ ಅಕ್ರಮ ಮರಳುಗಾರಿಕೆ: ಪೊಲೀಸರಿಂದ ದಾಳಿ

ವಿಟ್ಲ: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕೇರಳ ಗಡಿ ಭಾಗದಲ್ಲಿ ಸಾಲೆತ್ತೂರು ಗ್ರಾಮದ ವಾಲ್ತಾಜೆ ಪರಂಬೋಕು ಹೊಳೆಯಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಸುತ್ತಿದ ಸ್ಥಳಕ್ಕೆ ವಿಟ್ಲ ಪೊಲೀಸರು ದಾಳಿ ನಡೆಸಿ ಹತ್ತು ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸಾಲೆತ್ತೂರು ಗ್ರಾಮದ ವಾಲ್ತಾಜೆ ಎಂಬಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಅಕ್ರವಾಗಿ ಮರಳು ನಡೆಸಲು ತಯಾರಿ ಮಾಡುತ್ತಿದ್ದ ಬಗ್ಗೆ ದಾಳಿ ನಡೆಸಲಾಗಿದೆ. ಈ ಸಂದರ್ಭ ಸೊತ್ತುಗಳಾದ ಹಿಟಾಚಿ-1,

ಉಪ್ಪಿನಂಗಡಿ:ದ್ವಿಚಕ್ರ ವಾಹನಕ್ಕೆ ಟ್ಯಾಂಕರ್ ಢಿಕ್ಕಿ, ಬಾಲಕ ಮೃತ್ಯು, ತಾಯಿ ಸ್ಥಿತಿ ಗಂಭೀರ

ಉಪ್ಪಿನಂಗಡಿ: ಬುಲೆಟ್ ಟ್ಯಾಂಕರ್‌ವೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟ ಹಾಗೂ ಅವನ ತಾಯಿ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ ಬೈಪಾಸ್‌ನಲ್ಲಿ ನಡೆದಿದೆ. ಉಪ್ಪಿನಂಗಡಿ ಸಮೀಪದ ಕಲ್ಲೇರಿ ನಿವಾಸಿ ಅದ್ವೀತ್ (16) ಮೃತಪಟ್ಟ ಬಾಲಕ. ಅಂಗನವಾಡಿಯಲ್ಲಿ ಟೀಚರ್ ಆಗಿರುವ ಬಾಲಕನ ತಾಯಿ ಕೂಡ ಗಂಭೀರವಾಗಿ ಗಾಯಗೊಂಡಿದ್ದು ಅವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕ ತನ್ನ ತಾಯಿಯ ಜೊತೆ ತೆರಳುತ್ತಿದ್ದ ವೇಳೆ

ಉಪ್ಪಿನಂಗಡಿಯಲ್ಲಿ ಮೀನು ಅಂಗಡಿಗೆ ಬೆಂಕಿ ಹಚ್ಚಿದ್ದ ಪ್ರಕರಣ : ಹಿಂಜಾವೇಯಿಂದ ಪ್ರತಿಭಟನೆ

ಉಪ್ಪಿನಂಗಡಿ: ಹಳೇಗೇಟು ಬಳಿ ಕೆಲ ದಿನಗಳ ಹಿಂದೆ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹಸಿ ಮೀನು ಮಾರಾಟದ ಅಂಗಡಿಗೆ ಬೆಂಕಿ ಹಚ್ಚಿರುವ ಪ್ರಕರಣದ ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಆಗ್ರಹಿಸಿ ಸೆ. 6ರಂದು ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣೆ ಮುಂದೆ ಧರಣಿ ನಡೆಯಿತು. ಬೆಂಕಿ ಹಚ್ಚಿರುವ ಘಟನೆ ಖಂಡಿಸಿ ಹಿಂದೆ ರಾಸ್ತಾರೋಕೋ ನಡೆಸಲಾಗಿತ್ತು. ಅಲ್ಲದೆ, ಉಗ್ರ ಪ್ರತಿಭಟನೆಗೆ ನಿರ್ಧರಿಸಲಾಗಿತ್ತು. ಪೊಲೀಸ್ ಇಲಾಖೆಯ ಮನವಿ ಮೇರೆಗೆ ಪ್ರತಿಭಟನೆ ಕೈ

ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಯುವತಿಯನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ವಿಕೇಶ್ ಶೆಟ್ಟಿ

