Home ಕರಾವಳಿ Archive by category ಮೂಡಬಿದರೆ (Page 52)

ನಾಗಶ್ರೀ ನಾಗರಕಟ್ಟೆ ಅವರ `ಕೃಷ್ಣ ಸಿಗಲಿಲ್ಲ’ ಕವನ ಸಂಕಲನ ಬಿಡುಗಡೆ, ಗುರುಗಳಿಗೆ ಗೌರವಾರ್ಪಣೆ

ಮೂಡುಬಿದಿರೆ: ಕವಿ, ಶಿಕ್ಷಕಿ ನಾಗಶ್ರೀ ನಾಗರಕಟ್ಟೆ ಅವರ ಚೊಚ್ಚಲ ಕವನ ಸಂಕಲನ `ಕೃಷ್ಣ ಸಿಗಲಿಲ್ಲ‘ ಕೃತಿಯನ್ನು ರಾಜ್ಯ ಕ.ಸಾ.ಪ. ಮಾಜಿ ಅಧ್ಯಕ್ಷರಾದ ಹರಿಕೃಷ್ಣ ಪುನರೂರು ಅವರು ಮೂಡುಬಿದಿರೆಯ ಎಂಸಿಎಸ್ ಸೊಸೈಟಿಯ ಕಲ್ಪವೃಕ್ಷ ಸಭಾಂಗಣದಲ್ಲಿ ಭಾನುವಾರ  ಬಿಡುಗಡೆಗೊಳಿಸಿದರು. ಕೃತಿ ಪ್ರಕಟಿಸಿರುವ ಅಜೆಕಾರಿನ ಶ್ರೀ ಮಾಧ್ಯಮ ಮತ್ತು ಪ್ರಕಾಶನ ಸಂಸ್ಥೆಯ

ಮೂಡುಬಿದಿರೆ: ಏ.17ರಂದು ಮಿಥುನ್ ರೈ ನಾಮಪತ್ರ ಸಲ್ಲಿಕೆ

ಮೂಡುಬಿದಿರೆ:ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಮಿಥುನ್ ರೈ ಸೋಮವಾರ ಬೆಳಿಗ್ಗೆ 10 ಗಂಟೆಗೆ ಆಡಳಿತ ಸೌಧದಲ್ಲಿರುವ ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲ್ಲಿದ್ದಾರೆ. ಇದಕ್ಕು ಮೊದಲು ಅವರು ಸ್ವರಾಜ್ಯ ಮೈದಾನದಿಂದ ತಾಲ್ಲೂಕು ಕಚೇರಿವರೆಗೆ ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ಆಗಮಿಸಲಿದ್ದಾರೆ. ನಾಮಪತ್ರ ಸಲ್ಲಿಕೆ ಬಳಿಕ ಸ್ವರಾಜ್ಯ ಮೈದಾನದಲ್ಲಿ ಪಕ್ಷದ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ. ಆಮ್

ಜೈನ ಮಠದ ಭಟ್ಟಾರಕರಿಂದ ಆಶೀರ್ವಾದ ಪಡೆದ ಉಮಾನಾಥ ಕೋಟ್ಯಾನ್

ಮೂಡುಬಿದಿರೆ : ಮುಲ್ಕಿ ಮೂಡುಬಿದಿರೆ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮಾನಾಥ ಎ.ಕೋಟ್ಯಾನ್ ಅವರು ಮೂಡುಬಿದಿರೆ ಜೈನ ಮಠದ ಸ್ವಸ್ತಿಶ್ರೀ ಚಾರುಕೀರ್ತಿ ಆಶೀರ್ವಾದ ಪಡೆದರು. ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮಿಯವರನ್ನು ಗುರುವಾರ ಭೇಟಿಯಾಗಿ ಫಲ ಮಂತ್ರಾಕ್ಷತೆ ಸ್ವೀಕರಿಸಿದರು.ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಮೇಘನಾಥ ಶೆಟ್ಟಿ, ಎಂಸಿಎಸ್ ಬ್ಯಾಂಕಿನ ಅಧ್ಯಕ್ಷ ಎಂ.ಬಾಹುಬಲಿ ಪ್ರಸಾದ್ ಉಪಸ್ಥಿತರಿದ್ದರು.

