ಬೆಳ್ಳಾರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕ ಹಿಂದೂ ರುದ್ರಭೂಮಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ (ರಿ.), ಸುಳ್ಯ ವತಿಯಿಂದ ಮಂಜೂರಾದ ಸಿಲಿಕಾನ್ ಚೇಂಬರ್ ಅನ್ನು ದಿನಾಂಕ 05.01.2026 ರಂದು ಊರಿನ ಗಣ್ಯರು ಹಾಗೂ ಸಾರ್ವಜನಿಕರ ಸಮ್ಮುಖದಲ್ಲಿ ಯಶಸ್ವಿಯಾಗಿ ಹಸ್ತಾಂತರಿಸಲಾಯಿತು.ಕಾರ್ಯಕ್ರಮದಲ್ಲಿ ಬೆಳ್ಳಾರೆ ಗ್ರಾಮ
ಪಡುಬಿದ್ರಿ:ಮಂಗಳೂರು ನಗರದ ಟಿ ಎಂ ಎ ಪೈ ಇಂಟರ್ನ್ಯಾಷನಲ್ ಕನ್ವೆನ್ಶನ್ ಸೆಂಟರ್ ನಲ್ಲಿ ಜನವರಿ 31 ಮತ್ತು ಫೆಬ್ರವರಿ1 ರಂದು ಜರುಗಲಿರುವ ಭಾರತೀಯ ವೈದ್ಯ ಪದ್ಧತಿಗಳ ಮಹಾ ಸಂಭ್ರಮ- ಆಯುಷ್ ಹಬ್ಬದ ಬಗ್ಗೆ ಉಡುಪಿ ಜಿಲ್ಲೆಯಲ್ಲಿ ಜನಜಾಗೃತಿ ಅಭಿಯಾನಕ್ಕೆ ಭಾನುವಾರದಂದು ಚಾಲನೆ ನೀಡಲಾಯಿತು. ಆಯುಷ್ ಫೆಡರೇಶನ್ ಆಫ್ ಇಂಡಿಯಾ ಉಡುಪಿ ಜಿಲ್ಲೆಯ ವತಿಯಿಂದ ಆಯುಷ್ ವೃತ್ತಿನಿರತ ವೈದ್ಯರ ಉಪಸ್ಥಿತಿಯಲ್ಲಿ ಜರುಗಿದ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಎ.ಎಫ್.ಐ
ಬಾಲ ಯೇಸುವಿನ ವಾರ್ಷಿಕ ಮಹೋತ್ಸವಕ್ಕೆ ಸಿದ್ಧತೆಯಾಗಿ ಜನವರಿ 3, 2026 ಶನಿವಾರ, ಕೊರ್ಡೆಲ್ ಚರ್ಚ್ ನಿಂದ ಬಿಕರ್ನಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರದ ವರೆಗೆ ಭಕ್ತಿಭಾವಪೂರ್ಣ ಹೊರೆ ಕಾಣಿಕೆ ಮೆರವಣಿಗೆ ನಡೆಯಿತು. ಅನೇಕ ಭಕ್ತರು ಕೃತಜ್ಞತೆ, ನಂಬಿಕೆ ಮತ್ತು ಆಶಯದೊಂದಿಗೆ ಕಾಣಿಕೆಗಳನ್ನು ಸಮರ್ಪಿಸಿದರು. ವಂ. ವಿಜಯ್ ಮೊಂತೆರೋ, (ಸಹಾಯಕ ಧರ್ಮಗುರು , ಕೊರ್ಡೆಲ್ ಚರ್ಚ್) ಆಶೀರ್ವಾದ ನೀಡಿ, ಶ್ರೀಮತಿ ರೂತ್ ಕ್ಯಾಸ್ಟೆಲಿನೊ, (ಉಪಾಧ್ಯಕ್ಷೆ, ಕೊರ್ಡೆಲ್ ಚರ್ಚ್)
