Home ಕರಾವಳಿ Archive by category ಮೂಡಬಿದರೆ (Page 19)

ಕಿನ್ನಿಗೋಳಿ : ಹುಲ್ಲು ಕತ್ತರಿಸುತ್ತಿದ್ದ ವ್ಯಕ್ತಿಯ ಮೇಲೆ ಚಿರತೆ ದಾಳಿ

ಕಿನ್ನಿಗೋಳಿ ಸಮೀಪದ ಎಳತ್ತೂರು ದೇವಸ್ಧಾನದ ದೇವರ ಗುಂಡಿ ಸಂಕದ ಬಳಿ ಚಿರತೆಯೊಂದು ಹುಲ್ಲು ಕತ್ತರಿಸುತ್ತಿದ್ದ ವ್ಯಕ್ತಿಯೋರ್ವರ ಮೇಲೆ ದಾಳಿ‌ ನಡೆಸಿದ್ದು ಗಂಭೀರ ಗಾಯಗೊಂಡ ವ್ಯಕ್ತಿ ಕಟೀಲು ಆಸ್ಪತ್ರೆಗೆ ದಾಖಲಾಗಿದ್ದಾರೆ.ಗಾಯಗೊಂಡವರನ್ನು ಸ್ಧಳೀಯ ನಿವಾಸಿ ಲಿಗೋರಿ (58) ಎಂದು ಗುರುತಿಸಲಾಗಿದೆ.ಗಾಯಾಳು ಲಿಗೋರಿ ಹೈನುಗಾರರಾಗಿದ್ದು ದನಗಳಿಗೆ ಮೇವು ತರಲು ಹೋದಾಗ ಈ

ಮೂಡುಬಿದಿರೆ : ಮಹಿಳೆ ಆತ್ಮಹತ್ಯೆ

ಮೂಡುಬಿದಿರೆ : ಎರಡು ವರ್ಷಗಳ ಹಿಂದೆ ಪತಿಯನ್ನು ಕಳೆದುಕೊಂಡಿರುವ ಮಹಿಳೆಯೋರ್ವರು ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇಮಾರಿನಲ್ಲಿ ಶುಕ್ರವಾರ ಬೆಳಿಗ್ಗೆ ತಿಳಿದು ಬಂದಿದೆ.ಪಾಲಡ್ಕ ಗ್ರಾ.ಪಂ.ವ್ಯಾಪ್ತಿಯ ಕೇಮಾರು ನಡಿಹಿಲ್ಲು ನಿವಾಸಿ ಪ್ರಮೀಳಾ (36ವ)ಅವರು ಮಾಡಿಕೊಂಡ ಮಹಿಳೆ. ಈಕೆ ಗಂಡನನ್ನು ಕಳೆದುಕೊಂಡ ಮೇಲೆ ಒಬ್ಬಂಟಿಯಾಗಿ ಜೀವನ ನಡೆಸುತ್ತಿದ್ದರು. ಕುಡಿತದ ಚಟವನ್ನು ಹೊಂದಿದ್ದ ಪ್ರಮೀಳಾ ಅವರು ಜೀವನದಲ್ಲಿ ಜಿಗುಪ್ಸೆಗೊಂಡು

ಪೂರ್ಣಿಮಾ ಸುರೇಶ್ ಉಡುಪಿ ಮತ್ತು ಕಾವ್ಯಶ್ರೀ ಮಹಾಗಾಂವಕರ ಕಲಬುರ್ಗಿ ಅವರಿಗೆ 2024ರ ಸಾಲಿನ ಮುದ್ದಣ ಕಾವ್ಯ ಪ್ರಶಸ್ತಿ

