Home ಕರಾವಳಿ Archive by category ಮೂಡಬಿದರೆ (Page 22)

ಈ ಬಾರಿ ಮಲೆನಾಡಿನ ಶಿವಮೊಗ್ಗದಲ್ಲಿ ಕಂಬಳ: ಅಕ್ಟೋಬರ್ 26ರಿಂದ ಕಂಬಳ ಸೀಸನ್ ಆರಂಭ

ಮೂಡುಬಿದಿರೆ : ಕಳೆದ ಬಾರಿ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ತುಳುನಾಡಿನ ಕಂಬಳವನ್ನು ಆಯೋಜಿಸಿ ಸೈ ಎನಿಸಿಕೊಂಡಿರುವ ಕಂಬಳ ಸಮಿತಿಯು ಈ ಬಾರಿ ಮಲೆನಾಡಿನ ಶಿವಮೊಗ್ಗದಲ್ಲಿ ಕಂಬಳ ನಡೆಸಲು ನಿರ್ಧರಿಸಿದೆ ಎಂದು ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ಡಾ. ದೇವಿಪ್ರಸಾದ್‌ ಶೆಟ್ಟಿ ಬೆಳಪು ಹೇಳಿದ್ದಾರೆ. ಮೂಡುಬಿದಿರೆ ಸ್ವರ್ಣ ಮಂದಿರದಲ್ಲಿ ನಡೆದ ಜಿಲ್ಲಾ ಕಂಬಳ ಸಮಿತಿಯ

ಮೂಡುಬಿದಿರೆ: ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿಯಾಗಿ ದಿನೇಶ್ ಜಿ.ಡಿ ಭಡ್ತಿ

ಮೂಡುಬಿದಿರೆ: ಇಲ್ಲಿ ವಲಯ ಅರಣ್ಯಾಧಿಕಾರಿಯಾಗಿರುವ ದಿನೇಶ್ ಜಿ.ಡಿ.ಅವರು ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿಯಾಗಿ ಭಡ್ತಿ ಹೊಂದಿದ್ದು ಸಿದ್ಧಾಪುರ ವನ್ಯಜೀವಿ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ‌.ದಿನೇಶ್ ಅವರು ಮೂಡುಬಿದಿರೆ ವಲಯ ಅರಣ್ಯಾಧಿಕಾರಿಯಾಗಿದ್ದು ಈ ಹಿಂದೆ ಕೂಡಾ ಮೂಡುಬಿದಿರೆಯಲ್ಲಿ ವಲಯಾರಣ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿ ಕಾರ್ಕಳಕ್ಕೆ ವರ್ಗಾವಣೆಗೊಂಡಿದ್ದರು.ಅಲ್ಲಿಂದ ಕಾರ್ಕಳ ವನ್ಯಜೀವಿ ವಿಭಾಗದ ವಲಯ

ಮೂಡುಬಿದಿರೆ: ಈಕೋ- ಮ್ಯಾಸ್ಟ್ರೋ ಢಿಕ್ಕಿ: ಮರಿಯಾಡಿ ನಿವಾಸಿ ಮೃತ್ಯು

ಮೂಡುಬಿದಿರೆ: ತಾಲೂಕಿನ ಕೋಟೆಬಾಗಿಲು ಬಳಿ ಸೋಮವಾರ ಮಧ್ಯಾಹ್ನ ಈಕೋ-ಮ್ಯಾಸ್ಟ್ರೋ ಢಿಕ್ಕಿಯಾಗಿ ಮರಿಯಾಡಿಯ ನಿವಾಸಿ ಅಹಮದ್ ಬಾವ (50) ಅವರು ಮೃತಪಟ್ಟಿದ್ದಾರೆ.ಮೂಡುಬಿದಿರೆ ಕಡೆಗೆ ಬರುತ್ತಿದ್ದ ಈಕೋ ಕಾರು ಮೂಡುಬಿದಿರೆಯಿಂದ ಮರಿಯಾಡಿ ಕಡೆಗೆ ಹೋಗುತ್ತಿದ್ದ ಮ್ಯಾಸ್ಟ್ರೊ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡಿದ್ದ ಮ್ಯಾಸ್ಟ್ರೋ ಸವಾರ ಅಹಮದ್ ಬಾವ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ

