Home Archive by category ಕರಾವಳಿ (Page 21)

ಸುಳ್ಯ ಶಾಸಕರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಮಾನ

ಫೇಸ್‌ಬುಕ್ ಪೋಸ್ಟ್‌ಗೆ ಬಿಜೆಪಿ ತೀವ್ರ ಆಕ್ರೋಶ – ಮಂಡಲ ಬಿಜೆಪಿ ಖಂಡನೆ, ಉಗ್ರ ಪ್ರತಿಭಟನೆ ಎಚ್ಚರಿಕೆ ಸುಳ್ಯ : ಸುಳ್ಯದ ಶಾಸಕಿ ಕು. ಭಾಗೀರಥಿ ಮುರುಳ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತೀರಾ ಅವಮಾನಕರ ಹಾಗೂ ಅಸಹ್ಯಕರ ಪೋಸ್ಟ್‌ ಹಾಕಿರುವ ಪ್ರಕರಣವನ್ನು ಸುಳ್ಯ ಮಂಡಲ ಬಿಜೆಪಿ ಅತ್ಯಂತ ಕಠಿಣ ಪದಗಳಲ್ಲಿ ಖಂಡಿಸಿದೆ. ಬಿಲ್ಲವ ಸಂದೇಶ್ ಎನ್ನುವ ಫೇಸ್‌ಬುಕ್

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್ ಸಭೆಯಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಉಡುಪಿ:ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಇಂದು ದಿನಾಂಕ 06-01-2026 ರಂದು ಮಣಿಪಾಲ ರಜತಾದ್ರಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಸುನೀಲ್ ಕುಮಾರ್, ಜಿಲ್ಲಾಧಿಕಾರಿಗಳಾದ ಸ್ವರೂಪ ಟಿ.ಕೆ, ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ವಿಜ್ಞಾನಿ ವಿಂಧ್ಯಾ

ಎಂಡಿಎಂಎ ಮಾರಾಟ: ಆರೋಪಿಯ ಬಂಧನ

ಅಟೋ ರಿಕ್ಷಾದಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಪೌಡರ್ ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಉಡುಪಿ ಪೊಲೀಸರು ಕರಂಬಳ್ಳಿ ರಾಮಬೆಟ್ಟು ಸಮೀಪ ಬಂಧಿಸಿದ್ದಾರೆ. ಉಡುಪಿ ದೊಡ್ಡಣಗುಡ್ಡೆ ನಿವಾಸಿ ಅಬ್ದುಲ್ ರೌಫ್(26) ಬಂಧಿತ ಆರೋಪಿ. ಈತನಿಂದ 15,000ರೂ. ಮೌಲ್ಯದ 7.59 ಗ್ರಾಂ ತೂಕದ ಎಂಡಿಎಂಎ ಮಾದಕ ವಸ್ತು, ಮತ್ತು ಮಾರಾಟ ಮಾಡಿ ಗಳಿಸಿದ್ದ 3100ರೂ. ನಗದು ಮತ್ತು ಆಟೋರಿಕ್ಷಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇವುಗಳ ಒಟ್ಟು ಮೌಲ್ಯ 3,23,100ರೂ. ಎಂದು

ಸಾಮರಸ್ಯಕ್ಕೆ ಅಡ್ಡಿಪಡಿಸುವ ಸಾಮಾಜಿಕ ಜಾಲತಾಣ ಪೋಸ್ಟ್:ಓರ್ವ ಆರೋಪಿಯ ಬಂಧನ

ಈ ಬಾರಿಯ ಶಿರೂರು ಮಠದ ಪರ್ಯಾಯ ಮಹೋತ್ಸವದ ಪ್ರಯುಕ್ತ ಹೊರೆಕಾಣಿಕೆ ಅರ್ಪಿಸುವ ಸಂಬಂಧ ರಚಿಸಲಾದ ಉಡುಪಿ ಜಿಲ್ಲಾ ಮುಸ್ಲಿಮ್ ಸೌಹಾರ್ದ ಪರ್ಯಾಯ ಸಮಿತಿ ಬಗ್ಗೆ ಧರ್ಮ, ಜನಾಂಗಗಳ ಮಧ್ಯೆ ದ್ವೇಷವನ್ನು ಉತ್ತೇಜಿಸುವ ಮತ್ತು ಸಾರ್ವಜನಿಕ ಸಾಮರಸ್ಯಕ್ಕೆ ತೊಂದರೆ ಮಾಡುವ ರೀತಿ ಆಕ್ಷೇಪಾರ್ಹ ಬರಹಗಳನ್ನು ಬೆರೆದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಾರ್ಕಳ ತಾಲೂಕಿನ ನಿಟ್ಟೆ