ಮೂಡುಬಿದಿರೆ : ಕಾಂತಾವರ ಕನ್ನಡ ಸಂಘದ ಪಠೇಲ್ ಪುನರೂರು ವಾಸುದೇವರಾವ್ ಟ್ರಸ್ಟ್ ಪ್ರಾಯೋಜಕತ್ವದ 2024ರ ಸಾಲಿನ ಪ್ರತಿಷ್ಠಿತ ಮುದ್ದಣ ಕಾವ್ಯ ಪ್ರಶಸ್ತಿಯನ್ನು ಉಡುಪಿಯ ಪೂರ್ಣಿಮ ಸುರೇಶ್ ಅವರ ‘ಸಂತೆಯೊಳಗಿನ ಏಕಾಂತ’ ಮತ್ತು ಕಲಬುರ್ಗಿಯ ಕಾವ್ಯಶ್ರೀ ಮಹಾಗಾಂವಕರ ಅವರ ‘ಒಲವ ಒರತೆಯ ಜಾಡಿನಲ್ಲಿ’ ಎಂಬ ಎರಡು ಹಸ್ತಪ್ರತಿಗಳು ಗೆದ್ದುಕೊಂಡಿವೆ. ಈ ಎರಡೂ ಹಸ್ತಪ್ರತಿಗಳು ತೀರ್ಪುಗಾರರಿಂದ ಸಮಾನ ಅಂಕಗಳನ್ನು ಪಡೆದಿರುವುದರಿಂದ ಎರಡು ಹಸ್ತಪ್ರತಿಗಳನ್ನು ಕೂಡಾ ಪ್ರಶಸ್ತಿಗೆ

ಮೂಲ್ಕಿ : ಕ್ಯಾನ್‌ಕೋಸ್ ಡ್ರೈಫ್ರೂಟ್ಸ್ ಸ್ಟೋರ್‌ನಲ್ಲಿ ಗ್ರಾಹಕರಿಗೆ ವಿಶೇಷ ಆಫರ್

ಮೂಲ್ಕಿಯ ಲಯನ್ಸ್ ಸೌಧದಲ್ಲಿ ಕಾರ್ಯಾಚರಿಸುತ್ತಿರುವ ಕ್ಯಾನ್‌ಕೋಸ್ ಡ್ರೈಫ್ರೂಟ್ಸ್ ಸ್ಟೋರ್‌ನಲ್ಲಿ ದೀಪಾವಳಿ ಮತ್ತು ಹೊಸ ವರ್ಷದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್ ನೀಡುತ್ತಿದ್ದಾರೆ. ಕ್ಯಾನ್‌ಕೋಸ್ ಡ್ರೈಫ್ರೂಟ್ಸ್ ಸ್ಟೋರ್‌ನಲ್ಲಿ 2000 ರೂಗಳ ಖರೀದಿಗೆ ಗ್ರಾಹಕರಿಗೆ 100ಗ್ರಾಂ ಬಾದಾಮಿ ಉಚಿತ, ಹಾಗೂ ಮೊದಲ 100 ಗ್ರಾಹಕರಿಗೆ 50ಗ್ರಾಂನ ಡ್ರೈಫ್ರೂಟ್ಸ್ ಮಿಕ್ಸ್ ಹಾಗೂ 100 ಗ್ರಾಂನ ಖರ್ಜೂರ ಉಚಿತವಾಗಿ ಪಡೆಯುವ ಅವಕಾಶ ನೀಡಿದ್ದಾರೆ.ಇದು ಸೀಮಿತ ಅವಧಿಗೆ