ಮಂಗಳೂರಿನ ಲೇಡಿಹಿಲ್ನ ಎಸ್.ಎಲ್ ಡೈಮಂಡ್ ಹೌಸ್ ಮಾಲಕರಾದ ರವೀಂದ್ರ ಶೇಟ್ ಅವರ ಅಣ್ಣ ದಿ| ಎಂ.ರಘುನಾಥ ಶೇಟ್ ಅವರ ಪತ್ನಿ ಪದ್ಮಾ ಆರ್. ಶೇಟ್(75) ನಿಧನರಾಗಿದ್ದಾರೆ. ಪದ್ಮಾ ಆರ್. ಶೇಟ್ ಅಲ್ಪಕಾಲದ ಅನಾರೋಗ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾಗಿದ್ದಾರೆ. ಪದ್ಮಾ ಅವರು ದೈವಜ್ಞ ಬ್ರಾಹ್ಮಣ ಸಮುದಾಯದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದರು. ಮೃತರಿಗೆ ಪ್ರಸಿದ್ಧ ಉದ್ಯಮಿಗಳಾದ ಎಂ.ಪ್ರಶಾಂತ್ ಶೇಟ್, ಎಂ. ಹೇಮಂತ್ ಶೇಟ್,
ಡೈನಾಮಿಕ್ಸ್ ಸಂಸ್ಥೆಯು ಎಂಬ್ರೇರ್ ಸಹಯೋಗದಲ್ಲಿ ಆಯೋಜಿಸಿದ ಅಂತಾರಾಷ್ಟ್ರೀಯ ವಿಮಾನ ವಿನ್ಯಾಸ ಮತ್ತು ವಿಮಾನಯಾನ ಸ್ಪರ್ಧೆಯಲ್ಲಿ ಮಂಗಳೂರು ಅಮೃತ ವಿದ್ಯಾಲಯಂನ ಗ್ರೇಡ್ 10ರ ವಿದ್ಯಾರ್ಥಿಯಾದ ವೈಭವ್ ಪ್ರಭು ಅವರು ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ. ವಿವಿಧ ಪ್ರದೇಶಗಳಿಂದ ಭಾಗವಹಿಸಿದ್ದ ಸ್ಪರ್ಧಾರ್ಥಿಗಳ ನಡುವೆ, ವೈಭವ್ ಅವರ ಸಾಧನೆ ವಿಮಾನ ವಿನ್ಯಾಸ ತತ್ವಗಳು, ವಾಯುಗತಿ ಶಾಸ್ತ್ರ ಮತ್ತು ವಿಮಾನಯಾನ ಕಲ್ಪನೆಗಳ ಮೇಲಿನ ಗಟ್ಟಿಯಾದ ಅರಿವಿನ ಮೂಲಕ ವಿಶೇಷವಾಗಿ
ಹೊಸ ವರ್ಷಚಾರಣೆಯ ವೇಳೆ ಸಂಭವಿಸಬಹುದಾದ ರಸ್ತೆ ಅಪಘಾತಗಳಿಂದ ಉಂಟಾಗುವ ಜೀವ ಹಾನಿಯನು ತಡೆಯುವ ದೃಷ್ಟಿಯಿಂದ 108 ಆರೋಗ್ಯ ಕವಚ ಅಂಬುಲೆನ್ಸ್, ಇಎಮ್ಆರ್ಐ EMRI GREEN HEALTH SERVICES ಕರ್ನಾಟಕ ರಾಜ್ಯಾದ್ಯಂತ ಸುಸಜ್ಜಿತಗೊಂಡಿರುತ್ತದೆ. ಸಾಮಾನ್ಯ ದಿನಗಳಿಗಿಂತ ಹೊಸ ವರ್ಷದ ಆಚರಣೆಗಳಲ್ಲಿ ಸರಾಸರಿ ೩೦ರಿಂದ ೩೫ ಪರ್ಸೆಂಟ್ ಅಪಘಾತ ಪ್ರಕರಣಗಳು ವರದಿಯಾಗಿವೆ. 108 ಅಂಬುಲೆನ್ಸ್ ಸೇವೆಯು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯೊಂದಿಗೆ ನಿಕಟ ಸಹಕಾರವನ್ನು ಹೊಂದಿರುತ್ತದೆ.
