ಅಂತರಾಷ್ಟ್ರೀಯ ಸ್ಕೌಟ್ಸ್ ಗೈಡ್ಸ್ ವತಿಯಿಂದ ದಕ್ಷಿಣ ಕೊರಿಯಾದ ಸಿಮನ್ ಗಾಮ್ ದ್ವೀಪದಲ್ಲಿ ನಡೆಯುತ್ತಿರುವ ವಿಶ್ವ ಜಾಂಬೂರಿಯಲ್ಲಿ ಮಂಗಳವಾರ ದ.ಕ ಜಿಲ್ಲೆಯ 25 ವಿದ್ಯಾರ್ಥಿಗಳ ತಂಡ ಕರಾವಳಿಯ ಯಕ್ಷಗಾನ ಹಾಗೂ ಹುಲಿವೇಷ ಪ್ರದರ್ಶನವನ್ನು ನೀಡುವ ಮೂಲಕ ಜನಮನ ಗೆದ್ದಿದೆ ಅಲ್ಲದೆ ಭರತನಾಟ್ಯ, ಕೇರಳದ ಮೋಹಿನಿಯಾಟ್ಯಂ, ಒರಿಸ್ಸಾದ ಒಡಿಸ್ಸಿ, ಗುಜರಾತ್ನ ಬಾಂಗ್ಡಾ,
ಮೂಡುಬಿದಿರೆ: ಕಳೆದ 40 ವರ್ಷಗಳಿಂದ ಕಾರ್ಯಚರಿಸುತ್ತಾ ಜನರಿಗೆ ಸದಭಿರುಚಿಯ ಸಿನೆಮಾಗಳನ್ನು ನೀಡಿ ರಂಜಿಸುತ್ತಿದ್ದ ಮೂಡುಬಿದಿರೆಯ ಅಮರಶ್ರೀ ಚಿತ್ರಮಂದಿರಕ್ಕೆ ಬೀಗಮುದ್ರೆ ಬಿದ್ದಿದೆ. ಮಾಜಿ ಸಚಿವ ದಿ.ಕೆ.ಅಮರನಾಥ ಶೆಟ್ಟಿ ಅವರ ಮಗಳು ಅಮರಶ್ರೀ ಅವರ ಹೆಸರಿನಲ್ಲಿರುವ ಈ ಸಿನೆಮಾ ಮಂದಿರವನ್ನು ಕಳೆದ 10 ವರ್ಷಗಳಿಂದ ಕಾರ್ಕಳದ ಜೆರಾಲ್ಡ್ ಕುಟಿನ್ಹಾ ಅವರು ನಡೆಸುತ್ತಿದ್ದರು. ಕಳೆದ 2021ಕ್ಕೆ ಪರವಾನಿಗೆಯ ಅವಧಿಯು ಮುಕ್ತಾಯಗೊಂಡಿರುತ್ತದೆ. ನಂತರ ನವೀಕರಣಗೊಳಿಸದೆ
ಮೂಡುಬಿದಿರೆ: ಚೀನಾದ ಚೆಂಗ್ಡುವಿನಲ್ಲಿ ನಡೆದ ಜಾಗತಿಕ ವಿಶ್ವವಿದ್ಯಾಲಯಗಳ ಕ್ರೀಡಾಕೂಟದ ಲಾಂಗ್ಜಂಪ್ನಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಕ್ರೀಡಾ ದತ್ತು ಯೋಜನೆ ಕ್ರೀಡಾಪಟು ಭವಾನಿ ಯಾದವ್ ಭಗವತಿ ಮೈಲುಗಲ್ಲು ಸಾಧಿಸಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ತಿಳಿಸಿದ್ದಾರೆ. ಅವರು ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು. ‘ಭವಾನಿ ಯಾದವ್ ಆಳ್ವಾಸ್
ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ ಬೆಳೆಸಬೇಕು ಎಂದು ಕೇವಲ ಭಾಷಣದಲ್ಲಿ ಬೀಗಿದರೆ ಸಾಲದು ಬದಲಾಗಿ ಸರಕಾರಿ ಶಾಲೆಗಳನ್ನು ಹೇಗೆ ಉಳಿಸಿ ಬೆಳೆಸಬಹುದು ಎಂಬ ಚಿಂತನೆಯೂ ಬೇಕು. ಅಂತಹ ಚಿಂತನೆಯೊಂದನ್ನು ಮಾಡಿ ಶಾಲೆಗಳಾಗಿ ಶಾಶ್ವತ ಯೋಜನೆಯನ್ನು ರೂಪಿಸಿ ಮಕ್ಕಳ ಮತ್ತು ಶಾಲಾಭಿಮಾನಿಗಳ ಮನಗೆದ್ದ ಜನಪ್ರತಿನಿಧಿ ಪಡುಮಾರ್ನಾಡು ಗ್ರಾ.ಪಂ. ಮಾಜಿ ಅಧ್ಯಕ್ಷ ಶ್ರೀನಾಥ್ ಸುವರ್ಣ ಅವರು. ಪಡುಮಾರ್ನಾಡು ಗ್ರಾ.ಪಂ. ವ್ಯಾಪ್ತಿಯ ಜಿ.ಪಂ.ಸರಕಾರಿ ಹಿರಿಯ ಪ್ರಾಥಮಿಕ ಶಾಲೆ
