ಬಂಟ್ವಾಳ : ಪತ್ರಕರ್ತ,ಸಾಹಿತಿ ಫಾರೂಕ್ ಗೂಡಿನಬಳಿ( 38) ಅವರು ಸುದೀರ್ಘ ಕಾಲದ ಅಸೌಖ್ಯದಿಂದ ಶುಕ್ರವಾರ ಸಂಜೆ ಗೂಡಿನಬಳಿಯಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.ವಿವಿಧ ಪತ್ರಿಕೆಗಳಿಗೆ ಬಂಟ್ವಾಳದಿಂದ ವರದಿಗಾರನಾಗಿ ಕಾರ್ಯನಿರ್ವಹಿಸಿದ್ದರು. ಪಾಣೆಮಂಗಳೂರು ಸಮೀಪದ ಗೂಡಿನಬಳಿ ನಿವಾಸಿಯಾಗಿರುವ ಹಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.
ವಿಟ್ಲ: ಕೊಳ್ನಾಡು ಗ್ರಾಮದ ಕೆ.ಪಿ ಬೈಲು ನಾರ್ಶ ಎಂಬಲ್ಲಿ ಮೀನಿನ ವ್ಯಾಪಾರಿಯೊಬ್ಬರನ್ನು ಅಪರಿಚಿತರ ತಂಡವೊಂದು ಅಪಹರಣ ಮಾಡಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಕೊಳ್ನಾಡು ಗ್ರಾಮದ ಕೆ ಪಿ ಬೈಲು ನಾರ್ಶ ನಿವಾಸಿ ಮಹಮ್ಮದ್ ಅನ್ಸಾರ್(34) ಅಪಹರಣಗೊಳಗಾದ ವ್ಯಕ್ತಿಯಾಗಿದ್ದು, ಈ ಬಗ್ಗೆ ಅವರ ಪತ್ನಿ ಅಪ್ಸ ಅವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮೊಹಮ್ಮದ್ ಅನ್ಸಾರ್ (31) ಎಂಬವರು ಮೀನಿನ ವ್ಯಾಪಾರದಲ್ಲಿ ನಷ್ಟ ಉಂಟಾಗಿ ಬೇರೆ
ಬಂಟ್ವಾಳ: ಬಿಜೆಪಿ ಪಕ್ಷಕ್ಕೆ ಕಾರ್ಯಕರ್ತರೆ ಶಕ್ತಿ. ಬೂತ್ ಅಧ್ಯಕ್ಷನೇ ಆತ್ಮ. ಬೂತ್ ಅಧ್ಯಕ್ಷರಿಗೆ ಶಕ್ತಿ ತುಂಬಿ, ಗೌರವಿಸುವ ಉದ್ದೇಶದಿಂದ ಪ್ರತೀ ಬೂತ್ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಸುವ ಕಾರ್ಯಕ್ರಮವನ್ನು ಪಕ್ಷದ ವತಿಯಿಂದ ನಡೆಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು. ಪ್ರಧಾನಿ ನರೇಂದ್ರ ಮೋದಿಯವರ 71ನೇ ಜನ್ಮದಿನಾಚರಣೆಯ ಅಂಗವಾಗಿ ಬಿಜೆಪಿ ಮಂಗಳೂರು ವಿಧಾನ ಸಭಾ ಕ್ಷೇತ್ರದ ಪುದು ಶಕ್ತಿ ಕೇಂದ್ರದ ವತಿಯಿಂದ
