ಮೂಡುಬಿದಿರೆ – ತನ್ನ ಶಿಷ್ಯ ಮೂಡುಬಿದಿರೆ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಪರವಾಗಿ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಅವರು ಗುರುವಾರ ಪುರಸಭಾ ವ್ಯಾಪ್ತಿಯ ವಾರ್ಡ್ ನಂಬ್ರ 15ರ ಕೊಡಂಗಲ್ಲು ಪರಿಸರದ ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದರು. ಚುನಾವಣೆ ಪ್ರಣಾಳಿಕೆಯ 300 ಗ್ಯಾರಂಟಿ ಕಾರ್ಡ್ ಹಸ್ತಾಂತರಿಸಿದ ಅಭಯಚಂದ್ರ ಅವರು ಮಿಥುನ್
ಟಿಕೆಟ್ ಘೋಷಣೆಗೆ ಕ್ಷಣ ಗಣನೆ ನಡೆಯುತ್ತಿರುವ ಹೊತ್ತಲ್ಲಿ ಮೂಲ್ಕಿ ಮೂಡಬಿದ್ರೆ ಶಾಸಕ ಉಮಾನಾಥ್ ಕೋಟ್ಯಾನ್ ಅವರು ತನ್ನ ವಿರುದ್ಧ ಯಾವುದೇ ಮಾನಹಾನಿಕಾರಕ ಸುದ್ದಿ ,ಪೊಟೋ , ವಿಡಿಯೊ ಪ್ರಕಟ ಮಾಡದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ.ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ರಾಜ್ಯದ 40 ಕ್ಕೂ ಹೆಚ್ಚು ಮಾಧ್ಯಮಗಳಲ್ಲಿ ಯಾವುದೇ ಆಕ್ಷೇಪಕಾರಿ ಸುದ್ದಿ ಪ್ರಕಟಿಸಸಂತೆ ಉಮನಾಥ ಕೋಟ್ಯಾನ್ ಅವರು ಮಂಗಳೂರು ಜೆ.ಎಂ.ಎಫ್.ಸಿ ನ್ಯಾಯಾಲಯದಿಂದ ತಡೆಯಾಜ್ಞೆ
ಮೂಡುಬಿದಿರೆ: “ಜಯ-ವಿಜಯ” ಜೋಡುಕರೆ ಕಂಬಳ ಸಮಿತಿ ಪಣಪಿಲ ಇದರ ವತಿಯಿಂದ ನಡೆಯದ ಹದಿಮೂರನೇ ವರುಷದ ಕಿರಿಯ ವಿಭಾಗದ ಹೊನಲು ಬೆಳಕಿನ ಜಯ-ವಿಜಯ ಜೋಡುಕರೆ ಕಂಬಳವು ಭಾನುವಾರ ಸಂಜೆ ಸಂಪನ್ನಗೊಂಡಿತು. ಫಲಿತಾಂಶ : ಹಗ್ಗ ಕಿರಿಯ ವಿಭಾಗದಲ್ಲಿ 20ಜತೆ ಕೋಣಗಳು ಭಾಗವಹಿಸಿದ್ದು ಕಲ್ಯಾ ಹಾಳೆಕಟ್ಟೆ ನಿತೀಶ್ ಭವಿಷ್ಯ ದೇವಾಡಿಗ ಅವರ ಕೋಣಗಳು ಪ್ರಥಮ ( ಓಡಿಸಿದವರು: ಕಾವೂರು ದೋಟ ಸುದರ್ಶನ್), ಕೆಲ್ಲಪುತ್ತಿಗೆ ಪ್ರವೀಣ್ ಕುಮಾರ್ ದ್ವಿತೀಯ ( ಕೋಣ ಓಡಿಸಿದವರು:
ಪುರಸಭಾ ವ್ಯಾಪ್ತಿಯ ಜ್ಯೋತಿನಗರದಲ್ಲಿ ಶನಿವಾರ ರಾತ್ರಿ ಕಾರೊಂದು ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಕಾಶಿಪಟ್ಣದ ಉಮೇಶ್ ( 49) ಮೃತಪಟ್ಟ ವ್ಯಕ್ತಿ. ಉಮೇಶ್ ಅವರು ಮೂಡುಬಿದಿರೆ ಕಡೆಯಿಂದ ಮಹಾವೀರ ಕಾಲೇಜು ರಸ್ತೆಗೆ ಹೋಗುತ್ತಿದ್ದು ಜ್ಯೋತಿನಗರದಲ್ಲಿ ಕ್ರಾಸ್ ಆಗಿ ಲಾಡಿಯಲ್ಲಿರುವ ಪತ್ನಿ ಆಗಿ ಹೋಗುವ ಸಂದರ್ಭ ಬಂಟ್ವಾಳದಿಂದ ಮೂಡುಬಿದಿರೆ ಕಡೆಗೆ ಬರುತ್ತಿದ್ದ ಕಾರು ಬೈಕ್ ಗೆ ಢಿಕ್ಕಿ ಹೊಡೆದು ರಸ್ತೆಯ ಪಕ್ಕಕ್ಕೆ
