Home ಕರಾವಳಿ Archive by category ಮೂಡಬಿದರೆ (Page 44)

ಹಲಸು-ವಿಧ್ಯಮಯ ಹಣ್ಣುಗಳ ಮಹಾಮೇಳ “ಸಮೃದ್ಧಿ”ಗೆ ವಿದ್ಯಾಗಿರಿ ಸಜ್ಜು

ಮೂಡುಬಿದಿರೆ: ಕೃಷಿ ಋಷಿ ಡಾ.ಎಲ್.ಸಿ.ಸೋನ್ಸ್ ಸ್ಮರಣಾರ್ಥ ನಾಳೆಯಿಂದ ಮೂರು ದಿನಗಳ ಕಾಲ ನಡೆಯುವ ಹಲಸು-ವೈವಿಧ್ಯಮಯ ಹಣ್ಣುಗಳು, ಆಹಾರೋತ್ಸವ ಹಾಗೂ ಕೃಷಿಪರಿಕರಗಳ ಪ್ರದರ್ಶನ ಮತ್ತು ಮಾರಾಟ ಮಹಾಮೇಳ “ಸಮೃದ್ಧಿ”ಗೆ ವಿದ್ಯಾಗಿರಿಯ ಮುಂಡ್ರುದೆಗುತ್ತು ಕೆ.ಅಮರನಾಥ ಶೆಟ್ಟಿ ಸಭಾಭವನವು ಸಿಂಗರಿಸಿಕೊಂಡು ಸಜ್ಜಾಗಿದೆ. ಹಲಸು ವೈವಿಧ್ಯಮಯ ಹಣ್ಣುಗಳ ಮಹಾಮೇಳ

ಮೂಡುಬಿದಿರೆ : ಲೋಕಾಯುಕ್ತ ಜನಸಂಪರ್ಕ ಸಭೆ – ಸಾರ್ವಜನಿಕರಿಂದ ಅಹವಾಲು ಸ್ವೀಕಾರ

ಮೂಡುಬಿದಿರೆ ಆಡಳಿತ ಸೌಧದಲ್ಲಿ ಬುಧವಾರ ಕರ್ನಾಟಕ ಲೋಕಾಯುಕ್ತದಿಂದ ಜನ ಸಂಪರ್ಕ ಸಭೆ ನಡೆಯಿತು. ಎಸ್‍ಪಿ ಸೈಮನ್ ಸಿ.ಎ ಹಾಗೂ ಅಧಿಕಾರಗಳ ತಂಡವು ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ 10 ಅಹವಾಲುಗಳನ್ನು ಸ್ವೀಕರಿಸಿದರು. ಸರ್ವೆ(2), ಕಂದಾಯ (5) ಪಂಚಾಯತ್ (1) ಪುರಸಭೆ (1) ಕೇಂದ್ರ ಲೋಕಾಯುಕ್ತ(1) ಸಹಿತ ಒಟ್ಟು 10 ದೂರುಗಳು ಬಂದಿದ್ದು ಈ ದೂರುಗಳನ್ನು ಕಾಲಮಿತಿಯೊಳಗೆ ಇತ್ಯರ್ಥಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಹಾಗೂ ದೂರುಗಳು