ಮಂಗಳೂರು ವಿ.ವಿ. ಬ್ಯಾಡ್ಮಿಂಟನ್: 16ನೇ ಬಾರಿ ಆಳ್ವಾಸ್ ಚಾಂಪಿಯನ್

ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರಕಾಲೇಜು ಬ್ಯಾಡ್ಮಿಂಟನ್ ಟೂರ್ನಿಯ ಪುರುಷರ ವಿಭಾಗದಲ್ಲಿ ಸತತ 16ನೇ ಬಾರಿ ಚಾಂಪಿಯನ್ ಆಗಿರುವ ಆಳ್ವಾಸ್ ಕಾಲೇಜು ತಂಡವು ‘ಶ್ರೀ ಕೆಮ್ಮಾರು ಬಾಲಕೃಷ್ಣ ಗೌಡ ಸ್ಮರಣಾರ್ಥ ಟ್ರೋಫಿ’ಯನ್ನು ಎತ್ತಿ ಹಿಡಿದಿದೆ. ಮಹಿಳಾ ವಿಭಾಗದಲ್ಲಿ ಆಳ್ವಾಸ್ ಕಾಲೇಜು ತೃತೀಯ ಸ್ಥಾನ ಪಡೆದಿದೆ.ಮಂಗಳೂರಿನ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಶ್ರಯದಲ್ಲಿ ನಡೆದ ಟೂರ್ನಿಯ ಪುರುಷರ ವಿಭಾಗದ ಫೈನಲ್‌ನಲ್ಲಿ ಆಳ್ವಾಸ್ ಕಾಲೇಜು ತಂಡವು ೩-೦

ಮೂಡುಬಿದಿರೆ: ವಿದ್ಯುತ್ ಗುತ್ತಿಗೆದಾರ ಗಣೇಶ್ ರಾವ್ ನಿಧನ

ಮೂಡುಬಿದಿರೆ: ಇಲ್ಲಿನ ಶ್ರೀ ಕೃಷ್ಣ ಫ್ರೆಂಡ್ಸ್ ಸರ್ಕಲ್ ನ ಗೌರವಾಧ್ಯಕ್ಷ, ವಿದ್ಯುತ್ ಗುತ್ತಿಗೆದಾರ ಗಣೇಶ್ ರಾವ್ (57ವ) ಅವರು ಹೃದಯಾಘಾತಕ್ಕೊಳಗಾಗಿ ಶನಿವಾರ ರಾತ್ರಿ ನಿಧನ ಹೊಂದಿದರು. ಪ್ರಾಂತ್ಯ ಗಾಮದ ವಿಶಾಲ್ ನಗರ ನಿವಾಸಿಯಾಗಿರುವ ಗಣೇಶ್ ರಾವ್ ಅವರು ಮೂಡುಬಿದಿರೆಯಲ್ಲಿ ಹಲವು ವರ್ಷಗಳಿಂದ ವಿದ್ಯುತ್ ಗುತ್ತಿಗೆದಾರರಾಗಿ ದುಡಿಯುತ್ತಿದ್ದರು. ಅಲ್ಲದೆ ಶ್ರೀ ಕೃಷ್ಣ ಫ್ರೆಂಡ್ಸ್ ಸರ್ಕಲ್ ನ ಸ್ಥಾಪಕ ಸದಸ್ಯರಾಗಿದ್ದ ಅವರು 20 ವರ್ಷಗಳ ಕಾಲ ಅಧ್ಯಕ್ಷರಾಗಿ ಹಾಗೂ

ಮೂಡುಬಿದಿರೆಯಲ್ಲಿ ಜೈನ ಬಾಂಧವರ ಹೊಸ ತೆನೆ ಹಬ್ಬ

ಮೂಡುಬಿದಿರೆ: ಜೈನ ಬಾಂಧವರು ಆಚರಿಸಿಕೊಂಡು ಬರುವ ಹೊಸ ತೆನೆ ಹಬ್ಬ(ಕುರಾಲ್ ಪರ್ಬ) ಜೈನ ಕಾಶಿ ಮೂಡುಬಿದಿರೆಯಲ್ಲಿ ರವಿವಾರ ಜರಗಿತು. ಬೆಟ್ಟೇರಿಯಲ್ಲಿರುವ, ಮಹಾವೀರ ಸಂಘ ದವರ ‘ಕೊರಲ್ ಕಟ್ಟೆ’ಯಲ್ಲಿ ಹೊಸ ತೆನೆರಾಶಿ ಹಾಕಿ 18 ಬಸದಿಗಳ ಇಂದ್ರರು ಪೂಜೆ ಸಲ್ಲಿಸಿದರು. ಶ್ರೀಮಠದಲ್ಲಿ ಪಪೂ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಪಟ್ಟಾಚಾರ್ಯ ಸ್ವಾಮೀಜಿ ಪಾವನ ಸಾನ್ನಿಧ್ಯ ಮಾರ್ಗದರ್ಶನದಲ್ಲಿ 18ಬಸದಿಗಳ ದೇವಕಾರ್ಯ ನೆರವೇರಿಸಿ ಅರ್ಚಕರಿಗೆ

