ಮೂಡುಬಿದಿರೆ : ಆ. 8 ರಂದು ಮಹಿಳೆಯೋವ೯ರು ಪಸ್ ೯ ಸಹಿತ 72 ಗ್ರಾಂ ಚಿನ್ನವನ್ನು ಕಳೆದುಕೊಂಡಿದ್ದು ಅದನ್ನು ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ. ಜಿ. ನೇತೃತ್ವದ ತಂಡವು 65 ಗಂಟೆಯಲ್ಲಿ ಪತ್ತೆ ಹಚ್ಚಿ ಸಂಬಂಧಪಟ್ಟವರಿಗೆ ಸೋಮವಾರ ಹಸ್ತಾಂತರಿಸಿ ಮೆಚ್ಚುಗೆಗೆ ಪಾತ್ರವಾಗಿದೆ.ಪಡುಮಾನಾ೯ಡಿನ ದಿ. ಧಮ೯ಪಾಲ ಬಲ್ಲಾಳ್ ಅವರ ಪತ್ನಿ ವಿಜಯ ಅವರು ಆ. 8ರಂದು
ಮೂಡುಬಿದಿರೆ, : ಇಲ್ಲಿನ ಡಿ.ಜೆ. ಅನುದಾನಿತ ಹಿ.ಪ್ರಾ.ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ , ರಂಗ ಕಲಾವಿದ ಎಚ್. ಶಾಂತಿರಾಜ ಶೆಟ್ಟಿ (91)ಅವರು ಭಾನುವಾರ ನಿಧನ ಹೊಂದಿದರು. 1960ರ ಸುಮಾರಿಗೆ ಮೂಡುಬಿದಿರೆಯಲ್ಲಿ ಮಾಜಿ ಸಚಿವ ಅಮರನಾಥ ಶೆಟ್ಟಿ, ವಾಸುದೇವ ರಾವ್, ಎಂ ಎಸ್.ಜೀವನ್, ವಾಸು ಸಾಲಿಯಾನ್ ಮೊದಲಾದವರ ಉತ್ಸಾಹದಲ್ಲಿ ರೂಪುಗೊಂಡಿದ್ದ ನೂತನ ಕಲಾವೃಂದದ ನಾಟಕಗಳಲ್ಲಿ ಅಭಿನಯಿಸಿದ್ದರು.ಇಂಗ್ಲಿಷ್ ಪಾಠಮಾಡುವುದರಲ್ಲಿ ಪರಿಣತರಾಗಿದ್ದರು,ವಿದ್ಯಾರ್ಥಿಗಳ ಕ್ಷೇಮಪಾಲನ
ಮೂಡುಬಿದಿರೆ: ಇರುವೈಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ ವತಿಯಿಂದ ಲೇಡಿಗೋಶನ್ ಆಸ್ಪತ್ರೆ ಮಂಗಳೂರು ಇದರ ಸಹಯೋಗದಲ್ಲಿ ಇರುವೈಲು ಸರಕಾರಿ ಶಾಲೆಯಲ್ಲಿ ಭಾನುವಾರ ನಡೆದ ಬೃಹತ್ ರಕ್ತದಾನ ಶಿಬಿರದಲ್ಲಿ 90 ಯುನಿಟ್ ರಕ್ತ ಸಂಗ್ರಹವಾಗಿದೆ. ಬಿಜೆಪಿ ಮುಲ್ಕಿ-ಮೂಡುಬಿದಿರೆ ಮಂಡಲಾಧ್ಯಕ್ಷ ದಿನೇಶ್ ಪುತ್ರನ್, ಪ್ರಧಾನ ಕಾರ್ಯದರ್ಶಿ ರಂಜಿತ್ ಪೂಜಾರಿ,ಗಣೇಶೋತ್ಸವ ಸಮಿತಿ ಅಧ್ಯಕ್ಷ ಪ್ರಶಾಂತ್ ಆಚಾರ್ಯ, ಪಂಚಾಯತ್ ಸದಸ್ಯರುಗಳಾದ ನವೀನ್ ಪೂಜಾರಿ ಕಿಟ್ಟುಬೆಟ್ಟು,