ಮೂಡುಬಿದಿರೆ : ಶಿಷ್ಯನ ಪರವಾಗಿ ಮಾಜಿ ಸಚಿವ ಜೈನ್ ಮತಯಾಚನೆ

ಮೂಡುಬಿದಿರೆ – ತನ್ನ ಶಿಷ್ಯ ಮೂಡುಬಿದಿರೆ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಪರವಾಗಿ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಅವರು ಗುರುವಾರ ಪುರಸಭಾ ವ್ಯಾಪ್ತಿಯ ವಾರ್ಡ್ ನಂಬ್ರ 15ರ ಕೊಡಂಗಲ್ಲು ಪರಿಸರದ ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದರು. ಚುನಾವಣೆ ಪ್ರಣಾಳಿಕೆಯ 300 ಗ್ಯಾರಂಟಿ ಕಾರ್ಡ್ ಹಸ್ತಾಂತರಿಸಿದ ಅಭಯಚಂದ್ರ ಅವರು ಮಿಥುನ್ ರೈಯನ್ನು ಮರೆಯದಿರಿ ಎಂದರು. ವಾರ್ಡ್ ಸದಸ್ಯೆ ರೂಪಾ ಸಂತೋಷ್ ಶೆಟ್ಟಿ, ಪುರಸಭಾ ಸದಸ್ಯರಾದ ಸುರೇಶ್

ತಡೆಯಾಜ್ಞೆ ತಂದ ಉಮಾನಾಥ ಕೋಟ್ಯಾನ್

ಟಿಕೆಟ್ ಘೋಷಣೆಗೆ ಕ್ಷಣ ಗಣನೆ ನಡೆಯುತ್ತಿರುವ ಹೊತ್ತಲ್ಲಿ ಮೂಲ್ಕಿ ಮೂಡಬಿದ್ರೆ ಶಾಸಕ ಉಮಾನಾಥ್ ಕೋಟ್ಯಾನ್ ಅವರು ತನ್ನ ವಿರುದ್ಧ ಯಾವುದೇ ಮಾನಹಾನಿಕಾರಕ ಸುದ್ದಿ ,ಪೊಟೋ , ವಿಡಿಯೊ ಪ್ರಕಟ ಮಾಡದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ.ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ರಾಜ್ಯದ 40 ಕ್ಕೂ ಹೆಚ್ಚು ಮಾಧ್ಯಮಗಳಲ್ಲಿ ಯಾವುದೇ ಆಕ್ಷೇಪಕಾರಿ ಸುದ್ದಿ ಪ್ರಕಟಿಸಸಂತೆ ಉಮನಾಥ ಕೋಟ್ಯಾನ್ ಅವರು ಮಂಗಳೂರು ಜೆ.ಎಂ.ಎಫ್.ಸಿ ನ್ಯಾಯಾಲಯದಿಂದ ತಡೆಯಾಜ್ಞೆ

