ಮೂಡುಬಿದಿರೆ: ಕ್ಯಾನ್ಸರ್ ನಿಂದ ಬಳಲುತ್ತಿರುವ ಬಡ ವ್ಯಕ್ತಿಯೋವ೯ರ ಚಿಕಿತ್ಸೆ ಗೆ ಪಡುಮಾನಾ೯ಡು ಅಮನ ಬೆಟ್ಟುವಿನ ಸಾಯಿ ಮಾನಾ೯ಡ್ ಸೇವಾ ಸಂಘ ಟ್ರಸ್ಟ್ (ರಿ) ನೆರವು ನೀಡಿದೆ.ಪಡುಮಾರ್ನಾಡು ಗ್ರಾಮದ ಅಬ್ದುಲ್ ಗಫೂರ್ ಎಂಬವರು ಕೆಲವು ವರುಷಗಳಿಂದ ಟಿಬಿ ಕಾಯಿಲೆಯಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆದುಕೊಳ್ಳುತಿದ್ದರು. ಆದರೆ ಇದೀಗ ತಪಾಸಣೆ ನಡೆಸಿದ ವೈದ್ಯರು ಗಫೂರ್
ಮೂಡುಬಿದಿರೆ: ‘ಆಧುನಿಕ ಜಗತ್ತಿನಲ್ಲಿ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಅಗತ್ಯ’ ಎಂದು ಭಾರತ ಸರ್ಕಾರದ ಆಯುಷ್ ಸಚಿವಾಲಯದ ನಿರ್ದೇಶಕ ಡಾ. ರಾಘವೇಂದ್ರ ರಾವ್ ಹೇಳಿದರು.ಆಳ್ವಾಸ್ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನ ಕಾಲೇಜಿನಲ್ಲಿ ವೈದ್ಯಕೀಯ ಶಿಕ್ಷಕರಿಗಾಗಿ ನಡೆದ ಆರು ದಿನಗಳ ರಾಷ್ಟ್ರೀಯ ಮಟ್ಟದ ನಿರಂತರ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಂಗಳವಾರ ಅವರು ಮಾತನಾಡಿದರು.ಕಳೆದ ಹಲವು ದಶಕಗಳಿಂದ ಅಸಾಂಕ್ರಾಮಿಕ ರೋಗಗಳು ಇಡೀ ಜಗತ್ತಿನಲ್ಲಿ
ಮೂಡುಬಿದಿರೆ : ‘ಸರ್ಟಿಫಿಕೆಟ್ಗಿಂತ ಸಂಸ್ಕಾರ ಮುಖ್ಯ. ಶಿಕ್ಷಣವು ಸಂಸ್ಕಾರಭರಿತ ಮನಸ್ಸನ್ನು ಕಟ್ಟುವ ಪ್ರಕ್ರಿಯೆ ಎಂದು ಮಂಗಳೂರು ವಿಶ್ವವಿದ್ಯಾಲಯದ ಎಸ್ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕ ಡಾ.ಧನಂಜಯ ಕುಂಬ್ಳೆ ಹೇಳಿದರು.ಆಳ್ವಾಸ್ ಮುಂಡ್ರೆದೆಗುತ್ತು ಕೆ ಅಮರನಾಥ ಶೆಟ್ಟಿ ಕೃಷಿಸಿರಿ ವೇದಿಕೆಯಲ್ಲಿ ನಡೆದ ಆಳ್ವಾಸ್ ಇಂಗ್ಲಿಷ್ ಮಾಧ್ಯಮ ಮತ್ತು ಕನ್ನಡ ಮಾಧ್ಯಮ ಶಾಲೆಗಳ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು. ವಿದ್ಯಾವಂತರಾದವರೇ
ಮೂಡುಬಿದಿರೆಯ ಹೋಲಿ ರೋಸರಿ ಪ್ರೌಢಶಾಲೆಯ ಕನ್ನಡ ಅಧ್ಯಾಪಕ ಡಾ. ರಾಮಕೃಷ್ಣ ಶಿರೂರು ಅವರು ಸ್ವಾಮಿ ವಿವೇಕಾನಂದ ರಾಷ್ಟ್ರ ಪ್ರಶಸ್ತಿ- 2025ಕ್ಕೆಆಯ್ಕೆ ಆಯ್ಕೆಯಾಗಿರುತ್ತಾರೆ ಎಂದು ಸ್ನೇಹಜೀವಿ ಫೌಂಡೇಶನ್ ಮಹಾರಾಷ್ಟ್ರಮತ್ತು ಅಕ್ಷರ ದೀಪ ಫೌಂಡೇಶನ್ ಕರ್ನಾಟಕ ಇದರ ಅಧ್ಯಕ್ಷರಾದ ಶ್ರೀ ಪ್ರವೀಣ್ ಕುಮಾರ್ ಕನ್ಯಾಳ ಅವರು ತಿಳಿಸಿರುತ್ತಾರೆ.2025 ಜನವರಿ12 ರಂದು ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು
