ಮೂಡುಬಿದಿರೆ : ಕರಾವಳಿಯ ಸಮಗ್ರ ಅಭಿವೃದ್ಧಿ ಮತ್ತು ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾದ ಬಜೆಟ್ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ನ ವಕ್ತಾರ ರಾಜೇಶ್ ಕಡಲಕೆರೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ. ಕರಾವಳಿಯಲ್ಲಿ ಪ್ರವಾಸೋದ್ಯಮವನ್ನು ಬಲಪಡಿಸಲು sea plane , Heli taxi , joy ride , River Cruise
ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಕೋಟೆಬಾಗಿಲಿನಲ್ಲಿ ಮಹಿಳೆಯೋವ೯ರ ಮೇಲೆ ಹಲ್ಲೆ ನಡೆಸಿ , ಜಾತಿ ನಿಂದನೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಪ್ರಕರಣ ದಾಖಲಾಗಿದೆ. ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾರ್ಪಾಡಿ ಗ್ರಾಮದ ಪಡುಕೊಣಾಜೆ ನಿವಾಸಿ ಪವಿತ್ರ ಅವರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಮಾರ್ಚ್ 5ರಂದು ಮಧ್ಯಾಹ್ನ ಸುಮಾರು 12 ಗಂಟೆ ವೇಳೆಗೆ ಕೋಟೆಬಾಗಿಲು ಮಾರಿಗುಡಿ ಸಮೀಪ ಈ ಘಟನೆ ನಡೆದಿದೆ
ಅಂತರ್ ಕಾಲೇಜು ಫೆಸ್ಟ್ಗಳು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗುತ್ತವೆ ಎಂದು ಬ್ಯಾಂಕ್ ಆಫ್ ಬರೋಡಾ ಮಂಗಳೂರು ಶಾಖೆಯ ಮುಖ್ಯ ವ್ಯವಸ್ಥಾಪಕ ಡಾ. ಪಿ. ಬಾಲಮುರಗನ್ ಹೇಳಿದರು. ಆಳ್ವಾಸ್ ಸ್ವಾಯತ್ತ ಪದವಿ ಕಾಲೇಜಿನ ಹಿಂದಿ ವಿಭಾಗದ ವತಿಯಿಂದ ಕುಎಂಪು ಸಭಾಂಗಣದಲ್ಲಿ ಬುಧವಾರ ಆಯೋಜಿಸಲಾದ ‘ಉಮಂಗ್ 2026’ ಅಂತರ್ ಕಾಲೇಜು ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು. ಪಠ್ಯಪುಸ್ತಕದ ಜ್ಞಾನಕ್ಕಷ್ಟೇ ಸೀಮಿತವಾಗದೇ ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ವಿಕಾಸ,
