Home Archive by category ಕರಾವಳಿ (Page 17)

ಮೂಡುಬಿದಿರೆ: ಮಾಧ್ಯಮ ಕ್ಷೇತ್ರದ ಸಾಧನೆಗಾಗಿ ಲಿಖಿತಾ ಪ್ರಜ್ವಲ್ ಅವರಿಗೆ ‘ಅಬ್ಬಕ್ಕ ಪ್ರೇರಣಾ ಪುರಸ್ಕಾರ’

ಮೂಡುಬಿದಿರೆ: ವೀರರಾಣಿ ಅಬ್ಬಕ್ಕ ೫೦೦ನೇ ವರ್ಷದ ಸಂಭ್ರಮದ ಅಂಗವಾಗಿ ‘ಜವನೆರ್ ಬೆದ್ರ’ ಸಂಘಟನೆಯು ನೀಡುವ ಪ್ರತಿಷ್ಠಿತ ‘ಅಬ್ಬಕ್ಕ ಪ್ರೇರಣಾ ಪುರಸ್ಕಾರ’ಕ್ಕೆ ವಿ೪ ನ್ಯೂಸ್‌ನ ನಿರೂಪಕಿ ಲಿಖಿತಾ ಪ್ರಜ್ವಲ್ ಅವರು ಆಯ್ಕೆಯಾಗಿದ್ದು ಅವರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ಚೌಟ ರಾಣಿ ಅಬ್ಬಕ್ಕಳ ೫೦೦ನೇ ಜನ್ಮಶತಾಭ್ದಿಯ

ಮೂಡುಬಿದಿರೆ: 500 ಪ್ರೇರಣಾದಾಯಿ 99ನೇ ಉಪನ್ಯಾಸ ಕಾರ್ಯಕ್ರಮ – ಸೇವಾ ಸಾಧಕರಿಗೆ ಸಮ್ಮಾನ

ಮಂಗಳೂರು: ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಭಾಗವು ಮೂಡುಬಿ ದಿರೆಯ ಎಕ್ಸಲೆಂಟ್ ವಿದ್ಯಾಸಂಸ್ಥೆಯ ಆಶ್ರಯದಲ್ಲಿ ‘ಅಬ್ಬಕ್ಕ : 500 ಪ್ರೇರಣಾ ದಾಯಿ 100 ಸರಣಿ ಉಪನ್ಯಾಸದ 99ನೇ ಕಾರ್ಯಕ್ರಮ ಮತ್ತು ಸಾಧಕರ ಸಮ್ಮಾನ ಸಮಾರಂಭ ವಿದ್ಯಾಸಂಸ್ಥೆಯ ‘ರಾಜ ಸಭಾಂಗಣ’ ದಲ್ಲಿ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಮೂಡಬಿದಿರೆ ಚೌಟ ಮನೆತನದ ಅಬ್ಬಕ್ಕ ವಂಶಸ್ಥೆ ಧರ್ಮಸ್ಥಳದ ಅನಿತಾ ಸುರೇಂದ್ರ ಕುಮಾರ್ ಉದ್ಘಾಟಿಸಿ ಮಾತನಾಡಿ,

