ಪಡುಬಿದ್ರಿ ಕರ್ಣಾಟಕ ಪಬ್ಲಿಕ್ ಸ್ಕೂಲ್ ಆಟದ ಮೈದಾನ ಜಲ್ಲಿಕಲ್ಲು, ಕ್ರಷರ್ ಹುಡಿ ಶೇಖರಣಾ ಘಟಕವಾಗಿ ಬದಲಾಗಿದ್ದು, ಈ ಬಗ್ಗೆ ಆಕ್ರೋಶಿತರಾದ ಶಾಲಾ ಹಳೆ ವಿದ್ಯಾರ್ಥಿಗಳು ಒಂದು ವಾರದೊಳಗೆ ತೆರವುಗೊಳಿಸದಿದ್ದಲ್ಲಿ ನಾವು ಅದನ್ನು ಬೇರೆಗೆ ವರ್ಗಾಹಿಸುವ ಕೆಲಸ ಮಾಡಬೇಕಾದೀತು ಎಂಬುದಾಗಿ ಎಚ್ಚರಿಸಿದ್ದಾರೆ. ರಸ್ತೆ ದುರಸ್ಥಿಗಾಗಿ ಕಾರ್ಕಳ ಮೂಲದ ಗುತ್ತಿಗೆದಾರನೊರ್ವ ಕಳೆದ
ಮೂಡುಬಿದಿರೆ : ಜಲಜೀವನ್ ಮಿಷನ್ ಯೋಜನೆಯಡಿ ಪುತ್ತಿಗೆ ಗ್ರಾ.ಪಂ.ವ್ಯಾಪ್ತಿಯ ಮುಂಡೇಲು, ಮಂಜೊಲು ಗುಡ್ಡೆ ಹಾಗೂ ಪೆಲತ್ತಡ್ಕ ಬಳಿ 94 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೀರಿನ ಟ್ಯಾಂಕ್ ಗಳಿಗೆ ಶಾಸಕ ಉಮಾನಾಥ ಕೋಟ್ಯಾನ್ ಗುದ್ದಲಿಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಕೋಟ್ಯಾನ್ ಈ ಭಾಗದ ಮೂಲಭೂತ ಸೌಕರ್ಯವಾಗಿರುವ ಕುಡಿಯುವ ನೀರನ್ನು ಜನರಿಗೆ ಒದಗಿಸಬೇಕೆಂಬುದು ಸರಕಾರದ ಕನಸಿನ ಯೋಜನೆಯಾಗಿದೆ. ಅಲ್ಲದೆ ಈ ಭಾಗದ ಜನರ ನೀರಿನ ಸಮಸ್ಯೆಯನ್ನು ಹೋಗಲಾಡಿಸಲು 3
ಮೂಡುಬಿದಿರೆ: ಪ್ರಾಕೃತಿಕ ವಿಕೋಪದಡಿಯಲ್ಲಿ ಹಾನಿಗೊಳಗಾಗಿರುವ ಮೂಡುಬಿದಿರೆ ತಾಲೂಕಿನ ಒಟ್ಟು 16 ಜನ ಸಂತ್ರಸ್ತರಿಗೆ ರೂ 7,10,700ರೂ. ಮೊತ್ತದ ಪರಿಹಾರದ ಚೆಕ್ನ್ನು ಶಾಸಕ ಉಮಾನಾಥ್ ಕೋಟ್ಯಾನ್ ಆಡಳಿತ ಸೌಧದಲ್ಲಿ ವಿತರಿಸಿದರು. ತಾಲೂಕು ತಹಶಿಲ್ದಾರ್ ಸತ್ಯಪ್ಪ ಸಚ್ಚಿದಾನಂದ ಕುಚನೂರು, ಪುರಸಭಾ ಸದಸ್ಯೆ ಸೌಮ್ಯ ಶೆಟ್ಟಿ ಈ ಸಂದರ್ಭದಲ್ಲಿದ್ದರು.
ಮೂಡುಬಿದಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ (ರಿ), ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಪಿ.ಟ್ರಸ್ಟ್ (ರಿ), ಮೂಡುಸಿದಿರೆ ಇವುಗಳ ವತಿಯಿಂದ ತಾಲೂಕಿನ ೮೦ ಕೇಂದ್ರಗಳಲ್ಲಿ 7 ದಿನಗಳ ಕಾಲ ಏಕಕಾಲದಲ್ಲಿ ಅನುಭವಿ ಯೋಗ ಶಿಕ್ಷಕರಿಂದ ನಡೆದ ಯೋಗ ಶಿಬಿರ ದಸರಾ ಯೋಗೋತ್ಸವ’ವು ಪಾಲಡ್ಕ, ಬ್ರಹ್ಮಶ್ರೀ ನಾರಾಯಣಗುರು ಜಿಲ್ಲವ ಸಂಘದಲ್ಲಿ ಶನಿವಾರ ಸಮಾಪನಗೊಂಡಿತು.
ಮೂಡುಬಿದಿರೆ: ಇಲ್ಲಿನ ತಾಲೂಕು ತಹಶೀಲ್ದಾರ್ ತಾಲೂಕು ಸತ್ಯಪ್ಪ ಸಚ್ಚಿದಾನಂದ ಕುಚನೂರು ಅವರು ಬೆಳುವಾಯಿ ಗ್ರಾಮ ಪಂಚಾಯತ್ನಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಪಂಚಾಯತ್ ಸಭಾಂಗಣದಲ್ಲಿ ಗ್ರಾಮ ವಾಸ್ತವ್ಯ ಹೂಡಿದರು. ಪಂಚಾಯತ್ ಅಧ್ಯಕ್ಷೆ ಸುಶೀಲಾ ಅವರು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಪಂಚಾಯತ್ನ ಮಾಜಿ ಅಧ್ಯಕ್ಷ ರಾಘು ಪೂಜಾರಿ ಮಾತನಾಡಿ, ಮನೆಗಳ ಬಳಿ ಮರಗಳಿಲ್ಲದಿದ್ದರೂ ಡೀಮ್ಸ್ ಫಾರೆಸ್ಟ್ ಎಂದು ಪಟ್ಟಿಯನ್ನು ಕೊಟ್ಟಿದ್ದಾರೆ, ಇದಲ್ಲದೇ
ಮೂಡುಬಿದಿರೆ : ಅನಧಿಕೃತ ಮತ್ತು ಅವೈಜ್ಞಾನಿಕ ರೀತಿಯಲ್ಲಿ ಕಾರ್ಯಚರಿಸುತ್ತಿರುವ ಸುರತ್ಕಲ್ ಟೋಲ್ಗೇಟನ್ನು ತೆರವುಗೊಳಿಸುವಂತೆ ಆಗ್ರಹಿಸಿ ಮೂಡುಬಿದಿರೆಯ ಬ್ಲಾಕ್ ಕಾಂಗ್ರೆಸ್, ಸಿಪಿಐಎಂ ಮತ್ತು ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ತಾಲೂಕು ಆಡಳಿತ ಸೌಧದ ಮುಂಭಾಗ ಪ್ರತಿಭಟನೆ ನಡೆಯಿತು. ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ ಸುರತ್ಕಲ್ ಟೋಲ್ ಎಂದರೆ ರೌಡಿಗಳನ್ನು ಸಾಕುವಂತಹ ವ್ಯವಸ್ಥೆಯಾಗಿದೆ. 400 ಕೋಟಿ ರೂಪಾಯಿ ಸಂಗ್ರಹಿಸಿ ಇಡೀ
ಮೂಡುಬಿದಿರೆ: ಭಾರತೀಯ ಜೈನ್ ಮಿಲನ್ ವಲಯ-8 ಆಯೋಜಿಸಿರುವ ಬದುಕು ಹಾಗೂ ಬದುಕಲು ಬಿಡು ಎಂಬ ಘೋಷಣೆಯೊಂದಿಗೆ ರಾಜ್ಯ ಮಟ್ಟದ ಜೈನ್ ಮಿಲನ್ ವಲಯ, ಸಮ್ಮೇಳನವು ಅಕ್ಟೋಬರ್ 16 ರವಿವಾರದಂದು ಕಲ್ಲಬೆಟ್ಟು ಎಕ್ಸಲೆಂಟ್ ಕಾಲೇಜಿನ ನೂತನ ಸಭಾಂಗಣದಲ್ಲಿ ನಡೆಯಲಿದೆ. ಎಂದು ವಲಯಾಧ್ಯಕ್ಷ ವೀರ ಪುಷ್ಪರಾಜ್ ಜೈನ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಅಂದು ಬೆಳಿಗ್ಗೆ 9:15ಕ್ಕೆ ಸಾಂಪ್ರದಾಯಿಕ ಮೆರವಣಿಗೆಯೊಂದಿಗೆ ಆರಂಭವಾಗುವ ಈ ಸಮ್ಮೇಳನವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ|