ಮೂಡುಬಿದರೆ : ಅಕ್ಷರದಾಸೋಹ ನೌಕರರ ಪ್ರತಿಭಟನೆ

ಮೂಡುಬಿದಿರೆ : ಸರಕಾರಿ ಮತ್ತು ಅನುದಾನ ಶಾಲೆಗಳಲ್ಲಿ ಕೆಲಸ ಮಾಡುತ್ತಿರುವ ಅಕ್ಷರ ದಾಸೋಹ ನೌಕರರ ಸಮಸ್ಯೆಗಳನ್ನು ಸರಕಾರ ಪರಿಹರಿಸಬೇಕು ಎಂದು ಆಗ್ರಹಿಸಿ, ಮೂಡುಬಿದಿರೆ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ತಾಲೂಕಿನ ಕ.ರಾ. ಅಕ್ಷರ ದಾಸೋಹ ನೌಕರರ ಸಂಘದವರು ಪ್ರತಿಭಟನೆ ನಡೆಸಿದರು. ಮೂಡುಬಿದಿರೆ ಸಿಐಟಿಯುನ ಮಾಜಿ ಅಧ್ಯಕ್ಷೆ ರಮಣಿ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ ದಿನಕ್ಕೆ ಆರು ಗಂಟೆಗಿಂತಲೂ ಅಧಿಕ ಸಮಯ ಕೆಲಸ ಮಾಡುವ ಅನಿವಾರ್ಯ ಪರಿಸ್ಥಿತಿಯಲ್ಲಿರುವ ರಾಜ್ಯದ

ಮೂಡುಬಿದರೆ ಆಳ್ವಾಸ್ ನಲ್ಲಿ ಜುಲೈ 14 ರಿಂದ 16ರವರೆಗೆ ಹಲಸು ವೈವಿಧ್ಯಮಯ ಹಣ್ಣುಗಳ ಮೇಳ

ಮೂಡುಬಿದಿರೆ : ಹಲಸು ವೈವಿಧ್ಯಮಯ ಹಣ್ಣುಗಳ ಮಹಾಮೇಳ ಸಮಿತಿವತಿಯಿಂದ ಹಿರಿಯ ಕೃಷಿ ತಜ್ಞ ಡಾ| ಎಲ್ ಸಿ ಸೋನ್ಸ್ ಸ್ಮರಣಾರ್ಥ “ಸಮೃದ್ಧಿ” ಹಲಸು ವೈವಿಧ್ಯಮಯ ಹಣ್ಣುಗಳು, ಆಹಾರೋತ್ಸವ ಹಾಗೂ ಕೃಷಿ ಪರಿಕರಗಳ ಪ್ರದರ್ಶನ ಮತ್ತು ಮಾರಾಟ ಮಹಾ ಮೇಳ ಜುಲೈ 14 ರಿಂದ 16 ರವರೆಗೆ ವಿದ್ಯಾಗಿರಿಯ ಕೆ ಅಮರನಾಥಶೆಟ್ಟಿ ಸಭಾಭವನದಲ್ಲಿ ನಡೆಯಲಿದೆ. ಆಳ್ವಾಸ್ ಶಿಕ್ಷಣ ಸಂಸ್ಥಾನದ ಅಧ್ಯಕ್ಷ ಡಾ. ಎಂ ಮೋಹನ್ ಆಳ್ವ ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಈ ಕುರಿತು

ಮೂಡುಬಿದರೆ: ಯುವಕ ನೇಣಿಗೆ ಶರಣು

ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಹೌದಾಲ್ ಸಮೀಪದ ಮರಿಯಾಡಿಯ ಯುವಕ ಪಾರಿಸ್ (20) ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಟಿಪ್ಪರ್ ಚಾಲಕನಾಗಿ ದುಡಿಯುತ್ತಿದ್ದ ಪಾರಿಸ್‍ನ ಆತ್ಮಹತ್ಯೆಗೆ ಕಾರಣವೇನೆಂದು ತಿಳಿದು ಬಂದಿಲ್ಲ. ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