ಮೂಡುಬಿದಿರೆ : ಪಡುಮಾರ್ನಾಡು ಗ್ರಾಮದ ಬನ್ನಡ್ಕ ಎಂಬಲ್ಲಿ ಗುರುವಾರ ಸಂಜೆ ಬೈಕ್ನಿಂದ ಬಿದ್ದು ಚಿನ್ನದ ಕೆಲಸಗಾರ, ತೋಡಾರು ಗ್ರಾಮದ ಸೀತಾರಾಮ ಆಚಾರ್ಯ(49) ಮೃತಪಟ್ಟಿದ್ದು ಪೋಲಿಸರು ಸಂಶಯಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿದ್ದಾರೆ.ಮೂಡುಬಿದಿರೆ ಜ್ಯೋತಿನಗರದಲ್ಲಿ ಚಿನ್ನದ ವೃತ್ತಿಗೆ ಸಂಬಂಧಿಸಿದ ವಿಘ್ನೇಶ್ ಮೆಷಿನ್ ಕಟ್ಟಿಂಗ್ ಉದ್ಯಮವನ್ನು ನಡೆಸುತ್ತಿದ್ದು ಜನವರಿ 3ರಂದು ನಡೆಯಲಿದ್ದ ಅವರ ಪುತ್ರನ ಉಪನಯನದ ಆಮಂತ್ರಣ ಪತ್ರಿಕೆಯನ್ನು ವಿತರಿಸಿ ವಾಪಸ್ಸು
ಮೂಡುಬಿದಿರೆ: ಜಾನಪದ ಕ್ರೀಡೆ ಕಂಬಳ ನಮ್ಮ ಹೆಮ್ಮೆಯ ಕ್ರೀಡೆ. ಇಲ್ಲಿ ತೀರ್ಪುಗಾರರು ಪಾರದರ್ಶಕವಾಗಿ ಕೆಲಸ ಮಾಡಬೇಕು ಈ ನಿಟ್ಟಿನಲ್ಲಿ ಅವರು ನೀಡುವ ತೀರ್ಪುಗಾರರು ನೀಡುವ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ಜಿಲ್ಲಾ ಕಂಬಳ ಸಮಿತಿಯ ಸಭೆಯಲ್ಲಿ ನಿರ್ಣಯಿಸಲಾಗಿದೆ. ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಒಂಟಿಕಟ್ಟೆಯ ಸೃಷ್ಠಿ ಗಾರ್ಡನ್ ನಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು. ಈ ಬಗ್ಗೆ ಮಾತನಾಡಿದ
ಶ್ರೀ ಮಹಾವೀರ ಕಾಲೇಜಿನ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ. ನೇಮಿರಾಜ ಹೆಗ್ಡೆ (84) ಮಂಗಳವಾರ ಸ್ವಗೃಹದಲ್ಲಿ ನಿಧನ ಹೊಂದಿದರು. ಮೂಲತಃ ಪಡಂಗಡಿ ಯವರಾದ ನೇಮಿರಾಜ ಹೆಗ್ಡೆ ಅವರು ಮಂಗಳೂರು ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ಪಿಯು, ಕಾರ್ಕಳ ಭುವನೇಂದ್ರ ಕಾಲೇಜಿನಲ್ಲಿ ಬಿಎಸ್ ಸಿ ಪದವಿ, ಮೈಸೂರಿನಲ್ಲಿ ಬಿ. ಪಿ.ಎಡ್. ಪದವಿ ಗಳಿಸಿದರು. ‘ಮೂಡುಬಿದಿರೆ ಶ್ರೀಮಹಾವೀರ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾಗಿ ವೃತ್ತಿ ಜೀವನ ಪ್ರಾರಂಭಿಸಿ ಪೂರ್ಣ ಸೇವೆ
