Home ಕರಾವಳಿ Archive by category ಸುಳ್ಯ

ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ – ಆಯುರ್ವೇದ ದಿನಾಚರಣೆ

ಸೆ. 23 ರಂದು ಹತ್ತನೇ ಆಯುರ್ವೇದ ದಿನಾಚರಣೆಯ ಅಂಗವಾಗಿ “ಮಾನವ ಮತ್ತು ಪ್ರಕೃತಿಗಾಗಿ ಆಯುರ್ವೇದ” ಎಂಬ ಧ್ಯೇಯ ವಾಕ್ಯ ದೊಂದಿಗೆ ಕಾರ್ಯಕ್ರಮವನ್ನು ಕಾಲೇಜಿನ ಸುಶ್ರುತ ಸಭಾಂಗಣದಲ್ಲಿ ಆಚರಿಸಲಾಯಿತು.ಕಾರ್ಯಕ್ರಮವನ್ನು ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷರಾದ ರೊ.ಡಾ ರಾಮ್ಮೋಹನ್ ಅವರು ದೀಪ ಬೆಳಗಿಸಿ ಉದ್ಘಾಟಿಸಿ ಆಯುರ್ವೇದದ ಮಹತ್ವದ ಮಾಹಿತಿ ಜನ

ಡಾ. ಎಂ. ಮೋಹನ ಆಳ್ವ ಅವರಿಗೆ ‘ಕೀರಿಕ್ಕಾಡು ಪ್ರಶಸ್ತಿ ‘

ಸುಳ್ಯ:ದೇಲಂಪಾಡಿ ಬನಾರಿಯ ಕೀರಿಕ್ಕಾಡು ಸಾಂಸ್ಕೃತಿಕ ಅಧ್ಯಯನ ಕೇಂದ್ರ ಮತ್ತು ಬನಾರಿ ಶ್ರೀಗೋಪಾಲಕೃಷ್ಣ ಯಕ್ಷಗಾನ ಕಲಾಸಂಘದ ವತಿಯಿಂದ ಕವಿ,ಅರ್ಥದಾರಿ, ಯಕ್ಷಗಾನ ಗುರುಕುಲದ ರುವಾರಿ ಕೀರಿಕ್ಕಾಡು ಮಾಸ್ತರ್ ವಿಷ್ಣುಭಟ್ಟರ ಹೆಸರಿನಲ್ಲಿ ಪ್ರತಿವರ್ಷವೂ ನೀಡಲಾಗುತ್ತಿರುವ ಪ್ರತಿಷ್ಠಿತ “ಕೀರಿಕ್ಕಾಡು ಪ್ರಶಸ್ತಿ”ಯನ್ನುಶಿಕ್ಷಣ ಕ್ಷೇತ್ರದ ಮಹಾನ್ ಸಾಧಕ, ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ ಕ್ಷೇತ್ರಗಳ ನೇತಾರ ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ

ಎನ್ನೆಂಸಿ ವಿಜ್ಞಾನ ಸಂಘದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ ಮತ್ತು ವಿಶೇಷ ವಿಜ್ಞಾನ ಉಪನ್ಯಾಸ

ಎನ್ನೆಂಸಿ ಸುಳ್ಯ; ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ವಿಜ್ಞಾನ ಸಂಘ ಇದರ 2025-26ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಸೆಪ್ಟೆಂಬರ್ 11 ಗುರುವಾರದಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಅಸ್ಟ್ರೋ ಫಿಸಿಕ್ಸ್ (IIA) ಇಲ್ಲಿನ ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದಲ್ಲಿ ಸಂಶೋಧನಾ ವಿದ್ಯಾರ್ಥಿ ಯಾಗಿರುವ ಕು. ಸವಿತಾ ಎಂ. ಎಸ್, ದೀಪ ಬೆಳಗಿಸಿ ಮತ್ತು ವೈಜ್ಞಾನಿಕವಾಗಿ ರಾಸಾಯನಿಕ ವಸ್ತುಗಳನ್ನು ಬಳಸಿ

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸಂಭ್ರಮದ ಓಣಂ ದಿನಾಚರಣೆ: ಉತ್ಸವಂ – 2025

ನೆಹರೂ ಮೆಮೋರಿಯಲ್ ಪದವಿ ಮತ್ತು ಪದವಿ ಪೂರ್ವ ಕಾಲೇಜುಗಳ ಜಂಟಿ ಆಶ್ರಯದಲ್ಲಿ ಓಣಂ ದಿನವನ್ನು ಸೆಪ್ಟಂಬರ್ 03ನೇ ಬುಧವಾರದಂದು ವಿಜೃಂಭಣೆಯಿಂದ ಆಚರಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ ಇದರ ಕಾರ್ಯದರ್ಶಿ ಅಕ್ಷಯ್ ಕೆ ಸಿ ಸಾಂಪ್ರದಾಯಿಕವಾಗಿ ದೀಪ ಬೆಳಗಿ ತೆಂಗಿನ ಹಿಂಗಾರವನ್ನು ಅರಳಿಸುವ ಮೂಲಕ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದರು. ವಿಶೇಷವಾಗಿ ಕಾಲೇಜಿನ ಮುಂಭಾಗವನ್ನು ಮಾವಿನ ತೋರಣ ಹಾಗು ತೆಂಗಿನ ಸಿರಿಯಿಂದ ಅಲಂಕರಿಸಲಾಗಿತ್ತು. ಆಗಮಿಸಿದ

