ರಚನಾ – ಮಂಗಳೂರಿನ ಕಥೊಲಿಕ್ ವಾಣಿಜ್ಯ ಮಹಾಮಂಡಳಿಯ ಅಧ್ಯಕ್ಷರಾಗಿ ರೊಯ್ ಕ್ಯಾಸ್ತೆಲಿನೊಮಂಗಳೂರಿನ ಕಥೊಲಿಕ್ ವಾಣಿಜ್ಯ ಮಹಾಮಂಡಳಿ – ರಚನಾದ 26ನೇ ಸಾಮಾನ್ಯ ಸಭೆ 16.11.25ರಂದು ಬೆಂದೂರ್ ಹಾಲ್ನಲ್ಲಿ ನಡೆಯಿತು. ಕಥೊಲಿಕ್ ಮುಖಂಡ ಮತ್ತು ಉದ್ಯಮಿ ರೊಯ್ ಕ್ಯಾಸ್ತೆಲಿನೊ ಅವರನ್ನು ಮುಂದಿನ ಎರಡು ವರ್ಷದ ಅವಧಿಗೆ ಏಕಮತದಿಂದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು.
“ಲಿಂಗ ಸಮಾನತೆ ಮತ್ತು ನ್ಯಾಯ” ಕುರಿತ ಪ್ರೇರಣಾದಾಯಕ ತಂಡ ತರಬೇತಿ ಕಾರ್ಯಕ್ರಮವನ್ನು 2025ರ ನವೆಂಬರ್ 17ರಂದು ಸಿಒಡಿಪಿಯಲ್ಲಿ ಆಯೋಜಿಸಲಾಯಿತು. KROSS ಬೆಂಗಳೂರು ಹಾಗೂ CODP®️ ಮಂಗಳೂರಿನ ಸಹಯೋಗದಲ್ಲಿ ಮಹಿಳಾ ಸದೃಢೀಕರಣ ಯೋಜನೆ ಘಟಕದಡಿ ಈ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮವನ್ನು ಶ್ರೀ ರಾಜಶೇಖರ್, ಸಂಯೋಜಕ – ಮಹಿಳಾ ಸದೃಢೀಕರಣ ಯೋಜನೆ (KROSS, ಬೆಂಗಳೂರು), ಡಾ. ರೋಹನ್ ಎಸ್. ಮೊನಿಸ್, ಮುಖ್ಯ ಆಡಳಿತಾಧಿಕಾರಿ – ಕಣಚೂರು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ
ಯಕ್ಷಾಂಗಣದಿಂದ ಕನ್ನಡದ ನುಡಿ ಹಬ್ಬ ಆಚರಣೆ: ಕೆ.ಕೆ.ಶೆಟ್ಟಿ ಮಂಗಳೂರು: ‘ಪ್ರತಿ ವರ್ಷ ನವೆಂಬರ್ ತಿಂಗಳಲ್ಲಿ ವಾರವಿಡೀ ಯಕ್ಷಗಾನ ತಾಳಮದ್ದಳೆಗಳನ್ನು ನಡೆಸುವ ಮೂಲಕ ಯಕ್ಷಾಂಗಣ ಸಂಸ್ಥೆ ನಿಜಾರ್ಥದಲ್ಲಿ ಕನ್ನಡದ ನುಡಿ ಹಬ್ಬವನ್ನು ಆಚರಿಸುತ್ತಿದೆ. ಸುಲಲಿತವಾದ ಕನ್ನಡ ಭಾಷೆಯನ್ನು ಯಕ್ಷಗಾನದಂತೆ ಸಶಕ್ತವಾಗಿ ಬಳಸಿಕೊಳ್ಳುವ ಕಲಾ ಮಾಧ್ಯಮ ಬೇರೊಂದಿಲ್ಲ’ ಎಂದು ಅಹ್ಮದ್ ನಗರದ ಉದ್ಯಮಿ ಹಾಗೂ ಮುಂಡಪಳ್ಳ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ
