Home ಕರಾವಳಿ Archive by category ಬಂಟ್ವಾಳ (Page 29)

ಮತದಾರರ ಪಟ್ಟಿ ಪರಿಷ್ಕರಣೆ ನೆಪದಲ್ಲಿ ಹೆಸರನ್ನು ಕಳಚುವ ಬಗ್ಗೆ ಮಾಜಿ ಸಚಿವ ರಮನಾಥ ರೈ ನೇತೃತ್ವದಲ್ಲಿ ದೂರು

ಬಂಟ್ವಾಳ: ಮತದಾರ ಪಟ್ಟಿ ಪರಿಷ್ಕರಣೆಯ ನೆಪದಲ್ಲಿ ಮತದಾರರ ಹೆಸರನ್ನು ಕಳಚುವ ಬಗ್ಗೆ ಮಾಜಿ ಸಚಿವ ಬಿ. ರಮಾನಾಥ ರೈ ನೇತೃತ್ವದಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ಗುರುವಾರ ಬಂಟ್ವಾಳ ತಹಸೀಲ್ದಾರರಿಗೆ ದೂರು ಸಲ್ಲಿಸಿತು. ಬಳಿಕ ರಮನಾಥ ರೈ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಚುನಾವಣಾ ಆಯೋಗದ ಆದೇಶದಂತೆ ಸ್ಥಳೀಯ ಮಟ್ಟದ ಮತಗಟ್ಟೆಯ

ಯುವ ವಕೀಲನ ಉಪಟಳದಿಂದ ತೊಂದರೆ ಅನುಭವಿಸಿದ್ದೇವೆ : ಬಂಟ್ವಾಳದಲ್ಲಿ ಸುದ್ದಿಗೋಷ್ಟಿ ನಡೆಸಿ ಅಳಲು ತೋಡಿಕೊಂಡ ಭವಾನಿ

ಬಂಟ್ವಾಳ: ಯುವ ವಕೀಲ ಕುಲದೀಪ್ ಶೆಟ್ಟಿ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿ ದೌಜ್ಯನ್ಯ ನಡೆಸಿದ ಪುಂಜಾಲಕಟ್ಟೆ ಪೆÇಲೀಸರ ಅಮಾನತಿಗೆ ಆಗ್ರಹಿಸಿ ಜಿಲ್ಲಾಯದ್ಯಂತ ವಕೀಲರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದರೆ ಯುವ ವಕೀಲನ ಉಪಟಳದಿಂದ ತುಂಬಾ ತೊಂದರೆಯಾಗಿದ್ದು ಮಾನಸಿಕವಾಗಿ ಕುಗ್ಗಿ ಹೋಗಿರುವುದಾಗಿ ದೂರುದಾರ ವಸಂತಗೌಡ ಅವರ ಪತ್ನಿ ಭವಾನಿ ಅಳಲು ತೋಡಿಕೊಂಡಿದ್ದಾರೆ. ಅವರು ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಕಳೆದ ಡಿ. 2ರಂದು ತಾನು ತನ್ನ ಪತಿ ಹಾಗೂ ಕೆಲಸದಾಳು

ಡಿ.10 ಆಲದಪದವು ಅಕ್ಷರ ಭಾರತಿ ವಿದ್ಯಾಲಯದಲ್ಲಿ ಅಕ್ಷರ ಉತ್ಸವ ವಾಮದಪದವು

ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಆಲದಪದವು ಅಕ್ಷರ ಭಾರತಿ ವಿದ್ಯಾಲಯದಲ್ಲಿ 22ನೇ ವರ್ಷದ ಸಂಭ್ರಮ “ಅಕ್ಷರ ಉತ್ಸವ” ವು ಡಿ.10ರಂದು ಶನಿವಾರ ನಡೆಯಲಿದೆ. ಬೆಳಿಗ್ಗೆ 9.30 ಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ಅಕ್ಷರ ಉತ್ಸವವನ್ನು ಉದ್ಘಾಟಿಸುವರು. ವಿವಿಧ ಕ್ಷೇತ್ರದ ಗಣ್ಯರ ಉಪಸ್ಥಿತಿಯಲ್ಲಿ ಬಹುಮಾನ ವಿತರಣೆ ನಡೆಯಲಿದೆ. ಸಂಜೆ 4 ಗಂಟೆಗೆ ಶಾಲಾ ಸಂಚಾಲಕ ಮೋಹನ್ ರೈ.ಕೆ. ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದ್ದು ಶಾಸಕ ರಾಜೇಶ್

