ವಿಟ್ಲ: ಲಾರಿ ಮತ್ತು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸವಾರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ಸಂಭವಿಸಿದೆ. ಪೇರಮುಗೇರು ನಿವಾಸಿ ರುಕ್ಮಯ ಗಾಯಗೊಂಡ ಆಕ್ಟೀವಾ ಸವಾರ. ಉಪ್ಪಿನಂಗಡಿ ಕಡೆಯಿಂದ ಮಾಣಿ ಕಡೆಗೆ ಹೋಗುತ್ತಿದ್ದ ಆಕ್ಟೀವಾ ವಾಹನಕ್ಕೆ ಹಿಂದಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದ
ಬಂಟ್ವಾಳ: ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ವತಿಯಿಂದ ನಂದಿನಿ ಸಿಹಿ ಉತ್ಸವವನ್ನು ಆ. 19 ರಿಂದ ಹಮ್ಮಿಕೊಂಡಿದ್ದು ಬಿ.ಸಿ.ರೋಡಿನ ವಿತರಕರಾದ ಅಲೋಷಿಯಸ್ ಡಿಸೋಜಾ ಅವರ ಮಳಿಗೆಯಲ್ಲಿ ಚಾಲನೆ ನೀಡಲಾಯಿತು. ದ.ಕ. ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕಿ ಸವಿತ ಎನ್. ಶೆಟ್ಟಿ ದೀಪ ಪ್ರಜ್ವಲಿಸಿದರು. ಅವರು ವಿ4 ನ್ಯೂಸ್ನೊಂದಿಗೆ ಮಾತನಾಡಿ ನಂದಿನಿ ಸಿಹಿ ಉತ್ಸವದ ಪ್ರಯುಕ್ತ ಎಲ್ಲಾ ನಂದಿನಿ ಸಹಿ ಉತ್ಪನ್ನಗಳ ಮೇಲೆ ಶೇ.10ರಷ್ಟು ರಿಯಾಯಿತಿಯನ್ನು
ವಿಟ್ಲ: ರಾಕ್ಷಸ ಪ್ರವೃತ್ತಿ ಕಂಪನಿ ಎದುರಿಗೆ ಸಿಗುವ ರೈತರನ್ನು ನಾಶ ಮಾಡಲು ಮುಂದಾಗಿದೆ. ಇತಿಹಾಸದ ದಿನದಲ್ಲಿ ಹಾಗೂ ಇತ್ತೀಚಿನದ ದಿನದಲ್ಲಿ ದೇವರನ್ನು ಪ್ರಾರ್ಥಿಸಿದಾಗ ಪ್ರತ್ಯಕ್ಷವಾಗಿ ರಾಕ್ಷಸರನ್ನು ವಧಿಸಿದ ಘಟನೆಗಳಿದೆ. ಎರಡನೇ ಹಂತದಲ್ಲಿ ರೈತಾಪಿ ವರ್ಗವನ್ನು ಧಮನಿಸುವ ದುಷ್ಟರ ನಿಗ್ರಹಕ್ಕಾಗಿ ದೈವ ದೇವರ ಬಳಿ ದೂರು ನೀಡುವ ಕಾರ್ಯ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ರಾಜ್ಯ ಕಾರ್ಯದರ್ಶಿ ಮನೋಹರ ಶೆಟ್ಟಿ ನಡುಕಂಬಳಗುತ್ತು ಹೇಳಿದರು.