ಮೂಡುಬಿದಿರೆ: ಶನಿವಾರ ನಿಡ್ಡೋಡಿ ಗ್ರಾಮದ ಕಾನ ಪ್ರದೇಶದಲ್ಲಿ ಬೈಕ್ ಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮವಾಗಿ ನವ ವಿವಾಹಿತ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದುಘ೯ಟನೆ ನಡೆದಿದೆ.ಉಡುಪಿ ಜಿಲ್ಲೆಯ ಪುತ್ತೂರು ಗ್ರಾಮದ ಸಂತೆಕಟ್ಟೆ ನಿವಾಸಿ ರಕ್ಷಿತ್ ಕುಮಾರ್ (30) ಮೃತಪಟ್ಟವರು. ಇವರು ಮೂಲ್ಕಿಯಲ್ಲಿರುವ ಪತ್ನಿಯ ಮನೆಗೆ ಬಂದಿದ್ದು, ಶನಿವಾರ ಬೆಳಿಗ್ಗೆ ಕಾರ್ಯನಿಮಿತ್ತ ಗಂಜಿಮಠದ ಕಂಪೆನಿಯೊಂದಕ್ಕೆ ತೆರಳುತ್ತಿದ್ದರು.ಕಾನ ಬಳಿ ದನ ಅಡ್ಡ ಬಂದ ಹಿನ್ನೆಲೆಯಲ್ಲಿ ಡಿಕ್ಕಿ
ಮೂಡುಬಿದಿರೆ : ಕೆ. ಅಮರನಾಥ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ.) ಮತ್ತು ಎ.ಬಿ. ಶೆಟ್ಟಿ ಸ್ಮಾರಕ ದಂತ ವಿಶ್ವ ವಿದ್ಯಾನಿಲಯ ದೇರಳಕಟ್ಟೆ ಇಲ್ಲಿನ ಮಕ್ಕಳ ದಂತ ಚಿಕಿತ್ಸಾ ವಿಭಾಗ ಇದರ ಸಂಯುಕ್ತ ಆಶ್ರಯದಲ್ಲಿ “ವಿದ್ಯಾರ್ಥಿಗಳ ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ’ವು ಕಲ್ಲಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿತು. ವನಜಾಕ್ಷಿ ಎಜುಕೇಶನ್ ಫೌಂಡೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ ಸಂಸ್ಥಾಪಕ ಕೆ. ಶ್ರೀಪತಿ ಭಟ್ ಶಿಬಿರವನ್ನು
ಮೂಡುಬಿದಿರೆ : ರಾಷ್ಟ್ರೀಯ ಏಕತಾ ದಿನದ ಅಂಗವಾಗಿ ಲೇಖಕಿ ರೆಶೆಲ್ ಬ್ರೆಟ್ನಿ ಫೆರ್ನಾಂಡಿಸ್ ಅವರು ತಮ್ಮ ಹೊಸ ಕೃತಿ ‘ಇನ್ಕ್ರೆಡಿಬಲ್ ಭಾರತ್: ವಿಷನ್ ಫಾರ್ ವಿಕ್ಷಿತ್ ಭಾರತ್’ ಪುಸ್ತಕ ಬಿಡುಗಡೆಗೆ ಸಿದ್ಧಗೊಂಡಿದೆ. ರೆಶೆಲ್ ಫೆರ್ನಾಂಡಿಸ್ ಎಬಿವಿಪಿ ಸದಸ್ಯೆಯಾಗಿದ್ದು, ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ ಪುರಸ್ಕೃತೆ. ಪ್ರಸ್ತುತ ಅವರು ಮಂಗಳೂರಿನ ಎಸ್ಡಿಎಂ ಕಾನೂನು ಕಾಲೇಜಿನಲ್ಲಿ ಅಂತಿಮ ವರ್ಷದ ಎಲ್ಎಲ್ಬಿ ವಿದ್ಯಾರ್ಥಿನಿಯಾಗಿದ್ದಾರೆ. ದೇಶಭಕ್ತಿ,
ಮೂಡುಬಿದಿರೆ: ಗುರುವಾರ ರಾತ್ರಿ ಬನ್ನಡ್ಕದಲ್ಲಿ ನಡೆದ ಕಾರು-ಬೈಕ್ ಢಿಕ್ಕಿಯಲ್ಲಿ ತೀವೃವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸಹ ಸವಾರ ರೋಟರಿ ಪಿಯುಸಿ ಕಾಲೇಜಿನ ವಿದ್ಯಾಥಿ೯ ಚಿಕಿತ್ಸೆಗೆ ಫಲಕಾರಿಯಾಗದೆ ಮೃತಪಟ್ಟ ದುಘ೯ಟನೆ ನಡೆದಿದೆ. ಮರ್ಪಾಡಿ ಗ್ರಾಮದ ಕೋಟೆಬಾಗಿಲಿನ ಸದಾನಂದ ಸುರ್ಣ- ರಾಜಶ್ರೀ ದಂಪತಿಯ ಪುತ್ರ ಶ್ರವಣ್ ಮೃತ ದರ್ದೈವಿ. ಕಾಮಗಾರಿ ಹಂತದಲ್ಲಿರುವ ಕರ್ಕಳ–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬನ್ನಡ್ಕದಲ್ಲಿ ಘಟನೆ ಸಂಭವಿಸಿತ್ತು. ಖ್ಯಾತ