ಕಟೀಲು ಮೇಳದ ಚೌಕಿ ಸಹಾಯಕ ನಿಧನ

ಕಟೀಲು ಮೇಳದ ಐದನೇ ಮೇಳದ ಚೌಕಿ ಸಹಾಯಕ ಮಣಿನಾಲ್ಕೂರು ಗ್ರಾಮದ ಕೊಡಂಗೆ ನಿವಾಸಿ 45 ವರ್ಷದ ಅಚ್ಯುತ ನಾಯಕ್ ಅವರು ಹೃದಯ ಘಾತದಿಂದ ನಿಧನರಾದ ಮೇಳದ ಚೌಕಿ ಸಹಾಯರಾಗಿದ್ದಾರೆ. ಕಟೀಲು ಮೇಳದ ಯಕ್ಷಗಾನವು ಪ್ರಸ್ತುತ ಕಾಲಮಿತಿ ಯಕ್ಷಗಾನವಾಗಿದ್ದು, ರಾತ್ರಿ 1 ಗಂಟೆಯ ಸುಮಾರಿಗೆ ಯಕ್ಷಗಾನ ಮುಗಿದು ಪರಿಕರಗಳನ್ನು ಜೋಡಿಸುತ್ತಿದ್ದ ವೇಳೆ ಅಚ್ಯುತ ಅವರು ಏಕಾಏಕಿ ಅಸ್ವಸ್ಥತೆಗೊಂಡಿದ್ದಾರೆ ಎನ್ನಲಾಗಿದೆ. ಆಗ ತಕ್ಷಣ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ಸಾಗಿಸಿದಾಗ ವೈದ್ಯರು

ವಾಮದಪದವು : ಮಕ್ಕಳಿಗೆ, ಯುವಕರಿಗೆ ಅಡಿಕೆ ಸಿಪ್ಪೆ ಸುಲಿಯುವ ತರಬೇತಿ

ಕೃಷಿ ಕಸುಬುಗಳ ಕೌಶಲ್ಯವನ್ನು ಕಲಿಯುವ ಮೂಲಕ ಗ್ರಾಮೀಣ ಭಾಗದ ಯುವಜನತೆ ಕೃಷಿ ಕಾರ್ಯದಲ್ಲಿ ತೊಡಗಿಸಿಕೊಂಡು ಸ್ವಾವಲಂಬಿ ಜೀವನ ನಡೆಸುವಂತಾಗಬೇಕು ಎನ್ನುವ ಸದುದ್ಧೇಶದಿಂದ ಅಡಿಕೆ ಸಿಪ್ಪೆ ಸುಲಿಯುವ ವಿನೂತನ ತರಬೇತಿ ಕಾರ್ಯಕ್ರಮವೊಂದು ವಾಮದಪದವು ಸಮೀಪದ ಮಾವಿನಕಟ್ಟೆಯಲ್ಲಿ ನಡೆಯಿತು. ಹಲವು ವರ್ಷದಿಂದ ಪಕ್ಷಿಗಳ ಸಂರಕ್ಷಣೆಗಾಗಿ ಜಾಗೃತಿ ಅಭಿಯಾನವನ್ನು ನಡೆಸಿಕೊಂಡು ಬಂದಿರುವ ಗುಬ್ಬಚ್ಚಿ ಗೂಡು ಬಳಗ ಈ ಹೊಸ ಯೋಜನೆಯೊಂದಕ್ಕೆ ಚಾಲನೆ ನೀಡಿದ್ದು ಕೃಷಿಕರ ಮೆಚ್ಚುಗೆಗೆ