ಮೂಡುಬಿದಿರೆಯಲ್ಲಿ ಮಹಿಳೆಯ ಸರ ಎಗರಿಸಿ ಪರಾರಿ

ಮೂಡುಬಿದಿರೆ: ಪರಿಚಯಸ್ಥನಂತೆ ನಟಿಸಿ ಮಹಿಳೆಯ ಜತೆ ಮಾತನಾಡಿ ಆಕೆಯ ಮೂರೂವರೆ ಪವನಿನ ಸರವನ್ನು ವ್ಯಕ್ತಿಯೊಬ್ಬ ಎಗರಿಸಿ ಪರಾರಿಯಾದ ಘಟನೆ ಸೋಮವಾರ ಮಧ್ಯಾಹ್ನದ ವೇಳೆ ಮೂಡುಬಿದಿರೆ ಬಸ್ ನಿಲ್ದಾಣದಲ್ಲಿ ನಡೆದಿದೆ. ಅಶ್ವತ್ಥಪುರದಲ್ಲಿರುವ ತನ್ನ ಮಗಳ ಮನೆಗೆ ಹೋಗಲು ನಾರಾವಿಯಿಂದ ಬಂದಿದ್ದ ಮಧ್ಯ ವಯಸ್ಸಿನ ಮಹಿಳೆಯು ಬಸ್ಸಿನಿಂದ ಇಳಿದು ಬರುತ್ತಿದ್ದಾಗ ಚಿಕ್ಕಮ್ಮನೆಂದು ಕರೆದು ಪರಿಚಯಿಸಿಕೊಂಡಿದ್ದ ಅಲ್ಲದೆ ಮಹಿಳೆಯ ಮನೆಯವರ ಪರಿಚಯವನ್ನೆಲ್ಲಾ ಹೇಳಿದ ಅಲ್ಲದೆ ಆಕೆಯನ್ನು

ಮೂಡುಬಿದಿರೆ : ಗುಡ್ಡ ಕುಸಿದ ಸ್ಥಳಕ್ಕೆ ಮಾಜಿ ಸಚಿವ ಅಭಯಚಂದ್ರ ಜೈನ್ ಭೇಟಿ

ಮೂಡುಬಿದಿರೆ: ಪಾಲಡ್ಕ – ಕಲ್ಲಮುಂಡ್ಕೂರು ಕೂಡು ರಸ್ತೆಯ ಗುಂಡ್ಯಡ್ಕ ಎಂಬಲ್ಲಿ ವಿಪರೀತ ಮಳೆಯಿಂದಾಗಿ ಶನಿವಾರ ರಸ್ತೆಯ ಬದಿಯಲ್ಲಿದ್ದ ಗುಡ್ಡ ಜರಿದು ಬಿದ್ದು, ಜನರು ನಡೆದಾಡುವ ಹಾಗೂ ವಾಹನ ಸಂಚರಿಸುವ ರಸ್ತೆಯು ಸಂಪೂರ್ಣ ಹಾಳಾಗಿದ್ದ ಸ್ಥಳಕ್ಕೆ ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅವರು ಭಾನುವಾರ ಭೇಟಿ ನೀಡಿದರು.ಗುಂಡ್ಯಡ್ಕದಲ್ಲಿ ಎಲ್ಲಾ ಮನೆ ವಿದ್ಯುತ್ ಸಂಪರ್ಕ ಕಡಿದು ಹೋಗಿರುವ ಬಗ್ಗೆ ಮಾಹಿತಿಯನ್ನು ಪಡೆದ ಜೈನ್ ತಕ್ಷಣವೇ ಸಂಬಂಧಪಟ್ಟ ಮೆಸ್ಕಾಂ ಹಾಗೂ

