Home ಕರಾವಳಿ Archive by category ಮೂಡಬಿದರೆ (Page 50)

ಮೂಡುಬಿದಿರೆಯ ಪುರಸಭೆ- ಗ್ರಾ.ಪಂ ಸದಸ್ಯರಿಗೆ ಪ್ರಶಿಕ್ಷಣ ವರ್ಗ ಕಾರ್ಯಕ್ರಮ

ಮೂಡುಬಿದಿರೆ : ಭಾರತೀಯ ಜನತಾ ಪಾರ್ಟಿ ಮೂಲ್ಕಿ-ಮೂಡುಬಿದಿರೆ ಮಂಡಲದ ವತಿಯಿಂದ ಪುರಸಭೆ ಮತ್ತು ಗ್ರಾ.ಪಂಚಾಯತ್ ಸದಸ್ಯರಿಗೆ ಪ್ರಶಿಕ್ಷಣ ವರ್ಗ ಸ್ಕೌಟ್ ಗೈಡ್ ಕನ್ನಡ ಭವನದಲ್ಲಿ  ನಡೆಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸಂಘಟನೆಯ ಆಧಾರ ಕಾರ್ಯಕರ್ತರು. ಕಾರ್ಯಕರ್ತರನ್ನು ಸಜ್ಜುಗೊಳಿಸಬೇಕು ಮತ್ತು ವಿಚಾರವಂತರಾಗಿ

ಎಸ್‌ಕೆಎಸ್‌ಎಸ್‌ಎಫ್ ಕೈಕಂಬ ವಲಯ ವಿಖಾಯದಿಂದ ರಕ್ತದಾನ ಶಿಬಿರ ಹಾಗೂ ಕೊರೊನಾ ವಾರಿಯರ್ಸ್‌ಗೆ ಸನ್ಮಾನ

ಗುರುಪುರ: ಎಸ್‌ಕೆಎಸ್‌ಎಸ್‌ಎಫ್ ಕೈಕಂಬ ವಲಯ ವಿಖಾಯ ವತಿಯಿಂದ ಬ್ರಹತ್ ರಕ್ತದಾನ ಶಿಬಿರ ಹಾಗೂ ಕೊರೊನಾ ವಾರಿಯರ್ಸ್ ಗೆ ಸನ್ಮಾನ ಕಾರ್ಯಕ್ರಮ ಆದಿತ್ಯವಾರ ಗುರುಪುರ ಕೈಕಂಬ ಪ್ರೀಮಿಯರ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ವಲಯ ಅಧ್ಯಕ್ಷರಾದ ಬಹು: ಜಮಲುದ್ದೀನ್ ದಾರಿಮಿ ಅಧ್ಯಕ್ಷತೆ ವಹಿಸಿದ್ದರು. ಬಹು:ಝುಬೈರ್ ಫೈಝಿ ಅಂಕೋಲಾ ದುಆ: ನೆರವರಿಸಿದರು. ಸಮಸ್ತ ಕೇರಳ ಜಮಿಯತುಲ್ ಉಲೆಮಾ ಕೇಂದ್ರ ಮುಶಾವರ ಸದಸ್ಯರಾದ ಬಾಂಬ್ರಣ ಉಸ್ತಾದ್ ರವರು