ಗಮ್ಮತ್ ಕಲಾವಿದರ್ ಯುಎಇ ವಾರ್ಷಿಕ ಸಭೆ: 2026–27ರ ನೂತನ ಪದಾಧಿಕಾರಿಗಳ ಆಯ್ಕೆ

ಯುಎಇಯ ಪ್ರಸಿದ್ಧ ತುಳು ನಾಟಕ ತಂಡ ಗಮ್ಮತ್ ಕಲಾವಿದರ್ ಯುಎಇ 2011ರಲ್ಲಿ ಸ್ಥಾಪನೆಗೊಂಡು ತುಳು ರಂಗಭೂಮಿಯನ್ನು ಸಕ್ರಿಯವಾಗಿ ಮರಳುನಾಡಿನಲ್ಲಿ ಬೆಳೆಸಿಕೊಂಡು ಬರುತ್ತಿದ್ದು, ಗುಣಮಟ್ಟದ ನಾಟಕ ಪ್ರದರ್ಶನಗಳು, ಪರಿಪಕ್ವವಾದ ಅಭಿನಯಗಳ ಮೂಲಕ ಕೊಲ್ಲಿ ರಾಷ್ಟ್ರದಲ್ಲಿ ಮಾತ್ರವಲ್ಲದೆ ತಾಯ್ನಾಡಿನ ತುಳು ರಂಗಭೂಮಿಯಲ್ಲಿ ತನ್ನದೇ ಆದ ಗೌರವಾನ್ವಿತ ಸ್ಥಾನವನ್ನು ಗಳಿಸಿದೆ. ರಂಗಭೂಮಿಯ ಚಟುವಟಿಕೆಗಳಷ್ಟೇ ಅಲ್ಲದೆ, ಗಮ್ಮತ್ ಕಲಾವಿದರ್ ಯುಎಇ ಕಳೆದ ಒಂದು ದಶಕಕ್ಕಿಂತ ಹೆಚ್ಚು

ಮಂಗಳೂರು, ಉಡುಪಿ, ಪುತ್ತೂರಿನಲ್ಲಿ ಕಟ್ಟೆಮಾರ್ ಸಿನಿಮಾದ ಪ್ರೀಮಿಯರ್ ಶೋ

ಕೋಸ್ಟಲ್‌ವುಡ್‌ನ ಬಹುನಿರೀಕ್ಷೆಯ ಸಿನಿಮಾ ಕಟ್ಟೆಮಾರ್. ಜನವರಿ ೨೩ರಂದು ಕರಾವಳಿಯಾದ್ಯಂತ ಸಿನಿಮಾ ಬಿಡುಗಡೆಗೊಳಲ್ಲಿದೆ. ಅದಕ್ಕಿಂತ ಮುಂಚಿತವಾಗಿ ಮಂಗಳೂರು, ಪುತ್ತೂರು ಮತ್ತು ಉಡುಪಿಯಲ್ಲಿ ಸಿನಿಮಾದ ಪ್ರೀಮಿಯರ್ ಶೋ ಪ್ರದರ್ಶನ ನಡೆಯಲಿದೆ.ಸಚಿನ್ ಕಟ್ಲ ಮತ್ತು ರಕ್ಷಿತ್ ಗಾಣಿಗ ಆಕ್ಷನ್ ಕಟ್ ನಿರ್ದೇಶನದಲ್ಲಿ ಮೂಡಿ ಬಂದಿದರುವ ಕಟ್ಟೆಮಾರ್ ಈಗಾಗಲೇ ತನ್ನ ಪೋಸ್ಟರ್, ಹಾಡುಗಳಿಂದ ಸಖತ್ ಕುತೂಹಲ ಹುಟ್ಟಿಸಿದೆ. ಕೋಸ್ಟಲ್‌ವುಡ್‌ನಲ್ಲಿ ವಿಭಿನ್ನ ಬಗೆಯ ಕಥೆಯನ್ನು ಹೇಳಲು