ಮೂಡುಬಿದಿರೆ: ಒಂಟಿಕಟ್ಟೆಯಲ್ಲಿರುವ ಕಡಲಕೆರೆಗೆ ವಿವಿಧ ಜಾತಿಯ 25,000 ಮೀನಿನ ಮರಿಗಳನ್ನು ಸಮರ್ಪಿಸಲಾಯಿತು.ಶಾಸಕ ಉಮಾನಾಥ ಕೋಟ್ಯಾನ್ ಮೀನಿನ ಮರಿಗಳನ್ನು ಸಮರ್ಪಿಸಿ, ದೋಣಿ ವಿಹಾರಕ್ಕೆ ಚಾಲನೆ ನೀಡಿದರು. ಶಾಸಕ ಉಮಾನಾಥ ಕೋಟ್ಯಾನ್ ಅವರು ಮಾತನಾಡಿ ಪ್ರವಾಸಿಗರನ್ನು ಸೆಳೆಯುವ ಕಡಲಕೆರೆಯನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಅಭಿವೃದ್ಧಿಗೊಳಿಸುವ ಯೋಜನೆಯಿದ್ದು ಈಗಾಗಲೇ ಅನುದಾನಕ್ಕಾಗಿ ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ ಎಂದರು. ಅರಣ್ಯ ಇಲಾಖೆಯ ಕುಂದಾಪುರ
ಭಾರತ ಸ್ಕೌಟ್ಸ್ ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ ಮತ್ತು ದ.ಕ ಜಿಲ್ಲಾ ಸಂಸ್ಥೆ, ಮೂಡುಬಿದಿರೆ ಸ್ಥಳೀಯ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಸಂಸ್ಥೆ ಇದರ ಜಂಟಿ ಆಶ್ರಯದಲ್ಲಿ ಅಂತರರಾಷ್ಟ್ರೀಯ ಸ್ಕೌಟ್ಸ್ ಗೈಡ್ಸ್ನ ಸಾಂಸ್ಕøತಿಕ ಜಾಂಬೂರಿ-2022 ಕಾರ್ಯಕ್ರಮ ಡಿಸೆಂಬರ್ 21 ರಿಂದ 27ರ ವರೆಗೂ ನಡೆಯಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವ ಹೇಳಿದರು. ಅವರು ನಗರದ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಬೃಹತ್ ಉದ್ಯೋಗ ಮೇಳ ಆಳ್ವಾಸ್ ಪ್ರಗತಿ ಅಕ್ಟೋಬರ್ 14 ಮತ್ತು 15 ರಂದು ಮೂಡಬಿದಿರೆಯ ವಿದ್ಯಾಗಿರಿ ಆವರಣದಲ್ಲಿ ನಡೆಯಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ ಮೋಹನ್ ಆಳ್ವ ಹೇಳಿದರು. ಅವರು ನಗರದ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿ, ಕಳೆದ 11 ವರ್ಷಗಳಿಂದ ಉದ್ಯೋಗ ಮೇಳವನ್ನು ಆಯೋಜನೆ ಮಾಡಿಕೊಂಡು ಬರುತ್ತಿದ್ದೇವೆ. ಇದು 12ನೇ ವರ್ಷದ ಉದ್ಯೋಗ ಮೇಳವನ್ನು




























