ಸಂಪಾಜೆ: ಮುಂಬರುವ ಪಂಚಾಯತ್ ಚುನಾವಣೆಗಳ ಹೊಸ್ತಿಲಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಂಪಾಜೆ ವಲಯದಲ್ಲಿ ದೊಡ್ಡ ಆಘಾತ ಎದುರಾಗಿದೆ. ದೀರ್ಘಕಾಲದಿಂದ ವಲಯ ಕಾಂಗ್ರೆಸ್ ಘಟಕವನ್ನು ಮುನ್ನಡೆಸುತ್ತಿದ್ದ ಹಿರಿಯ ನಾಯಕ ಸೋಮಶೇಖರ್ ಕೊಯಿಂಗಾಜೆ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಪಕ್ಷದ ಒಳಚಟುವಟಿಕೆಗಳ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆ ಆರಂಭವಾಗಿದೆ.ಸುಳ್ಯ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಡಬ ತಾಲೂಕು (ರಿ), ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಕಡಬ ಘಟಕದ ಸಹಯೋಗದಲ್ಲಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ವಾರ್ಷಿಕೋತ್ಸವ ಹಾಗೂ ಬ್ಯಾಗ್ ವಿತರಣಾ ಕಾರ್ಯಕ್ರಮ ಕಡಬದ ಅಮೃತ ಸರೋವರದ ದಡದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ವಲಯದ ಅಧ್ಯಕ್ಷರಾದ ಕರುಣಾಕರ ಗೋಗಟೆ ಅವರು ಉದ್ಘಾಟಿಸಿ ಶುಭ ಹಾರೈಸಿದರು.
ಮಂಗಳೂರು: ತಣ್ಣೀರುಬಾವಿಯ ಸರ್ಫ್ ಕ್ಲಬ್ನಲ್ಲಿ ಮೂರನೇ ಆವೃತ್ತಿಯ ‘ಡೆನ್ ಡೆನ್ 2026’ ಅಂತರಾಷ್ಟ್ರೀಯ ಮುಕ್ತ ಸಮುದ್ರ ಈಜು ಚಾಂಪಿಯನ್ಶಿಪ್ ಜ.26ರಂದು ಆಯೋಜಿಸಿದೆ. ಈ ಮೂಲಕ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಈಜುಪಟುಗಳನ್ನು ಮಂಗಳೂರಿಗೆ ಸೆಳೆಯುತ್ತಿದೆ. ಡೆನ್ ಡೆನ್ 2026ರ ಆವೃತ್ತಿಯಲ್ಲಿ 500 ಮೀ(ಮುಕ್ತ ಈಜು), 2 ಕಿ.ಮೀ., 4 ಕಿ.ಮೀ., 6 ಕಿ.ಮೀ. ಮತ್ತು 8 ಕಿ.ಮೀ. ವಿಭಾಗಗಳಲ್ಲಿ ಸಮುದ್ರದಲ್ಲಿ ಈಜು ಸ್ಪರ್ಧೆ ನಡೆಯಲಿದೆ. ವೇಗವಾಗಿ
ಶ್ರೀ ಜನಾರ್ಧನ ಶಾಲೆ ಎಳ್ಳಾರೆಯಲ್ಲಿನಡೆದ ಜಿಲ್ಲಾ ಮಟ್ಟದ ಕುಣಿತ ಭಜನಾ ಸ್ಪರ್ಧೆಯಲ್ಲಿ ಶ್ರೀ ಆನೆಗುಂದಿ ಸರಸ್ವತಿ ಪೀಠ ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಶಾಲೆಯಿಂದ ಪ್ರಾಥಮಿಕ ಮತ್ತು ಪ್ರೌಢ ವಿಭಾಗದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದು, ಪ್ರೌಢ ವಿಭಾಗದಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.
