Home ಕರಾವಳಿ Archive by category ಬೆಳ್ತಂಗಡಿ (Page 22)

‘ದೂರ ಸಂಪರ್ಕ ಸಾಧನಗಳ ಬಳಕೆ ಮಿತವಾಗಿರಲಿ’

ಉಜಿರೆ: ದೂರ ಸಂಪರ್ಕ ಸಾಧನಗಳ ಬಳಕೆ ಮಿತವಾಗಿರಲಿ ಎಂದು ಎಸ್.ಡಿ.ಎಂ ಕಾಲೇಜಿನ ಗಣಕಯಂತ್ರ ವಿಜ್ಞಾನ ವಿಭಾಗದ ಪ್ರೊ. ಶೈಲಜಾ ಅಭಿಪ್ರಾಯಪಟ್ಟರು.ಎಸ್.ಡಿ.ಎಂ. ಪದವಿ ಕಾಲೇಜಿನ ಭೌತಶಾಸ್ತ್ರ ವಿಭಾಗವು ಗುರುವಾರ ‘ವಿಶ್ವ ದೂರ ಸಂಪರ್ಕ ದಿನ ಆಯೋಜಿಸಿದ್ದ ಗುರುತ್ವ-2023 ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.ದೂರ ಸಂಪರ್ಕ ಸೌಲಭ್ಯದಿಂದಾಗಿ ವಿಶ್ವದ ಗಾತ್ರ ಸಣ್ಣದಾಗಿದೆ.

ಬೆಳ್ತಂಗಡಿ ಶಾಸಕನ ವಿರುದ್ಧ ಪೊಲೀಸರಿಗೆ ದೂರು

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯರವರು 24 ಮಂದಿ ಜನರನ್ನು ಹತ್ಯೆ ಮಾಡಿರುವುದಾಗಿ ಸುಳ್ಳು ಆರೋಪ ಮಾಡಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪುತ್ತೂರು ನಗರಸಭೆ ಸದಸ್ಯ ಮೊಹಮ್ಮದ್ ರಿಯಾಝ್ ಕೆ ಅವರು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮೇ 22ರಂದು ಬೆಳ್ತಂಗಡಿಯಲ್ಲಿ ನಡೆದ ಬಿಜೆಪಿಯ ವಿಜಯೋತ್ಸವ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ ಅವರು, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು 24 ಜನರನ್ನು ಹತ್ಯೆ

‘ವೈದ್ಯಕೀಯ ರಂಗದ ಬೆಳವಣ ಗೆ ಅರಿಯಲು ಸಂಖ್ಯಾಶಾಸ್ತ್ರವೇ ಅಳತೆಗೋಲು’

ವೈದ್ಯಕೀಯ ರಂಗದಲ್ಲಿ ಸಂಖ್ಯಾಶಾಸ್ತ್ರದ ಬಳಕೆಯು ಹೇರಳವಾಗಿದೆ ಎಂದು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್ ಅಭಿಪ್ರಾಯಪಟ್ಟರು.ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ಸಂಖ್ಯಾಶಾಸ್ತ್ರ ವಿಭಾಗವು ಆಯೋಜಿಸಿದ ‘ಸ್ಟ್ಯಾಟ್‍ಟೆಕ್ -2023′ ಅಂತರ್ ಕಾಲೇಜು ಮಟ್ಟದ ಸ್ಪರ್ಧೆಯ ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.ವೈದ್ಯಕೀಯ ಕ್ಷೇತ್ರದಲ್ಲಾಗುವ ಮುಖ್ಯ ಬದಲಾವಣೆಗಳನ್ನು ಗುರುತಿಸುವಲ್ಲಿ

ದ.ಕ.ಜಿಲ್ಲೆಯ ‌ಕೊನೆಯ ಜಾತ್ರೆ ಶಿಶಿಲ ” ಕೊರೊಂತಾಯನ ” ಪ್ರಾರಂಭ.

