Home ಕರಾವಳಿ Archive by category ಮೂಡಬಿದರೆ (Page 55)

ಕಡಂದಲೆಯಲ್ಲಿ ವಿದ್ಯುತ್ ಕೇಂದ್ರ ಸ್ಥಾಪನೆ : ಸಾರ್ವಜನಿಕರಿಂದ ಅಹವಾಲು ಸ್ವೀಕಾರ

ಮೂಡುಬಿದಿರೆ : ಕಡಂದಲೆ ಗ್ರಾಮದ ಸರ್ವೆ ನಂಬ್ರ 308/ಪಿ1ರ 27 ಎಕ್ರೆ ಸರ್ಕಾರಿ ಭೂಮಿಯಲ್ಲಿ 400/220 ಕೆಪಿ ವಿದ್ಯುತ್ ಕೇಂದ್ರವನ್ನು ಸ್ಥಾಪಿಸಲುದ್ದೇಶಿಸಿದ್ದು ಈ ಸ್ಥಳದಲ್ಲಿರುವ 2229 ಮರಗಳನ್ನು ಕಡಿಯುವ ಹಿನ್ನಲೆಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಸಭೆಯು ಮೂಡುಬಿದಿರೆ ಅರಣ್ಯ ಇಲಾಖೆಯ ಸಭಾಭವನದಲ್ಲಿ ಶನಿವಾರ ನಡೆಯಿತು.. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ

ಮೂಡುಬಿದಿರೆಯ ಉದ್ಯಮಿ ಗಣೇಶ್ ಕಾಮತ್ ನಿಧನ

ಮೂಡುಬಿದಿರೆ : ಮೂಡುಬಿದಿರೆಯ ಜನರಿಗೆ ಚಿರಪರಿಚಿತರಾಗಿದ್ದ ಜಿ.ಕೆ. ಎಂಟರ್‌ಪ್ರೈಸಸ್ ಮಾಲಕ ಜಿ.ಕೆ. ಖ್ಯಾತಿಯ ಗಣೇಶ್ ಕಾಮತ್ ಅವರು ಶುಕ್ರವಾರ ಹೃದಯಾಘಾತದಿಂದ ನಿಧನ ಹೊಂದಿದರು. ವಿದ್ಯುತ್ ಅವಘಡದಿಂದ ತನ್ನೆರಡು ಕೈಗಳನ್ನು ಕಳೆದುಕೊಂಡಿದ್ದರೂ ಛಲಬಿಡದೆ ಜಿ. ಕೆ ಉದ್ಯಮವನ್ನು ಸ್ಥಾಪಿಸಿ ಯಶಸ್ವಿ ಉದ್ಯಮಿ ಎನಿಸಿಕೊಂಡು ಹಲವಾರು ಜನರಿಗೆ ಉದ್ಯೋಗದಾತರಾಗಿದ್ದ ಅವರು ಶುಕ್ರವಾರ ಬೆಳಗಿನ ವೇಳೆ ತನ್ನ ಉದ್ಯಮ ಮಳಿಗೆಗೆ ಬರುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತಗೊಂಡಿದ್ದು

ಚಾಲಕನ ನಿಯಂತ್ರಣ ತಪ್ಪಿ ಮರಳು ಲಾರಿ ಅಪಘಾತ

ಮೂಡುಬಿದಿರೆ: ಮಂಗಳೂರಿನಿಂದ ಮೂಡುಬಿದಿರೆ ಕಡೆಗೆ ಮರಳು ತುಂಬಿಸಿಕೊಂಡು ಬರುತ್ತಿದ್ದ ಲಾರಿಯೊಂದು ರಸ್ತೆಯಲ್ಲಿ ಪಲ್ಟಿ ಹೊಡೆದು ಮರಕ್ಕೆ ಢಿಕ್ಕಿಯಾದ ಘಟನೆ ಮೂಡುಬಿದಿರೆ ತಾಲೂಕಿನ ಗಾಂಧಿನಗರದ ಬಳಿ ನಡೆದಿದೆ. ಮರಳು ತುಂಬಿಸಿಕೊಂಡು ವೇಗದಿಂದ ಬರುತ್ತಿದ್ದ ಲಾರಿ ಗಾಂಧಿನಗರದ ಬಳಿ ಚಾಲಕ ನಿಯಂತ್ರಣ ತಪ್ಪಿ ಬದಿಯಲ್ಲಿದ್ದ ಮರಕ್ಕೆ ಢಿಕ್ಕಿ ಹೊಡೆದಿದ್ದು, ಈ ಸಂದರ್ಭ ಮರಳು ಲಾರಿಯಿಂದ ರಸ್ತೆಗೆ ಚೆಲ್ಲಿದೆ. ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಾಯದಿಂದ ಪಾರಾಗಿದ್ದಾರೆ.