ಕಳ್ಳತನಕ್ಕೆ ಯತ್ನ ಪ್ರಕರಣದಲ್ಲಿ ಕುಖ್ಯಾತ ಕಳ್ಳನ ಬಂಧನ

ಕಾರ್ಕಳ: ತಾಲೂಕಿನ ಬಜಗೋಳಿ ಬಂಟ್ಸ್ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಯಲ್ಲಿ ಜ.16 ರಂದು ಕಳ್ಳತನಕ್ಕೆ ಯತ್ನಿಸಿದ ಪ್ರಕರಣದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನಿಟ್ಟೆ ಗ್ರಾಮದ ಸುರೇಶ್‌ ಪೂಜಾರಿ ಎಂದು ಗುರುತಿಸಲಾಗಿದೆ. ಈತನ ಮೇಲೆ ಈಗಾಗಲೇ ಕಾರ್ಕಳ ನಗರ, ಕಾರ್ಕಳ ಗ್ರಾಮಾಂತರ, ಪಡುಬಿದ್ರೆ, ಬೆಳ್ತಂಗಡಿ, ಉಡುಪಿ ನಗರ, ಗೋವಾ ಸೇರಿದಂತೆ ವಿವಿಧ ಪೊಲೀಸ್‌ ಠಾಣೆಗಳಲ್ಲಿ ಕಳ್ಳತನ ಪ್ರಕರಣ ದಾಖಲಾಗಿದೆ. ಜ.16ರಂದು ಈತ ಸೊಸೈಟಿ ಬೀಗ

ಕನ್ನಡ ಚಿತ್ರರಂಗದ ನಟ ಕುಮಾರ್ ಬಂಗಾರಪ್ಪ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ

ಕಾಪು:ಕರ್ನಾಟಕ ಸರಕಾರದ ಮಾಜಿ ಸಚಿವ ಹಾಗೂ ಕನ್ನಡ ಚಿತ್ರರಂಗದ ನಟ ಕುಮಾರ್ ಬಂಗಾರಪ್ಪ ಅವರು ಪತ್ನಿ ಸಮೇತ ಮಕ್ಕಳ ಜೊತೆ ದಿನಾಂಕ 17 ಶನಿವಾರದಂದು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಭೇಟಿ ನೀಡಿದರು. ಭೇಟಿ ನೀಡಿದ ಅವರು ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರುಶನ ಪಡೆದು ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ನೀಡಿದ ಅಮ್ಮನ ಅನುಗ್ರಹ ಪ್ರಸಾದ ಸ್ವೀಕರಿಸಿ ಗೌರವಕ್ಕೆ ಪಾತ್ರರಾದರು. ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ

ವಿದ್ಯಾರ್ಥಿಗಳಿಗೆ ಎಂಡಿಎಂಎ ಮಾದಕ ವಸ್ತು ಮಾರಾಟ: ಆರೋಪಿಯ ಬಂಧನ

ಮಂಗಳೂರು: ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಯುವಕನೋರ್ವನನ್ನು ಕದ್ರಿ (ಮಂಗಳೂರು ಪೂರ್ವ ಠಾಣೆ) ಠಾಣಾ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಕೇರಳದ ಎರ್ನಾಕುಂ ಜಿಲ್ಲೆಯ ಮುತೊಲಪುರಂ ನಿವಾಸಿ ಜೂಡ್ ಮಾಥ್ಯೂ (20) ಬಂಧಿತ ಆರೋಪಿ. ಆತನಿಂದ 5.20 ಗ್ರಾಂ ತೂಕದ MDMA ಮಾದಕ ವಸ್ತು, ಕೃತ್ಯಕ್ಕೆ ಬಳಸಿದ ಬೈಕ್ ಸಮೇತ ಒಟ್ಟು 70,000 ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪದವು ಗ್ರಾಮದ ಕೈಲಾಸ

