ಮೂಡುಬಿದಿರೆ : ಪಡುಬಿದ್ರಿ ಯುಪಿಸಿಎಲ್ ನಿಂದ ಕೇರಳಕ್ಕೆ ವಿದ್ಯುತ್ ಪ್ರಸರಣಕ್ಕಾಗಿ ಸರ್ವೇ ನಡೆಸಲಾಗುತ್ತಿದೆ ಎಂದು ಹೇಳಿಕೊಂಡು ಅನಧಿಕೃತವಾಗಿ ನಿಡ್ಡೋಡಿ ಪರಿಸರದಲ್ಲಿ ಸರ್ವೇ ಕಾರ್ಯಕ್ಕಾಗಿ ಆಗಮಿಸಿದ ಅನಧಿಕೃತ ವ್ಯಕ್ತಿಗಳನ್ನು ಮಾತೃಭೂಮಿ ಸಂರಕ್ಷಣಾ ಸಮಿತಿ ಸೇರಿದಂತೆ ಗ್ರಾಮಸ್ಥರು ಹಿಮ್ಮೆಟ್ಟಿಸಿದ ಘಟನೆ ಶುಕ್ರವಾರ ನಡೆದಿದೆ.ಜಿಲ್ಲಾಡಳಿತವಾಗಲೀ
ರಾಜ್ಯಮಟ್ಟದ ದಸರಾ ಕ್ರೀಡಾಕೂಟದ ಪುರುಷರ ಹಾಗೂ ಮಹಿಳೆಯರ ಬಾಲ್ ಬ್ಯಾಡ್ಮಿಂಟನ್ ವಿಭಾಗದ ಪ್ರಶಸ್ತಿಯನ್ನು ಮೈಸೂರು ವಿಭಾಗವನ್ನು ಪ್ರತಿನಿಧಿಸಿದ ಮೂಡಬಿದ್ರೆ ಆಳ್ವಾಸ್ ತಂಡ ಪಡೆದುಕೊಂಡಿದೆ. ಮೈಸೂರು ವಿಶ್ವವಿದ್ಯಾನಿಲಯ ಗವಿಲ್ಯನ್ ಕ್ರೀಡಾಂಗಣದಲ್ಲಿ ನಡೆದ ದಸರಾ ಕ್ರೀಡಾಕೂಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಲೀಗ್ ಪಂದ್ಯಗಳಲ್ಲಿ ಆಳ್ವಾಸ್ ಪುರುಷರ ಹಾಗೂ ಮಹಿಳೆಯರ ತಂಡಗಳು ಕ್ರಮವಾಗಿ ಗುಲ್ಬರ್ಗ, ಬೆಳಗಾಂ , ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಸ್ವಚ್ಚ ಭಾರತ್ ಮಿಷನ್ (ಗ್ರಾಮೀಣ), ದ.ಕ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಮೂಡುಬಿದಿರೆ, ರೇಡಿಯೋ ಸಾರಂಗ್, ಮಂಗಳೂರು ಸಹಭಾಗಿತ್ವದಲ್ಲಿ ” ಸ್ಬಚ್ಚತಾ ಹೀ ಸೇವಾ” ಆಂದೋಲನ ಕಾರ್ಯಕ್ರಮವನ್ನು ಮೂಡುಬಿದಿರೆ ತಾಲೂಕಿನ ಐತಿಹಾಸಿಕ ತಾಣ ಸಾವಿರ ಕಂಬದ ಬಸದಿ ಆವರಣದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಸ್ವಚ್ಚತೆ ಹಾಗೂ ಪ್ಲಾಸ್ಟಿಕ್ ನಿಷೇಧ ಮಾಹಿತಿಯನ್ನೊಳಗೊಂಡ ಕರಪತ್ರ
ಮೂಡುಬಿದಿರೆ: ಇಲ್ಲಿನ ಪುರಭಾಧ್ಯಕ್ಷ ಪ್ರಸಾದ್ ಕುಮಾರ್ ಅಧ್ಯಕ್ಷತೆಯಲ್ಲಿ ಸರಕಾರದಿಂದ ರೂ 1 ಕೋಟಿ ಅನುದಾನ ಬಂದಿದ್ದು ಈ ಕಾಮಗಾರಿಯಲ್ಲಿ ಶೇ. 20ರಷ್ಟು ಕಮೀಷನ್ ವ್ಯವಹಾರ ನಡೆದಿದೆ ಎಂದು ವಿಪಕ್ಷೀಯ ಸದಸ್ಯ ಸುರೇಶ್ ಕೋಟ್ಯಾನ್, ಶಂಕ ವ್ಯಕ್ತಪಡಿಸಿ, ಆರೋಪಿಸಿದ ಘಟನೆ ನಡೆದಿದೆ. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಆಡಳಿತ ಪಕ್ಷದ ಸದಸ್ಯರು ಆರೋಪಕ್ಕೆ ಸಾಕ್ಷಿ ಸಮೇತ ದಾಖಲೆ ನೀಡಿ ಆಗ ನಾವೂ ಬೆಂಬಲಿಸುತ್ತೇವೆ. ಸುಳ್ಳು ಆರೋಪ ಮಾಡಬೇಡಿ ದಾಖಲೆ ನೀಡುವಂತೆ ಪಟ್ಟು