ಬಂಟ್ವಾಳ: ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ಹೋಂ ಐಸೋಲೆಶನ್ಗಿಂತ ಕೋವಿಡ್ ಕೇರ್ ಸೆಂಟರ್ಗೆ ಹೆಚ್ಚಿನ ಮಹತ್ವ ನೀಡಬೇಕು. ಕೋವಿಡ್ ಕೇರ್ ಸೆಂಟರ್ಗಳಲ್ಲಿ ಕಲ್ಪಿಸಿರುವ ವ್ಯವಸ್ಥೆಗಳ ಬಗ್ಗೆ ಜನರಿಗೆ ತಿಳುವಳಿಕೆ ಮೂಡಿಸಿ, ವಿಶ್ವಾಸ ತುಂಬುವ ಕೆಲಸ ಮಾಡಬೇಕು. ಇದರಿಂದಾಗಿ ವೈರಾಣು ಹರಡುವುದನ್ನು ತಪ್ಪಿಸುವುದರ ಜೊತೆಗೆ ರೋಗ ನಿಯಂತ್ರಣವೂ ಸಾಧ್ಯವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ತಿಳಿಸಿದರು. ಬಿ.ಸಿ.ರೋಡಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ
ಬಂಟ್ವಾಳ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ 75ನೇ ಸ್ವಾತಂತ್ರ್ಯೋತ್ಸವವನ್ನು ಬಿ.ಸಿ.ರೋಡಿನ ಮಿನಿವಿಧಾನ ಸೌಧದ ಮುಂಭಾಗ ಕೋವಿಡ್ ಮಾರ್ಗಸೂಚಿಯನ್ವಯ ಸರಳವಾಗಿ ಆಚರಿಸಲಾಯಿತು. ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್. ಆರ್ ಧ್ವಜಾರೋಹಣ ನೆರವೇರಿಸಿದರು. ಶಾಸಕ ರಾಜೇಶ್ ನಾಕ್, ಡಿವೈಎಸ್ಪಿ ವೆಲೈಂಟೀನ್ ಡಿಸೋಜಾ, ತಾ.ಪಂ. ಕಾರ್ಯನಿರ್ವಾಹಣಾಧಿಕಾರಿ ರಾಜಣ್ಣ ಉಪಸ್ಥಿತರಿದ್ದರು. ಬಂಟ್ವಾಳ ಪೋಲೀಸ್ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗ, ಗೃಹರಕ್ಷಕದಳ
ವೇತನ ಪಾವತಿಯಾಗದ ಕಾರಣ ಕ್ಯಾಂಟೀನ್ ಬಂದ್ ಗೊಳಿಸಿ ಪ್ರತಿಭಟನೆ ನಡೆಸುತ್ತಿರುವ ಬಿ.ಸಿ.ರೋಡಿನ ಇಂದಿರಾ ಕ್ಯಾಂಟೀನ್ ಸಿಬ್ಬಂದಿಗಳ ಸಂಕಷ್ಟಕ್ಕೆ ಸ್ಪಂದಿಸಿರುವ ಮಾಜಿ ಸಚಿವ ಬಿ. ರಮನಾಥ ರೈ ಆಹಾರದ ಕಿಟ್ ನೀಡುವ ಭರವಸೆ ನೀಡಿದ್ದಾರೆ. ಬುಧವಾರ ಕ್ಯಾಂಟೀನ್ ಗೆ ಭೇಟಿ ನೀಡಿದ ಅವರು ಇಂದಿರಾ ಕ್ಯಾಂಟೀನ್ ಯಾವುದೇ ಕಾರಣಕ್ಕೂ ಮುಚ್ಚಲು ಬಿಡುವುದಿಲ್ಲ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಎಂ ಎಸ್
ಬಂಟ್ವಾಳ: ತಾಲೂಕಿನ ಅರಳ ಗ್ರಾಮದ ಸೊರ್ನಾಡು ಎಂಬಲ್ಲಿ ಸಾರ್ವಜನಿಕ ಸ್ವಾಮ್ಯಕ್ಕೊಳಪಟ್ಟ ಆಯಿಲ್ ಮತ್ತು ನ್ಯಾಚುರಲ್ ಲಿಮಿಟೆಡ್ ಹಾಗೂ ಹಿಂದೂಸ್ತಾನ್ ಪೆಟ್ರೋಲಿಯಂ ಸಂಸ್ಥೆಗೆ ಸೇರಿದ ಪೆಟ್ರೋಲಿಯಂ ಪೈಪ್ ಲೈನ್ಗೆ ಕನ್ನ ಕೊರೆದು ಪೆಟ್ರೋಲಿಯಂ ಉತ್ಪನ್ನ ಕಳವು ನಡೆಸಿ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಸ್ಥಳೀಯ ಅರ್ಬಿ ನಿವಾಸಿ ಐವನ್ ಚಾರ್ಲ್ ಪಿಂಟೋ(43) ಹಾಗೂ ಆತನಿಗೆ ಸಹಕರಿಸಿದ ಆರೋಪದಡಿ ಪಚ್ಚನಾಡಿ ಬೋಂದೆಲ್ ನಿವಾಸಿ ಅಜಿತ್ ಮತ್ತು ಕಣ್ಣೂರು ನಿವಾಸಿ ಜೋಯೆಲ್