ಮೂಡುಬಿದಿರೆ: ಇಂದಿನ ಯುಗದಲ್ಲಿ ಕೃಷಿಯನ್ನು ವೃತ್ತಿಯಾಗಿ ಆಯ್ಕೆ ಮಾಡುವುದು ಕೇವಲ ಪರಂಪರೆಯ ನಿರ್ವಹಣೆಯಲ್ಲ, ಅದೊಂದು ಜಾಣ ಆಯ್ಕೆ ಎಂದು ಸಾವಯವ ಕೃಷಿಕ ಹಾಗೂ ಶಾಸಕ ರಾಜೇಶ್ ನಾಯ್ಕ್ ನುಡಿದರು.ಅವರು ಆಳ್ವಾಸ್ ಮ್ಯಾನೆಜ್ಮೆಂಟ್ ವಿಭಾಗದ ಟ್ರೆöÊಬ್ಲೇಜ್ ವೇದಿಕೆ ಶುಕ್ರವಾರ, ಕುವೆಂಪು ಹಾಲ್ನಲ್ಲಿ ಆಯೋಜಿಸಿದ್ದ ವಿಶೇಷ ಅತಿಥಿ ಉಪನ್ಯಾಸ- ‘ನೆಲದಿಂದ ನೆಲೆವರೆಗೆ: ಕೃಷಿ ಉದ್ಯಮಿಯ ಯಶೋಗಾಥೆ’ ಕರ್ಯಕ್ರಮದಲ್ಲಿ ಮಾತನಾಡಿದರು.ಕೃಷಿಯಲ್ಲಿ ವರ್ಷದಲ್ಲಿ ಕೇವಲ ಎರಡು ತಿಂಗಳು
ಮೂಡುಬಿದಿರೆ : ತಾಲೂಕಿನ ತೆಂಕಮಿಜಾರು ಗ್ರಾಮ ಪಂಚಾಯತ್ ಸದಸ್ಯ, ಮಾಜಿ ಅಧ್ಯಕ್ಷ ಜೆ.ಕೆ.ಹಸನಬ್ಬ ( 56) ಅವರು ಶುಕ್ರವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.ತೆಂಕಮಿಜಾರು ಗ್ರಾಮ ಪಂಚಾಯತ್ ಗೆ ಸತತ ಮೂರು ಬಾರಿ ಸದಸ್ಯರಾಗಿ ಆಯ್ಕೆಯಾಗಿದ್ದ ಅವರು ಒಂದು ಅವಧಿಯಲ್ಲಿ ಅಧ್ಯಕ್ಷರಾಗಿದ್ದರು.ಪರೋಪಕಾರ, ಪಂಚಾತಿಕೆಯಲ್ಲಿ ಮುಂಚೂಣಿಯಲ್ಲಿದ್ದ ಹಸನಬ್ಬ ಅವರು ತೋಡಾರು,ಮೂಡುಬಿದಿರೆ ಪರಿಸರದಲ್ಲಿ ಜನಪ್ರಿಯರಾಗಿದ್ದರು.ಮಾಜಿ ಸಚಿವ ದಿ.ಅಮರನಾಥ ಶೆಟ್ಟರ ಜೆ.ಡಿ.ಎಸ್.ನಲ್ಲೇ
ಮೂಡುಬಿದಿರೆ: ಆಳ್ವಾಸ್ ಪದವಿ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಹಾಗೂ ಕಾಲೇಜಿನ ವಿಕಿಪೀಡಿಯಾ ಕ್ಲಬ್ನ ಕ್ರಿಯಾಶೀಲ ಸದಸ್ಯೆಯಾಗಿದ್ದ ಯಕ್ಷಿತಾ ಕೀನ್ಯಾದ ನೈರೋಬಿಯಲ್ಲಿ ಆಗಸ್ಟ್ 6ರಿಂದ 9ರವರೆಗೆ ನಡೆಯಲಿರುವ “ವಿಕಿಮೇನಿಯಾ 2025” ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸುವ ಅವಕಾಶ ಪಡೆದಿದ್ದಾರೆ. ಕರ್ನಾಟಕದಿಂದ ಆಯ್ಕೆಯಾದ ಮೂವರಲ್ಲಿ ಇವರು ಒಬ್ಬರಾಗಿದ್ದಾರೆ. ವಿಕಿಮೇಡಿಯಾ ಫೌಂಡೇಶನ್ನ ಆಹ್ವಾನಿತರಿಂದ ಯಕ್ಷಿತಾ ಭಾರತ ದೇಶದ ಪ್ರತಿನಿಧಿಯಾಗಿ ಸಮ್ಮೇಳನದಲ್ಲಿ
ಮೂಡುಬಿದಿರೆ: ಇಂಟರ್ ನ್ಯಾಶನಲ್ ಸರ್ಕ್ಯೂಟ್ 2025 ರ ಅಂತಾರಾಷ್ಟ್ರೀಯ ಸೆಲೂನ್ 3- ಫೋಟೋ ಜರ್ನಲಿಸಂ ವಿಭಾಗದಲ್ಲಿ ಡಿಜಿ ಕ್ಲಬ್ ಗೋಲ್ಡ್ ಪ್ರಶಸ್ತಿಗೆ ಛಾಯಾಗ್ರಾಹಕ ರವಿ ಕೋಟ್ಯಾನ್ ಅವರು ಪಾತ್ರರಾಗಿದ್ದಾರೆ. ಮೂಡುಬಿದಿರೆಯಲ್ಲಿ ಸುಮಾರು 3 ದಶಕಗಳ ಕಾಲ ಫೋಟೋಗ್ರಫಿಯಲ್ಲಿ ಕಾರ್ಯನಿರ್ವಹಿಸಿದ ಮಾನಸ ಡಿಜಿಟಲ್ನ ರವಿ ಕೋಟ್ಯಾನ್ರಿಗೆ ಈ ಬಾರಿ ಅಂತರ್ ರಾಷ್ಟ್ರ ಮಟ್ಟದ ಹಲವಾರು ಪ್ರಶಸ್ತಿಗಳು ಲಭಿಸಿದೆ. ವೇಣೂರು ಮಸ್ತಕಾಭಿಷೇಕ -2024ರ ಛಾಯಾಚಿತ್ರಕ್ಕಾಗಿ ಕ್ರೆಡೆನ್ಸ್