ತುಳು ಅಕಾಡೆಮಿ ಪ್ರಕಟಿಸಿದ ಮನು ಇಡ್ಯಾರ ನಾಟಕ ಕೃತಿಗಳ ಬಿಡುಗಡೆ ಮಂಗಳೂರು: ಎಪ್ಪತ್ತರ ದಶಕದ ಬಳಿಕ ತುಳು ರಂಗಭೂಮಿಯ ದಿಕ್ಕು ಬದಲಾಯಿಸಿದ ಯುಗ ಪ್ರವರ್ತಕ ನಾಟಕಕಾರ ಮನು ಇಡ್ಯಾರ ತುಳು ರಂಗಭೂಮಿಯ ಕೊಡುಗೆ ಅಪೂರ್ವದದು ಎಂದು ವಿಜಯ ಕರ್ನಾಟಕ ಪತ್ರಿಕೆಯ ನಿವೃತ್ತ ಸ್ಥಾನೀಯ ಸಂಪಾದಕ ಯು. ಕೆ .ಕುಮಾರನಾಥ ಅವರು ಅಭಿಪ್ರಾಯಪಟ್ಟರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಇಡ್ಯಾ ಸುರತ್ಕಲ್ ಬಿಲ್ಲವ ಸಮಾಜ ಸೇವಾ ಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ಅಕಾಡೆಮಿ ಪ್ರಕಟಿಸಿರುವ
ಮಂಗಳೂರು : ತುಳು ಭಾಷೆಯಲ್ಲಿ ಅಪಾರವಾದ ಸಾಹಿತ್ಯವಿದೆ , ಈ ಸಾಹಿತ್ಯ ಕೃತಿಗಳ ಪರಿಚಯ ಮಾಡಿಕೊಳ್ಳಲು ಅಕಾಡೆಮಿ ವಿದ್ಯಾರ್ಥಿಗಳಿಗೆ ಅವಕಾಶ ನೀಡಿದೆ, ಈ ಮೂಲಕ ವಿದ್ಯಾರ್ಥಿಗಳಿಗೆ ಓದುವ ಹವ್ಯಾಸ ಬೆಳೆಸಿಕೊಳ್ಳಲು ಪ್ರೇರಣಾದಾಯಿಯಾಗಿ ಅಕಾಡೆಮಿ ಕೆಲಸ ಮಾಡುತ್ತಿದೆ ಎಂದು ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಅವರು ಹೇಳಿದರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಮಂಗಳೂರಿನ ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ‘ಅಕಾಡೆಮಿಡ್ ಒಂಜಿ
ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿತ ಹಿರಿಯ ನಾಟಕಕಾರ ಮನು ಇಡ್ಯಾ ಅವರು ಬರೆದ ‘ಗಂಧದ ಕೊರಡ್ ಬೊಕ್ಕ ತಾಂಗ್ ನಿರೆಲ್’ ಎರಡು ನಾಟಕಗಳ ಪುಸ್ತಕ ಬಿಡುಗಡೆ ಮತ್ತು ಮನು ಇಡ್ಯಾ ಅವರಿಗೆ ಚಾವಡಿ ತಮ್ಮನ ಕಾರ್ಯಕ್ರಮ ನ.13 ರಂದು ಸಂಜೆ 4:00 ಗಂಟೆಗೆ ಬಿಲ್ಲವ ಸಮಾಜ ಸೇವಾ ಸಂಘ ಇಡ್ಯಾ ಸುರತ್ಕಲ್ ಇಲ್ಲಿ ನಡೆಯಲಿದೆ.ವಿಜಯ ಕರ್ನಾಟಕ ದಿನಪತ್ರಿಕೆಯ ನಿವೃತ್ತ ಸ್ಥಾನೀಯ ಸಂಪಾದಕ ಯು.ಕೆ.ಕುಮಾರನಾಥ ಅವರು ಪುಸ್ತಕ ಬಿಡುಗಡೆ
ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ವಿದ್ಯಾರ್ಥಿ, ಯುವಜನರಲ್ಲಿ ತುಳು ಸಾಹಿತ್ಯ ಓದಿನ ಅಭಿರುಚಿ ಮೂಡಿಸಲು ಹಮ್ಮಿಕೊಂಡಿರುವ ‘ಅಕಾಡೆಮಿಡ್ ಒಂಜಿ ದಿನ ; ಬಲೆ ತುಳು ಓದುಗ’ ಅಭಿಯಾನದ ಹನ್ನೆರಡನೇ ಕಾರ್ಯಕ್ರಮ ನ.12 ರಂದು ನಡೆಯಲಿದೆ.ಬುಧವಾರದಂದು ಮಂಗಳೂರಿನ ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನ 30 ವಿದ್ಯಾರ್ಥಿಗಳು ಉರ್ವಾಸ್ಟೋರ್ ನಲ್ಲಿರುವ ತುಳು ಭವನದ ಗ್ರಂಥಾಲಯಕ್ಕೆ ಭೇಟಿ ನೀಡಿ ಅಧ್ಯಯನ ಹಾಗೂ ಸಂವಾದ ನಡೆಸುವರು. ಕಾರ್ಯಕ್ರಮವನ್ನು