ಮೂಡುಬಿದಿರೆ: “ಜಯ-ವಿಜಯ” ಜೋಡುಕರೆ ಕಂಬಳ ಸಮಿತಿ ಪಣಪಿಲ ಇದರ ವತಿಯಿಂದ ನಡೆಯುವ ಹದಿಮೂರನೇ ವರುಷದ ಕಿರಿಯ ವಿಭಾಗದ ಹೊನಲು ಬೆಳಕಿನ ಜಯ-ವಿಜಯ ಜೋಡುಕರೆ ಕಂಬಳವು ನಡೆಯಿತು. 2022-23 ನೇ ಸಾಲಿನ ಕೊನೆಯ ಕಂಬಳ ಇದಾಗಿದ್ದು, ಊರಿನ ದೈವಸ್ಥಾನ, ದೇವಸ್ಥಾನಗಳ ಪ್ರಸಾದ ಮತ್ತು ತೀರ್ಥವನ್ನು ಕರೆಗೆ ಹಾಕುವ ಮೂಲಕ ಪಣಪಿಲ ಅರಮನೆಯ ವಿಮಲ್ ಕುಮಾರ್ ಶೆಟ್ಟಿ ಕಂಬಳವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಪಣಪಿಲ ಕಂಬಳ ಸಮಿತಿಯ ಗೌರವಾಧ್ಯಕ್ಷ ಶಾಸಕ ಉಮಾನಾಥ
ಮೂಡುಬಿದಿರೆ: ಕರ್ನಾಟಕ ಸಾಂಸ್ಕೃತಿಕ ಪರಿಷತ್ತು ಸೃಷ್ಟಿ ಸಂಸ್ಥೆ (ರಿ) ಬೆಂಗಳೂರು ಇವರು ಮೂಡುಬಿದಿರೆಯ ಶಿಕ್ಷಕ ಪ್ರಸನ್ನ ಶೆಣೈ ಅವರ ಸಮಾಜ ಸೇವೆಯನ್ನು ಗುರುತಿಸಿ ರಾಜ್ಯಮಟ್ಟದ ಕರ್ನಾಟಕ ಕಾಯಕ ಬಸವ ಶ್ರೀ ಪ್ರಶಸ್ತಿ- 2023 ಗೆ ಆಯ್ಕೆ ಮಾಡಿದ್ದಾರೆ.21 ಸಲ ರಕ್ತದಾನ. 2 ರಕ್ತದಾನ ಶಿಬಿರ 2 ಸಲ ವಿದ್ಯಾರ್ಥಿಗಳಿಗೆ ಉಚಿತ ಬೇಸಿಗೆ ಶಿಬಿರ 150 ಕ್ಕಿಂತ ಅಧಿಕ ಗಿಡ ನೆಟ್ಟು ಬೆಳೆಸಿದ್ದು ಮೂಡುಬಿದರೆ ಸಹಿಪ್ರ ಶಾಲೆ ಜ್ಯೋತಿನಗರದಲ್ಲಿ ಮಿಯವಾಕಿ ಮಾದರಿಯಲ್ಲಿ ನಗರ
ಮೂಡುಬಿದಿರೆ: ಅಖಿಲ ಭಾರತ ತುಳು ಒಕ್ಕೂಟ(ರಿ.) ಮತ್ತು ತುಳುಕೂಟ ಬೆದ್ರ ಸಹಯೋಗದಲ್ಲಿ ಮೂಡುಬಿದಿರೆ ಸ್ಕೌಟ್ಸ್ ಮತ್ತು ಗೈಡ್ಸ್ ಕನ್ನಡ ಭವನದಲ್ಲಿ ತುಳು ಮಹಾಕೂಟ-2023ಕ್ಕೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಶನಿವಾರ ಚಾಲನೆ ನೀಡಿದರು. ನಂತರ ಮಾತನಾಡಿದ ಆಳ್ವರು, ಬೇರೆ ಬೇರೆ ಸಮುದಾಯದವರು ತುಳು ಭಾಷೆಯನ್ನು ಅಪ್ಪಿ ಒಪ್ಪಿಕೊಂಡಿದ್ದಾರೆ. ಇತರ ಸಮುದಾಯಗಳು ಇರುವಲ್ಲಿ ಅಲ್ಲಲ್ಲಿ ತುಳು ಸಂಘಟನೆಗಳನ್ನು ಮಾಡಬೇಕಾಗಿದೆ ಆ ಮೂಲಕ ಮುಂದಿನ