ಕಾಂತಾವರದಲ್ಲಿ ಮುದ್ದಣ ಸಾಹಿತ್ಯೋತ್ಸವ – ಪ್ರಶಸ್ತಿ ಪ್ರದಾನ, ಕೃತಿ ಬಿಡುಗಡೆ

ಮೂಡುಬಿದಿರೆ : ಕಾಂತಾವರ ಕನ್ನಡ ಸಂಘದ ಆಶ್ರಯದಲ್ಲಿ ಮುದ್ದಣ ಸಾಹಿತ್ಯೋತ್ಸವ – ೪೩ನೇ ಮುದ್ದಣ ಕಾವ್ಯ ಪ್ರಶಸ್ತಿ ಪ್ರದಾನ ಹಾಗೂ ಕೃತಿ ಬಿಡುಗಡೆ ಕಾರ್ಯಕ್ರಮವು ಭಾನುವಾರ ಕೆ.ಬಿ. ಜಿನರಾಜ ಹೆಗ್ಡೆ ಸ್ಮಾರಕ ಕನ್ನಡಭವನದಲ್ಲಿ ನಡೆಯಿತು.ಧರ್ಮದರ್ಶಿ ಹರಿಕೃಷ್ಣ ಪುನರೂರು ಆಧ್ಯಕ್ಷತೆಯಲ್ಲಿ ನಡೆದ ಸಮಾರಂಭವನ್ನು ನಿವೃತ್ತ ಪ್ರಾಂಶುಪಾಲ, ಕಲಾವಿದ ಪ್ರೊ| ಎಂ.ಎಲ್. ಸಾಮಗ ಉದ್ಘಾಟಿಸಿ ಮಾತನಾಡಿ ನಾನೇ ಶ್ರೇಷ್ಠ ಎಂಬ ಭಾವನೆಯಿಂದಾಗಿ ಬೇರೆ ಬೇರೆ ಮಾರ್ಗಗಳನ್ನು

ಪುತ್ತಿಗೆ : ನಮ್ಮೂರ ಮಸೀದಿ ನೋಡಬನ್ನಿ ಕಾರ್ಯಕ್ರಮ

ಮೂಡುಬಿದಿರೆ: ಪುತ್ತಿಗೆಯ ನವೀಕೃತ ನೂರಾನಿ ಮಸೀದಿಗೆ ಸರ್ವಧರ್ಮೀಯರು ಸಂದರ್ಶಿಸುವ `ನಮ್ಮೂರ ಮಸೀದಿ ನೋಡಬನ್ನಿ’ ಕಾರ್ಯಕ್ರಮ ನಡೆಯಿತು. ಅನಾರೋಗ್ಯಪೀಡಿತರಿಗೆ ಸಹಾಯಧನ ವಿತರಿಸುವ ಮೂಲಕ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅಲಂಗಾರು ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಈಶ್ವರ ಭಟ್ ಮಾತನಾಡಿ ವ್ಯಕ್ತಿಯನ್ನು ಆತನ ಜಾತಿ, ಧರ್ಮದ ಆಧಾರದಲ್ಲಿ ಗುರುತಿಸುವ ಬದಲು ಆತನ ಪ್ರಾಮಾಣಿಕತೆಯ ಅಧಾರದಲ್ಲಿ ಗುರುತಿಸಬೇಕು. ದೇವರ ಕಾರ್ಯಗಳಿಗೆ ಪ್ರಾಮಾಣಿಕತೆ