ಮೂಡುಬಿದಿರೆಯ ತಾಲೂಕು ಆಡಳಿತ ಸೌಧದಲ್ಲಿ ಲೋಕಾಯುಕ್ತ ಅಧಿಕಾರಿಗಳು, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವ ಕಾರ್ಯಕ್ರಮ ನಡೆಯಿತು. ನಂತರ ಲೋಕಾಯುಕ್ತ ಡಿವೈಎಸ್ಪಿ ಕಲಾವತಿ ಮಾಧ್ಯಮದವರಿಗೆ ಮಾಹಿತಿ ನೀಡಿ ತಾಲೂಕಿನಲ್ಲಿ ಕಂದಾಯ ಇಲಾಖೆಗೆ ಸಂಬಂಧಪಟ್ಟಂತೆ 8 ದೂರುಗಳು ಸಾರ್ವಜನಿಕರಿಂದ ಬಂದಿದ್ದು, ಆರ್ ಟಿಸಿ ಸಂಬಂಧಪಟ್ಟಂತೆ ಒಂದು ಪ್ರಕರಣವನ್ನು ಮಂಗಳವಾರ ಇತ್ಯರ್ಥ ಮಾಡಲಾಗಿದೆ. ಮೂರು ದೂರುಗಳಿಗೆ ಸೂಕ್ತ ನಮೂನೆ `ಸಲ್ಲಿಸುವಂತೆ ದೂರುದಾರರಿಗೆ ಸೂಚಿಸಲಾಗಿದೆ,
ಮೂಡುಬಿದಿರೆ: ಸಮಾಜ ಮಂದಿರ ಸಭಾ (ರಿ.) ವತಿಯಿಂದ ಸಮಾಜ ಮಂದಿರದಲ್ಲಿ ಸಾಹಿತ್ಯ ಸಾಂಸ್ಕೃತಿಕ ಕಲಾಪಗಳೊಂದಿಗೆ ನಡೆಯಲಿರುವ 75ನೇ ದಸರಾ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವವನ್ನು ಕೇಂದ್ರದ ಮಾಜಿ ಸಚಿವ ಡಾ.ಎಂ.ವೀರಪ್ಪ ಮೊಯಿಲಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ನಾನು ಇಂದು ಏನಾಗಿದ್ದೇನೆ ಅದು ಸಾಹಿತ್ಯ ಇರಬಹುದು ಸಾಂಸ್ಕೃತಿಕ ವ್ಯಕ್ತಿ ಇರಬಹುದು ಅಥವಾ ರಾಜಕೀಯದಲ್ಲಿ ಒಂದು ಸ್ಥಾನ ಪಡೆಯಲು ಗಂಗಾಮೂಲ ಯಾವುದೆಂದರೆ ಅದು ಈ ಸಮಾಜ ಮಂದಿರ ಸಭಾ ಮತ್ತು ಸರಸ್ವತಿ
ಮೂಡುಬಿದಿರೆ: ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರಕಾರದ ಜನವಿರೋಧಿ, ದೇಶವಿರೋಧಿ ಆಡಳಿತವನ್ನು ವಿರೋಧಿಸಿ ಮತ್ತು ವಿಪರೀತ ಬೆಲೆ ಏರಿಕೆಯನ್ನು ಖಂಡಿಸಿ ಸಿ.ಪಿ.ಐ.ಎಂನ ತಾಲೂಕು ಸಮಿತಿ ವತಿಯಿಂದ ಸೋಮವಾರ ಆಡಳಿತ ಸೌಧದ ಮುಂಭಾಗದಲ್ಲಿ ಪ್ರಚಾರಾಂದೋಲನ ನಡೆಯಿತು.ಸಿ.ಪಿ.ಐ.ಎಂನ ರಾಜ್ಯ ಸಮಿತಿಯ ಸದಸ್ಯ ಜಿ.ಎನ್ ನಾಗರಾಜ್ ಅವರು ಪ್ರಚಾರಾಂದೋಲನವನ್ನು ಉದ್ದೇಶಿಸಿ ಮಾತನಾಡಿ ನಿರುದ್ಯೋಗ, ಹಣದುಬ್ಬರ, ದೇಶದ ಸಂಪತ್ತಿನ ಲೂಟಿ ಮತ್ತು ಭ್ರಷ್ಟಾಚಾರದಲ್ಲಿ ತನ್ನನ್ನು