ಮೂಡುಬಿದಿರೆ: ಸಾರ್ವಜನಿಕ ಗಣೇಶೋತ್ಸವ ಸಮಿತಿಯ ವತಿಯಿಂದ ಸಮಾಜ ಮಂದಿರದಲ್ಲಿ ಪೂಜಿಸಲ್ಪಡುವ ಮೂಡುಬಿದಿರೆ ಗಣೇಶೋತ್ಸವವು ಈ ವರ್ಷ ವಜ್ರಮಹೋತ್ಸವವನ್ನು ಆಚರಿಸುತ್ತಿದೆ. ಈ ಹಿನ್ನಲೆಯಲ್ಲಿ ಗಣೇಶೋತ್ಸವ ಸಮಿತಿ, ಪವರ್ ಫ್ರೆಂಡ್ಸ್ ಬೆದ್ರ ಮತ್ತು ಸಮಾಜಮಂದಿರ ಸಭಾ ಮೂಡುಬಿದಿರೆ ಇವುಗಳ ಜಂಟಿ ಆಶ್ರಯದಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಮರುಜೋಡಣೆಯ ತಪಾಸಣಾ ಉಚಿತ ಶಿಬಿರ ಹಾಗೂ ಅಂಚೆ ಇಲಾಖೆ ಪುತ್ತೂರು ವಿಭಾಗದ ಸಹಯೋಗದಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಅಭಿಯಾನ
ಮೂಡುಬಿದಿರೆ: ಬೀಡಿ ಕಾರ್ಮಿಕರಿಗೆ 2015ರಿಂದ 2018ರ ತನಕ ಮೂರು ವರ್ಷಗಳ ಬಾಕಿ ಇರುವ ತುಟ್ಟಿ ಭತ್ತೆ ಮೊತ್ತವನ್ನು ನೀಡಲು ಒತ್ತಾಯಿಸಿ ಮತ್ತು 2018ರಿಂದ ಬೀಡಿ ಕಾರ್ಮಿಕರಿಗೆ ನೀಡಬೇಕಾದ ಕನಿಷ್ಟ ಕೂಲಿ ಪಾವತಿಗಾಗಿ ಆಗ್ರಹಿಸಿ ಮೂಡುಬಿದಿರೆ ಪ್ರದೇಶ ಬೀಡಿ ಕೆಲಸಗಾರರ ಸಂಘದ ವತಿಯಿಂದ ಸೌತ್ ಕೆನರಾ ಹೋಂ ಇಂಡಸ್ಟ್ರೀಸ್, ಮೂಡುಬಿದಿರೆ ಡಿಪೆÇೀ ಬಳಿ ಪ್ರತಿಭಟನೆ ನಡೆಸಿದರು. ಬೀಡಿ ಫೆಡರೇಶನ್ ನ ಜಿಲ್ಲಾಧ್ಯಕ್ಷ ವಸಂತ ಆಚಾರಿ ಪ್ತತಿಭಟನೆಯನ್ನುದ್ದೇಶಿಸಿ ಮಾತನಾಡಿ, ಬೀಡಿ
ಮೂಡುಬಿದಿರೆ: ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ (ಎಐಇಟಿ) ಕೃಷಿ ಎಂಜಿನಿಯರಿಂಗ್ ವಿಭಾಗವು ಬೆಂಗಳೂರಿನ ಬುಲ್ಲರ್ ಇಂಡಿಯಾ ಕಂಪನಿ ಜೊತೆ ಒಡಂಬಡಿಕೆಗೆ ಸಹಿ ಹಾಕಿತು. ಬುಲ್ಲರ್ ಇಂಡಿಯಾ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕರಾದ ಪ್ರಶಾಂತ್ ಗೋಖಲೆ ಹಾಗೂ ಕಂಪೆನಿಯ ವೆಂಕಟೇಶ್ ಮತ್ತು ರವೀಂದ್ರ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ, ಕೃಷಿ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ. ಶಶಿಕುಮಾರ್, ಮೆಕ್ಯಾನಿಕಲ್