ಕೌಟುಂಬಿಕ ಕಲಹ : ದರೆಗುಡ್ಡೆಯಲ್ಲಿ ಪತ್ನಿಯನ್ನು ಕೊಂದ ಪತಿ

ಮೂಡುಬಿದಿರೆ ತಾಲೂಕಿನ ದರೆಗುಡ್ಡೆ ಗ್ರಾ.ಪಂ ವ್ಯಾಪ್ತಿಯ ಮಠ ಎಂಬಲ್ಲಿ ಪತಿ ಪತ್ನಿಯನ್ನು ಕೊಂದ ಘಟನೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಸುನೀತಾ(30 ) ಸಾವನ್ನಪ್ಪಿದಾಕೆ. ಪತಿ ಮೂಡುಬಿದಿರೆಯ ದಿನ್ ರಾಜ್ ನನ್ನು ಇಂದು ಮುಂಜಾನೆ ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ನಿನ್ನೆ ಸಂಜೆ ಗಂಡ- ಹೆಂಡತಿಯ ಮಧ್ಯೆ ಜಗಳ ನಡೆದಿದ್ದು ಈ ಸಂದರ್ಭ ದಿನ್ ರಾಜ್ ಹೆಂಡತಿಯ ತಲೆಗೆ ಹೊಡೆದಿದ್ದಾನೆ. ಆಗ ರಕ್ತ ಸೋರುತ್ತಿರುವುದನ್ನು ಕಂಡ ದಿನ್ ರಾಜ್ ಸುನೀತಾ ಅವರ ಸಹೋದರ

ಕಬಕ ಪ್ರಕರಣ: ಮೂಲ್ಕಿ-ಮೂಡುಬಿದಿರೆ ಬಿಜೆಪಿ ಖಂಡನೆ

ಮೂಡುಬಿದಿರೆ: ಪುತ್ತೂರಿನ ಕಬಕದಲ್ಲಿ ನಡೆದ ಪ್ರಕರಣವನ್ನು ಮೂಲ್ಕಿ ಮೂಡುಬಿದಿರೆ ಮಂಡಲ ಬಿಜೆಪಿ ಖಂಡಿಸಿದೆ. ಮಂಡಲ ಅಧ್ಯಕ್ಷ ಸುನೀಲ್ ಆಳ್ವ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಾವರ್ಕರ್ ಬಗ್ಗೆ ವಿವಾದ ಎಬ್ಬಿಸಿ ಸ್ವಾತಂತ್ರ್ಯ ರಥಕ್ಕೆ ಅಡ್ಡಿಪಡಿಸಿದ ಎಸ್‌ಡಿಪಿಐ ಮತ್ತು ಪಿಎಫ್‌ಐ ಸಂಘಟನೆಗ ಸಂಘಟನೆಗಳ ನಿಷೇಧಕ್ಕಾಗಿ ಮತ್ತು ಕಬಕ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಲು ಗೃಹ ಸಚಿವರನ್ನು ಒತ್ತಾಯಿಸುತ್ತೇನೆ. ಟಿಪ್ಪು ಸುಲ್ತಾನ್ ನೈಜ್ಯ ಸ್ವಾತಂತ್ರ್ಯ

ಮೂಡುಬಿದರೆಯಲ್ಲಿ 75ನೇ ಸ್ವಾತಂತ್ರೋತ್ಸವ ಆಚರಣೆ

ಮೂಡುಬಿದಿರೆಯ ಪುರಸಭಾ ಕಾರ್ಯಾಲಯದ ಆವರಣದಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಧ್ವಜವನ್ನುಅರಳಿಸುವ ಮೂಲಕ 75ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ನಂತರ ಮಾತನಾಡಿದ ಕೋಟ್ಯಾನ್ ಅವರು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಪುರಸಭಾಧ್ಯಕ್ಷ ಪ್ರಸಾದ್ ಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಸುಜಾತ ಶಶಿಕಿರಣ್ ಮತ್ತು ಸದಸ್ಯರು, ಸ್ಥಾಯಿ ಸಮಿತಿ ಅಧ್ಯಕ್ಷ ನಾಗರಾಜ ಪೂಜಾರಿ, ಮೂಡಾ ಅಧ್ಯಕ್ಷ ಮೇಘನಾಥ ಶೆಟ್ಟಿ, ಪುರಸಭಾ ಮುಖ್ಯಾಧಿಕಾರಿ