ಬಂಟ್ವಾಳ : ಉದಯೋನ್ಮುಖ ಚಿತ್ರಕಲಾವಿದ ಶಶಾಂಕ್

ಬಂಟ್ವಾಳ: ಕಲಾವಿದರಿಗೆ ಸೂಕ್ತ ಅವಕಾಶ ಹಾಗೂ ಪ್ರೊತ್ಸಾಹಗಳು ಸಿಕ್ಕಾಗ ಅವರ ಪ್ರತಿಭೆ ಅನಾವರಣಗೊಳ್ಳಲು ಸಾಧ್ಯವಿದೆ. ಬಂಟ್ವಾಳದ ಉದಯೋನ್ಮುಖ ಚಿತ್ರಕಲಾವಿದನೋರ್ವನಿಗೆ ಆತನ ಚಿತ್ರಕಲಾ ಶಿಕ್ಷಕರು ನೀಡಿದ ಪ್ರೋತ್ಸಾಹ ಹಾಗೂ ಹಿತೈಷಿಗಳು ನೀಡಿದ ಅವಕಾಶದಿಂದ ಇಂದು ಯಶಸ್ವಿ ಚಿತ್ರಕಲಾಕಾರನಾಗಿ ಮೂಡಿ ಬರುತಿದ್ದಾನೆ. ತಾಲೂಕಿನ ಪಾಣಮಂಗಳೂರಿನಲ್ಲಿರುವ ನವರಂಗ್ ಸ್ಮರಣಿಕ ಕೇಂದ್ರ ಹಾಗೂ ಅಲ್ಲೇ ಪಕ್ಕದಲ್ಲಿರುವ ಪೋನಸ್ ಹಲಸಿನ ಅಂಗಡಿಗೆ ಭೇಟಿ ನೀಡಿದಾಗ ಅದರ ಗೋಡೆಗಳಲ್ಲಿ

ಕತಾರ್: ಪಿಫಾ ವರ್ಲ್ಡ್ ಕಪ್ ಮೆಡಿಕಲ್ ಟೀಮಿಗೆ ತುಳುನಾಡಿನ ಮಹಿಳೆ ಆಯ್ಕೆ.

ಬಂಟ್ವಾಳ: ಕತಾರ್ ಪಿಫಾ ವರ್ಲ್ಡ್ ಕಪ್ ಮೆಡಿಕಲ್ ಟೀಮಿಗೆ ಸೇವೆ ಸಲ್ಲಿಸಲು ತುಳುನಾಡಿನ ಮಹಿಳೆಯೊರ್ವರು ಆಯ್ಕೆಯಾಗಿದ್ದಾರೆ.ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಕುಡಂಬೆಟ್ಟು ಗ್ರಾಮದ ದೋಟ ದರ್ಖಾಸು ನಿವಾಸಿ ನವೀನ್ ಪೂಜಾರಿಯವರ ಪತ್ನಿ ಪ್ರತಿಭಾ ಎನ್.ದರ್ಖಾಸು ಎಂಬವರು ಇದೀಗ ಕತಾರಿನ ವರ್ಲ್ಡ್ ಕಪ್ ಮೆಡಿಕಲ್ ಟೀಮಿನಲ್ಲಿ ಸೇವೆ ಸಲ್ಲಿಸಲು ಆಯ್ಕೆಯಾದವರು. ಈ ಮೂಲಕ ಇವರು ವರ್ಲ್ಡ್ ಕಪ್ ಮೆಡಿಕಲ್ ಟೀಮಿಗೆ ಆಯ್ಕೆಯಾದ ಕರ್ನಾಟಕದ ಏಕೈಕ ಮಹಿಳೆ ಎಂಬ ಗೌರವಕ್ಕೆ