ಮೂಡುಬಿದಿರೆ: ಬೆದ್ರ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಮೊಸರುಕುಡಿಕೆ ಉತ್ಸವದಲ್ಲಿ ಶ್ರೀಕೃಷ್ಣ ವೇಷಧಾರಿಯ ಯಕ್ಷಗಾನ ಹಿಮ್ಮೇಳ ತಂಡದ ನೇತೃತ್ವ ವಹಿಸುತ್ತಿದ್ದ ಹಿರಿಯ ಭಾಗವತಿಕೆ ಹಾಗೂ ಮದ್ದಳೆ ಕಲಾವಿದ ಸುಧಾಕರ ಕುಲಾಲ್ (ದಾಸಪ್ಪ) 78ಮಳಲಿಯಲ್ಲಿ ಅನಾರೋಗ್ಯದಿಂದ ನಿಧನರಾದರು. ಮೂಡುಬಿದಿರೆಯ ಯಕ್ಷಗಾನೀಯ ಪರಂಪರೆಯ ಮೊಸರುಕುಡಿಕೆ ಉತ್ಸವದ ಪ್ರಮುಖ ಹಿನ್ನೆಲೆದಾರರಾಗಿದ್ದ ಸುಧಾಕರ ಕುಲಾಲ್ ಮಂಗಳವಾರ ಮುಂಜಾನೆ ಅಲ್ಪಕಾಲದ ಅಸ್ವಸ್ಥತೆಯಿಂದ ಕೊನೆಯುಸಿರೆಳೆದರು. ಅವರು
ಮೂಡುಬಿದಿರೆ: ಅಗ್ನಿವೀರ್ ರ್ಯಾಲಿ ಆಡಳಿತ, ಸಂಘಟಿತ ವ್ಯವಸ್ಥೆ ಮತ್ತು ಸೇವಾಭಾವದ ಅಪರೂಪದ ಸಮನ್ವಯಕ್ಕೆ ಸಾಕ್ಷಿಯಾಗಿದೆ. ಇದು ಕೇವಲ ನೇಮಕಾತಿ ಪ್ರಕ್ರಿಯೆಯಲ್ಲ; ಯುವ ಮನಸ್ಸುಗಳಲ್ಲಿ ದೇಶಸೇವೆಯ ಉತ್ಸಾಹವನ್ನು ಮತ್ತಷ್ಟು ಗಟ್ಟಿಗೊಳಿಸಿದ ಮಹತ್ವದ ಅಧ್ಯಾಯವಾಗಿದೆ. ಪುಣ್ಯದ ಕೆಲಸದಲ್ಲಿ ನಮ್ಮ ಸಂಸ್ಥೆಯು ಭಾಗಿಯಾಗಿರುವುದು ನಮ್ಮ ಭಾಗ್ಯ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿಪ್ರಾಯಪಟ್ಟರು. ಅವರು ಮೂಡುಬಿದಿರೆಯ ಸ್ವರಾಜ್ಯ
ಮೂಡುಬಿದಿರೆ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೂಡುಬಿದಿರೆ ಸ್ಥಳೀಯ ಸಂಸ್ಥೆಯ ಆಶ್ರಯದಲ್ಲಿ ವಾರ್ಷಿಕ ಕಬ್ಸ್-ಬುಲ್ ಬುಲ್ಸ್ ಉತ್ಸವ, ಸ್ಕೌಟ್-ಗೈಡ್ ಮೇಳ ಹಾಗೂ ರೋವರ್ಸ್-ರೇಂಜರ್ಸ್ ಸಮಾಗಮವು ಭಾನುವಾರ ಸ್ಕೌಟ್ ಗೈಡ್ ಕನ್ನಡ ಭವನದಲ್ಲಿ ನಡೆಯಿತು. ಮೂಡುಬಿದಿರೆ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷರಾದ ವಸಂತ್ ದೇವಾಡಿಗ ಅವರು ಉದ್ಘಾಟಿಸಿ ಮಾತನಾಡಿ “ವಿದ್ಯಾರ್ಥಿ ದೆಸೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳು ಶಿಸ್ತು, ಸಮಾಜ ಸೇವೆ ಮತ್ತು ನಾಯಕತ್ವದ




























