Home ಕರಾವಳಿ Archive by category ಮೂಡಬಿದರೆ (Page 58)

ಮೂಡುಬಿದರೆ – ಮಾರ್ಕೆಟ್‍ನಲ್ಲಿ ರಾಶಿ ಹಾಕಿರುವ ಗುಜರಿ ವಸ್ತು ತೆರವುಗೊಳಿಸಲು ಕ್ರಮ : ಪುರಸಭಾ ಸದಸ್ಯ ರಾಜೇಶ್ ನಾಯ್ಕ್

ಮೂಡುಬಿದಿರೆ: ಸ್ವರಾಜ್ಯ ಮೈದಾನದ ಮಾರ್ಕೆಟ್ ನಲ್ಲಿ ಗುಜರಿ ಅಂಗಡಿಯಿದ್ದು ಸುತ್ತಮುತ್ತಲಿನ ಪ್ರದೇಶದಲ್ಲಿ ಗುಜರಿ ವಸ್ತುಗಳನ್ನು ರಾಶಿ ಹಾಕಿರುವುದರಿಂದ ಪರಿಸರ ಮಾಲಿನ್ಯವಾಗಿದೆ. ರಾಶಿ ಹಾಕಿರುವ ಗುಜರಿ ವಸ್ತುಗಳನ್ನು ತೆರವುಗೊಳಿಸುವಂತೆ ಸದಸ್ಯ ರಾಜೇಶ್ ನಾಯ್ಕ್ ಪುರಸಭಾ ಸಾಮಾನ್ಯ ಸಭೆಯಲ್ಲಿ ತಿಳಿಸಿದರು. ಪುರಸಭಾ ಅಧ್ಯಕ್ಷ ಪ್ರಸಾದ್ ಕುಮಾರ್ ಅಧ್ಯಕ್ಷತೆಯಲ್ಲಿ

ಮಂಗಳೂರಿನಿಂದ ಬೆಂಗಳೂರಿಗೆ ಭಾವೈಕ್ಯತಾ ಜಾಥ

ಮೂಡುಬಿದಿರೆ: ಬಿ.ಜೆ.ಪಿ ಶಾಸಕರು, ಸಚಿವರುಗಳಿಗೆ ಈ ದೇಶದ, ರಾಜ್ಯದ, ಜಿಲ್ಲೆಯ ಮೂಲಭೂತ ಸಮಸ್ಯೆಗಳಾದ ಬೆಲೆ ಏರಿಕೆಯನ್ನು ತಡೆಯಲಾಗುತ್ತಿಲ್ಲ, ಕೋಟ್ಯಾಂತರ ರೂಪಾಯಿ ಕಾಮಗಾರಿ, ಭ್ರಷ್ಟಚಾರಗಳನ್ನು ಮಾಡುವ ಮೂಲಕ ಜನರ ಸಮಸ್ಯೆಯನ್ನು ಬಗೆಹರಿಸಲಾಗದೇ ಜನರ ನಡುವೆ ಭಾವನಾತ್ಮಕ ವಿಷಯಗಳಾದ ಲವ್ ಜಿಹಾದ್, ಗೋಹತ್ಯೆಯಂತಹ ವಿಷ ಬೀಜವನ್ನು ಬಿತ್ತುವ ಕೆಲಸ ಸ ಮಾಡುತ್ತಿದ್ದಾರೆಂದು ಪ್ರಾಂತ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಯಾದವ ಶೆಟ್ಟಿ ಕಿಡಿಕಾರಿದರು. ಅವರು ಜನಾಂದೋಲನಾಗಳ

ಮಂಗಳೂರು ವಿವಿ ಅಂತರ ಕಾಲೇಜು ಸಾಂಸ್ಕøತಿಕ ವೈವಿಧ್ಯ ಸ್ಪರ್ಧೆ “ಧವಲಾ ಸಿರಿ-2023”

