Home ಕರಾವಳಿ Archive by category ಬಂಟ್ವಾಳ (Page 42)

ಬಂಟ್ವಾಳ: ಸೇತುವೆಯಲ್ಲಿ ಬೈಕನ್ನು ಚಾಲನೆ ಸ್ಥಿತಿಯಲ್ಲಿಯೇ ಇಟ್ಟು ಯವಕ ನಾಪತ್ತೆ

ಬೆಂಗಳೂರು ಮೂಲದ ಯುವಕನೋರ್ವ ಪಾಣೆಮಂಗಳೂರಿನ ಹೊಸ ಸೇತುವೆಯಲ್ಲಿ ಬೈಕನ್ನು ಚಾಲನೆ ಸ್ಥಿತಿಯಲ್ಲಿಯೇ ಇಟ್ಟು ನಾಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ದಾಸರಹಳ್ಳಿ ನಿವಾಸಿ ಸತ್ಯವೇಲು(29) ನಾಪತ್ತೆಯಾದ ಯವಕನಾಗಿದ್ದು ಬಂಟ್ವಾಳ ಪೊಲೀಸರು ಬೈಕನ್ನ ವಶಕ್ಕೆ ಪಡೆದುಕೊಂಡು ಯುವಕನಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ. ಈತ ಎರಡು ವಾರಗಳ ಹಿಂದೆ ನದಿಗೆ ಹಾರಿ

ವಿಟ್ಲದಲ್ಲಿ ಚಿರತೆಗಳ ಕಾಟ: ಬೇಸತ್ತ ಸಾರ್ವಜನಿಕರಿಂದ ಬೋನು ಅಳವಡಿಕೆ

ಬಂಟ್ವಾಳ ತಾಲೂಕಿನ ವಿಟ್ಲದ ಕೊಳ್ನಾಡು ಗ್ರಾಮದ ಮದಕ, ಪಡಾರು, ಮಾದಕಟ್ಟೆ, ಬಾರೆಬೆಟ್ಟು, ಮುಂಡತ್ತಜೆ ಮತ್ತು ತಾಳಿತ್ತನೂಜಿ ಸುತ್ತಮುತ್ತ ಕಳೆದ ಎರಡು ತಿಂಗಳಿಂದ ಮಿತಿಮೀರಿದ ಚಿರತೆಗಳ ಕಾಟದಿಂದ ಬೇಸತ್ತ ಸಾರ್ವಜನಿಕರು ಬೋನು ಅಳವಡಿಸಿದ್ದಾರೆ. ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದರೂ ಒಂದು ಬಾರಿ ಮಾತ್ರ ಸ್ಥಳಕ್ಕಾಗಮಿಸಿ ಹರಕೆ ತೀರಿಸಿದ್ದಾರೆ. ಬೋನು ತಂದಿಟ್ಟು ಚಿರತೆ ಹಿಡಿಯುವಂತೆ ಸ್ಥಳೀಯರು ಅಂಗಲಾಚಿದ್ದರೂ  ತಂದಿರಿಸುತ್ತೇವೆಂದು ತಿಳಿಸಿದ್ದರು. ಅದಾದ ಬಳಿಕ