ಧರ್ಮಸ್ಥಳದಲ್ಲಿ ಭೀಕರ ರಸ್ತೆ ಅಪಘಾತ, ಓರ್ವ ಸಾವು ; ಏಳು ಜನರಿಗೆ ಗಂಭೀರ ಗಾಯ

ಬೆಳ್ತಂಗಡಿ : ಭೀಕರ ರಸ್ತೆ ಅಪಘಾತ ನಡೆದಿದ್ದು ಇದರಲ್ಲಿ ಓರ್ವ ಸಾವನ್ನಪ್ಪಿದ್ದು ,ಏಳು ಜನರಿಗೆ ಗಂಭೀರ ಗಾಯಗೊಂಡು ಘಟನೆ ಧರ್ಮಸ್ಥಳದ ಕುದ್ರಾಯದಲ್ಲಿ ಇಂದು ಸಂಜೆ ನಡೆದಿದೆ. ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಗಮಿಸುತ್ತಿದ್ದ ಮಂಡ್ಯ ಜಿಲ್ಲೆಯ ಹತ್ತು ಮಂದಿಯ ಕುಟುಂಬ ನಿಡ್ಲೆ ಗ್ರಾಮದ ಕುದ್ರಾಯ ಎಂಬಲ್ಲಿ ಬೊಲೇರೋ ವಾಹನವನ್ನು ರಸ್ತೆಯ ಬಲಕ್ಕೆ ಪಾರ್ಕ್ ಮಾಡಿ ನಿಲ್ಲಿಸಿ ಇಳಿದು ಅಂಗಡಿ ಹೋಗುತ್ತಿದ್ದರು ಈ ವೇಳೆ ಧರ್ಮಸ್ಥಳ ಡಿಪೋದಿಂದ ಮೈಸೂರಿಗೆ ತೆರಳುತ್ತಿದ್ದ

ವ್ಯವಸ್ಥಿತ ಜಾಲವನ್ನು ಸರ್ಕಾರ ಬೇಧಿಸಬೇಕು : ಆರ್‍ಎಸ್‍ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆ

ಬಂಟ್ವಾಳ: ಎರಡು ದಿನಗಳ ಹಿಂದೆ ಮಂಗಳೂರಿನ ನಾಗುರಿಯಲ್ಲಿ ಆಟೋರಿಕ್ಷಾದಲ್ಲಿ ನಡೆದ ಕುಕ್ಕರ್ ಸ್ಪೋಟ ಪ್ರಕರಣವನ್ಬು ಸರಕಾರ ಗಂಭೀರವಾಗಿ ಪರಿಗಣಿಸಿ ಇದರ ಹಿಂದಿರುವ ವ್ಯವಸ್ಥಿತ ಜಾಲವನ್ನು ಪತ್ತೆ ಹಚ್ಚಿ ಭಯೋತ್ಪಾದಕ ಮೂಲವನ್ನು ಬೇಧಿಸಬೇಕು ಎಂದು ಆರ್ .ಎಸ್ .ಎಸ್ ಮುಖಂಡ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಅವರು ಒತ್ತಾಯಿಸಿದ್ದಾರೆ.ನಂದಾವರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದೊಗೆ ಮಾತನಾಡಿದ ಅವರು, ರಾಜ್ಯದ ದ.ಕ.ಜಿಲ್ಲೆ ಭಯೋತ್ಪಾದಕ ಸಂಘಟನೆಯ ತಾಣವಾಗುತ್ತಿರುವುದು ದುರ್ದೈವ

ಬಂಟ್ವಾಳ : ಸಿಡಿಲಿನ ಅಘಾತಕ್ಕೆ ಬಾಲಕನೋರ್ವ ಬಲಿ

ಬಂಟ್ವಾಳ : ಸಿಡಿಲಿನ ಅಘಾತಕ್ಕೆ ಬಾಲಕನೋರ್ವ ಬಲಿಯಾದ ಘಟನೆ ಬಂಟ್ವಾಳ ಕರಿಯಂಗಳ ಗ್ರಾಮದಲ್ಲಿ  ನಡೆದಿದೆ. ಸಾಣೂರುಪದವು ಗಣೇಶ್ ಆದಿದ್ರಾವಿಡ ಅವರ ಪುತ್ರ 16 ವರ್ಷದ ಕಾರ್ತಿಕ್ ಸಿಡಿಲು ಬಡಿದು ಮೃತಪಟ್ಟ ದುರ್ದೈವಿ.ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ನಿನ್ನೆ ರಾತ್ರಿ ಭಾರೀ  ಮಳೆ ಸುರಿದಿದ್ದು ರಾತ್ರಿ ಮನೆಯಲ್ಲಿ ಇರುವ ಎಲ್ಲರೂ 9 ರ ಸುಮಾರಿಗೆ ಊಟ ಮುಗಿಸಿ ಮಲಗಿದ್ದು ಈ ವೇಳೆ  ಸಿಡಿಲು ಸಹಿತ ಮಳೆ ಬಂದು, ಮಲಗಿದ್ದವರಿಗೆ ಕರೆಂಟ್ ಶಾಕ್ ಹೊಡೆದ