ಮೂಡುಬಿದಿರೆ: ಇಲ್ಲಿನ ಶ್ರೀ ಧವಲಾ ಮಹಾವಿದ್ಯಾಲಯ ಹಾಗೂ ಲಲಿತಸಂಘ ಇದರ ವತಿಯಿಂದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಸಾಂಸ್ಕ್ರತಿಕ ವೈವಿಧ್ಯ ಸ್ಪರ್ಧೆ “ಧವಲಾ ಸಿರಿ-2023” ನ್ನು ಶಾಸಕ ಉಮಾನಾಥ್ ಎ ಕೋಟ್ಯಾನ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ತಮ್ಮಲ್ಲಿರುವ ಸಾಮರ್ಥ್ಯವನ್ನು ಇನ್ನೂ ಉತ್ತಮ ಪಡಿಸಲು ಇರುವಂತಹ ಅವಕಾಶವೇ ಸ್ಪರ್ಧೆ. ಕೇವಲ ಸ್ಪರ್ಧಿಸಿ ಬಹುಮಾನ ಪಡೆಯುವುದೊಂದೇ ಸ್ಪರ್ಧೆಗಳ ಉದ್ದೇಶವಾಗಿರಬಾರದು ಎಂದ ಅವರು

ಮೂಡುಬಿದರೆ : ಸಾಹಿತ್ಯ ಸಂಜೆಯ ಕವಿಗೋಷ್ಟಿ

ಕಾವ್ಯ ಹುಟ್ಡುವದಾ ಕಟ್ಟುವುದು ಎಂಬ ಪ್ರಶ್ನೆ ಇದೆ.ಹುಟ್ಟಿದ ಕಾವ್ಯ, ಬೇರೆ ಕಟ್ಟಿದ ಕಾವ್ಯ ಬೇರೆ.ಕಟ್ಟಿದ ಕಾವ್ಯವು ಕಾವುಗೊಳ್ಳಬೇಕು.ಅದಕ್ಕಿಷ್ಟು ಉಪಮೇ,ಅಲಂಕಾರ, ಲಯ,ರೂಪಕಗಳು ಇರಬೇಕು,ಎಂದು ಖ್ಯಾತ ಹಿರಿಯ ಸಾಹಿತಿ ಬಿ ಎಂ ರೋಹಿಣಿ ಅವರು ನುಡಿದರು. ಅವರು ಮೂಡುಬಿದಿರೆಯಲ್ಲಿ ಅರವಿಂದ ಚೊಕ್ಕಾಡಿ ಅವರ ಮನೆಯಲ್ಲಿ ರೇಮಂಡ್ ಡಿಕೂನಾ ತಾಕೊಡೆ ಸಾರಥ್ಯದಲ್ಲಿ ಪಿಂಗಾರ ಸಾಹಿತ್ಯ ಬಳಗದಿಂದ ಹಮ್ಮಿಕೊಂಡ ಸಾಹಿತ್ಯ ಸಂಜೆಯ ಕವಿಗೋಷ್ಟಿಯ ಅದ್ಯಕ್ಷತೆ ವಹಿಸಿ ಮಾತನಾಡಿದರು.

ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್

ಮೂಡುಬಿದಿರೆ: ಮಹಾರಾಷ್ಟ್ರ ದ ಪುಣೆಯಲ್ಲಿರುವ ನೇತಾಜಿ ಸುಭಾಸ್ ಚಂದ್ರ ಬೋಸ್ ಮಿಲಿಟರಿ ಸ್ಕೂಲ್ ಸ್ಟೇಡಿಯಂ ನಲ್ಲಿ ನ್ಯಾಷನಲ್ ಕರಾಟೆ ಫೆಡರೇಶನ್ ಒಫ್ ಇಂಡಿಯಾ ಇತ್ತೀಚೆಗೆ ಆಯೋಜಿಸಿದ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಮೂಡುಬಿದಿರೆಯ ಆಲ್ ಬಿರ್ರ್ ಆಂಗ್ಲ ಮಾಧ್ಯಮ ಶಾಲೆ ಯ ವಿದ್ಯಾರ್ಥಿ ಮೊಹಮ್ಮದ್ ನಹ್ ಯಾನ್ 8 ವರ್ಷ ವಯೋಮಿತಿಯ 20 ಕೆಜಿ ಕುಮಿಟೆ ವಿಭಾಗ ದಲ್ಲಿ ಚಿನ್ನದ ಪದಕ ಹಾಗೂ ಕಟ ವಿಭಾಗ ದಲ್ಲಿ ಬೆಳ್ಳಿ ಪಡೆದು ರಾಜ್ಯಕ್ಕೆ ಹಾಗೂ ಶಾಲೆ