ಬಂಟ್ವಾಳ: ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಯುವತಿಯೊಬ್ಬರನ್ನು ಯಾವುದೇ ಝೀರೋ ಟ್ರಾಫಿಕ್ ಇಲ್ಲದೆ ಕೇವಲ ಇಂಡಿಕೇಟರ್ ಹಾಕುವ ಮೂಲಕ ಪುತ್ತೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಸುಮಾರು 19 ಕಿ.ಮೀ. ದೂರವನ್ನು ಕೇವಲ 8.5 ನಿಮಿಷದಲ್ಲಿ ತಲುಪಿಸಿದ ಮಾಣಿಯ ಯುವಕ ಮಂಡಲ ಸದಸ್ಯರೂ ಆಗಿರುವ ಯುವ ಕಾಂಗ್ರೆಸ್ ವಲಯಾಧ್ಯಕ್ಷ ವಿಕೇಶ್ ಶೆಟ್ಟಿ ಅವರ ಕಾರ್ಯ ಈಗ ಪ್ರಶಂಸೆಗೆ ಪಾತ್ರವಾಗಿದೆ. ಗುರುವಾರ ರಾತ್ರಿ ಮಾಣಿ ಸಮೀಪ ಬುಡೋಳಿಯ ಯುವತಿಯೊಬ್ಬರು ಉಸಿರಾಟದ ತೊಂದರೆಯನ್ನು

ಕೋವಿಡ್ ನಿಯಂತ್ರಣಕ್ಕೆ ಪುತ್ತೂರಿನಲ್ಲಿ ಕಟ್ಟುನಿಟ್ಟಿನ ಕ್ರಮ: ಪುತ್ತೂರು ಎಸಿ ಡಾ.ಯತೀಶ್ ಉಳ್ಳಾಲ್

ಕೇರಳ ಗಡಿಭಾಗವನ್ನು ಹಂಚಿಕೊಂಡಿರುವಂತಹ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ನಲ್ಲಿ ಯಾವುದೇ ವ್ಯತ್ಯಾಸ ಕಂಡು ಬರುತ್ತಿಲ್ಲ. ಕೇರಳದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ 16 ಹಾಗೂ 17 ರ ಆಸುಪಾಸಿನಲ್ಲಿರುವ ಕಾರಣ ದಕ್ಷಿಣಕನ್ನಡ ಜಿಲ್ಲೆಯಲ್ಲೂ ಕೊರೊನಾ ನಿಯಂತ್ರಣದ ಹಿನ್ನಲೆಯಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಪುತ್ತೂರು ಸಹಾಯಕ ಆಯುಕ್ತ ಡಾ. ಯತೀಶ್ ಉಳ್ಳಾಲ್ ಹೇಳಿದರು. ಅವರು ಪುತ್ತೂರಿನ ತಮ್ಮ ಕಚೇರಿಯಲ್ಲಿ

ವೀಕೆಂಡ್ ಕರ್ಫ್ಯೂ ವಿರೋಧಿಸಿ ವ್ಯವಹಾರ ನಡೆಸಲು ಪುತ್ತೂರು ವರ್ತಕರ ಸಂಘ ತೀರ್ಮಾನ

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪಾಸಿಟೀವಿಟಿ ರೇಟ್ ಕಡಿಮೆಯಾಗದ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಈ ವಾರವೂ ವೀಕೆಂಡ್ ಕರ್ಫೂ ಹೇರಲಾಗಿದೆ. ಆದರೆ ಜಿಲ್ಲಾಡಳಿತದ ಈ ನಿರ್ಧಾರಕ್ಕೆ ಇದೀಗ ವರ್ತಕರ ಸಂಘ ವಿರೋಧ ವ್ಯಕ್ತಪಡಿಸಲಾರಂಭಿಸಿದೆ. ಜಿಲ್ಲೆಯ ಪುತ್ತೂರು ತಾಲೂಕಿನ ಪುತ್ತೂರು ನಗರ, ಉಪ್ಪಿನಂಗಡಿ ಹಾಗೂ ನೆಲ್ಯಾಡಿ ಪೇಟೆಗಳಲ್ಲಿ ಈ ವಾರ ವೀಕಂಡ್ ಕರ್ಫೂ ನಲ್ಲಿ ತಮ್ಮ ಅಂಗಡಿ-ಮುಂಗಟ್ಟುಗಳನ್ನು ತೆರೆದಿಟ್ಟು, ಕೊರೊನಾ ಮಾರ್ಗಸೂಚಿ ಉಲ್ಲಂಘಿಸುವ ನಿರ್ಧಾರಕ್ಕೆ