ಮೂಡುಬಿದಿರೆ: ಮಳೆ ಹಾನಿ – ನೀರಿನಲ್ಲಿ ಕೊಚ್ಚಿ ಹೋದ ದನಗಳು

ಮೂಡುಬಿದಿರೆ: ಬುಧವಾರ ರಾತ್ರಿ ಸುರಿದ ವಿಪರೀತ ಮಳೆಗೆ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಡೆಂಜಾರುವಿನ ಪ್ರಕಾಶ್ ಎಂಬವರ ಮನೆಯ ಕೊಟ್ಟಿಗೆಯಲ್ಲಿದ್ದ 5 ದನಗಳು ನೀರಿನಲ್ಲಿ ಕೊಚ್ಚಿಹೋಗಿದ್ದು ಅದರಲ್ಲಿ 1 ದನ ಅಸುನೀಗಿದೆ.2 ದನಗಳು ವಾಪಾಸು ಬಂದಿದ್ದು ಇನ್ನೆರಡು ದನಗಳು ಕಾಣೆಯಾಗಿರುತ್ತದೆ.ಸ್ಥಳಕ್ಕೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಲೊಕೇಶ್ ಬಿ., ಸಹಾಯಕ ನಿರ್ದೇಶಕರು(ಗ್ರಾ.ಉ), ಗ್ರಾಮ ಪಂಚಾಯತ್ ಅಧ್ಯಕ್ಷ ಉದಯ ಪೂಜಾರಿ, ಉಪಾಧ್ಯಕ್ಷೆ ಸುಶೀಲಾ

ಮೂಡುಬಿದಿರೆ : ಅರ್ಚಕ ಅಡಿಗಳ್ ಶ್ರೀನಿವಾಸ ಭಟ್ ನಿಧನ

ಮೂಡುಬಿದಿರೆ : ಪುತ್ತಿಗೆ ಗ್ರಾಮದ ಹಿರಿಯ ಅರ್ಚಕ, ಶತಾಯುಷಿ ಅಡಿಗಳ್ ಶ್ರೀನಿವಾಸ ಭಟ್ (100) ಅಲ್ಪಕಾಲದ ಅಸೌಖ್ಯದಿಂದ ಬುಧವಾರ ಸ್ವಗೃಹದಲ್ಲಿ ನಿಧನರಾದರು. ಅವರಿಗೆ ಮೂವರು ಪುತ್ರರು, ಮೂವರು ಪುತ್ರಿಯರು ಇದ್ದಾರೆ.ಪುತ್ತಿಗೆ ಮಹತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಸುಮಾರು 65 ವರ್ಷಗಳ ಕಾಲ ಸೋಮನಾಥೇಶ್ವರ ಹಾಗೂ ಸಪರಿವಾರ ದೇವರುಗಳ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸಿ ಜನಾನುರಾಗಿಯಾಗಿದ್ದರು.

ಮೂಡುಬಿದಿರೆ: ಗ್ಯಾಸ್ ಗೀಸರ್ ಕೆಮಿಕಲ್ ಸ್ಪ್ರೆಡ್: ಉಸಿರುಗಟ್ಟಿ ಮೃತಪಟ್ಟ ಯುವಕ

ಸ್ನಾನಗೃಹದಲ್ಲಿ ಗ್ಯಾಸ್ ಗೀಸರ್ ಕೆಮಿಕಲ್ ಸ್ಪ್ರೆಡ್ ಆಗಿ ಸ್ನಾನಗೃಹದಲ್ಲಿ ಯುವಕನೋರ್ವ ಉಸಿರುಗಟ್ಟಿ ಮೃತಪಟ್ಟ ಘಟನೆ ಭಾನುವಾರ ರಾತ್ರಿ ಕೋಟೆಬಾಗಿಲಿನಲ್ಲಿ ಸಂಭವಿಸಿದೆ.ಕೋಟೆಬಾಗಿಲಿನ ಪ್ಲಾಟ್ ಒಂದರಲ್ಲಿ ವಾಸವಾಗಿರುವ ದಿ.ಅನ್ಸಾರ್ ಎಂಬವರ ಪುತ್ರ ಶಾರಿಕ್ ( 18) ಎಂಬವನೇ ಮೃತಪಟ್ಟ ಯುವಕ.ಪ್ಲಾಟ್ ನಲ್ಲಿ ಶಾರಿಕ್ ಮತ್ತು ಆತನ ತಾಯಿ ವಾಸವಾಗಿದ್ದರು.ರಾತ್ರಿ ಶಾರಿಕ್ ಸ್ನಾನಕ್ಕೆಂದು ಹೋಗಿದ್ದ.ಆತ ಸ್ನಾನ ಮುಗಿಸಿಕೊಂಡು ಬರುವಾಗ ಯಾವತ್ತೂ ತಡವಾಗುತ್ತಿತ್ತೆಂದು ಆತನ