ಪಾನಮತ್ತ ತೀರ್ಪುಗಾರರು ಕಂಬಳದಲ್ಲಿ ಭಾಗವಹಿಸುವಂತಿಲ್ಲ || Kambala

ಮೂಡುಬಿದಿರೆ: ತೀರ್ಪುಗಾರರು ಮಧ್ಯಪಾನ ಮಾಡಿ ಕಂಬಳದಲ್ಲಿ ಭಾಗವಹಿಸುವಂತಿಲ್ಲ. ಯಾವುದೇ ಕಾರಣಕ್ಕೂ ಅಶಿಸ್ತು ಪ್ರದರ್ಶಿಸಿದಲ್ಲಿ ಅಂತಹ ತೀರ್ಪುಗಾರರನ್ನು ಮುಂದಿನ ಕಂಬಳಗಳಿಗೆ ಅಮಾನತುಗೊಳಿಸುವುದೆಂದು ಜಿಲ್ಲಾ ಕಂಬಳ ಸಮಿತಿಯ ತುರ್ತು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಜಿಲ್ಲಾ ಕಂಬಳ ಸಮಿತಿಯ ಆಶ್ರಯದಲ್ಲಿ ಬುಧವಾರ ಸಂಜೆ ಒಂಟಿಕಟ್ಟೆ ಕಡಲಕೆರೆ ನಿಸರ್ಗಧಾಮದ ಬಳಿ ಇರುವ ಸೃಷ್ಠಿ ಗಾರ್ಡನ್ ನ ಹಾಲ್ ನಲ್ಲಿ ಕೋಣಗಳ ಯಜಮಾನರಿಗೆ ನಡೆದ ತುರ್ತುಸಭೆಯಲ್ಲಿ ಮೇಲಿನ ತೀರ್ಮಾನವನ್ನು

ಬೂತ್ ವಿಜಯ ಅಭಿಯಾನಕ್ಕೆ ಶಾಸಕ ಕೋಟ್ಯಾನ್ ಚಾಲನೆ

ಮೂಡುಬಿದಿರೆ:ಭಾರತೀಯ ಜನತಾ ಪಾರ್ಟಿ ಮೂಲ್ಕಿ -ಮೂಡುಬಿದಿರೆ ಮಂಡಲದ ವತಿಯಿಂದ ಸೋಮವಾರ “ಬೂತ್ ವಿಜಯ ಅಭಿಯಾನ” ಕ್ಕೆ ಶಾಸಕ ಉಮಾನಾಥ್ ಕೋಟ್ಯಾನ್ ಚಾಲನೆ ನೀಡಿದರು. ಪುತ್ತಿಗೆ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಸಂಪಿಗೆಯ ಶಕ್ತಿ ಕೇಂದ್ರದ ಮತಗಟ್ಟೆ ಸಂಖ್ಯೆ 79 ರ 5 ಮನೆಗಳಿಗೆ ತೆರಳಿ ಪಕ್ಷದ ಧ್ವಜ ಹಸ್ತಾಂತರ ಮಾಡುವ ಮೂಲಕ ಈ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಮಂಡಲಾಧ್ಯಕ್ಷ ಸುನಿಲ್ ಆಳ್ವ, ಜಿಲ್ಲಾ ಕಾರ್ಯಕಾರಣಿ ಸದಸ್ಯ ಕೃಷ್ಣರಾಜ ಹೆಗ್ಡೆ, ಪುರಸಭಾ

ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಕಾರು ಅಪಘಾತ : ಕಾರು ಚಾಲಕ ದಿವಾಕರ್ ಶೆಟ್ಟಿ ಮೃತ್ಯು

