Home ಕರಾವಳಿ Archive by category ಮಂಗಳೂರು (Page 3)

ಭಾಗ್ಯಶ್ರೀ ಆರ್ ಗೆ ಡಾಕ್ಟರೇಟ್ ಪದವಿ

ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕಿ ಶ್ರೀಮತಿ ಭಾಗ್ಯಶ್ರೀ ಆರ್., ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಪ್ರೊ. ಪ್ರೀತಿ ಕೀರ್ತಿ ಡಿಸೋಜ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ  “ಎನ್ ಎಂಪಿರಿಕಲ್ ಸ್ಟಡಿ ಆಫ್ ಲೈವಿಲಿವುಡ್ ಪ್ಯಾಟರ್ನ್ ಆಫ್ ಸಿವಿಕ್ ಎಂಪ್ಲಾಯಿಸ್ ಎಂಗೇಜ್ಡ್ ಇನ್

ಶೀರ್ಷಿಕೆ: ತಂತ್ರಜ್ಞಾನದ ಮೂಲಕ ಶಿಕ್ಷಣಕ್ಕೆ ಒತ್ತು: ಎಸ್.ಜೆ.ಇ.ಸಿ 25ನೇ ಪ್ರತಿಷ್ಠಾಪನಾ ದಿನಾಚರಣೆ

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು), ಬೆಳಗಾವಿಗೆ ಸಂಬಂಧ ಹೊಂದಿರುವ ಸ್ವಾಯತ್ತ ಸಂಸ್ಥೆಯಾದ ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜು (ಆಟೊನೊಮೌಸ್), ಮಂಗಳೂರು, ಉನ್ನತ ತಾಂತ್ರಿಕ ಶಿಕ್ಷಣ ಕ್ಷೇತ್ರದಲ್ಲಿ ತನ್ನ 25 ವರ್ಷದ ಪಯಣವನ್ನು ಪೂರ್ಣಗೊಳಿಸುತ್ತಿದ್ದು, ಬೆಳ್ಳಿ ಮಹೋತ್ಸವ ವರ್ಷಕ್ಕೆ ಕಾಲಿಟ್ಟಿದೆ. ಎನ್.ಎ.ಎ.ಸಿ A+ ಮಾನ್ಯತೆ ಹೊಂದಿರುವ ಈ ಸಂಸ್ಥೆಯ ಅನೇಕ ಶೈಕ್ಷಣಿಕ ಕಾರ್ಯಕ್ರಮಗಳು ರಾಷ್ಟ್ರೀಯ ಮಾನ್ಯತಾ ಮಂಡಳಿ (ಎನ್.ಬಿ.ಎ)ಯಿಂದ ಮಾನ್ಯತೆ

ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಸ್ ತಂದು ತಲಪಾಡಿಯಲ್ಲಿ ಮಾರಾಟಕ್ಕೆ ಯತ್ನ ; ಮೂವರ ಬಂಧನ

ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಸ್ ಖರೀದಿಸಿ ತಂದು ಅದನ್ನು ಮಂಗಳೂರಿನ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಉಳ್ಳಾಲ ತಾಲೂಕಿನ ತಲಪಾಡಿ ಪರಿಸರದಲ್ಲಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೆÇಲೀಸರು ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿ 118 ಗ್ರಾಮ್ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ. ಫೆ.12 ರಂದು ಎಂಡಿಎಂಎ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಕಾರನ್ನು ಪತ್ತೆಹಚ್ಚಿ ಕಾರ್ಯಾಚರಣೆ ನಡೆಸಿದ್ದಾರೆ. ಮುಕ್ಕಚೇರಿಯ

ಮುಂದಿನ ಬಜೆಟ್ ನಲ್ಲಿ ಕರಾವಳಿಯ ಸಮಗ್ರ ಅಭಿವೃದ್ಧಿಗೆ ಒತ್ತು: ಮಂಡಳಿಯಲ್ಲಿ ಜನಪ್ರತಿನಿಧಿಗಳ ಬೇಡಿಕೆ

ಮಂಗಳೂರು: ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ದಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ ನಲ್ಲಿ ನೀಡಬೇಕೆಂದು ಮೂರು ಜಿಲ್ಲೆಗಳ ಜನಪ್ರತಿನಿಧಿಗಳು ಆಗ್ರಹಿಸಿದ್ದಾರೆ. ಗುರುವಾರ ಸ್ಪೀಕರ್ ಯು.ಟಿ. ಖಾದರ್ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ‘ಪ್ರಜಾ ಸೌಧ’ದಲ್ಲಿ ನಡೆದ ಕರಾವಳಿ ಅಭಿವೃದ್ಧಿ ಮಂಡಳಿಯ ಸಭೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಸಚಿವರು, ಶಾಸಕರು ಭಾಗವಹಿಸಿ, ಕರಾವಳಿಯ ಅಭಿವೃದ್ಧಿಯನ್ನು

ಕಾರ್ಮಿಕ ಸಂಹಿತೆಗಳ ವಿರುದ್ದ ಅಖಿಲ ಭಾರತ ಮಹಾಮುಷ್ಕರ – ಮಂಗಳೂರಿನಲ್ಲಿ ರಸ್ತೆತಡೆ ಹಾಗೂ ಪ್ರತಿಭಟನಾ ಪ್ರದರ್ಶನ