ಮೂಡುಬಿದಿರೆ: ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ ಕಳೆದ ಮೂರು ವರ್ಷಗಳಿಂದ ಸ್ವಚ್ಛತಾ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಮೂಡುಬಿದಿರೆಯನ್ನು ತ್ಯಾಜ್ಯ ಮುಕ್ತ ಸ್ವಚ್ಛ -ಸುಂದರ ನಗರವನ್ನಾಗಿಸಲು ಹೊರಟಿರುವ ನೇತಾಜಿ ಬಿಗ್ರೇಡ್ (ರಿ) ಸಂಘಟನೆಯು ದಸರಾ ಹಬ್ಬದ ಪ್ರಯುಕ್ತ ಭಾನುವಾರದಂದು ಸ್ವರಾಜ್ಯ ಮೈದಾನದಲ್ಲಿರುವ ಶ್ರೀ ಆದಿಶಕ್ತಿ ಮಹಾದೇವಿ ದೇವಸ್ಥಾನದ ಪರಿಸರದಲ್ಲಿ ಸ್ವಚ್ಛತೆಯ ಕೈಂಕರ್ಯವನ್ನು ಕೈಗೊಂಡು ಸಂಚುರಿ (100) ವಾರವನ್ನು ಪೂರೈಸಿದೆ. ನೇತಾಜಿ
ಮೂಡುಬಿದಿರೆ : ಮಾದಕ ದ್ರವ್ಯ ಸೇವನೆ, ಮಾದಕ ವ್ಯಸನ ಈ ಸಮಾಜಕ್ಕೆ ಅಂಟಿಕೊಂಡಿರುವ ಕೆಟ್ಟ ರೋಗ. ಈ ದುಶ್ಚಟಕ್ಕೆ ದೊಡ್ಡ ದೊಡ್ಡ ನಗರಗಳಲ್ಲಿ ಸಣ್ಣ ಸಣ್ಣ ಮಕ್ಕಳಿಂದ ಹಿಡಿದು ಅತೀ ವೃದ್ಧರು ಕೂಡ ಬಲಿಯಾಗುವ ಮೂಲಕ ಇದು ರಾಷ್ಟ್ರೀಯ ಸಮಸ್ಯೆಯಾಗಿ ತಲೆದೂರಿದೆ. ಇಂತಹ ವ್ಯಸನಕ್ಕೆ ದಾಸರಾಗಿರುವ ವ್ಯಕ್ತಿಗಳಿಗೆ ಧೈರ್ಯ ತುಂಬಿ ಮನ ಪರಿವರ್ತನೆ ಮಾಡಬೇಕು ಎಂದು ಆಳ್ವಾಸ್ನ ಪ್ರಕೃತಿ – ಯೋಗ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ದೀಕ್ಷಾ ಶೆಣೈ
ಮೂಡುಬಿದಿರೆ: 41 ಘಂಟೆಗಳಲ್ಲಿ 2,700ಕಿ.ಮೀ. ಚಾಲನೆ ಮಾಡಿ ಅಸ್ವಸ್ಥ ಬಡ ಕೂಲಿ ಕಾರ್ಮಿಕನ ಜೀವ ಉಳಿಸಿ ಮಾನವೀಯತೆಯ ಸಾಹಸ ಮೆರೆದ ಐರಾವತ ಅಂಬುಲೆನ್ಸ್ ಮಾಲೀಕ ಅನಿಲ್ ರೂಬನ್ ಮೆಂಡೋನ್ಸಾ, ಚಾಲಕ ಮೂಡುಬಿದಿರೆಯ ಲಾಡಿ ನಿವಾಸಿ ಅಶ್ವತ್ಥ್ ಅವರನ್ನು ಮೂಡುಬಿದಿರೆ ರೋಟರಿ ಕ್ಲಬ್ ವತಿಯಿಂದ ಸೋಮವಾರ ಸಂಜೆ ಸಮ್ಮಿಲನ್ ಹಾಲ್ ನಲ್ಲಿ ಸನ್ಮಾನಿಸಲಾಯಿತು.ಮುಖ್ಯ ಅತಿಥಿ ಮಂಗಳೂರು ಕೆ.ಎಂ.ಸಿಯ ಡಾ.ಮಧುಸೂಧನ್ ಉಪಾಧ್ಯ, ರೋಟರಿ ಕ್ಲಬ್ ಅಧ್ಯಕ್ಷ ಮಹಮ್ಮದ್ ಆರೀಫ್, ಕಾರ್ಯದರ್ಶಿ




