“ಸಿನೆಮಾ ಮತ್ತು ಸಿನೆಮಾ ನಿರ್ಮಾಣ” : ಮೂಡುಬಿದರೆಯ ಆಳ್ವಾಸ್‍ನಲ್ಲಿ ಕಾರ್ಯಾಗಾರ

ಮೂಡುಬಿದಿರೆ: `ಸಿನಿಮಾವು ಕಲೆ, ತಂತ್ರಜ್ಞಾನದ ಸಮ್ಮಿಲನವಾಗಿದ್ದು, ವಿಜ್ಞಾನ, ಮನೋರಂಜನೆ ಎಲ್ಲವೂ ಇಲ್ಲಿದೆ. ಇದು ಅತ್ಯಂತ ಪ್ರಭಾವ ಬೀರುವ ಮಾಧ್ಯಮ’ ಎಂದು ಸಿನಿಮಾ ಬರಹಗಾರ ಮತ್ತು ಕಲಾ ನಿರ್ದೇಶಕ ತಮ್ಮ ಲಕ್ಷ್ಮಣ ಹೇಳಿದರು. ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಿನಿಮಾ ಸಮಾಜದಲ್ಲಿ ಸಿನಿಮಾ ಮತ್ತು ಸಿನಿಮಾ ನಿರ್ಮಾಣ' ವಿಷಯದ ಕುರಿತು ನಡೆದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಮಾನವನು ನೀರಿನಲ್ಲಿ

ಪಣಪಿಲದಲ್ಲಿ ಮತ್ಸ್ಯ ಮಿಲನ ಮಾಹಿತಿ ಕಾರ್ಯಾಗಾರ

ಮೂಡುಬಿದಿರೆ: ಮೀನು ಕೃಷಿಕರ ದಿನದ ಅಂಗವಾಗಿ ಕರ್ನಾಟಕ ಪಶು ವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿ.ವಿ.ಬೀದರ್, ಭಾ.ಕೃ.ಸಂ.ಪ. ಕೃಷಿ ವಿಜ್ಞಾನ ಕೇಂದ್ರ ದ.ಕ.ಮಂಗಳೂರು ಮತ್ತು ಮೀನುಗಾರಿಕೆ ಇಲಾಖೆ, ದ.ಕ.ಜಿಲ್ಲಾ ಪಂಚಾಯತ್ ಇವುಗಳ ವತಿಯಿಂದ ಮೀನು ಸಾಕಾಣಿಕೆ ಮಾಹಿತಿ ಕಾರ್ಯಾಗಾರ ಹಾಗೂ ಮೀನು ಹಿಡಿಯುವ ಕಾರ್ಯಕ್ರಮ “ಮತ್ಸ್ಯ ಮಿಲನ” ಪಣಪಿಲ ಕೊಟ್ಟರಿಬೆಟ್ಟು ರಾಜ್ ಫಿಶ್ ಫಾರ್ಮಿಂಗ್‍ನಲ್ಲಿ ನಡೆಯಿತು. ಮಂಗಳೂರು ಕೆ.ವಿ.ಕೆ ಯ

ಜೈನ ಮುನಿಯ ಹತ್ಯೆ ಪ್ರಕರಣ: ಹತ್ಯೆ ಮಾಡಿದವರ ವಿರುದ್ಧ ಸೂಕ್ತ ಕ್ರಮಕ್ಕೆ ಅಭಯಚಂದ್ರ ಜೈನ್ ಆಗ್ರಹ

ಚಿಕ್ಕೋಡಿ ದಿಗಂಬರ ಜೈನ ಮುನಿಯ ಹತ್ಯೆಯನ್ನು ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅವರು ಖಂಡಿಸಿ, ಹತ್ಯೆ ಮಾಡಿರುವವರ ವಿರುದ್ಧ ಸೂಕ್ತ ಕ್ರಮವನ್ನು ಕೈಗೊಳ್ಳುವಂತೆ ಸರಕಾರವನ್ನು ಆಗ್ರಹಿಸಿದ್ದಾರೆ. ಜೈನ ಮುನಿಗಳು ತ್ಯಾಗಮಯಿಗಳು. ಸರ್ವಸ್ವವನ್ನು ತ್ಯಾಗ ಮಾಡಿ ಮುನಿ ದೀಕ್ಷೆಯನ್ನು ತೆಗೆದುಕೊಂಡವರು. ಮುನಿಗಳ ಆಪ್ತರೇ ಕೊಲೆ ಮಾಡುವಂತಹ ಕೃತ್ಯಕ್ಕೆ ಕೈ ಹಾಕಿರುವುದು ಖಂಡನೀಯ. ಜೈನ ಮುನಿಗಳು ಅಹಿಂಸಾ ತತ್ವದ ಮುಖಾಂತರ ಬದುಕುವ ಶ್ರೇಷ್ಠ ಜೀವಿಗಳು. ಅಂತಹ ಶ್ರೇಷ್ಠ