ಕಾರ್ಮಿಕ ವರ್ಗದ 29 ಪ್ರಮುಖ ಕಾನೂನುಗಳನ್ನು ರದ್ದುಗೊಳಿಸಿ, ಕಾರ್ಪೊರೇಟ್ ಪರ 4 ಸಂಹಿತೆಗಳನ್ನು ಜಾರಿಗೊಳಿಸಿದ ಕೇಂದ್ರ ಸರಕಾರದ ವಿರುದ್ಧ ಇಂದು (ಫೆಬ್ರವರಿ – 12) ರೈತ ಕಾರ್ಮಿಕರ ನೇತ್ರತ್ವದಲ್ಲಿ ಅಖಿಲ ಭಾರತ ಮಹಾಮುಷ್ಕರ ಅತ್ಯಂತ ಯಶಸ್ವಿಯಾಗಿ ಜರುಗಿದ್ದು,ಅದರ ಭಾಗವಾಗಿ ಮಂಗಳೂರಿನ ಹೃದಯಭಾಗದ ಕ್ಲಾಕ್ ಟವರ್ ಬಳಿಯಲ್ಲಿ ವಿವಿಧ ವಿಭಾಗದ ಕಾರ್ಮಿಕರು ನೌಕರರು ಜತೆಯಾಗಿ ಸೇರಿ ರಸ್ತೆತಡೆ ನಡೆಸಿ ಬಳಿಕ ಪ್ರತಿಭಟನಾ ಸಭೆಯನ್ನು ನಡೆಸಿದರು 500ಕ್ಕೂ ಮಿಕ್ಕಿದ

ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನ:ಇಂದಿನಿಂದ ಜಾತ್ರೆ, ಕುಂಭ ಮಹೋತ್ಸವ

ಮಹಾನಗರ: ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೆ, ಕುಂಭ ಮಹೋತ್ಸವ ಫೆ. 11ರಿಂದ 14ರ ವರೆಗೆ ನಡೆಯಲಿದೆ. ಶ್ರೀ ಕ್ಷೇತ್ರ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಗಳು ಆಶೀರ್ವಾ ದದೊಂದಿಗೆ ಶ್ರೀ ಕ್ಷೇತ್ರದ ತಂತ್ರಿ ಅನಂತ ಉಪಾಧ್ಯಾಯರ ನೇತೃತ್ವದಲ್ಲಿ ಪ್ರಧಾನ ಅರ್ಚಕ ಜನಾರ್ದನ ಭಟ್ ಉಪಸ್ಥಿತಿಯಲ್ಲಿ ವಿಜೃಂಭಣೆಯಿಂದ ನಡೆಯಲಿದೆ. ಫೆ. 11ರಂದು ಸುಮತಿ ಮತ್ತು ಶ್ರೀನಿವಾಸ್‌ ಅವರಿಂದ ದೀಪ ಪ್ರಜ್ವಲನೆ, 3ಕ್ಕೆ ಭಜನೆ, 5.45ಕ್ಕೆ ಜಾನಪದ

ಭಾರತ್ ಬೀಡಿ ವರ್ಕ್ಸ್ ಸಂಸ್ಥೆಯ ಸಂಸ್ಥಾಪಕರ 113 ನೇ ಜನ್ಮ ದಿನಾಚರಣೆ

ಮಂಗಳೂರು: ಪ್ರಖ್ಯಾತ 30 ಮಾರ್ಕಿನ ಬೀಡಿಗಳ ತಯಾರಕರಾದ ಭಾರತ್ ಬೀಡಿ ವರ್ಕ್ಸ್ ಪ್ರೈವೇಟ್ ಲಿಮಿಟೆಡ್ ನ ಸಂಸ್ಥಾಪಕರಾದ ಮಂಜುನಾಥ ಪೈ ಅವರ 113 ನೇ ಜನ್ಮ ದಿನಾಚರಣೆಯನ್ನು ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ನಡೆಸಲಾಯಿತು.ಸಂಸ್ಥೆಯ ಕಾರ್ಯಕಾರಿ ನಿರ್ದೇಶಕರಾದ ಸುಬ್ರಾಯ ಎಂ. ಪೈ ಅವರು ಸಂಸ್ಥೆಯು ನಡೆದು ಬಂದ ದಾರಿ, ಸಂಸ್ಥಾಪಕರು ಸಮಾಜಕ್ಕೆ ನೀಡಿದ ಕೊಡುಗೆ, ಸಂಸ್ಥಾಪಕರ ದೂರ ದೃಷ್ಟಿಯ ಬಗ್ಗೆ ವಿವರಿಸಿದರು.ಕಾರ್ಯಕ್ರಮದಲ್ಲಿ ವಿವಿಧ ಬ್ಯಾಂಕುಗಳ ಅಧಿಕಾರಿಗಳು, ತಮ್ಮ