ಪಣಪಿಲ ಜಯ -ವಿಜಯ ಜೋಡುಕರೆ ಕಂಬಳ ಸಂಪನ್ನ

ಮೂಡುಬಿದಿರೆ: “ಜಯ-ವಿಜಯ” ಜೋಡುಕರೆ ಕಂಬಳ ಸಮಿತಿ ಪಣಪಿಲ ಇದರ ವತಿಯಿಂದ ನಡೆಯದ ಹದಿಮೂರನೇ ವರುಷದ ಕಿರಿಯ ವಿಭಾಗದ ಹೊನಲು ಬೆಳಕಿನ ಜಯ-ವಿಜಯ ಜೋಡುಕರೆ ಕಂಬಳವು ಭಾನುವಾರ ಸಂಜೆ ಸಂಪನ್ನಗೊಂಡಿತು. ಫಲಿತಾಂಶ : ಹಗ್ಗ ಕಿರಿಯ ವಿಭಾಗದಲ್ಲಿ 20ಜತೆ ಕೋಣಗಳು ಭಾಗವಹಿಸಿದ್ದು ಕಲ್ಯಾ ಹಾಳೆಕಟ್ಟೆ ನಿತೀಶ್ ಭವಿಷ್ಯ ದೇವಾಡಿಗ ಅವರ ಕೋಣಗಳು ಪ್ರಥಮ ( ಓಡಿಸಿದವರು: ಕಾವೂರು ದೋಟ ಸುದರ್ಶನ್), ಕೆಲ್ಲಪುತ್ತಿಗೆ ಪ್ರವೀಣ್ ಕುಮಾರ್ ದ್ವಿತೀಯ ( ಕೋಣ ಓಡಿಸಿದವರು:

ಮೂಡುಬಿದಿರೆ: ಬೈಕ್ ಮತ್ತು ಕಾರು ನಡುವೆ ಅಪಘಾತ : ದ್ವಿಚಕ್ರ ವಾಹನ ಸವಾರ ಸಾವು

ಪುರಸಭಾ ವ್ಯಾಪ್ತಿಯ ಜ್ಯೋತಿನಗರದಲ್ಲಿ ಶನಿವಾರ ರಾತ್ರಿ ಕಾರೊಂದು ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಕಾಶಿಪಟ್ಣದ ಉಮೇಶ್ ( 49) ಮೃತಪಟ್ಟ ವ್ಯಕ್ತಿ. ಉಮೇಶ್ ಅವರು ಮೂಡುಬಿದಿರೆ ಕಡೆಯಿಂದ ಮಹಾವೀರ ಕಾಲೇಜು ರಸ್ತೆಗೆ ಹೋಗುತ್ತಿದ್ದು ಜ್ಯೋತಿನಗರದಲ್ಲಿ ಕ್ರಾಸ್ ಆಗಿ ಲಾಡಿಯಲ್ಲಿರುವ ಪತ್ನಿ ಆಗಿ ಹೋಗುವ ಸಂದರ್ಭ ಬಂಟ್ವಾಳದಿಂದ ಮೂಡುಬಿದಿರೆ ಕಡೆಗೆ ಬರುತ್ತಿದ್ದ ಕಾರು ಬೈಕ್ ಗೆ ಢಿಕ್ಕಿ ಹೊಡೆದು ರಸ್ತೆಯ ಪಕ್ಕಕ್ಕೆ

13ನೇ ವರ್ಷದ ಪಣಪಿಲದಲ್ಲಿ ಜಯ-ವಿಜಯ ಜೋಡುಕರೆ ಕಂಬಳ

ಮೂಡುಬಿದಿರೆ: “ಜಯ-ವಿಜಯ” ಜೋಡುಕರೆ ಕಂಬಳ ಸಮಿತಿ ಪಣಪಿಲ ಇದರ ವತಿಯಿಂದ ನಡೆಯುವ ಹದಿಮೂರನೇ ವರುಷದ ಕಿರಿಯ ವಿಭಾಗದ ಹೊನಲು ಬೆಳಕಿನ ಜಯ-ವಿಜಯ ಜೋಡುಕರೆ ಕಂಬಳವು ನಡೆಯಿತು. 2022-23 ನೇ ಸಾಲಿನ ಕೊನೆಯ ಕಂಬಳ ಇದಾಗಿದ್ದು, ಊರಿನ ದೈವಸ್ಥಾನ, ದೇವಸ್ಥಾನಗಳ ಪ್ರಸಾದ ಮತ್ತು ತೀರ್ಥವನ್ನು ಕರೆಗೆ ಹಾಕುವ ಮೂಲಕ ಪಣಪಿಲ ಅರಮನೆಯ ವಿಮಲ್ ಕುಮಾರ್ ಶೆಟ್ಟಿ ಕಂಬಳವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಪಣಪಿಲ ಕಂಬಳ ಸಮಿತಿಯ ಗೌರವಾಧ್ಯಕ್ಷ ಶಾಸಕ ಉಮಾನಾಥ