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷರಾಗಿ ಪುಷ್ಪರಾಜ ಶೆಟ್ಟಿ: ಕಾರ್ಯದರ್ಶಿ ಪದ್ಮನಾಭ ಮುಂಡೋಕಜೆ, ಕೋಶಾಧಿಕಾರಿ ಮಿಥುನ್ ಕರ್ಲಪ್ಪಾಡಿ

ಸುಳ್ಯ: ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪುಷ್ಪರಾಜ ಶೆಟ್ಟಿ ಆಯ್ಕೆಯಾಗಿದ್ದಾರೆ.ಸಂಘದ ಅಧ್ಯಕ್ಷ ಲೋಕೇಶ್ ಪೆರ್ಲಂಪಾಡಿ ಅಧ್ಯಕ್ಷತೆಯಲ್ಲಿ ಪ್ರೆಸ್ ಕ್ಲಬ್‌ನಲ್ಲಿ ಸೋಮವಾರ ನಡೆದ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಉಪಾಧ್ಯಕ್ಷರಾಗಿ ಪೂಜಾಶ್ರೀ ವಿತೇಶ್ ಕೋಡಿ, ಪ್ರಧಾನ ಕಾರ್ಯದರ್ಶಿಯಾಗಿ ಪದ್ಮನಾಭ ಮುಂಡೋಕಜೆ, ಜೊತೆ ಕಾರ್ಯದರ್ಶಿಯಾಗಿ ಜೆ.ಕೆ.ರೈ, ಕೋಶಾಧಿಕಾರಿಯಾಗಿ ಮಿಥುನ್ ಕರ್ಲಪ್ಪಾಡಿ ಆಯ್ಕೆಯಾದರು.

ನೆಹರೂ ಮೆಮೊರಿಯಲ್ ಕಾಲೇಜಿನಲ್ಲಿ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ “ನಂದನ ದಿನ”

ಸುಳ್ಯ ನೆಹರು ಮೆಮೊರಿಯಲ್ ಕಾಲೇಜಿನಲ್ಲಿ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ “ನಂದನ ದಿನ” ಅಗಸ್ಟ್ 30ನೇ ಶನಿವಾರದಂದು ನಡೆಯಿತು. ಕಾಲೇಜಿನ ಆಡಳಿತ ಅಧಿಕಾರಿ ಚಂದ್ರಶೇಖರ ಪೇರಾಲು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಕಾಲೇಜಿನ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಂಡು ಶೈಕ್ಷಣಿಕ ಸಾಧನೆ ಜೊತೆಗೆ ಸಾಂಸ್ಕೃತಿಕ, ಸಾಮಾಜಿಕ ಚಟುವಟಿಕೆಗಳಲ್ಲಿಯೂ ತೊಡಗಿಕೊಳ್ಳಬೇಕೆಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ

ಗಡಿ ಭದ್ರತಾ ಪಡೆಗೆ ಆಯ್ಕೆಯಾದ ಹಳ್ಳಿ ಹುಡುಗಿ

ಸುಳ್ಯ: ದೂರವಾಣಿ ಸಂಪರ್ಕವಿಲ್ಲದ ಗ್ರಾಮೀಣ ಭಾಗದಿಂದ ಸುಮಾರು 10 ಕಿಲೋಮೀಟರ್ ದೂರದ ಹಳ್ಳಿಯ ಪ್ರತಿಭೆ ಇಂದು ತಾಲೂಕಿನ ಹೆಮ್ಮೆಯಾಗಿ ಹೊರಹೊಮ್ಮಿದ್ದಾಳೆ. ಹೌದು ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ಬೆದ್ರುಪಣೆ ದಿ.ನಾಗಪ್ಪ ಎಂ ಎ ಹಾಗೂ ಜಾನಕಿ ದಂಪತಿಗಳ ಹಿರಿಯ ಪುತ್ರಿ ಶುಶ್ಮಿತ ಇದೀಗ ಎಸ್ ಎಸ್ ಸಿ ಜಿ ಡಿ ಪರಿಕ್ಷೆಯಲ್ಲಿ ತೇರ್ಗಡೆಯಾಗಿ ತಾಲೂಕಿಗೆ ಹೆಮ್ಮೆಯಾಗಿದ್ದಾಳೆ. ಈಕೆ ಪ್ರಾಥಮಿಕ ಶಿಕ್ಷಣದ ಸಂದರ್ಭದಲ್ಲಿ ದೇಶ ಕಾಯುವ ಸೈನಿಕ ವೃತ್ತಿಯ ಕಡೆಗೆ ಆಕರ್ಷಿತಲಾಗಿ