ಮೂಡುಬಿದಿರೆ: ಆಳ್ವಾಸ್ ಗೆ ನೂತನ ಫಾರ್ಮಸಿ ಪದವಿ ಕಾಲೇಜು ಸೇರ್ಪಡೆ

ಮೂಡುಬಿದಿರೆ: ಇಲ್ಲಿನ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.)ದ 20 ವಿವಿಧ ಶಿಕ್ಷಣ ಸಂಸ್ಥೆಗಳ ಜೊತೆಗೆ ನೂತನ ಫಾರ್ಮಸಿ ಪದವಿ ಕಾಲೇಜು ಸೇರ್ಪಡೆಗೊಂಡಿದ್ದು ಈ ವರ್ಷದಿಂದಲೇ ಪ್ರಾರಂಭಿಸಲಾಗುತ್ತಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ವಿಜ್ಞಾನ ವಿಷಯದಲ್ಲಿ ಪದವಿಪೂರ್ವ ಶಿಕ್ಷಣ ಪಡೆದ ವಿದ್ಯಾರ್ಥಿಗಳಿಗೆ 4 ವರ್ಷಗಳ ಪದವಿ ಶಿಕ್ಷಣ ಇದಾಗಿದ್ದು 2024-25ನೇ ಶೈಕ್ಷಣಿಕ ವರ್ಷದಿಂದಲೇ

Big Breaking: ಭಾರತದ ಹೆಮ್ಮೆಯ ಉದ್ಯಮಿ ರತನ್‌ ಟಾಟಾ ಇನ್ನಿಲ್ಲ

ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್‌ ಟಾಟಾ ಅವರು ಇನ್ನಿಲ್ಲ. ರತನ್‌ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್‌ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎನ್ನುವ ಸುದ್ದಿಯನ್ನೇ

ಅತೀ ವೇಗ, ಅಜಾಗರುಕತೆಯ ಚಾಲನೆ : ಚಾಲಕನ ವಿರುದ್ಧ ಕ್ರಮಕೈಗೊಂಡ ಮೂಡುಬಿದಿರೆ ಇನ್ಸ್ ಪೆಕ್ಟರ್

ಮೂಡುಬಿದಿರೆ: ಮಂಗಳೂರು – ಮೂಡುಬಿದಿರೆ ಮಾರ್ಗವಾಗಿ ನಿನ್ನೆ ( ಮಂಗಳವಾರ) ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿದ ಬಸ್ KA 19 AB 1339 ನ್ನು ಮೂಡುಬಿದಿರೆ ಪೊಲೀಸ್ ವೃತ್ತ ನಿರೀಕ್ಷಕ ಸಂದೇಶ್ ಪಿಜಿ ಅವರು ವಶಕ್ಕೆ ಪಡೆದುಕೊಂಡಿದ್ದಾರೆ ಮತ್ತು ಚಾಲಕನ ವಿರುದ್ಧ ಕ್ರಮಕೈಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯು ನಡೆಯುತ್ತಿರುವುದರಿಂದ ವಾಹನ ಸವಾರರು ಬಹಳ ಜಾಗರೂಕತೆಯಿಂದ ವಾಹನವನ್ನು ಚಲಾಯಿಸುವುದು ಅವಶ್ಯಕ. ಆದರೆ ಮಂಗಳವಾರ ಸಂಜೆ ವೇಳೆಯಲ್ಲಿ