ಮೂಡುಬಿದಿರೆ: ಸಾಂಪ್ರಾದಾಯಿಕ ಕೃಷಿ ಪದ್ಧತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಆಳ್ವಾಸ್ ಇನ್ಸಿಟ್ಯೂಟ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಮಿಜಾರು ಇಲ್ಲಿನ ತುಳು ಸಂಘವು ಸಾಂಪ್ರಾದಾಯಿಕ ಬತ್ತದ ನಾಟಿ ಕುರಿತು ಒಂದು ದಿನದ ಕಾರ್ಯಾಗಾರವನ್ನು ಆಯೋಜಿಸಿತು. ಡಾ.ಪ್ರಮೀಳ ಕೊಳಕೆ ಮತ್ತು ಪ್ರೊ.ಪ್ರಮೋದ್ ಕಾರಂತ್ ಅವರ ನೇತೃತ್ವದಲ್ಲಿ ಎಡಪದವು ಕಣ್ಣೂರಿ ಮಾಧವ ಗೌಡ ಮತ್ತು ವಾಮನ ಗೌಡ ಅವರ ಗದ್ದೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ತುಳು ಸಂಘದ ಸದಸ್ಯರು ಬಹಳ
ಮೂಡುಬಿದಿರೆ: ಮಣಿಪುರದಲ್ಲಿ ನಡೆಯುತ್ತಿರುವ ಹಿಂಸೆಯನ್ನು ಖಂಡಿಸಿ ಮೂಡುಬಿದಿರೆ ತಾಲೂಕಿನ ಶಿರ್ತಾಡಿ ಮೌಂಟ್ ಕಾರ್ಮೆಲ್ ಚರ್ಚ್ ಹಾಗೂ ಸೌಹಾರ್ದ ಫ್ರೆಂಡ್ಸ್ ಶಿರ್ತಾಡಿ ಹಾಗೂ ಸಮಾನ ಮನಸ್ಕ ಸಂಘಟನೆಗಳು ಶಿರ್ತಾಡಿ ಬಸ್ ಸ್ಟ್ಯಾಂಡ್ ಆವರಣದಲ್ಲಿ ಪ್ರತಿಭಟನಾ ಸಭೆ ನಡೆಯಿತು. ಮೂಡುಬಿದಿರೆ ವಲಯ ಕಥೋಲಿಕ್ ಸಭಾದ ರಾಜಕೀಯ ಸಂಚಾಲಕ ರಾಜೇಶ್ ಕಡಲಕೆರೆ ದಿಕ್ಸೂಚಿ ಭಾಷಣ ಮಾಡಿ ನಾವು ಬೇರೆ ಬೇರೆ ತಂಡಗಳಾಗುವ ಹೊತ್ತಲ್ಲ ಇದು ಎಲ್ಲರೂ ಒಂದಾಗುವ ಹೊತ್ತು. ಯಾಕೆಂದರೆ
ಮೂಡುಬಿದಿರೆ: 1964ರಲ್ಲಿ ಆರಂಭಗೊಂಡಿರುವ ಇಲ್ಲಿನ ಶ್ರೀ ಸಾರ್ವಜನಿಕ ಗಣೇಶೋತ್ಸವವು 60ನೇ ವರ್ಷದ ಸಂಭ್ರಮದಲ್ಲಿದ್ದು ಅದಕ್ಕಾಗಿ ಈ ವರ್ಷ ಹಬ್ಬವನ್ನು ವಿಶೇಷವಾಗಿ ಆಚರಿಸುವ ಉದ್ದೇಶವನ್ನು ಹೊಂದಿದ್ದು ಈ ನಿಟ್ಟಿನಲ್ಲಿ ಶನಿವಾರ ಲೋಗೋವನ್ನು ಅನಾವರಣಗೊಳಿಸಲಾಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಲೋಗೋ ಅನಾವರಣಗೊಳಿಸಿ ಮಾತನಾಡಿ ಮೂಡುಬಿದಿರೆಯು ಹಲವು ವಿಚಾರಗಳಲ್ಲಿ ಸಾಧನೆ ಮಾಡಿದೆ. ಇಲ್ಲಿನ ಸಾರ್ವಜನಿಕ ಗಣೇಶೋತ್ಸವಕ್ಕೆ ಅದರದ್ದೇ ಆದ



