ಮೂಡುಬಿದಿರೆ: ಕಾಲು ಜಾರಿ ಬಿದ್ದು ಸಮಾಜ ಮಂದಿರ ಸಭಾದ ವಾಚ್ ಮೆನ್ ಸಾವು

ಮೂಡುಬಿದಿರೆಯ ಸಮಾಜ ಮಂದಿರ ಸಭಾದಲ್ಲಿ ವಾಚ್ ಮೆನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಕುಮಾರ್ ಹೆಗ್ಡೆ (56 ವ) ಅವರು ಬಿಪಿ ಹೈ ಆಗಿ ಸೋಮವಾರ ಬೆಳಿಗ್ಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಕೊಕ್ರಾಡಿಯ ನಿವಾಸಿ ಸುಕುಮಾರ್ ಹೆಗ್ಡೆ ಅವರು ಕಳೆದ 5 ವರ್ಷಗಳಿಂದ ಸಮಾಜ ಮಂದಿರದಲ್ಲಿ ವಾಚ್ ಮೆನ್ ಆಗಿ ರಾತ್ರಿ ವೇಳೆ ಕರ್ತವ್ಯ ನಿರ್ವಹಿಸುತ್ತಿದ್ದು, ಹಗಲಿನಲ್ಲಿ ಬೇರೆ ಕಡೆಗೆ ಕೂಲಿ ಕೆಲಸಕ್ಕೆ ಹೋಗುತ್ತಿದ್ದರು. ಅವರಿಗೆ ಉಳಿದುಕೊಳ್ಳಲು ಸಮಾಜ ಮಂದಿರದ ವತಿಯಿಂದಲೇ

ದೂರದರ್ಶನ ಕಲಾವಿದೆಯಾಗಿ ಅಯನಾ ವಿ. ರಮಣ್ ಆಯ್ಕೆ

ಮೂಡುಬಿದಿರೆ: ಬಹುಮುಖ ಪ್ರತಿಭೆಯ ಹೆಸರಾಂತ ಕಲಾವಿದೆ ಅಯನಾ. ವಿ. ರಮಣ್ ಮೂಡುಬಿದಿರೆ, ದೂರದರ್ಶನ ಕಲಾವಿದೆಯಾಗಿ ಆಯ್ಕೆಯಾಗಿದ್ದಾರೆ .ಮಂಗಳೂರಿನ ಸನಾತನ ನಾಟ್ಯಾಲಯದ ಕರ್ನಾಟಕ ಕಲಾಶ್ರೀ ವಿದುಷಿ ಶಾರದಾ ಮಣಿ ಶೇಖರ್ ಮಾರ್ಗದರ್ಶನದಲ್ಲಿ, ಬೆಂಗಳೂರು ದೂರದರ್ಶನ ಕೇಂದ್ರದ ಆಯ್ಕೆ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಎದುರಿಸಿದ್ದ ಅವರು “ಬಿ” ಗ್ರೇಡ್ ಮಾನ್ಯತೆ ಪಡೆದಿದ್ದಾರೆ.ಬೆಂಗಳೂರಿನ ಕರ್ನಾಟಕ ಕಲಾಶ್ರೀ ವಿದ್ವಾನ್ ಸತ್ಯನಾರಾಯಣ ರಾಜು ಅವರಲ್ಲಿ ವಿಶೇಷ