ಜಕ್ರಿಬೆಟ್ಟು ಹೊಸ್ಮಾರ್ ಪೈಪ್‌ಲೈನ್ ಕಾಮಗಾರಿ: ಕೆಲಸ ಪೂರ್ಣಗೊಳಿಸಲು ಮುಂದಾದ ಸಂಸ್ಥೆ

ಬಂಟ್ವಾಳ: ಬಿ.ಸಿ.ರೋಡು- ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆಗಾಗಿ ಬಂಟ್ವಾಳ ಬೈಪಾಸ್ ಜಂಕ್ಷನ್ ಬಳಿಯಿಂದ ಜಕ್ರಿಬೆಟ್ಟುವರೆಗೆ ಎಂಆರ್‌ಪಿಎಲ್ ಸಂಸ್ಥೆಗೆ ನೀರು ಸರಬರಾಜಾಗುವ ಪೈಪ್‌ಲೈನ್ ಸ್ಥಳಾಂತರ ಕಾಮಗಾರಿ ವೇಳೆ ನಡೆದಿದ್ದ ಅಪೂರ್ಣ ಕೆಲಸವನ್ನು ಸಂಸ್ಥೆ ಪೂರ್ಣಗೊಳಿಸಲು ಮುಂದಾಗಿದೆ. ಕಳೆದ ಮೂರು ದಿನದ ಹಿಂದೆ ಈ ಸಮಸ್ಯೆಯ ಬಗ್ಗೆ ವಿ೪ ನ್ಯೂಸ್‌ನಲ್ಲಿ ಸಮಗ್ರ ವರದಿಯನ್ನು ಬಿತ್ತರಿಲಾಗಿತ್ತು. ಜಕ್ರಿಬೆಟ್ಟು ಹೊಸ್ಮಾರ್ ಎಂಬಲ್ಲಿ ರಸ್ತೆ ಬದಿ ಪೈಪ್

ಕಟೀಲ್ ಆಡಿಯೋ ವಿವಾದ: ಪಕ್ಷ ಸಂಘಟನೆ ಸಹಿಸಲಾಗದೆ ಆಡಿಯೋ ಕ್ರಿಯೇಟ್: ಹರಿಕೃಷ್ಣ ಬಂಟ್ವಾಳ್

ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಅನ್ನುವ ಆಡಿಯೋಗು ನಮ್ಮ ಪಕ್ಷಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಕಿಯೋನಿಕ್ಸ್ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ್ ಹೇಳಿದರು. ಅವರು ಬೆಳ್ತಂಗಡಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಈಗಾಗಲೇ ಸಚಿವರಾದ ಈಶ್ವರಪ್ಪನವರು ಹೇಳಿಕೆಯನ್ನು ನೀಡಿದ್ದಾರೆ. ಆ ಆಡಿಯೋ ನಳಿನ್ ಕುಮಾರ್ ಕಟೀಲ್ ಅವರದ್ದಲ್ಲ, ಯಾರೋ ಬೇಕಂತಲೇ ಕ್ರಿಯೇಟ್ ಮಾಡಿದ್ದಾರೆ ಎಂದು ಹೇಳಿದ್ದಾರೆ. ಕಟೀಲ್‌ರವರು ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡುವುದನ್ನು ಸಹಿಸದೆ

ಹಡೀಲು ಭೂಮಿಯಲ್ಲಿ ಕೃಷಿಕ್ರಾಂತಿ:ಅಮ್ಮುಂಜೆಯಲ್ಲಿ ಶಾಸಕ ರಾಜೇಶ್ ನಾಯಕ್‌ ರಿಂದ ಚಾಲನೆ

ಬಂಟ್ವಾಳ: ಹಡಿಲು ಭೂಮಿಯಲ್ಲಿ ಕೃಷಿಕ್ರಾಂತಿ ಎಂಬ ಬಂಟ್ವಾಳ ಶಾಸಕರ ಯೋಜನೆಯಂತೆ ಬಿಜೆಪಿ ಯುವಮೋರ್ಚಾ ತಂಡದ ವತಿಯಿಂದ ಬಿಜೆಪಿ ಕ್ಷೇತ್ರ ಸಮಿತಿ ಅಧ್ಯಕ್ಷ ದೇವಪ್ಪ ಪೂಜಾರಿಯವರ ಮುಂದಾಳತ್ವದಲ್ಲಿ ಅಮ್ಮುಂಜೆ ಪರಿಸರದ ಸುಮಾರು 5 ಎಕರೆ ಹಡಿಲು ಭೂಮಿಯಲ್ಲಿ ಕೃಷಿ ಚಟುವಟಿಕೆಗೆ ಬಂಟ್ವಾಳ ಶಾಸಕ ರಾಜೇಶ್ ನಾಕ್ ಭಾನುವಾರ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಯುವ ಸಮುದಾಯ ಕೃಷಿಯತ್ತ ಒಲವು ತೋರಿದರೆ ಈ ದೇಶದಲ್ಲಿ ಕೃಷಿಯಲ್ಲಿ ಮಹತ್ತರವಾದ ಬದಲಾವಣೆ ಸಾಧ್ಯ ಎಂದು