ಮೂಡುಬಿದಿರೆ: “ಜಯ-ವಿಜಯ” ಜೋಡುಕರೆ ಕಂಬಳ ಸಮಿತಿ ಪಣಪಿಲ ಇದರ ವತಿಯಿಂದ ಹದಿಮೂರನೇ ವರುಷದ ಹೊನಲು ಬೆಳಕಿನ ಜಯ-ವಿಜಯ ಜೋಡುಕರೆ ಕಂಬಳವು ಏಪ್ರಿಲ್ 8ರಂದು ಸಂಜೆ ನಡೆಯಲಿದೆ ಎಂದು ಕಂಬಳ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ. ಅಶ್ವತ್ಥ್ ಪಣಪಿಲ ಗುರುವಾರ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. 4 ಎಕರೆ ಜಾಗದಲ್ಲಿ ಕಂಬಳ ನಡೆಯಲಿದ್ದು, ನೂತನವಾಗಿ 133.5 ಮೀ ಉದ್ದದ ಕರೆ ನಿರ್ಮಾಣಗೊಂಡಿದೆ. ಕೋಣಗಳನ್ನು ಕಟ್ಟಲು ತಂಪಾದ ಜಾಗ, ಉತ್ತಮ ನೀರಿನ ವ್ಯವಸ್ಥೆ,
ಮೂಡುಬಿದಿರೆ: ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಮಂಗಳೂರು ಉತ್ತರ ಉಪ ವಿಭಾಗದ ಸಹಾಯಕ ಪೊಲೀಸ್ಆಯುಕ್ತ ಮನೋಜ್ ಕುಮಾರ್ ಹಾಗೂ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ನಿರಂಜನ್ ಕುಮಾರ್ ನೇತೃತ್ವದಲ್ಲಿ ಆಲಂಗಾರು ಬಡಗು ಮಹಾಲೀಂಗೇಶ್ವರ ದೇವಸ್ಥಾನದ ಬಳಿಯಿಂದ ಮೂಡುಬಿದಿರೆ ಕನ್ನಡ ಭವನದವರೆಗೆ ಗುರುವಾರ ಸಂಜೆ ಪೊಲೀಸ ರಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಕೇಂದ್ರೀಯ ಮೀಸಲು ಪೊಲೀಸ್ ಪಡೆಯ 80 ಜನ ಅಧಿಕಾರಿಗಳು ಮತ್ತು ಮೂಡುಬಿದಿರೆ ಪೊಲೀಸ್ ಠಾಣೆಯ
ಮೂಡುಬಿದಿರೆ: ಹಿರಿಯ ದೈವಪಾತ್ರಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಲಾಡಿ ಅಣ್ಣು ಶೆಟ್ಟಿ (78ವ)ಅಲ್ಪಕಾಲದ ಅಸೌಖ್ಯದಿಂದ ಇಂದು ಮುಂಜಾನೆ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಲಾಡಿ ಹಜಂಕಾಲಬೆಟ್ಟು, ಮಾರ್ನಾಡು, ತೋಡಾರು ಸಹಿತ ಜಿಲ್ಲೆಯ ಹಲವಾರು ದೈವಸ್ಥಾನಗಳಲ್ಲಿ ದೈವಪಾತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದ ಅವರು ಪತ್ನಿ, ಇಬ್ಬರು ಹೆಣ್ಣು ಮಕ್ಕಳು ಮತ್ತು ಓರ್ವ ಪುತ್ರನನ್ನು ಅಗಲಿದ್ದಾರೆ.ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವ ಕೆ.ಅಭಯಚಂದ್ರ ಜೈನ್,



