ಶಿಕ್ಷಕ ಪ್ರಸನ್ನ ಶೆಣೈಗೆ ಕಾಯಕ ಬಸವಶ್ರೀ ಪ್ರಶಸ್ತಿ

ಮೂಡುಬಿದಿರೆ: ಕರ್ನಾಟಕ ಸಾಂಸ್ಕೃತಿಕ ಪರಿಷತ್ತು ಸೃಷ್ಟಿ ಸಂಸ್ಥೆ (ರಿ) ಬೆಂಗಳೂರು ಇವರು ಮೂಡುಬಿದಿರೆಯ ಶಿಕ್ಷಕ ಪ್ರಸನ್ನ ಶೆಣೈ ಅವರ ಸಮಾಜ ಸೇವೆಯನ್ನು ಗುರುತಿಸಿ ರಾಜ್ಯಮಟ್ಟದ ಕರ್ನಾಟಕ ಕಾಯಕ ಬಸವ ಶ್ರೀ ಪ್ರಶಸ್ತಿ- 2023 ಗೆ ಆಯ್ಕೆ ಮಾಡಿದ್ದಾರೆ.21 ಸಲ ರಕ್ತದಾನ. 2 ರಕ್ತದಾನ ಶಿಬಿರ 2 ಸಲ ವಿದ್ಯಾರ್ಥಿಗಳಿಗೆ ಉಚಿತ ಬೇಸಿಗೆ ಶಿಬಿರ 150 ಕ್ಕಿಂತ ಅಧಿಕ ಗಿಡ ನೆಟ್ಟು ಬೆಳೆಸಿದ್ದು ಮೂಡುಬಿದರೆ ಸಹಿಪ್ರ ಶಾಲೆ ಜ್ಯೋತಿನಗರದಲ್ಲಿ ಮಿಯವಾಕಿ ಮಾದರಿಯಲ್ಲಿ ನಗರ

ಮೂಡುಬಿದರೆಯಲ್ಲಿ ತುಳು ಮಹಾಕೂಟ-2023ಕ್ಕೆ ಚಾಲನೆ

ಮೂಡುಬಿದಿರೆ: ಅಖಿಲ ಭಾರತ ತುಳು ಒಕ್ಕೂಟ(ರಿ.) ಮತ್ತು ತುಳುಕೂಟ ಬೆದ್ರ ಸಹಯೋಗದಲ್ಲಿ ಮೂಡುಬಿದಿರೆ ಸ್ಕೌಟ್ಸ್ ಮತ್ತು ಗೈಡ್ಸ್ ಕನ್ನಡ ಭವನದಲ್ಲಿ ತುಳು ಮಹಾಕೂಟ-2023ಕ್ಕೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಶನಿವಾರ ಚಾಲನೆ ನೀಡಿದರು. ನಂತರ ಮಾತನಾಡಿದ ಆಳ್ವರು, ಬೇರೆ ಬೇರೆ ಸಮುದಾಯದವರು ತುಳು ಭಾಷೆಯನ್ನು ಅಪ್ಪಿ ಒಪ್ಪಿಕೊಂಡಿದ್ದಾರೆ. ಇತರ ಸಮುದಾಯಗಳು ಇರುವಲ್ಲಿ ಅಲ್ಲಲ್ಲಿ ತುಳು ಸಂಘಟನೆಗಳನ್ನು ಮಾಡಬೇಕಾಗಿದೆ ಆ ಮೂಲಕ ಮುಂದಿನ