ಆಲಂಪುರಿ ರಸ್ತೆ ಬದಿಯ ಗುಡ್ಡ ಕುಸಿತ: ಅಡಿಕೆ ಮರಗಳು ಧರಶಾಹಿ

ಬಂಟ್ವಾಳ: ಶುಕ್ರವಾರ ರಾತ್ರಿಯಿಂದಲೇ ಸುರಿದ ಭಾರೀ ಮಳೆಗೆ ಬಿ.ಸಿ.ರೋಡು ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿ ಕೆಳಗಿನ ವಗ್ಗ ಬಳಿಯ ಆಲಂಪುರಿ ಎಂಬಲ್ಲಿ ರಸ್ತೆ ಬದಿಯ ಗುಡ್ಡ ಕುಸಿದು ಸ್ಟ್ಯಾನಿ ಲೋಬೋ ಎಂಬವರಿಗೆ ಸೇರಿದ ತೋಟದ ೫೦ಕ್ಕೂ ಅಧಿಕ ಅಡಿಕೆ ಮರಗಳು ಧರಶಾಹಿಯಾಗಿದೆ. ಬಿ.ಸಿ. ರೋಡು ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ವೇಳೆ ಅವೈಜ್ಞಾನಿಕವಾಗಿ ರಸ್ತೆ ಬದಿಯ ಗುಡ್ಡವನ್ನು ಅಗೆದಿರುವ ಪರಿಣಾಮ ಗುಡ್ಡ ಕುಸಿಯಲು ಕಾರಣ ಎಂದು ಆರೋಪಿಸಲಾಗಿದೆ.

ಬಿಜೆಪಿ ಮತ್ತು ಕಾಂಗ್ರೆಸ್ ಪ್ರತಿಭಟನಾಕಾರರ ಮುಖಾಮುಖಿ: ಕಾವಳಕಟ್ಟೆಯಲ್ಲಿ ವಾಗ್ವಾದ

ಬಂಟ್ವಾಳ: ಭಿನ್ನ ಉದ್ದೇಶಗಳಿಗೆ ಪ್ರತಿಭಟನೆ ನಡೆಸಲು ಜಮಾಯಿಸಿದ್ದ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯ ಕರ್ತರ ನಡುವೆ ವಾಗ್ವಾದ ನಡೆದು ಪರಸ್ಪರ ಹೊಯೈ ಕೈ ನಡೆದ ಘಟನೆ ಕಾವಳಕಟ್ಟೆಯಲ್ಲಿ ನಡೆದಿದೆ. ಕಾವಳಮೂಡೂರು ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಗೆ ಸಿದ್ದತೆ ನಡೆಸಿದ್ದರು. ಇದೇ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಕಾವಳಮೂಡೂರು ಗ್ರಾ.ಪಂ. ನೀರು ಹಾಗೂ ಮನೆ ತೆರಿಗೆಯನ್ನು ಏಕಾಏಕಿ ಏರಿಕೆಯನ್ನು

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಳದ ಗದ್ದೆಯಲ್ಲಿ ಭತ್ತ ನಾಟಿ ಪ್ರಾತ್ಯಕ್ಷಿಕೆ