ಇರುವೈಲು ಗ್ರಾ.ಪಂ.ನ ಪುದ್ದರಕೋಡಿಯಲ್ಲಿ ಅಪಾಯಕಾರಿ ಕಾಲು ಸಂಕ

ಮೂಡುಬಿದಿರೆ : ಅಡಿಕೆ ಮರವನ್ನು ಬಳಸಿ ನಿರ್ಮಿಸಿರುವ ಅಪಾಯಕಾರಿ ಕಾಲು ಸಂಕದಲ್ಲಿ ಅಂಗನವಾಡಿ, ಪ್ರಾಥಮಿಕ ಶಾಲೆಗೆ ಹೋಗುವ ಮಕ್ಕಳು ಸಹಿತ ಸಾರ್ವಜನಿಕರು ಜೀವ ಭಯದಿಂದ ಸಂಚರಿಸಬೇಕಾದ ಪರಿಸ್ಥಿತಿ ಮೂಡುಬಿದಿರೆ ತಾಲೂಕಿನ ಇರುವೈಲು ಗ್ರಾ.ಪಂ ವ್ಯಾಪ್ತಿಯ ತೋಡಾರು ಗ್ರಾಮದ ಪುದ್ದರಕೋಡಿ ಜಯ ಶೆಟ್ಟಿ ಎಂಬವರ ಮನೆ ಬಳಿ ಎದುರಾಗಿದೆ. ಹಲವು ವರ್ಷಗಳ ಹಿಂದೆ ನಿರ್ಮಿಸಿದ್ದ ಕಾಲು ಸಂಕವು ಕಳೆದ ವರ್ಷ ಮನೆಯ ರಭಸಕ್ಕೆ ಕುಸಿದು ಹೋಗಿತ್ತು. ಆಗ ಅಡಿಕೆ ಮರಗಳನ್ನು ಬಳಸಿ ತಾತ್ಕಾಲಿಕ

ಪುತ್ತಿಗೆ ಕಾಯರ್ ಪುಂಡ್‍ನಲ್ಲಿ ಜಲಾವೃತ : ಸಾರ್ವಜನಿಕರ ದೂರಿಗೆ ಎಚ್ಚೆತ್ತುಕೊಂಡ ಪಂಚಾಯತ್

ಮೂಡುಬಿದಿರೆ : ನಿರಂತರ ಸುರಿದ ಮನೆಯಿಂದಾಗಿ ತಾಲೂಕಿನ ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಯರ್ ಪುಂಡ್ ನಲ್ಲಿ ನೀರು ಸರಾಗವಾಗಿ ಹರಿಯಲು ಸಾಧ್ಯವಾಗದೆ ತೋಟಕ್ಕೆ ನುಗ್ಗಿದೆ. ಕಾಯರ್ ಪುಂಡ್ ಕಾಲನಿಯಲ್ಲಿ ಮಳೆಯ ನೀರು ಹರಿದು ಹೋಗಲು ಸಮರ್ಪಕವಾದ ಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದ ನೀರು ರಸ್ತೆಯಲ್ಲಿ ತುಂಬಿಕೊಂಡು ತೋಟಗಳಲ್ಲಿ ತುಂಬಿಕೊಂಡಿತ್ತು. ಈ ಬಗ್ಗೆ ಸಾರ್ವಜನಿಕರ ದೂರಿನ ಮೇರೆಗೆ ಪುತ್ತಿಗೆ ಪಂಚಾಯತ್ ತಕ್ಷಣ ಎಚ್ಚೆತ್ತುಕೊಂಡಿದೆ.ಪಂಚಾಯತ್ ಅಭಿವೃದ್ಧಿ