ಬಂಟ್ವಾಳ: ನೀರಿನ ಬಿಲ್ ಗೊಂದಲ, ಕ್ರಿಯಾಯೋಜನೆ ತಯಾರಿಕೆಯಲ್ಲಿ ತಾರತಮ್ಯ, ಪೌರಕಾರ್ಮಿಕ ದಿನಾಚರಣೆ ಊಟದ ವಿಚಾರ, ಅಸಂವಿಧಾನಿಕ ಪದ ಬಳಕೆ.. ಪುರಸಭಾಧ್ಯಕ್ಷ ಮಹಮ್ಮದ್ ಶರೀಫ್ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಜಟಾಪಟಿಗೆ ಕಾರಣವಾದ ಮುಖ್ಯಾಂಶಗಳು.. ಆದ್ಯತೆಯ ಕಾಮಗಾರಿ ಎಂದು ಹೇಳಿ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ. ಕಳೆದ ಒಂದು ವರ್ಷದಿಂದ ಹಣ ಮಾಡಿದ್ದು ಬಿಟ್ಟರೆ ಅಭಿವೃದ್ದಿ ಕಾರ್ಯ ಏನು ಮಾಡಿಲ್ಲ ಎಂದು ವಿಪಕ್ಷ ಸದಸ್ಯ
ಬಂಟ್ವಾಳ: ನಿಲ್ಲಿಸಿದ್ದ ಲಾರಿ ಚಲಿಸಿ ಚಾಲಕ ಮೃತಪಟ್ಟ ಘಟನೆ ಬಿ.ಸಿ.ರೋಡಿನ ಕೈಕಂಬ ಸಮೀಪದ ಪರ್ಲಿಯಾ ಕೊಡಂಗೆ ಎಂಬಲ್ಲಿ ವೇಳೆ ನಡೆದಿದೆ. ಬಾಗಲಕೋಟ ಜಿಲ್ಲೆಯ ಜಾವೂರು ನಿವಾಸಿ ಬಾಲಪ್ಪ ಎ.ಜಾವೂರು ಮೃತಪಟ್ಟ ವ್ಯಕ್ತಿ.ಬಾಲಪ್ಪ ಅವರು ಇಲ್ಲಿನ ರಸ್ತೆ ಕಾಮಗಾರಿ ಗುತ್ತಿಗೆ ಸಂಸ್ಥೆಯೊಂದರಲ್ಲಿ ಕಳೆದ ಕೆಲ ವರ್ಷಗಳಿಂದ ಚಾಲಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಪರ್ಲಿಯಾ ಕೊಡಂಗೆ ಎಂಬಲ್ಲಿ ರಸ್ತೆ ಕಾಂಕ್ರೀಟ್ ಕಾಮಗಾರಿ ನಡೆಯುತ್ತಿದ್ದು ಪ್ರಸ್ತುತ ಕಾಮಗಾರಿ
ಬಂಟ್ವಾಳ: ಕೇಂದ್ರ ಸರಕಾರ ಜಾರಿಗೆ ತಂದಿರುವ ಕೃಷಿ ಮಸೂದೆಗಳ ವಾಪಸ್ಸಾತಿಗೆ ಹಾಗೂ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಕಾನೂನಾತ್ಮಕಗೊಳಿಸಲು ಆಗ್ರಹಿಸಿ ದೆಹಲಿಯ ಹೊರವಲಯದಲ್ಲಿ ನಡೆಯುತ್ತಿರುವ ಐತಿಹಾಸಿಕ ಚಳುವಳಿಗೆ ಸೆ. 26ನೇ ತಾರೀಖಿಗೆ ಹತ್ತು ತಿಂಗಳು ತುಂಬಲಿರುವ ಹಿನ್ನಲೆಯಲ್ಲಿ ಸಂಯುಕ್ತ ಹೋರಾಟ ಕಿಸಾನ್ ಮೋರ್ಚಾ ಸೆ.27ರಂದು ಭಾರತ್ ಬಂದ್ಗೆ ಕರೆ ನೀಡಿದ್ದು ಅಂದು ಬೆಳಿಗ್ಗೆ 10 ಗಂಟೆಗೆ ಬಿ.ಸಿ.ರೋಡಿನ ಮಿನಿ ವಿಧಾನ ಸೌಧದ ಬಳಿಯಿಂದ
ಬಂಟ್ವಾಳ: ದೇಶದಲ್ಲಿ ವಸ್ತುಗಳ ಬೆಲೆ ಏರಿಕೆ ಹೆಚ್ಚಾಗಿದ್ದು ಇದನ್ನು ನಿಭಾಯಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರ ವಿಫಲವಾಗಿದೆ ಎಂದು ಡಿಸಿಸಿ ಪ್ರಧಾನ ಕಾರ್ಯದರ್ಶಿ ಎಂ. ಚಂದ್ರಶೇಖರ ಪೂಜಾರಿ ಆರೋಪಿಸಿದರು. ಬಿ.ಸಿ.ರೋಡಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಪೆಟ್ರೋಲ್ ಡೀಸೆಲ್ ಕಚ್ಛಾ ಸಾಮಾಗ್ರಿಗಳ ದರ ವಿದೇಶದಲ್ಲಿ ಸಂಪೂರ್ಣ ಇಳಿಕೆಯಾಗಿದ್ದರೂ ಕೇಂದ್ರ ಹಾಗೂ ರಾಜ್ಯ ಸರಕಾರ ಹೆಚ್ಚುವರಿ ತೆರಿಗೆಯನ್ನು ವಿಧಿಸಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಲು
ಮಂಗಳೂರು: ಸುಬ್ರಹ್ಮಣ್ಯ ಭಜನಾ ಮಂಡಳಿ ನೀರುಮಾರ್ಗ ಮಂಗಳೂರು ಇತ್ತೀಚಿಗೆ ಮಂದಿರದಲ್ಲಿ ನಡೆದ ಕಳವು ಪ್ರಕರಣ, ಗರ್ಭಗುಡಿಯ ಪಾವಿತ್ರ್ಯತೆಗೆ ದಕ್ಕೆ ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳನ್ನು ಶೀಘ್ರ ಬಂಧಿಸಿವಂತೆ ಆಗ್ರಹಿಸಿ ಸಮಾನ ಮನಸ್ಕ ಸಂಘಟನೆಗಳು ಸೇರಿ ಮಂಗಳೂರು ನಗರದ ಹೊರವಲಯದ ನೀರುಮಾರ್ಗದಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ವಿಹೆಚ್ಪಿ ಮುಖಂಡ ಶರಣ್ ಪಂಪ್ವೆಲ್ ಮಾತನಾಡಿ, ಭಜನಾ ಮಂದಿರ ಕೇವಲ ಭಜನ ಕೇಂದ್ರ ಅಲ್ಲ ಅದು
ನಂಜನಗೂಡಿನಲ್ಲಿ ದೇವಸ್ಥಾನ ಕೆಡವಿರುವುದಕ್ಕೆ ಅಧಿಕಾರದಲ್ಲಿರುವ ಬಿಜೆಪಿ ಸರಕಾರವೇ ನೇರ ಹೊಣೆ, 2008ರಲ್ಲಿ ಆದ ಸುಪ್ರೀ ಕೋರ್ಟ್ ಆದೇಶವನ್ನು ಪ್ರಯೋಗಕ್ಕೆ ಒಳಪಡಿಸಿದ್ದು ಬಿಜೆಪಿ ಸರಕಾರ, ಇದು ಸರಕಾರ ಪ್ರಾಯೋಜಿತ ಕಾರ್ಯಕ್ರಮ ಎಂದು ಎಂದು ಮಾಜಿ ಸಚಿವ ಬಿ.ರಮನಾಥ ರೈ ಆಕ್ರೋಶ ವ್ಯಕತಪಡಿಸಿದರು. ರಾಜ್ಯ ಬಿಜೆಪಿ ಸರಕಾರ ಧಾರ್ಮಿಕ ಕೇಂದ್ರಗಳನ್ನು ಧ್ವಂಸಗೊಳಿಸಿದ ಹಾಗೂ ಅನೇಕ ದೇವಸ್ಥಾನ, ದೈವಸ್ಥಾನ ಮತ್ತು ಪ್ರಾರ್ಥನಾ ಮಂದಿರಗಳನ್ನು ತೆರವುಗೊಳಿಸುವುದರ ವಿರುದ್ದ
ಬಂಟ್ವಾಳದ ಕಾವಳಮೂಡೂರು ಗ್ರಾಮದ ಕಾರಿಂಜ ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ ಆಚರಣೆ ಸಂಪನ್ನಗೊಂಡಿತು. ಪ್ರತಿ ವರ್ಷ ಕನ್ಯಾ ಸಂಕ್ರಮಣದ ಮರು ದಿವಸ ನಡೆಯುವ ತೆನೆ ಹಬ್ಬ ಆಚರಣೆಗಾಗಿ ಕಾರಿಂಜದಿಂದ ಸುಮಾರು 9ಕಿ.ಮೀ. ದೂರವಿರುವ ಸರಪಾಡಿ ಹಲ್ಲಂಗಾರು ಗದ್ದೆಯೊಂದರಿಂದ ತೆನೆಗಳನ್ನು ತರಲಾಗುತ್ತಿದ್ದು, ಈ ಬಾರಿಯೂ ಸಂಪ್ರದಾಯದಂತೆ ನೆರವೇರಿಸಲಾಯಿತು. ಸೂರ್ಯೋದಯದ ಮುಂಚೆ ಶ್ರೀ ಕ್ಷೇತ್ರ ಕಾರಿಂಜದಿಂದ ವಾದ್ಯ ವೃಂದ ಸಹಿತ ಅರ್ಚಕರು, ತಂತ್ರಿಗಳು,