ಬಂಟ್ವಾಳ: ದ.ಕ.ಜಿ.ಪಂ.ಕೃಷಿ ಇಲಾಖೆ ಹಾಗೂ ಬಂಟ್ವಾಳ ಕೃಷಿಕ ಸಮಾಜದ ಸಹಯೋಗದಲ್ಲಿ ಯಾಂತ್ರೀಕೃತ ಭತ್ತ ನಾಟಿ ಪ್ರಾತ್ಯಕ್ಷಿಕೆ ಕಾರ್ಯಾಗಾರಕ್ಕೆ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಗದ್ದೆಯಲ್ಲಿ ಚಾಲನೆ ನೀಡಲಾಯಿತು. ಪೊಳಲಿ ದೇವಸ್ಥಾನದ ಸುಮಾರು 2 ಎಕರೆ ವಿಸ್ತೀರ್ಣದಲ್ಲಿ ಭತ್ತದ ನಾಟಿ ಕಾರ್ಯ ನಡೆಯಲಿದೆ. ಕೃಷಿ ಸಂಜೀವಿನಿ, ರೋಟರಿ ಟಿಲ್ಲರನ್ನು ಕೂಡ ಈ ಸಂದರ್ಭದಲ್ಲಿ ಪ್ರದರ್ಶನ ಮಾಡಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ದ.ಕ.ಸಂಸದ

ಶ್ರೀ ಕ್ಷೇತ್ರ ಪೊಳಲಿ ಅವರಣದಲ್ಲಿ ಸಾರಿಗೆ ಸುರಕ್ಷಾ-ಐಸಿಯು ಬಸ್‌ಗೆ ಸಚಿವ ಕೋಟಾ ಚಾಲನೆ

ಬಂಟ್ವಾಳ: ಕೋವಿಡ್ ನಿಯಂತ್ರಣ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಸಂಸ್ಥೆ ವಿನ್ಯಾಸಗೊಳಿಸಿಸದ ’ ಸಾರಿಗೆ ಸುರಕ್ಷಾ-ಐಸಿಯು ಬಸ್’ ಗೆ ಶ್ರೀಕ್ಷೇತ್ರ ಪೊಳಲಿ ಅವರಣದಲ್ಲಿ ಚಾಲನೆ ನೀಡಲಾಯಿತು. ದ.ಕ.ಜಿಲ್ಲಾ ಉಸ್ತಿವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಅವರ ಉಪಸ್ಥಿತಿಯಲ್ಲಿ ಉದ್ಘಾಟಿಸಿದರು. ದ.ಕ.ಜಿಲ್ಲೆಯಲ್ಲೆ ಮೊದಲಿಗೆ ಮಂಗಳೂರು ಮತ್ತು ಪುತ್ತೂರು ಕೆಎಸ್‌ಆರ್‌ಟಿಸಿ ವಿಭಾಗ

ಬಿ.ಸಿ. ರೋಡ್‌ ನಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ

ಬಂಟ್ವಾಳ: ತೈಲ, ಗ್ಯಾಸ್ ಹಾಗೂ ಆಹಾರ ಸಾಮಾಗ್ರಿಗಳ ಬೆಲೆ ಏರಿಕೆಯನ್ನು ಖಂಡಿಸಿ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಸೈಕಲ್ ಜಾಥ ಹಾಗೂ ಪ್ರತಿಭಟನಾ ಮೆರವಣಿಗೆ ಬಂಟ್ವಾಳದಲ್ಲಿ ನಡೆಯಿತು. ಮಾಜಿ ಸಚಿವ ರಮಾನಾಥ ರೈ ಅವರು ಬಂಟ್ವಾಳ ಬಡ್ಡಕಟ್ಟೆಯಲ್ಲಿ ಹನುಮಾನ್ ದೇವಸ್ಥಾನದ ಬಳಿ ಚಾಲನೆ ನೀಡಿದರು. ಬಳಿಕ ಬಿ.ಸಿ.ರೋಡಿನ ಮೇಲ್ಸೆತುವೆಯ ಕೆಳಭಾಗದಲ್ಲಿ ಸಂಪನ್ನಗೊಂಡ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿ, ಬಿಜೆಪಿ ಭಾವನಾತ್ಮಕ ವಿಚಾರ ಎತ್ತಿ