ದ.ಕ.ಜಿಲ್ಲೆಯ ಕೊನೆಯ ಜಾತ್ರೆ ಶಿಶಿಲ ಜಾತ್ರೆ. ಇಲ್ಲಿಯ ಕಪಿಲಾ ನದಿಯಲ್ಲಿರುವ ದೇವರ ಮೀನು ನೋಡಲು ಸಾವಿರಾರು ಪ್ರವಾಸಿಗರು ಆಗಮಿಸಿತ್ತಾರೆ. ಸರ್ವ ರೋಗ ಪರಿಹಾರಕ್ಕಾಗಿ ಇಲ್ಲಿಯ ದೇವರ ಮೀನಿಗೆ‌ ಆಹಾರ ಸಮರ್ಪಿಸುತ್ತಾರೆ. ಸ್ವಯಂಭೂ ಶಿವ ಇಲ್ಲಿಯ ಆರಾದ್ಯ ದೇವರು. ಮತ್ಸ್ಯ ವಿಶ್ಣುವಿನ ಅವತಾರ . ಆದುದರಿಂದ ಇದು ಹರಿ ಹರ ಸಂಗಮ ಪುಣ್ಯಕ್ಷೇತ್ರ.ಮುಂದಿನ ಒಂಬತ್ತು ದಿನ ಜಾತ್ರಾ‌ ಕಾರ್ಯಕ್ರಮ ಜರಗಲಿದೆ. ಮೆ.19 ರಂದು ಶ್ರೀ ದೇವರ ಮಹಾರಥೊಸ್ಯವ ಜರಗಲಿದೆ. ಧ್ವಜಾರೋಹಣ ದಿನ

ಬೆಳ್ತಂಗಡಿ : ಬಿಜೆಪಿ ವಿಜಯೋತ್ಸವ ಸಂದರ್ಭದಲ್ಲಿ ಹಲ್ಲೆ

ಬೆಳ್ತಂಗಡಿಯ ಪೆರಾಡಿಯಲ್ಲಿ ಬಿಜೆಪಿಯ ವಿಜಯೋತ್ಸವದ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತ ದಯಾನಂದ ಪೂಜಾರಿಯವರ ಮೇಲೆ ಹಲ್ಲೆ ನಡೆದಿದ್ದು. ಹಲ್ಲೆಗೆ ಒಳಗಾದ ದಯಾನಂದ ಪೂಜಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಶಾಸಕರಾದ ಕೆ ವಸಂತ ಬಂಗೇರ ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ರವರು ಭೇಟಿ ಮಾಡಿ ಧೈರ್ಯ ತುಂಬಿದರು. ತಾಲೂಕಿನಲ್ಲಿ ಬಿಜೆಪಿ ವಿಜಯೋತ್ಸವದ ಸಂದರ್ಭದಲ್ಲಿ ಹಲವು ಕಡೆಗಳಲ್ಲಿ ಕಾಂಗ್ರೆಸ್

ಕೆಲಸ ಕೊಡಿಸುವ ನೆಪದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ

ಉದ್ಯಮಿಯಿಂದ ತನ್ನ ಕಾರಿನಲ್ಲಿ ಮಹಿಳಗೆ ಲೈಂಗಿಕ ಕಿರುಕುಳ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಡೆದ ಘಟನೆ. ಕಾರಿನಲ್ಲಿ ಕಿರುಕುಳ ನೀಡುವಾಗ ಕಿರುಚಾಡಿ ಕಾರಿನಿಂದ ಹೊರಬಂದ ಯುವತಿ.ಬೈಕ್ ನಲ್ಲಿ ಬಂದ ಯುವಕರಿಂದ ಮಹಿಳೆಯ ರಕ್ಷಣೆ.ಮಹಾವೀರ ಟೆಕ್ಸ್ ಟೈಲ್ ಹಾಗೂ ಮಹಾವೀರ ಸೂಪರ್ ಮಾರ್ಕೆಟ್ ಮಾಲೀಕ ಪ್ರಭಾಕರ ಹೆಗ್ಡೆ ಮೇಲೆ ಲೈಂಗಿಕ ಕಿರುಕುಳ ಆರೋಪ.ಉಜಿರೆಯಲ್ಲಿರುವ ಮಹಾವೀರ ಟೆಕ್ಸ್ ಟೈಲ್ ಹಾಗೂ ಧರ್ಮಸ್ಥಳದಲ್ಲಿರುವ ಮಹಾವೀರ ಸೂಪರ್ ಮಾರ್ಕೆಟ್.20 ವರ್ಷದ ವಿವಾಹಿತ