ಬಂಟ್ವಾಳ: ಬಂಟ್ವಾಳ ಪೇಟೆಯಲ್ಲಿರುವ ಎಸ್ವಿಎಸ್ ದೇವಳ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿ ಎನ್.ಪ್ರತೀಕ್ ಮಲ್ಯ ಈ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೇಯಲ್ಲಿ 625 ಅಂಕ ಪಡೆದುಕೊಂಡು ಶಾಲೆಗೆ ಹಾಗೂ ತಾಲೂಕಿಗೆ ಕೀರ್ತಿ ತಂದಿದ್ದಾನೆ. ಇಲ್ಲಿನ ತ್ಯಾಗರಸ್ತೆಯ ನಿವಾಸಿ ಎನ್. ವೆಂಕಟೇಶ್ ಮಲ್ಯ ಹಾಗೂ ಎನ್.ರಾಧಿಕ ಮಲ್ಯ ಅವರ ಪುತ್ರರಾಗಿರುವ ಪ್ರತೀಕ್ ಮುಂದೆ ಉದ್ಯಮಿಯಾಗುವ ಗುರಿ ಹೊಂದಿದ್ದಾರೆ. ತನ್ನ ಸಾಧನೆಗೆ ಶಿಕ್ಷಕರ ಪ್ರೋತ್ಸಾಹ, ಪೋಷಕರು, ಮನೆಯವರ ಬೆಂಬಲವೇ
ಬಂಟ್ವಾಳ: ಬೊರೆವೆಲ್ ಕೊರೆಸುವ ವಾಹನ ಬಂದು ರಸ್ತೆ ಹಾಳಾಗಿದೆ ಎಂದು ಆರೋಪಿಸಿ ವ್ಯಕ್ತಿಯೊರ್ವರಿಗೆ ಕಲ್ಲಿನಿಂದ ಹೊಡೆದು ಹಲ್ಲೆ ನಡೆಸಿದ್ದಲ್ಲದೆ ಕೊಲ್ಲುವುದಾಗಿ ಜೀವ ಬೆದರಿಕೆಯೊಡ್ಡಿದ ಘಟನೆ ಸಂಗಬೆಟ್ಟು ಗ್ರಾಮದ ಅಳಿಕೆ ಎಂಬಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಅಲ್ವಿನ್ ರಿಚರ್ಡ್ ಫಲೇರಾ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದು ಸ್ಥಳೀಯ ನಿವಾಸಿ ಅನಿಲ್ ಹಲ್ಲೆ ನಡೆಸಿದ ಆರೋಪಿಯಾಗಿದ್ದಾನೆ.ರಿಚರ್ಡ್ ಫಲೇರಾ ತನ್ನ ತಂದೆಯಿಯೊಂದಿಗೆ ಅಳಿಕೆ ಎಂಬಲ್ಲಿ
ಕೋವಿಡ್ 3ನೇ ಅಲೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸರಕಾರ ಘೋಷಿಸಿದ ವೀಕೆಂಡ್ ಕರ್ಪ್ಯೂಗೆ ಬಂಟ್ವಾಳ ತಾಲೂಕಿನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕಟ್ಟುನಿಟ್ಟಿನ ಕರ್ಪ್ಯೂ ಪಾಲನೆಯಾಗದ ಹಿನ್ನಲೆಯಲ್ಲಿ ಬಹುತೇಕ ಅಂಗಡಿ ಮುಂಗಟ್ಟುಗಳು, ಸರಕಾರಿ ಅಂಗಡಿ, ಬಸ್, ಕಾರು, ರಿಕ್ಷಾ ಸಹಿತ ಖಾಸಗಿ ವಾಹನಗಳ ಸಂಚಾರ ಎಂದಿನಂತೆಯೇ ಇತ್ತು. ಕೆಲವೊಂದು ಅಂಗಡಿ, ಕಚೇರಿಗಳು ಸ್ವಯಂ ಪ್ರೇರಿತರಾಗಿ ಬಂದ್ ಗೊಳಿಸಿ ವೀಕೆಂಡ್ ಕರ್ಪ್ಯೂಗೆ ಬೆಂಬಲ ನೀಡಿದ್ದಾರೆ. ಮೆಡಿಕಲ್,