ಶಿಕ್ಷಕರ ಮತ್ತು ಪದವೀಧಕರ ಕ್ಷೇತ್ರದ ಚುನಾವಣೆಯಲ್ಲಿ ಆರು ಕ್ಷೇತ್ರದಲ್ಲಿಯೂ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದೆ. ನಮ್ಮ ಅಭ್ಯರ್ಥಿಗಳಾದ ಅಯನೂರು ಮಂಜುನಾಥ್ ಮತ್ತು ಕೆಕೆ ಮಂಜುನಾಥ್ ಅವರು ಈ ಬಾರಿ ಗೆಲ್ಲಲಿದ್ದಾರೆ ಎಂದು ವಿಧಾನ ಪರಿಷತ್ನ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು. ಅವರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು.
ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಡಾ. ನರೇಶ್ಚಂದ್ ಹೆಗ್ಡೆ ಹೆಬ್ರಿಬೀಡು ಅವರು ಸ್ಪರ್ಧಿಸುತ್ತಿದ್ದು, ಅವರ ಪರವಾಗಿ ನಟ ಅರವಿಂದ ಬೋಳಾರ್ ಅವರು ಎರಡನೇ ದಿನ ಕೂಡ ಪ್ರಚಾರದಲ್ಲಿ ತೊಡಗಿದರು. ಡಾ. ನರೇಶ್ಚಂದ್ ಹೆಗ್ಡೆ ಹೆಬ್ರಿಬೀಡು ಅವರು ಪರಿಷತ್ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು, ಅವರ ಪರವಾಗಿ ನಟ ಅರವಿಂದ ಬೋಳಾರ್ ಅವರು ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಮಂಗಳೂರಿನ
ನೈಋತ್ಯ ಶಿಕ್ಷಕರ ಕ್ಷೇತ್ರ ಅತ್ಯಂತ ಸುಶಿಕ್ಷಿತ ಮತದಾರರ ಕ್ಷೇತ್ರವೆನಿಸಿದೆ.ಇಲ್ಲಿನ ಮತದಾರರು ಕನಿಷ್ಠ ಎರೆಡೆರಡು ಪದವಿಗಳನ್ನು ಪಡೆದವರು ಈ ಕ್ಷೇತ್ರವನ್ನು ವಿದ್ಯಾವಂತ ಮತ್ತು ಸ್ವತಃ ಶಿಕ್ಷಕನೇ ಆಗಿರುವ ಅಭ್ಯರ್ಥಿಯೇ ಪ್ರತಿನಿಧಿಸಬೇಕು ಎಂಬ ಪರಿಕಲ್ಪನೆಯಡಿ ಹೃದ್ರೋಗ ಶಸ್ತ್ರ ಚಿಕಿತ್ಸಾ ತಜ್ಞ ಮತ್ತು ಮೆಡಿಕಲ್ ಕಾಲೇಜಿನಲ್ಲಿ ಪ್ರೊಫೆಸರ್ ಆಗಿರುವ ತಾನು ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿ ವಹಿಸಿರುವುದಾಗಿ ನೈರುತ್ಯ ಶಿಕ್ಷಕರ ಕ್ಷೇತ್ರದ ಪಕ್ಷೇತರ
ದಕ್ಷಿಣ ಭಾರತ ವಲಯ ಮಟ್ಟದ ಅಂತರ್ ಕಾಲೇಜು ಫುಟ್ಬಾಲ್ ’ಅಸ್ಟ್ರಾ -2024’ ಪಂದ್ಯಾಟವು ಇತ್ತೀಚೆಗೆ ದೇರಳಕಟ್ಟೆಯ ಯೆನೆಪೋಯ ಮೆಡಿಕಲ್ ಕಾಲೇಜಿನ ಮೈದಾನದಲ್ಲಿ ನಡೆದಿದ್ದು, ಪಂದ್ಯಾಟಲ್ಲಿ ಕಣಚೂರು ಇನ್ಸ್ಟಿಟ್ಯೂಟ್ ಆಫ್ ಹೆಲ್ತ್ ಸೈಯನ್ಸಸ್ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದೆ. ಒಟ್ಟು12 ತಂಡಗಳು ಭಾಗವಹಿಸಿದ್ದ ಈ ಪಂದ್ಯಾಟದಲ್ಲಿ ಪೈನಲ್ ನಲ್ಲಿ ಕಣಚೂರು ತಂಡವು 1:0 ಅಂತರದಿಂದ ಎದುರಾಳಿ ತಂಡವನ್ನು ಮಣಿಸಿ ಗೆಲುವನ್ನು ಸಾಧಿಸಿತು. ತಂಡದಲ್ಲಿ ಮಹಮ್ಮದ್ ಅಷ್ಪಾಕ್, ಹದಿ
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಬಿಜೆಪಿಯ ನಿಷ್ಟಾವಂತ ಕಾರ್ಯಕರ್ತನ ಪರವಾಗಿ ಹೋಗಿದ್ದಾರೆ. ಯಾವುದೇ ಕಾನೂನು ಉಲ್ಲಂಘನೆಯಂತಹ ಕೆಲಸ ಮಾಡದೆ ಇದ್ದರೂ ಕಾಂಗ್ರೆಸ್ ಸರಕಾರ ಪೊಲೀಸ್ ಇಲಾಖೆಯನ್ನು ಬಳಸಿಕೊಂಡು ಸುಳ್ಳು ಕೇಸು ಹಾಕಿಸಿ ದ್ವೇಷವಸಾಧನೆಯ ಕೆಲಸ ಮಾಡುತ್ತಿದೆ. ಬಿಜೆಪಿ ನಾಯಕರನ್ನು ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿ ಪಕ್ಷದ ಶಕ್ತಿ ಕುಂದಿಸುವ ಕೆಲಸ ಮಾಡುವುದನ್ನು ಬಿಡಿ. ನಿಮ್ಮ ಆಡಳಿತ ಶಾಶ್ವತ ಅಲ್ಲ, ನಮ್ಮ ಶಾಸಕರನ್ನು, ಕಾರ್ಯಕರ್ತರನ್ನು ಬಂಧನದ ಸಾಧನೆ
ಅಕ್ರಮವಾಗಿ ಪಿಸ್ತೂಲ್ ವಶದಲ್ಲಿರಿಸಿಕೊಂಡು ಕಾರಿನಲ್ಲಿ ಕುಳಿತು ಯಾವುದೋ ದುಷ್ಕೃತ್ಯಕ್ಕೆ ಹೊಂಚು ಹಾಕುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಉಳ್ಳಾಲ ತಾಲೂಕು ತಲಪಾಡಿ ಗ್ರಾಮದ ಪಿಲಿಕೂರು ಪರಿಸರದಲ್ಲಿ ಇಬ್ಬರು ವ್ಯಕ್ತಿಗಳು ಕಪ್ಪು ಬಣ್ಣದ ಕಾರಿನಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಪಿಸ್ತೂಲ್ ಅನ್ನು ವಶದಲ್ಲಿರಿಸಿ ಯಾವುದೋ ದುಷ್ಕೃತ್ಯಕ್ಕೆ ಸಂಚು ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ
ಕರ್ನಾಟಕ ವಿಧಾನ ಪರಿಷತ್ನ ನೈಋತ್ಯ ಶಿಕ್ಷಕದ ಕ್ಷೇತ್ರದ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಡಾ. ನರೇಶ್ಚಂದ್ ಹೆಗ್ಡೆ ಹೆಬ್ರಿಬೀಡು ಅವರು ಕುತ್ತಾರು ಕೊರಗಜ್ಜ ಕ್ಷೇತ್ರಕ್ಕೆ ಮತ್ತು ಮುನ್ನೂರಿನಲ್ಲಿರುವ ಶ್ರೀ ಪಂಜದಾಯ ಬಂಟ ವೈಧ್ಯನಾಥ ಕ್ಷೇತ್ರಕ್ಕೆ ಭೇಟಿ ನೀಡಿದರು. ಇದೇ ಸಮಯಕ್ಕೆ ಕನ್ನಡದ ಖ್ಯಾತ ನಟ ಶರಣ್ ದಂಪತಿ ಜೊತೆಗಿದ್ದರು. ಈ ಸಂದರ್ಭದಲ್ಲಿ ಮುಖ್ಯ ಟ್ರಸ್ಟಿ ಪ್ರೀತಂ ಶೆಟ್ಟಿ ಟ್ರಸ್ಟಿ ಶ್ರೀ ರಾಮ್ ರೈ, ಹರೀಶ್ ಭಂಡಾರ ಬೈಲು,