ಚಾರ್ಮಾಡಿಯಲ್ಲಿ ಮತಗಟ್ಟೆ ಅಧಿಕಾರಿಗಳಿಂದ ಗೊಂದಲ : ಪೊಲೀಸರಿಂದ ಲಾಠಿಚಾರ್ಜ್

ಚಾರ್ಮಾಡಿಯಲ್ಲಿ ಮತಗಟ್ಟೆ ಅಧಿಕಾರಿಗಳಿಂದ ಉಂಟಾದ ಗೊಂದಲಗಳಿಂದಾಗಿ ಪರಿಸ್ಥಿತಿ ನಿಯಂತ್ರಣಕ್ಕಾಗಿ ಪೆÇಲೀಸರು ಲಾಠಿಚಾರ್ಜ್ ನಡೆಸಿದ ಘಟನೆ ಬುಧವಾರ ತಡರಾತ್ರಿ ಸಂಭವಿಸಿದೆ.ಚಾರ್ಮಾಡಿಯ ಒಂದು ಮತಗಟ್ಟೆಯಲ್ಲಿ ಮತದಾನ ಪ್ರಕ್ರಿಯೆ ಒಂದಿಷ್ಟು ವಿಳಂಬವಾಗಿತ್ತು. ರಾತ್ರಿ 7:20ರವರೆಗೂ ಇಲ್ಲಿ ಮತದಾನ ನಡೆದಿತ್ತು. ಆದರೆ ರಾತ್ರಿ 10:30 ದಾಟಿದರೂ ಮತಗಟ್ಟೆಯ ಅಧಿಕಾರಿಗಳು ಅಲ್ಲಿಂದ ತೆರಳಿರಲಿಲ್ಲ. ಇದರಿಂದ ಅನುಮಾನಗೊಂಡ ಕಾಂಗ್ರೆಸ್ ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ

ಮತ ಚಲಾಯಿಸಿದ ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಅವರು ಗರ್ಡಾಡಿಯ ಸೈಂಟ್ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 123 ರಲ್ಲಿ ಮತ ಚಲಾಯಿಸಿದರು. ಪ್ರಜಾಪ್ರಭುತ್ವದ ಅತ್ಯಂತ ಪವಿತ್ರ ಹಬ್ಬ ಎಂದು ಕರೆಸಿಕೊಳ್ಳುವ ಮತದಾನ ಸಂಭ್ರಮದಲ್ಲಿ ಕ್ಷೇತ್ರದ ಎಲ್ಲಾ ಮತದಾರರು ಭಾಗಿಯಾಗಬೇಕೆಂದು ಮನವಿ ಮಾಡಿದರು.

ಬೆಳ್ತಂಗಡಿ: ಕಾಂಗ್ರೆಸ್ ನಾಯಕರು ಬಿಜೆಪಿಗೆ ಸೇರ್ಪಡೆ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷವು ಬಹಿರಂಗ ಪ್ರಚಾರ ಸಭೆಗೆ ಮುನ್ನುಡಿ ಬರೆದಿದ್ದು, ಈಗಾಗಲೇ ಹಲವಾರು ಯಶಸ್ವಿ ಸಭೆ ನಡೆದಿದೆ. ಪ್ರತಿ ಸಭೆಯಲ್ಲೂ ಸಾವಿರಕ್ಕೂ ಅಧಿಕ ಜನರು ಉಪಸ್ಥಿತರಿರುವ ಮೂಲಕ ಬಿಜೆಪಿ ಪರವಾದ ಸ್ಪಷ್ಟ ವಾತಾವರಣ ಸೃಷ್ಟಿಯಾಗುತ್ತಿದೆ. ಈ ಮಧ್ಯೆ ಬಿಜೆಪಿ ಯಶಸ್ಸು ನೋಡುತ್ತಿರುವ ಕಾಂಗ್ರೆಸ್ ಮುಖಂಡರು ಕಾಂಗ್ರೆಸ್ ತ್ಯಜಿಸಿ ಬಿಜೆಪಿ ಜೊತೆಗೆ ಕೈ ಜೋಡಿಸುತ್ತಿದ್ದಾರೆ. ನೆರಿಯದಲ್ಲಿ ನಡೆದ ಸಾರ್ವಜನಿಕ ಚುನಾವಣಾ ಪ್ರಚಾರ ಸಭೆಯಲ್ಲಿ

ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರಿದ ಮಚ್ಚಿನ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ

ಬೆಳ್ತಂಗಡಿಯ ಬಿಜೆಪಿ ಪಕ್ಷದಿಂದ ಬೇಸತ್ತು, ಬಹಿರಂಗವಾಗಿ ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತವನ್ನು ಒಪ್ಪಿ ಪಕ್ಷಕ್ಕೆ ಮಚ್ಚಿನ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಕುಲಾಲ್ ಸಮುದಾಯದ ಮುಖಂಡರಾದ ಚಂದಪ್ಪ ಕುಲಾಲ್ ಅವರು ಮಾಜಿ ಶಾಸಕರಾದ ವಸಂತ ಬಂಗೇರರ ನೇತೃತ್ವದಲ್ಲಿ ಸೇರ್ಪಡೆಗೊಂಡಿದ್ದಾರೆ. ಮಡಂತ್ಯಾರನಲ್ಲಿ ನಡೆದ ಪಕ್ಷ ಸೇರ್ಪಡೆಯಲ್ಲಿ ಕಾಂಗ್ರೆಸ್ ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಅವರು ಮಾತ್ನಾಡಿ, ಚಂದಪ್ಪ ಕುಲಾಲ್ ಅವರಂತಹ ಪ್ರಮುಖರು