ಮೂಡುಬಿದಿರೆ: ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಕಾರೊಂದು ರಸ್ತೆಯಲ್ಲಿ ಪಲ್ಟಿಯಾಗಿ 15 ಅಡಿ ಆಳದಲ್ಲಿದ್ದ ಶಾಲಾ ಮೈದಾನಕ್ಕೆ ಬಿದ್ದ ಪರಿಣಾಮವಾಗಿ ಚಾಲಕ ಮೃತಪಟ್ಟ ಘಟನೆ ನಿನ್ನೆ (ಭಾನುವಾರ) ರಾತ್ರಿ ತಾಲೂಕಿನ ಕಡಂದಲೆಯಲ್ಲಿ ನಡೆದಿದೆ. ಪಾಲಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಗಂದಾಡಿ ನಿವಾಸಿ ದಿವಾಕರ ಶೆಟ್ಟಿ (58ವ) ಮೃತಪಟ್ಟ ದುರ್ದೈವಿ. ಕಡಂದಲೆ ಗ್ರಾಮದ ಜೋಡಿಕಟ್ಟೆ ಮುಕ್ಕಡಪ್ಪು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪಿ ಬಿ. ರಸ್ತೆಯ ಬಳಿಯಲ್ಲಿ ಘಟನೆ ನಡೆದಿದ್ದು

ಗುತ್ತಿಗೆದಾರನನ್ನು ಹೊಗಳಿದ ಸುಪ್ರಿಂ ಕೋಟ್ ೯ನ ಮುಖ್ಯ ನ್ಯಾಯಾಧೀಶರು

ಮೂಡುಬಿದಿರೆಯ ವಕೀಲರ ಸಂಘದ ವತಿಯಿಂದ ರೂ 3 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ವಕೀಲರ ಭವನದ ಕಾಮಗಾರಿ ಅಚ್ಚುಕಟ್ಟಾಗಿ ಒಳ್ಳೆಯ ರೀತಿಯಲ್ಲಿ ನಡೆದಿದೆ ನಿಮಗೆ ಅಭಿನಂದನೆಗಳು ಎಂದು ಕಟ್ಟಡ ನಿರ್ಮಾಣದ ಗುತ್ತಿಗೆದಾರ, ಬಿಮಲ್ ಕನ್ಟ್ರಕ್ಷನ್ ನ ಪ್ರವೀಣ್ ಅವರನ್ನು ಸುಪ್ರಿಂ ಕೋಟ್ ೯ನ ಮುಖ್ಯ ನ್ಯಾಯಾಧೀಶ ಅಬ್ದುಲ್ ನಝೀರ್ ಅವರು ಅಭಿನಂದಿಸಿದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಡಿಸೆಂಬರ್ 30ರಂದು ವಕೀಲರ ಭವನವನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ

ಮೂಡುಬಿದಿರೆ ವಕೀಲರ ಭವನ ಲೋಕಾರ್ಪಣೆ

ಮೂಡುಬಿದಿರೆ: ಸಮಾಜದಲ್ಲಿ ಶಾಂತಿ ನೆಲೆಸಬೇಕಾದರೆ ಅಲ್ಲಿ ವ್ಯಾಜ್ಯಗಳು ಇರಬಾರದು, ವ್ಯಾಜ್ಯಗಳು ಕಡಿಮೆಯಾಗಬೇಕಾದರೆ ವಕೀಲರು ಬಡಜನರಿಗೆ ತ್ವರಿತಗತಿಯಲ್ಲಿ ಕಡಿಮೆ ಖರ್ಚಿನಲ್ಲಿ ನ್ಯಾಯ ಒದಗಿಸಬೇಕು ಎಂದು ಸುಪ್ರೀಂ ಕೋರ್ಟ್‍ನ ನ್ಯಾಯಮೂರ್ತಿ ಎಸ್.ಅಬ್ದುಲ್ ನಝೀರ್ ಹೇಳಿದರು. ದ.ಕ ಜಿಲ್ಲಾ ನ್ಯಾಯಾಂಗ, ಲೋಕೋಪಯೋಗಿ ಇಲಾಖೆ ಹಾಗೂ ಮೂಡುಬಿದಿರೆ ವಕೀಲರ ಸಂಘದ ಸಂಯುಕ್ತ ಆಶ್ರಯದಲ್ಲಿ ಮೂಡುಬಿದಿರೆ ನ್ಯಾಯಾಲಯದ ಆವರಣದಲ್ಲಿ ಸುಮಾರು ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