ಮೂಡುಬಿದರೆಯಲ್ಲಿ ತಾಲೂಕು ಕಚೇರಿಗೆ ಶಾಸಕ ಉಮಾನಾಥ್ ಕೋಟ್ಯಾನ್ ದಿಢೀರ್ ಭೇಟಿ

ಮೂಡುಬಿದಿರೆಯ ತಾಲೂಕು ಕಚೇರಿಗೆ ಶಾಸಕ ಉಮಾನಾಥ್ ಕೋಟ್ಯಾನ್ ಅವರು ದಿಢೀರ್ ಭೇಟಿ ನೀಡಿದರು. ಭೂಮಿ ದಾಖಲೆಗಳ ವಿಳಂಬ ನೀತಿಯನ್ನು ಪ್ರಶ್ನಿಸಿದ ಶಾಸಕರು, ನಿರ್ಲಕ್ಷ್ಯ ತೋರುವಂತಹ ಸಿಬ್ಬಂದಿಯನ್ನು ಕೂಡಲೇ ಆ ಸ್ಥಾನದಿಂದ ಬದಲಾಯಿಸುವಂತೆ ಖಡಕ್ ಆಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜನರು ಹಾಗೂ ಗ್ರಾಮ ಪಂಚಾಯತಿ ಸದಸ್ಯರ ದೂರಿನ ಮೇರೆಗೆ ತಾಲೂಕು ಕಚೇರಿಗೆ ಶಾಸಕರು ದಿಢೀರ್ ಭೇಟಿ ಕೊಟ್ಟು ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡ ಘಟನೆ ನಡೆದಿದೆ.

ಎಸ್‌ ಎಸ್‌ ಎಲ್‌ ಸಿ ಫಲಿತಾಂಶ: ಆಳ್ವಾಸ್ ಪ್ರೌಢಶಾಲೆಗೆ ಶೇ.100 ಫಲಿತಾಂಶ

ಮೂಡುಬಿದಿರೆ : ಪ್ರಸಕ್ತ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಆಳ್ವಾಸ್ ಪ್ರೌಢಶಾಲೆಯು ಶೇ.100 ಫಲಿತಾಂಶ ದಾಖಲಿಸಿದೆ. ವಿದ್ಯಾರ್ಥಿ ಗಣೇಶ್ ಹನುಮಂತಪ್ಪ 625 ಅಂಕಗಳನ್ನು ಪಡೆದು ಸಾಧನೆ ಮಾಡಿದ್ದಾನೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಆಳ್ವಾಸ್ ಪ್ರೌಢಶಾಲೆಯಿಂದ 499 ಮಂದಿ ವಿದ್ಯಾರ್ಥಿಗಳ ಪರೀಕ್ಷೆ ಬರೆದಿದ್ದು, ಎಲ್ಲರೂ ಉತ್ತೀರ್ಣರಾಗಿದ್ದಾರೆ. 13 ಮಂದಿ ವಿದ್ಯಾರ್ಥಿಗಳು 620ಕ್ಕಿಂತ

ಮೂಡುಬಿದಿರೆ: ರಂಗಸ್ಥಳದಲ್ಲಿ ಕುಸಿದುಬಿದ್ದ ಕಲಾವಿದ

ಮೂಡುಬಿದಿರೆಯ ಅಲಂಗಾರಿನಲ್ಲಿ ಸೋಮವಾರ ರಾತ್ರಿ ನಡೆದ ಯಕ್ಷಗಾನದ ವೇಳೆ ಕಲಾವಿದರೊಬ್ಬರು ಕುಸಿದು ಬಿದ್ದಿದ್ದು, ಕೆಲವು ನಿಮಿಷಗಳ ಬಳಿಕ ಚೇತರಿಸಿಕೊಂಡು ಬಳಿಕ ರಂಗಸ್ಥಳದಲ್ಲಿ ಕಾಣಿಸಿಕೊಂಡಿದ್ದಾರೆ. ಅಲಂಗಾರು ಶ್ರೀಮಹಾಲೀಂಗೇಶ್ವರ ದೇವಸ್ಥಾನದಲ್ಲಿ ಸೋಮವಾರ ರಾತ್ರಿ ಕರ್ಣಪರ್ವ ಪ್ರಸಂಗದಲ್ಲಿ ಖ್ಯಾತ ಕಲಾವಿದ ಮೋಹನ ಅಮ್ಮುಂಜೆ ಅವರು ಪಾತ್ರಧಾರಿಯಾಗಿದ್ದರು. ಈ ಸಂದರ್ಭ ಅತೀವ ಬಳಲಿಕೆಯಿಂದ ಅವರು ರಂಗಸ್ಥಳದಲ್ಲಿ ಕುಸಿದು ಬಿದ್ದಿದ್ದು, 15 ನಿಮಿಷಗಳ ಕಾಲ ಯಕ್ಷಗಾನವನ್ನು