ಮೂಡುಬಿದಿರೆ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರ ಸಂಸ್ಥೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಸ್ಥಳೀಯ ಸಂಸ್ಥೆ ಮೂಡುಬಿದಿರೆ ಹಾಗೂ ಆಳ್ವಾಸ್ ಶಿಕ್ಷಣ ಸಂಸ್ಥೆಯ ಸಹಭಾಗಿತ್ವದಲ್ಲಿ ಕನ್ನಡ ಭವನದಲ್ಲಿ 5 ದಿನಗಳ ಕಾಲ ನಡೆಯುವ ರಾಷ್ಟ್ರಮಟ್ಟದ ರಾಷ್ಟ್ರೀಯ ಭಾವೈಕ್ಯತಾ ಶಿಬಿರವು ಗುರುವಾರ ಆರಂಭಗೊಂಡಿತು. ಮಂಗಳೂರು ಪೊಲೀಸ್ ಉಪ ಆಯುಕ್ತರಾದ ನಜ್ಮಾ ಫರೂಕಿ ಶಿಬಿರವನ್ನು ಉದ್ಘಾಟಿಸಿ ಶುಭ
ಬೆಳ್ತಂಗಡಿ: ಸ. ಉ. ಪ್ರಾ. ಶಾಲೆ ಬಂಗಾಡಿ ಇಲ್ಲಿನ ದೈಹಿಕ ಶಿಕ್ಷಣ ಶಿಕ್ಷಕಿಯಾದ ತ್ರಿಶಲ ಜೈನ್ ರವರು ಭಾರತ್ ಸ್ಕೌಟ್ ಏಂಡ್ ಗೈಡ್ ಇದರ ಗೈಡ್ ಕ್ಯಾಪ್ಟನ್ ರಾಗಿ ಸೇವೆ ಸಲ್ಲಿಸುತ್ತಿದ್ದು, ಇವರು ರಾಷ್ಟ್ರೀಯ ತರಬೇತಿ ಕೇಂದ್ರ ಪಚಿಮರಿ ಮಧ್ಯಪ್ರದೇಶದಲ್ಲಿ ಏಪ್ರಿಲ್ ತಿಂಗಳಲ್ಲಿ ನಡೆದ 65ನೇ ಸಹಾಯಕ ಲೀಡರ್ (ALT) ತರಬೇತಿದಾರರ ತರಬೇತಿಯಲ್ಲಿ ಭಾಗವಹಿಸಿ 2025-26 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕ್ಯಾಂಪೋರಿಯಲ್ಲಿ ಇವರಿಗೆ ALT ಪದವಿಯ ಪ್ರಮಾಣ ಪತ್ರ ಹಾಗೂ
ಸುಬ್ರಹ್ಮಣ್ಯ ಜನವರಿ 21 : ದಕ್ಷಿಣ ಭಾರತದ ನಾಗರಾಧನೆಯ ಹೆಸರಾಂತ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ 2025 ನವಂಬರ್ ಹಾಗೂ ಡಿಸೆಂಬರ್ ನ ಎರಡು ತಿಂಗಳಲ್ಲಿ ಒಟ್ಟು 14 ಕೋಟಿ 77 ಲಕ್ಷದ 80,000 ರೂ. ಆದಾಯ ಬಂದಿರುತ್ತದೆ.ನವೆಂಬರ್ ತಿಂಗಳಲ್ಲಿ ವಿವಿಧ ಸೇವೆಗಳಿಂದ 4,5621739 ಕೋಟಿರೂಪಾಯಿ ಹುಂಡಿಯಿಂದ 1,0976957 ಕೋಟಿ ರೂಪಾಯಿ ಹಾಗೂ ಅನ್ನದಾನ ನಿಧಿಯಿಂದ 8357769 ಲಕ್ಷ ರೂಪಾಯಿ ಆದಾಯ ಬಂದಿರುತ್ತದೆ. ಹಾಗೆಯೇ ಡಿಸೆಂಬರ್ ತಿಂಗಳ ವಿವಿಧ