ಸುಳ್ಯ: ಪಿಎಸ್ಆರ್ ಸಿಲ್ಕ್ & ಸಾರೀಸ್‌ನ ಸಾರಿಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ

ಸುಳ್ಯ:ಮಂಗಳೂರಿನಲ್ಲಿ ಕಳೆದ ಹಲವಾರು ವರ್ಷಗಳಿಂದ ಜವಳಿ ಉದ್ಯಮದಲ್ಲಿ ಜನರ ಮನಗೆದ್ದ ಪಿ.ಎಸ್.ಆರ್.ಸಿಲ್ಕ್ ವತಿಯಿಂದ ಸುಳ್ಯದ ಜ್ಯೂನಿಯರ್ ಕಾಲೇಜು ರಸ್ತೆಯ ಲಯನ್ಸ್ ಸೇವಾ ಸದನದಲ್ಲಿ ಸಾರಿಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ನಡೆಯುತ್ತಿದ್ದು ಜನರಿಂದ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆ.22ರಿಂದ ಆರಂಭಗೊಂಡ ಸಾರಿಗಳ ಪ್ರದರ್ಶನ ಎರಡು ದಿನ ಮುಗಿದಿದ್ದು ಇನ್ನು ಒಂದು ದಿನ ಮಾತ್ರ ಲಭ್ಯವಿದೆ.ಆ.24 ರಂದು ಭಾನುವಾರ ರಾತ್ರಿ 8 ಗಂಟೆಯ ತನಕ ಪ್ರದರ್ಶನ ಮತ್ತು

ಸುಳ್ಯದ ಸ್ವರ್ಣಂ ಜ್ಯುವೆಲ್ಸ್‌ನಲ್ಲಿ ‘ಕರಿಮಣಿ ಖರೀದಿ ಹಬ್ಬ’ :ಹಬ್ಬದ ಪ್ರಯುಕ್ತ ಎಲ್ಲಾ ಕರಿಮಣಿ ಆಭರಣಗಳಿಗೆ ವಿಶೇಷ ದರ ಕಡಿತ ಮಾರಾಟ

ಸುಳ್ಯ:ಸುಳ್ಯದ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಸೂಂತೋಡು ಎಂಪೋರಿಯಂ ಬಿಲ್ಡಿಂಗ್‌ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ‘ಕರಿಮಣಿ ಖರೀದಿ ಹಬ್ಬ’ ಗ್ರಾಹಕರ ಮನಮೆಚ್ಚಿದ ಚಿನ್ನಾಭರಣ ಮಳಿಗೆಯಲ್ಲಿ ಗ್ರಾಹಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು ಹೆಚ್ಚಿನ ಗ್ರಾಹಕರ ಅಪೇಕ್ಷೆಯ ಮೇರೆಗೆ ‘ಕರಿಮಣಿ ಖರೀದಿ’ ಹಬ್ಬವನ್ನು ಆಗಸ್ಟ್ 31ರ ವರೆಗೆ ವಿಸ್ತರಿಸಲಾಗಿದೆ.ಸುಳ್ಯ ಸೇರಿದಂತೆ ವಿವಿಧ ತಾಲೂಕಿನ ಗ್ರಾಹಕರುಜ್ಯುವೆಲ್ಸ್‌ಗೆ ಭೇಟಿ ನೀಡಿ ಕರಿಮಣಿಯನ್ನು ಖರೀದಿಸಿ

ಸುಳ್ಯ ನ್ಯಾಯಾಲಯದಲ್ಲಿ ವಿಶೇಷ ಮಧ್ಯಸ್ಥಿಕಾ ಅಭಿಯಾನ : ಅಕ್ಟೋಬರ್ 7 ರವರೆಗೆ ಅವಕಾಶ

ಸುಳ್ಯ: ಸುಳ್ಯ ನ್ಯಾಯಾಲಯದಲ್ಲಿ ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ ಎಂಬ 90 ದಿನಗಳ ವಿಶೇಷ ಮಧ್ಯಸ್ಥಿಕಾ ಅಭಿಯಾನ ಜುಲೈಯಿಂದ ಪ್ರಾರಂಭವಾಗಿದ್ದು, ಅಕ್ಟೋಬ‌ರ್ 7ರ ವರೆಗೆ ಈ ಅಭಿಯಾನ ನಡೆಯಲಿದೆ. ನ್ಯಾಯಾಲಯಗಳಲ್ಲಿ ಬಾಕಿ ಇರುವ ಸಿವಿಲ್ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ಪ್ರಕರಣಗಳು, ವೈವಾಹಿಕ ಹಾಗೂ ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ವಾಣಿಜ್ಯ ಮತ್ತು ಸೇವಾ ಪ್ರಕರಣಗಳು,ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಗ್ರಾಹಕರ ವ್ಯಾಜ್ಯ