ಮೂಡುಬಿದಿರೆ: ಶ್ರೀ ಮಹಾವೀರ ಕಾಲೇಜು, ಮೂಡುಬಿದಿರೆಯ ಯುವರೆಡ್ ಕ್ರಾಸ್ ಘಟಕದ 25ಸ್ವಯಂ ಸೇವಕರು ದ.ಕ.ಜಿ.ಪ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಕಲ್ಲಬೆಟ್ಟುಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಸ್ವಚ್ಛತಾ ಅರಿವು ಮೂಡಿಸಿದರು. ಸ್ವಯಂ ಸೇವಕಿ ತನುಜಾ ಸ್ವಚ್ಛತೆಯ ಮಹತ್ವದ ಬಗ್ಗೆ ಮಾತನಾಡಿದರು. ಮಕ್ಕಳೊಂದಿಗೆ ಮಕ್ಕಳಾಗಿ ಬೆರೆತ ಸ್ವಯಂ ಸೇವಕರು ಮಕ್ಕಳಿಗೆ ಮನೋರಂಜನೆಯ ಆಟವನ್ನು ಆಡಿಸಿದರು. ಶಾಲೆಯ ಮುಖ್ಯೋಪಾಧ್ಯಾಯಿನಿ ಮಾರ್ಗರೇಟ್ ಮಾತನಾಡಿ, ‘ಸ್ವಚ್ಛತೆಯ ಅರಿವು
ಮೂಡುಬಿದಿರೆ : ಕ.ರಾ. ಪ್ರೌಢಶಾಲಾ ಸಹಶಿಕ್ಷಕರ ಸಂಘದ ದ.ಕ. ಜಿಲ್ಲಾ ಘಟಕ ಮತ್ತು ಮೂಡುಬಿದಿರೆ ತಾಲೂಕು ಘಟಕ ಇವುಗಳ ಸಹಯೋಗದಲ್ಲಿ ಇಲ್ಲಿನ ಸ್ಕೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ಪ್ರೌಢಶಾಲಾ ಸಹಶಿಕ್ಷಕರ ಜಿಲ್ಲಾ ಶೈಕ್ಷಣಿಕ ಸಮ್ಮೇಳನ,ಪ್ರತಿಭಾ ಪುರಸ್ಕಾರ, ಅಭಿನಂದನ ಕಾರ್ಯಕ್ರಮವು ನಡೆಯಿತು.ವಿಧಾನಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಅವರು ಉದ್ಘಾಟಿಸಿ ಮಾತನಾಡಿ ಸರಕಾರ ಎಲ್ಲ ಸರಕಾರಿ, ಅನುದಾನಿತ ಶಾಲೆಗಳಿಗೆ ಪೂರ್ಣಾವಧಿ ಶಿಕ್ಷಕರು, ಅಗತ್ಯ ಸೌಕರ್ಯಗಳನ್ನು
ರಾಜ್ಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ಮಲ್ಲಕಂಬ ಸ್ಪರ್ಧೆ: ಆಳ್ವಾಸ್ ಶಾಲೆಗೆ ತಂಡ ಪ್ರಶಸ್ತಿ
ಮೂಡುಬಿದಿರೆ: ನ. 18ರಿಂದ 20ರವರೆಗೆ ನಡೆದ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಬಾಗಲಕೋಟೆ, ಉಪ ನಿರ್ದೇಶಕರ ಕಾರ್ಯಾಲಯ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಬಾಗಲಕೋಟೆ, ಹ.ಉ.ಪೂ ಸರಕಾರಿ ಪ್ರೌಢ ಶಾಲೆ, ತುಳಸಿಗಿರಿ, ಸರಕಾರಿ ಕುವೆಂಪು ಶತಮಾನೋತ್ಸವ ಮಾದರಿ ಪ್ರಾಥಮಿಕ ಶಾಲೆ ಮತ್ತು ಹಿರಿಯ ಪ್ರಾಥಮಿಕ ಶಾಲೆ, ಜೆ.ಪಿ ತುಳಸಿಗಿರಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ 14ವರ್ಷ ಮತ್ತು 17 ವರ್ಷ ವಯೋಮಿತಿಯ ಪ್ರಾಥಮಿಕ, ಪ್ರೌಢಶಾಲಾ ಬಾಲಕ ಮತ್ತು




