ಮಂಗಳೂರು: ಆರ್ಥಿಕವಾಗಿ ಹಿಂದುಳಿದ ಬಂಟ ಸಮಾಜದವರ ಏಳಿಗೆಗೆ ಮತ್ತು ಸಮಗ್ರ ಅಭಿವೃದ್ದಿಗೆ ಬಂಟರ ಯಾನೆ ನಾಡವರ ಮಾತೃಸಂಘ ಸ್ಪಂದಿಸುತ್ತಿದೆ. ಬಂಟರ ಸಾಂಸ್ಕೃತಿಕ, ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕ, ವೈವಾಹಿಕ, ಆರೋಗ್ಯ, ವಸತಿ ಮತ್ತು ಒಟ್ಟು ಜೀವನದ ವ್ಯವಸ್ಥೆಗೆ ಬಂಟರ ಮಾತೃಸಂಘ ಸ್ಪಂದಿಸಿ ಕೆಲಸ ಮಾಡುತ್ತಿದೆ ಎಂದು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಮಾಲಾಡಿ ಅಜಿತ್ ಕುಮಾರ್ ರೈ ತಿಳಿಸಿದರು. ಬಂಟ್ಸ್ ಹಾಸ್ಟೇಲ್ ನಲ್ಲಿರುವ ಶ್ರೀಮತಿ ಗೀತಾ ಎಸ್ ಎಮ್
ನ್ಯಾಚುರಲ್ ಐಸ್ಕ್ರೀಂ ಸಂಸ್ಥೆಯ ಸ್ಥಾಪಕ, ಉದ್ಯಮಿ ರಘುನಂದನ್ ಕಾಮತ್ (70) ಅವರು ಅಲ್ಪಕಾಲದ ಅನಾರೋಗ್ಯದಿಂದ ಮುಂಬೈನಲ್ಲಿ ಶುಕ್ರವಾರ ರಾತ್ರಿ ನಿಧನರಾದರು. ಅವರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ. ರಘುನಂದನ್ ದಕ್ಷಿಣ ಕನ್ನಡ ಜಿಲ್ಲೆ ಮೂಲ್ಕಿಯಲ್ಲಿ ಜನಿಸಿದ್ದರು. ಅವರ ತಂದೆ ಹಣ್ಣಿನ ವ್ಯಾಪಾರಿಯಾಗಿದ್ದರು. ರಘುನಂದನ್ ಚಿಕ್ಕವಯಸ್ಸಿನಲ್ಲಿಯೇ ಮುಂಬೈಗೆ ತೆರಳಿ, ಅಲ್ಲಿ ತಮ್ಮ ಅಣ್ಣನ ರೆಸ್ಟೋರೆಂಟ್ನಲ್ಲಿ ಕೆಲಸ ಆರಂಭಿಸಿದರು. 1984ರಲ್ಲಿ ನಾಲ್ವರ
ಮೀನು ಪುರಾತನ ಕಾಲದಿಂದಲೂ ಮಾನವನ ಆಹಾರವಾಗಿದೆ. ತುಳು ಕರಾವಳಿಯ ಮುಖ್ಯವಾಗಿ ಮಂಗಳೂರು ಮತ್ತು ಮಲ್ಪೆ ಮೀನುಗಾರಿಕಾ ಬಂದರುಗಳಲ್ಲಿ ಒಟ್ಟಾರೆ ಮೀನು ಸಿಗುವುದು ತೃಪ್ತಿಕರವಾಗಿಲ್ಲ ಎಂದು ವರದಿಯಾಗಿದೆ. ವಹಿವಾಟು ಕೂಡ ಬಿಸಿ ಕಳೆದುಕೊಂಡಿದ್ದು ಮೀನುಗಾರರು ಚಿಂತೆಗೆ ಬಿದ್ದಿದ್ದಾರೆ. ಮಲ್ಪೆ, ಮಂಗಳೂರುಗಳ ಇನ್ನೊಂದು ಸಮಸ್ಯೆಯೆಂದರೆ ಮೀನಿನ ಬೋಟುಗಳು ಇಲ್ಲಿಯವರದೇ ಆದರೂ ಅದರಲ್ಲಿ ಈಗೆಲ್ಲ ದುಡಿಯುವವರು ವಲಸೆ ಕಾರ್ಮಿಕರೇ ಆಗಿದ್ದಾರೆ. ಅವರನ್ನು ನಿಬಾಯಿಸುವ ಸಮಸ್ಯೆಯನ್ನು




