ಮಂಗಳೂರು: ಅತ್ಯಂತ ಕಠಿಣ ಹಾಗೂ ಸವಾಲಿನ ಸಕಲೇಶಪುರ-ಸುಬ್ರಹ್ಮಣ್ಯ ಘಾಟಿ ವಿಭಾಗದ 55ಕಿ.ಮೀ. ಮಾರ್ಗದ ವಿದ್ಯುದೀಕರಣ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿರುವುದು ಈ ಭಾಗದ ಜನರ ದೀರ್ಘಕಾಲದ ರೈಲ್ವೆ ಮೂಲಸೌಕರ್ಯದ ಬೇಡಿಕೆ ಈಡೇರಿಕೆಯಲ್ಲಿ ಒಂದು ಮಹತ್ವದ ಮೈಲಿಗಲ್ಲು ಆಗಿದೆ ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಹೇಳಿದ್ದಾರೆ. ಘಾಟ್ ಮಾರ್ಗದ ವಿದ್ಯುದ್ದೀಕರಣ ಯೋಜನೆಯು ನಮ್ಮ ಭಾಗದ ರೈಲ್ವೆ ಮೂಲಸೌಕರ್ಯಗಳ ಪ್ರಗತಿಗೆ ದೊಡ್ಡ ಮಟ್ಟದ ವೇಗ ನೀಡಲಿದ್ದು, ಕರಾವಳಿಗೆ ಸರಕು
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರೂ ಆಗಿರುವ ಯಕ್ಷಗಾನ ಕಲಾವಿದ, ಕವಿ,ಲೇಖಕ, ನಾಟಕಕಾರ, ಸಂಘಟಕ ಯೋಗೀಶ್ ಕಾಂಚನ್ಬೈಕಂಪಾಡಿ ಅವರು ನಿಧನರಾಗಿದ್ದಾರೆ.ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ 2023-2024ರ ಸಾಲಿನ ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಯನ್ನು ಸಾಹಿತಿ ಯೋಗೀಶ್ ಕಾಂಚನ್ ಬೈಕಂಪಾಡಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪಡೆದಿದ್ದರು.ಬೈಕಂಪಾಡಿಯ ಮೀನಕಳಿಯದ ನಿವಾಸಿಯಾದ ಇವರು ಹವ್ಯಾಸಿ ಯಕ್ಷಗಾನ ಕಲಾವಿದ. ತುಳುವಿನಲ್ಲಿ ‘ಮಣ್ಣ್
ಮಂಗಳೂರು : ಪುರಾತನ ಹಿನ್ನೆಲೆ ಹೊಂದಿರುವ ತುಳು ಭಾಷೆ ಹಾಗೂ ತುಳುನಾಡಿನ ಸಂಸ್ಕೃತಿ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸರಕಾರ, ಸಮುದಾಯ ಹಾಗೂ ಖಾಸಗಿ ರಂಗ ಜೊತೆಯಾಗಿ ಕೈಜೋಡಿಸಬೇಕಾಗಿದೆ ಎಂದು ಅದಾನಿ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಹಾಗೂ ಅಧ್ಯಕ್ಷ ಕಿಶೋರ್ ಆಳ್ವ ಅವರು ಹೇಳಿದರು. ಅವರು ಮಂಗಳೂರಿನ ತುಳು ಭವನದಲ್ಲಿ ‘ಎಸ್ .ಯು. ಪಣಿಯಾಡಿ ತುಳುನಾಡ ಚಾವಡಿ’ಯಲ್ಲಿ ಹಿರಿಯ ಛಾಯಾಗ್ರಾಹಕ ಯಜ್ಞ ಅವರು ಕ್ಲಿಕ್ಕಿಸಿದ ಹಳೆಯ ಮಂಗಳೂರಿನ
ಉಪ್ಪಿನಂಗಡಿ ಪಾದಚಾರಿಯೋರ್ವರಿಗೆ ಟೆಂಪೋ ಡಿಕ್ಕಿಯಾಗಿ ಮೃತಪಟ್ಟ ಘಟನೆ ಕೊಯಿಲದ ಅತೂರ್ ನಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಮೃತಪಟ್ಟವರನ್ನು ಕಡಬದ ಸುಂಕದಕಟ್ಟೆ ನಿವಾಸಿ ಅಬ್ದುಲ್ ಖಾದರ್ ಸಖಾಫಿ ಎಂದು ಗುರುತಿಸಲಾಗಿದೆ. ಇವರು ಕಾಸರಗೋಡಿನ ಮೈಮಾತ್ ಸಂಸ್ಥೆಯಲ್ಲಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸಂಬಂಧಿಕರ ಮದರಂಗಿ ಕಾರ್ಯಕ್ರಮಕ್ಕೆ ಮನೆಯವರ ಜೊತೆ ಬಂದಿದ್ದರು. ಆತೂರಿನಲ್ಲಿ ಬಸ್ಸಿನಿಂದ ಇಳಿದು, ಮನೆಯವರನ್ನು ರಿಕ್ಷಾದಲ್ಲಿ ಕಳುಹಿಸಿದ್ದರು. ಬಳಿಕ



