ಉದ್ಯಮದ ಕನಸು ಕಂಡಿದ್ದ ಯುವಕ ನೇಣಿಗೆ ಶರಣು

ಮೂಡುಬಿದಿರೆ: ಇಲ್ಲಿನ ರಿಂಗ್ ರೋಡ್ ಬಳಿಯಲ್ಲಿ ಹೊಟೇಲ್ ಉದ್ಯಮವನ್ನು ಆರಂಭಿಸಬೇಕೆಂದು ಕನಸು ಕಂಡಿದ್ದ ಯುವಕನೋವ೯ ನೇಣಿಗೆ ಶರಣಾದ ಘಟನೆ ಶನಿವಾರ ಮಧ್ಯಾಹ್ನ ನಾಗರಕಟ್ಟೆಯಲ್ಲಿ ನಡೆದಿದೆ. ನಾಗರಕಟ್ಟೆ-ಒಂಟಿಕಟ್ಟೆ ಕ್ರಾಸ್ ರಸ್ತೆಯ ಬಳಿ ಕಬ್ಬಿನ ಜ್ಯೂಸ್ ನ ಮಾರಾಟ ಮಾಡುತ್ತಿರುವ ಶ್ರೀನಿವಾಸ್ ಅವರ ಮಗ ದೀಕ್ಷಿತ್ (35) ಆತ್ಮಹತ್ಯೆ ಮಾಡಿಕೊಂಡ ಯುವಕ. ದುಬೈನಲ್ಲಿ ಉದ್ಯೋಗ ಮಾಡುತ್ತಿದ್ದ ದೀಕ್ಷಿತ್ ಕಳೆದ ಒಂದೂವರೆ ವಷ೯ಗಳಿಂದ ಊರಿನಲ್ಲಿಯೇ ಇದ್ದು ಹೊಟೇಲ್ ನಡೆಸುವ

ಕಲೆಯ ಮೂಲಕ ವಿದ್ಯಾರ್ಥಿಗಳಲ್ಲಿ ತುಳು ಅಭಿರುಚಿ ಶ್ಲಾಘನೀಯ : ರಾಜೇಶ್ ಶೆಟ್ಟಿ

ಮಂಗಳೂರು : ವಿವಿಧ ಕಲಾ ಪ್ರಕಾರಗಳ ಮೂಲಕ ವಿದ್ಯಾರ್ಥಿಗಳಲ್ಲಿ ತುಳು ಭಾಷೆಯ ಬಗ್ಗೆ ಅಭಿರುಚಿ ಅಭಿಮಾನ ಮೂಡಿಸುವ ಕಾರ್ಯ ಶ್ಲಾಘನೀಯ ಎಂದು ಕೆ.ಎಸ್.ಆರ್ .ಟಿ.ಸಿ. ಮಂಗಳೂರು ವಿಭಾಗೀಯ ನಿಯಂತ್ರಾಣಾಧಿಕಾರಿ ರಾಜೇಶ್ ಶೆಟ್ಟಿ ಅವರು ಹೇಳಿದರು.ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಮಂಗಳೂರಿನ ತುಳುಭವನದಲ್ಲಿ ಹಮ್ಮಿಕೊಂಡ ‘ಜೋಕ್ಲೆ ಕಲಾ ಚಾತುರ್ಪು’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಾಲಾ ಕಾಲೇಜು ಹಂತದಲ್ಲಿ ವಿವಿಧ

ಮಂಗಳೂರು: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಮಂಗಳೂರು ತಾಲೂಕು ಪಣಂಬೂರು ಠಾಣಾ ವ್ಯಾಪ್ತಿಯ ಪಣಂಬೂರು ಕಡಲ ಕಿನಾರೆ ಬ್ರೇಕ್ ವಾಟರ್ ಬಳಿ ಸಮುದ್ರದ ದಡದಲ್ಲಿ ಜ.೧೬ರಂದು ಬೆಳಿಗ್ಗೆ ೬.೩೦ಕ್ಕೆ ಅಪರಿಚಿತ ಗಂಡಸಿನ ಮೃತದೇಹ ಪತ್ತೆಯಾಗಿದೆ. ಮೃತರ ವಾರಿಸುದಾರರು ಪತ್ತೆಯಾಗದೆ ಇರುವುದರಿಂದ ಮೃತದೇಹವನ್ನು ಮಂಗಳೂರಿನ ಸರ್ಕಾರಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಗಂಡಸಿನ ಪ್ರಾಯ ಸುಮಾರು55-60 ವರುಷ. ಎತ್ತರ ಸುಮಾರು 5.5 ಅಡಿ. ಮೈಯಲ್ಲಿ ಯಾವುದೇ ಬಟ್ಟೆಗಳು ಇರುವುದಿಲ್ಲದೃಡಕಾಯ ಶರೀರ, 3