ಆಳ್ವಾಸ್ ವಿದ್ಯಾರ್ಥಿ ಗಣೇಶ್ ಎಸ್‌ ಎಸ್‌ ಎಲ್‌ ಸಿಯಲ್ಲಿ ಟಾಪರ್

ಮೂಡುಬಿದಿರೆ: ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿ ಗಣೇಶ್ ಹನುಮಂತಪ್ಪ ವೀರಪುರ್ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625 ಅಂಕ ಪಡೆದು ಸಾಧನೆ ಮಾಡಿದ್ದಾನೆ. ಮೂಲತಃ ಬಾಗಲಕೋಟೆಯ ಇಳಕಲ್ಲ್‌ನ ಗಣೇಶ್, ಆಳ್ವಾಸ್‌ನ ಶೈಕ್ಷಣಿಕ ದತ್ತು ಸ್ವೀಕಾರ ಯೋಜನೆಯಡಿ ಕಳೆದ 5 ವರ್ಷದಿಂದ ಉಚಿತ ಶಿಕ್ಷಣ ಪಡೆಯುತ್ತಿದ್ದಾನೆ. ಈತ ಹನುಮಂತಪ್ಪ-ಯಶೋಧ ದಂಪತಿಯ ಪುತ್ರ. 625  ಅಂಕದ ನಿರೀಕ್ಷೆ ಇರಲಿಲ್ಲ. ಮುಂದೆ ಪಿಯುಸಿಯಲ್ಲಿ ವಿಜ್ಞಾನ ವಿಷಯ ಆಯ್ಕೆ ಮಾಡಿಕೊಳ್ಳುತ್ತೇನೆ.

ನಿವೃತ್ತ ವೀರಯೋಧ ಲಾರೆನ್ಸ್ ಡಿಸೋಜ ನಿಧನ: ನಿವೃತ್ತ ಸೈನಿಕರ ಸಂಘದಿಂದ ಅಂತಿಮ ಗೌರವ

ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ ವೀರಯೋಧ (ನಿವೃತ್ತ) ಲಾರೆನ್ಸ್ ಡಿಸೋಜ ಪಣಪಿಲ ಇವರು ನಿಧನರಾಗಿದ್ದು ನಿವೃತ್ತ ಸೈನಿಕರ ಸಂಘ ಮೂಡುಬಿದಿರೆ ಇವರಿಂದ ಅಂತಿಮ ಗೌರವ ಸಲ್ಲಿಸಲಾಯಿತು. ದೇಶದ ತ್ರಿವರ್ಣ ಧ್ವಜವನ್ನು ಮೃತದೇಹದ ಮೇಲೆ ಹೊದಿಸಿ ಸರ್ಕಾರಿ ಸಮಾನ ಗೌರವ ಅರ್ಪಿಸಲಾಯಿತು. ಮೃತ ಯೋಧ ಲಾರೆನ್ಸ್ ಡಿಸೋಜರವರು ಭಾರತೀಯ ಭೂಸೇನೆಯಲ್ಲಿ ಸುಮಾರು ೨೭ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಜಮ್ಮು ಕಾಶ್ಮೀರ, ಅಲಹಾಬಾದ್ ಸೇರಿದಂತೆ ವಿವಿದೆಡೆ ಸೇವೆ ಸಲ್ಲಿಸಿದ್ದರು. ೯೮