ಮಂಗಳೂರು ರನ್ನರ್ಸ್ ಕ್ಲಬ್ ವತಿಯಿಂದ ವರ್ಟೆಕ್ಸ್ ಸಹಯೋಗದಲ್ಲಿ ನೀವಿಯಸ್ ಮಂಗಳೂರು ಮ್ಯಾರಥಾನ್-2025 ನಾಲ್ಕನೇ ಆವೃತ್ತಿಯ ಮ್ಯಾರಥಾನ್ ಮಂಗಳೂರಿನಲ್ಲಿ ನಡೆಯಿತು. ಇದು ಅತೀ ದೊಡ್ಡ ಮ್ಯಾರಥಾನ್ ಆಗಿದ್ದು, ಅಂತರರಾಷ್ಟ್ರೀಯ ಮಟ್ಟದ ಮ್ಯಾರಥಾನ್ಗಳು ಭಾಗವಹಿಸಿದ್ದರು. ವಿವಿಧ ವಿಭಾಗದಲ್ಲಾಗಿ ಸುಮಾರು 6 ಸಾವಿರಕ್ಕೂ ಹೆಚ್ಚು ಮಂದಿ ಈ ಮ್ಯಾರಥಾನ್ ಪಾಲ್ಗೊಂಡಿದ್ದರು. ಮಂಗಳೂರು ರನ್ನರ್ಸ್ ಕ್ಲಬ್ ವತಿಯಿಂದ ವರ್ಟೆಕ್ಸ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ನೀವಿಯಸ್
ಮಂಗಳೂರು: ಜಾನಪದ ಕಲಾವಿದರು ಯಾವುದೇ ಪ್ರತಿಫಲವನ್ನು ಬಯಸದೇ ಸೇವಾ ನಿರತರಾಗಿರುತ್ತಾರೆ, ತುಳುನಾಡಿನ ಇಬ್ಬರು ಹಿರಿಯ ಕಲಾವಿದರಾದ ಸಿಂಧೂ ಗುಜರನ್ ಹಾಗೂ ಉಮೇಶ್ ಪಂಬದ ಗಂಧಕಾಡು ಅವರನ್ನು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಮೂಲಕ ಗುರುತಿಸಿದ ರಾಜ್ಯ ಸರಕಾರದ ನಡೆ ಶ್ಲಾಘನೀಯವಾದದ್ದು ಎಂದು ಜಾನಪದ ವಿದ್ವಾಂಸ ಹಾಗೂ ಡಾ. ಶಿವರಾಮ ಕಾರಂತ ಟ್ರಸ್ಟ್ ನ ನಿರ್ದೇಶಕ ಡಾ. ಗಣನಾಥ ಶೆಟ್ಟಿ ಎಕ್ಕಾರು ಅವರು ಹೇಳಿದರು.ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಮಂಗಳೂರು ತಾಲೂಕು
ಮಂಗಳೂರು: ಸಂಶೋಧಕಿ ಡಾ.ಇಂದಿರಾ ಹೆಗ್ಗಡೆ ಅವರು ತನ್ನ ಜಾನಪದೀಯ ಸಂಶೋಧನೆಯ ಕ್ಷೇತ್ರ ಕಾರ್ಯದ ಅನುಭವಗಳನ್ನು ದಾಖಲಿಸಿರುವ ಮೂಲಕ ಸಂಶೋಧನಾ ಕ್ಷೇತ್ರಕ್ಕೆ ಬರುವವರಿಗೆ ಬಹುದೊಡ್ಡ ಮಾರ್ಗದರ್ಶಿ ಕೊಡುಗೆಯನ್ನು ನೀಡಿದ್ದಾರೆ, ತುಳುವಿನಲ್ಲಿ ಇದೊಂದು ಮಹತ್ವದ ಕೃತಿಯಾಗಲಿದೆ ಎಂದು ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ.ಆಶಾಲತಾ ಸುವರ್ಣ ಅವರು ಹೇಳಿದರು. ಅವರು ತುಳು ಭವನದಲ್ಲಿ ಬುಧವಾರ ಆಯೋಜಿಸಲಾಗಿದ್ದ ಡಾ.ಇಂದಿರಾ ಹೆಗ್ಗಡೆ ಅವರ ‘ಬಾರಗೆರೆ




