ಮುಂಡ್ಕೂರು : ಮರಳುಗಾರಿಕೆಗೆ ಅವಕಾಶ ನೀಡುವುದಿಲ್ಲವೆಂದು ಪಟ್ಟು ಹಿಡಿದ ಸ್ಥಳೀಯರು

ಮುಂಡ್ಕೂರು ಗ್ರಾಮ ಪಂಚಾಯತ್ 2022- 23ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆ ಪಂಚಾಯತ್ ಸಭಾಂಗಣದಲ್ಲಿ ಪಂಚಾಯತ್ ಅಧ್ಯಕ್ಷೆ ಸುಶೀಲಾ ಬಾಬು ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಕೃಷಿ ಇಲಾಖೆಯ ಸತೀಶ್ ನೋಡಲ್ ಅಧಿಕಾರಿಯಾಗಿದ್ದರು. ಸಂಕಲಕರಿಯದ ಉಗ್ಗೆದಬೆಟ್ಟು ಹಾಗೂ ಕೃಷ್ಣ ಬೆಟ್ಟು ನಿವಾಸಿಗಳ ನಡುವೆ ಮರಳುಗಾರಿಕೆ ಹಾಗೂ ರಸ್ತೆ ಅಗೆತದ ಬಗ್ಗೆ ಭಾರಿ ಮಾತಿನ ಚಕಮಕಿ ನಡೆಯಿತು. ಪಂಚಾಯತ್ ಮಾಜಿ ಸದಸ್ಯ ಸೋಮನಾಥ್ ಪೂಜಾರಿ ಉಗ್ಗೆದಬೆಟ್ಟು ನಿವಾಸಿಗಳ ಪರವಾಗಿ ಮಾತನಾಡಿ,

ಮೂಡುಬಿದಿರೆ: ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಸಭೆ

ಡಿಸಿ ಮನ್ನಾ ಜಾಗಗಳು ಇತರರ ಪಾಲಾಗುತ್ತಿದೆ. ಆದರೆ ಎಸ್. ಸಿ, ಎಸ್. ಟಿ ಸಮುದಾಯದ ಜನರು ಡಿಸಿ ಮನ್ನಾ ಜಾಗದಲ್ಲಿ ಬಿಡಾರ ಹೂಡಿದರೆ ಕೂಡಲೇ ಅಲ್ಲಿಂದ ಎತ್ತಂಗಡಿ ಮಾಡಲು ಇಲಾಖೆಯಿಂದ ಅಧಿಕಾರಿಗಳು ಬರುತ್ತಾರೆ. ಇನ್ನು ಮುಂದೆ ಡಿಸಿ ಮನ್ನಾ ಜಮೀನಿನಲ್ಲಿ ಎಸ್.ಸಿ, ಎಸ್.ಟಿ ಸಮುದಾಯದ ಜನರು ಸಣ್ಣ ಗುಡಿಸಲು ಮಾಡಿ ಮನೆ ಮಾಡಿಕೊಂಡಿದ್ದಾರೆ. ಅವರನ್ನು ಅಲ್ಲಿಂದ ಓಡಿಸದೇ ಅಸಹಾಯಕ ಜನರಿಗೆ ವಾಸ ಮಾಡಲು ಅವಕಾಶ ಮಾಡಿಕೊಡಬೇಕೆಂದು ರಾಮಚಂದ್ರ ಕೆಂಬಾರೆ ಆಗ್ರಹಿಸಿದರು ಅವರು ಎಸ್