ಕಟಪಾಡಿ ಕೋಟೆ ಶ್ರೀ ಪಂಡರಿನಾಥ ಭಜನಾ ಮಂದಿರ ಕೋಟೆ ಶ್ರೀ ನಾಗ ಬ್ರಾಮ್ಮದಿ ಪಂಚ ದೈವಿಕ ಸನ್ನಿದಿ ಕೋಟೆ ಸಭಾ ಭವನ ನಿರ್ಮಾಣ ಕ್ಕೆ ಶ್ರೀ ಕ್ಷೇತ್ರದಿಂದ 2.ಲಕ್ಷ ಸಹಾಯ ಧನದ ಮಂಜೂರಾತಿ ಪತ್ರ ವಿತರಣೆ

ಕಾಪು: ಕಾಪು ತಾಲೂಕಿನ ಕಟಪಾಡಿ ಕೋಟೆ ಶ್ರೀ ಪಂಡರಿನಾಥ ಭಜನಾ ಮಂದಿರ ಕೋಟೆಶ್ರೀ ನಾಗ ಬ್ರಾಮ್ಮದಿ ಪಂಚ ದೈವಿಕ ಸನ್ನಿದಿ ಕೋಟೆ ಸಭಾ ಭವನ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ 2.ಲಕ್ಷ ಸಹಾಯ ಧನದ ಮಂಜೂರಾತಿ ಪತ್ರವನ್ನು ಇಂದು ವಿತರಣೆ ಮಾಡಲಾಯಿತು. ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ತಾಲೂಕು ಯೋಜನಾಧಿಕಾರಿಗಳಾದ ಮಮತಾ ಶೆಟ್ಟಿ ಅವರುಸಮಿತಿ ಅಧ್ಯಕ್ಷರಾದ ಮಧುಕರ ಮತ್ತು ಸಮಿತಿ ಪದಾಧಿಕಾರಿಗಳ ಮುಖಾಂತರ ಸಭಾ ಭವನ ನಿರ್ಮಾಣಕ್ಕೆ 2 ಲಕ್ಷ ರೂಪಾಯಿ ಸಹಾಯ ಧನದ ಮಂಜೂರಾತಿ

ಭತ್ತದ ಕೃಷಿ ಸಾಧಕಿ ಬೆಳುವಾಯಿಯ ಪ್ರೇಮಾ ಹೆಗ್ಡೆ ಮಾಲಾಡಿಬೀಡುಗೆ ಪ್ರಥಮ ಸ್ಥಾನ

ಮೂಡುಬಿದಿರೆ: 2022-23ನ ಸಾಲಿನಲ್ಲಿ ಕೃಷಿ ಪ್ರಶಸ್ತಿ ಕಾರ್ಯಕ್ರಮದಡಿ ಭತ್ತ( ಮುಂಗಾರು- ಮಳೆಯಾಶ್ರಿತ)ದಲ್ಲಿ ಮಹಿಳಾ ವಿಭಾಗದಲ್ಲಿ ಮೂಡುಬಿದಿರೆ ಬೆಳುವಾಯಿಯ ಪ್ರೇಮಾ ಹೆಗ್ಡೆ ಮಾಲಾಡಿಬೀಡು ಅವರು ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಅವರನ್ನು ರೂ.1.25 ಲಕ್ಷ ನಗದು ಸಹಿತ ಗೌರವಿಸಲಾಯಿತು.ಬೆಂಗಳೂರಿನಲ್ಲಿ ನಡೆದ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ ಹಾಗೂ ಉತ್ಪಾದನೋತ್ತರ ಕೃಷಿ,- ಸಶಕ್ತೀಕರಣ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದ ರಾಮಯ್ಯ ಪ್ರಶಸ್ತಿ

ಮೂಡುಬಿದಿರೆಯ ಮೂವರಿಗೆ ವೀರರಾಣಿ ಅಬ್ಬಕ್ಕ ಗೌರವ ಪುರಸ್ಕಾರ ಆಯ್ಕೆ

ಮೂಡುಬಿದಿರೆ: ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಮೂಡುಬಿದಿರೆಯ ಮೂವರು ಮಹಿಳೆಯರು ಅಬ್ಬಕ್ಕ 500-ಪ್ರೇರಣಾದಾಯಿ 100 ಉಪನ್ಯಾಸಗಳ ಸರಣಿ ಕಾರ್ಯಕ್ರಮದಲ್ಲಿ ಅಬ್ಬಕ್ಕ ಗೌರವ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಪ್ರಕೃತಿ ಚಿಕಿತ್ಸೆ ಹಾಗೂ ಸಮಗ್ರ ಸ್ವಾಸ್ಥ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಆಳ್ವಾಸ್ ಫಾರ್ಮಸಿಯ ಆಡಳಿತಾಧಿಕಾರಿ ಡಾ. ಗ್ರೀಷ್ಮಾ ವಿವೇಕ್ ಆಳ್ವ, ಪರಿಸರಸ್ನೇಹಿ ಚಟುವಟಿಕೆಗಳಲ್ಲಿ ಸೇವೆ ಸಲ್ಲಿಸುತ್ತಿರುವ, ಮೂಡುಬಿದಿರೆ ಜೈನ ಪಿಯು