ಮೂಡುಬಿದಿರೆ : ಮೆಸ್ಕಾಂ ಇಲಾಖೆಗೆ ಸಂಬಂಧಿಸಿದಂತೆ ಪಾಲಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಲವು ಸಮಸ್ಯೆಗಳಿವೆ ಆದರೆ ತಾಲೂಕಿನಲ್ಲಿ ಮೆಸ್ಕಾಂ ನಡೆಸುವ ಜನಸಂಪರ್ಕ ಸಭೆಯಲ್ಲಿ ಅಧಿಕಾರಿಗಳ ಗಮನ ಸೆಳೆಯೋಣವೆಂದರೆ ಸಭೆ ಯಾವಾಗ ನಡೆಯುತ್ತದೆ ಎಂಬುದರ ಬಗ್ಗೆ ಸಾವ೯ಜನಿಕರಿಗೆ ಮಾಹಿತಿಯೇ ನೀಡುವುದಿಲ್ಲ ಎಂದು ಗ್ರಾಮಸ್ಥರು ಮೆಸ್ಕಾಂ ಅಧಿಕಾರಿಗಳನ್ನು ಪಾಲಡ್ಕ ಗ್ರಾಮಸಭೆಯಲ್ಲಿ ತರಾಟೆಗೆ ತೆಗೆದುಕೊಂಡರು. ಪಂಚಾಯತ್ ಅಧ್ಯಕ್ಷೆ ಅಮಿತಾ ಅಧ್ಯಕ್ಷತೆಯಲ್ಲಿ ನಡೆದ ಮಂಗಳವಾರ
ಮೂಡುಬಿದಿರೆ : ಪುರಸಭಾ ವ್ಯಾಪ್ತಿಯಲ್ಲಿ ಶನಿವಾರ ಮಧ್ಯರಾತ್ರಿ ಬೀಸಿದ ಗಾಳಿ ಮಳೆಗೆ ಕಲ್ಲಬೆಟ್ಟು ಗ್ರಾಮದ ಮಡ್ಲಂಡದ ಹರೀಶ್ ಕುಲಾಲ್ ಅವರ ಮನೆಯ ಗೋಡೆಯು ಕುಸಿದು ಬಿದ್ದು ಅಪಾರ ನಷ್ಟ ಉಂಟಾಗಿದೆ. ಹರೀಶ್ ಅವರು ರಾತ್ರಿ ಮಲಗಿದ್ದ ಸಂದಭ೯ದಲ್ಲಿ ಈ ಘಟನೆ ಸಂಭವಿಸಿದ್ದು ಎರಡು ಕೋಣೆಯ ಗೋಡೆ ಕುಸಿದಿದೆ.ಪುರಸಭಾ ಸದಸ್ಯೆ ಸುಜಾತ ಶಶಿಕಿರಣ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಮೂಡುಬಿದಿರೆ: ರಾಷ್ಟ್ರ ನಿರ್ಮಾಣದ ಶಿಲ್ಪಿಗಳು ಶಿಕ್ಷಕರು. ಮೌಲ್ಯಾಧಾರಿತ, ಚಾರಿತ್ರ್ಯವಂತ ವ್ಯಕ್ತಿತ್ವಗಳನ್ನು ರೂಪಿಸುವ ಸಂಕಲ್ಪ ಶಿಕ್ಷಕರಲ್ಲಿರಬೇಕು. ವ್ಯಕ್ತಿತ್ವವನ್ನು ರೂಪಿಸುವ ಶಿಕ್ಷಕರು ಅಂಧಕಾರವನ್ನು ದೂರಮಾಡಿ ಸಮಾಜವನ್ನು ಪ್ರಕಾಶಮಾನಗೊಳಿಸುವಲ್ಲಿ ಮಹತ್ತರವಾದ ಪಾತ್ರವನ್ನು ನಿವ೯ಹಿಸುತ್ತಿದ್ದಾರೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.ಅವರು ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಭಾಗದ ವತಿಯಿಂದ ವಿದ್ಯಾಗಿರಿಯ ವಿ.ಎಸ್




