ಶ್ರಮದಿಂದ ಗುರಿ ತಲುಪಲು ಸಾಧ್ಯ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ

ಮಿಜಾರು: ಪರಿಶ್ರಮ ಇಲ್ಲದೆ ಸಾಧನೆ ಅಸಾಧ್ಯ. ಶ್ರಮದಿಂದ ಮಾತ್ರ ನಮ್ಮ ಗುರಿ ತಲುಪಲು ಸಾಧ್ಯ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು.ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಾಂತ್ರಿಕ ಕಾಲೇಜಿನ ಯಂಗ್ ಇಂಡಿಯಾದ ‘ಯುವ’ ಕಾರ್ಯ ನಿರ್ವಹಣಾ ಮಂಡಳಿಯ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಬುಧವಾರ ಅವರು ಮಾತನಾಡಿದರು. ಸಮಯಕ್ಕೆ ತಕ್ಕಂತೆ ನಾವು ಬದಲಾಗಬೇಕು. ನಮ್ಮ ಆಲೋಚನೆಗಳನ್ನು ಬದಲಾಯಿಸಿಕೊಳ್ಳಬೇಕು. ಜೀವನದಲ್ಲಿ ನೀತಿ-ನಿಯಮ

ಕಲ್ಲಬೆಟ್ಟುವಿನಲ್ಲಿ ಮದ್ಯದಂಗಡಿ ತೆರೆಯದಂತೆ ಜನಜಾಗೃತಿ ವೇದಿಕೆ ಮನವಿ

ಮೂಡುಬಿದಿರೆ: ಪುರಸಭೆ ವ್ಯಾಪ್ತಿಯ ಕಲ್ಲಬೆಟ್ಟುವಿನಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಮದ್ಯದಂಗಡಿ ವಿರುದ್ಧ ಸ್ಥಳೀಯ ದಲಿತ ಸಂಘರ್ಷ ಸಮಿತಿ ಮತ್ತು ಸಾರ್ವಜನಿಕರ ದೂರಿನ ಮೇರೆಗೆ ಬುಧವಾರ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು ಮತ್ತು ಯೋಜನೆಯ ಪದಾಧಿಕಾರಿಗಳ ಸಭೆಯನ್ನು ವಲಯ ಕಚೇರಿಯಲ್ಲಿ ನಡೆಸಿದರು. ಕಲ್ಲಬೆಟ್ಟುವಿನಲ್ಲಿ ಈಗಾಗಲೇ ಅನಧಿಕೃತ ಮದ್ಯ ಮಾರಾಟ ವ್ಯಾಪಕವಾಗಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಬಕಾರಿ ಇಲಾಖೆಗೆ ಸೂಚಿಸುವುದು ಮತ್ತು ಅನಧಿಕೃತ ಮದ್ಯ

ಬಂಟ ಸಮುದಾಯದವರಿಗೆ ದೇವರೇ ಗುರು : ಕೇಮಾರು ಶ್ರೀ ಈಶ ವಿಠಲದಾಸ ಸ್ವಾಮೀಜಿ

ಮೂಡುಬಿದಿರೆ: ಬಂಟ ಸಮುದಾಯವು ಪರೋಪಕಾರ ದಂತಹ ದೊಡ್ಡ ಗುಣವನ್ನು ಹೊಂದಿದೆ. ಗುರುಪೀಠವಿಲ್ಲದೇ ಬಂಟ ಸಮುದಾಯವು ಎಲ್ಲಾ ಕ್ಷೇತ್ರಗಳಲ್ಲೂ ಇಂದು ಪ್ರಗತಿ ಸಾಧಿಸಿದೆ, ಸಮುದಾಯದ ಹಿರಿಯರು ಗುರುಪೀಠಕ್ಕೆ ಹೋರಾಡದೆ ಬಂಟರ ಸಂಘ, ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಪ್ರಾಧಾನ್ಯತೆ ನೀಡಿದರೆ ಸಮುದಾಯದ ಅಭಿವೃದ್ಧಿ ಸಾಧ್ಯ. ಈ ಸಮುದಾಯವು ಗುರುಪೀಠಕ್ಕೆ ಹೆಚ್ಚಿನ ಆದ್ಯತೆ ನೀಡದೆ ಹಿರಿಯರು ತೋರಿದ ಹಾದಿಯಲ್ಲೇ ಮುಂದೆ ಸಾಗಬೇಕು,ದೇವರನ್ನೇ ಗುರುವನ್ನಾಗಿ ಕಾಣಬೇಕು ಎಂದು ಕೇಮಾರು