ಅಪ್ರಾಪ್ತ ಬಾಲಕಿಯ ಮೇಲೆ ಲೈಗಿಕ ದೌರ್ಜನ್ಯ ಎಸಗಿದ್ದ ಆರೋಪಿಗೆ ಇಲ್ಲಿನ ಪೋಕ್ಸೊ (P0CSO) ವಿಶೇಷ ನ್ಯಾಯಾಲಯವು 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 25 ಸಾವಿರ ರೂಪಾಯಿ ದಂಡ ವಿಧಿಸಿ ಗುರುವಾರ ಮಹತ್ವದ ತೀರ್ಪು ನೀಡಿದೆ. ಬಾಲಕಿಯ ಮೇಲೆ ನಡೆದಿದ್ದ ಈ ಘೋರ ಕೃತ್ಯದ ವಿಚಾರಣೆ ನಡೆಸಿದ ನ್ಯಾಯಾಧೀಶರು, ಆರೋಪಿಯ ಮೇಲಿನ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಈ ಶಿಕ್ಷೆ ಪ್ರಕಟಿಸಿದ್ದಾರೆ. ದಂಡದ ಮೊತ್ತದ ಜೊತೆಗೆ, ಸಂತ್ರಸ್ತ ಬಾಲಕಿಯ ಕುಟುಂಬಕ್ಕೆ ಸರ್ಕಾರದಿಂದ 7
ಪಾರ್ಕ್ ಉಳಿಸುವ ಹೊಣೆ ಯಾರದು ? ನಗರದ ಮಲ್ಲಿಕಟ್ಟೆ ಶಿವಭಾಗ್ ವಾರ್ಡ್ ಸಂಖ್ಯೆ 34 ವ್ಯಾಪ್ತಿಯಲ್ಲಿ ಇರುವ ಪಾರ್ಕ್ ಇಂದು ಸಂಪೂರ್ಣ ಅವ್ಯವಸ್ಥೆಯ ಗೂಡಾಗಿದೆ. ಮಕ್ಕಳ ಆಟ, ಹಿರಿಯರ ವಾಕಿಂಗ್, ಸಾರ್ವಜನಿಕರ ವಿಶ್ರಾಂತಿಗಾಗಿ ನಿರ್ಮಿಸಲಾಗಿದ್ದ ಈ ಪಾರ್ಕ್ ಈಗ ಅಸ್ತವ್ಯಸ್ತ ಸ್ಥಿತಿಯಲ್ಲಿ ಕಂಡುಬರುತ್ತಿದೆ. ಸರಿಯಾದ ನಿರ್ವಹಣೆ ಇಲ್ಲದ ಕಾರಣ ಪಾರ್ಕ್ಗೆ ಬರುವ ನಾಗರಿಕರು ಅನೇಕ ಅನಾನುಕೂಲಗಳನ್ನು ಅನುಭವಿಸಬೇಕಾಗಿದ್ದು, ಬೆಳಗ್ಗೆ ಹಾಗೂ ಸಂಜೆ ಸಮಯದಲ್ಲಿ ವಾಕಿಂಗ್ಗೆ
ಸ್ವಾಮಿ ವಿವೇಕಾನಂದರ ಜನ್ಮ ದಿನದ ಸಂದರ್ಭದಲ್ಲಿಆಚರಿಸಲಾದ ರಾಷ್ಟ್ರೀಯ ಯುವದಿನ 2026ಅನ್ನುಅನುಸಂಧಾನಿಸಿ, ಯೇನೇಪೋಯ ನ್ಯಾಚುರೋಪಥಿ ಮತ್ತು ಯೋಗ ವಿಜ್ಞಾನ ಕಾಲೇಜು ಮತ್ತುಆಸ್ಪತ್ರೆಯ ರಾಷ್ಟ್ರೀಯ ಸೇವಾ ಯೋಜನೆ ಘಟಕವು ವ್ಯಕ್ತಿತ್ವ ಅಭಿವೃದ್ಧಿ ಕಾರ್ಯಾಗಾರವನ್ನು ಆಯೋಜಿಸಿತು. ಕಾರ್ಯಕ್ರಮವು19 ಜನವರಿ 2026, ಬೆಳಿಗ್ಗೆ10:30 ರಿಂದ ಮಧ್ಯಾಹ್ನ 12:30ರವರೆಗೆ ಕಾಲೇಜು ಸಭಾಂಗಣದಲ್ಲಿ ಜರುಗಿತು.ಈ ಸಂದರ್ಭದಲ್ಲಿ ಮಂಗಳೂರು ಮೂಲದ ORESO ಸಂಸ್ಥೆಯ ಸ್ಥಾಪಕಿ ಮತ್ತು




