ಕೊರಗ ಸಮುದಾಯದ ಯುವ ಜನರಿಗೆ ಸರಕಾರಿ ಉದ್ಯೋಗ ನೇರ ನೇಮಕಾತಿಗೆ ಒತ್ತಾಯಿಸಿ ನಿರಂತರ ಅಹೋರಾತ್ರಿ ಧರಣಿ ಸತ್ಯಾಗ್ರಹ

ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕಳೆದ 23 ದಿನಗಳಿಂದ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ(ರಿ ) ಇವರ ವತಿಯಿಂದ ನಡೆಯುತ್ತಿರುವ ಕೊರಗ ಸಮುದಾಯದ ಯುವ ಜನರಿಗೆ ಸರಕಾರಿ ಉದ್ಯೋಗ ನೇರ ನೇಮಕಾತಿಗೆ ಒತ್ತಾಯಿಸಿ ನಿರಂತರ ಅಹೋರಾತ್ರಿ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಮಾನ್ಯ ಕೆಪಿಸಿಸಿ ಕಾರ್ಯಧ್ಯಕ್ಷರು ಹಾಗೂ ಶಾಸಕರಾದ ಶ್ರೀ ಮಂಜುನಾಥ ಭಂಡಾರಿ ಅವರು ಆಗಮಿಸಿ ಅಲ್ಲಿನ ಸಮಸ್ಯೆ ಕುರಿತು ಮಾನ್ಯ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ

ಸಾರ್ವಜನಿಕ ಹಿಂದೂ ರುದ್ರಭೂಮಿಗೆ ಸಿಲಿಕಾನ್ ಚೇಂಬರ್ ಹಸ್ತಾಂತರ

ಬೆಳ್ಳಾರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕ ಹಿಂದೂ ರುದ್ರಭೂಮಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ (ರಿ.), ಸುಳ್ಯ ವತಿಯಿಂದ ಮಂಜೂರಾದ ಸಿಲಿಕಾನ್ ಚೇಂಬರ್ ಅನ್ನು ದಿನಾಂಕ 05.01.2026 ರಂದು ಊರಿನ ಗಣ್ಯರು ಹಾಗೂ ಸಾರ್ವಜನಿಕರ ಸಮ್ಮುಖದಲ್ಲಿ ಯಶಸ್ವಿಯಾಗಿ ಹಸ್ತಾಂತರಿಸಲಾಯಿತು.ಕಾರ್ಯಕ್ರಮದಲ್ಲಿ ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ನಮಿತಾ ಎಲ್. ರೈ ಅವರು ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷರಾದ

ಉಡುಪಿ ಜಿಲ್ಲೆಯಲ್ಲಿ ಆಯುಷ್ ಹಬ್ಬ 2026 ರ ಜನಜಾಗೃತಿ ಅಭಿಯಾನಕ್ಕೆ ಚಾಲನೆ

ಪಡುಬಿದ್ರಿ:ಮಂಗಳೂರು ನಗರದ ಟಿ ಎಂ ಎ ಪೈ ಇಂಟರ್ನ್ಯಾಷನಲ್ ಕನ್ವೆನ್ಶನ್ ಸೆಂಟರ್ ನಲ್ಲಿ ಜನವರಿ 31 ಮತ್ತು ಫೆಬ್ರವರಿ1 ರಂದು ಜರುಗಲಿರುವ ಭಾರತೀಯ ವೈದ್ಯ ಪದ್ಧತಿಗಳ ಮಹಾ ಸಂಭ್ರಮ- ಆಯುಷ್ ಹಬ್ಬದ ಬಗ್ಗೆ ಉಡುಪಿ ಜಿಲ್ಲೆಯಲ್ಲಿ ಜನಜಾಗೃತಿ ಅಭಿಯಾನಕ್ಕೆ ಭಾನುವಾರದಂದು ಚಾಲನೆ ನೀಡಲಾಯಿತು. ಆಯುಷ್ ಫೆಡರೇಶನ್ ಆಫ್ ಇಂಡಿಯಾ ಉಡುಪಿ ಜಿಲ್ಲೆಯ ವತಿಯಿಂದ ಆಯುಷ್ ವೃತ್ತಿನಿರತ ವೈದ್ಯರ ಉಪಸ್ಥಿತಿಯಲ್ಲಿ ಜರುಗಿದ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಎ.ಎಫ್.ಐ

ಬಾಲ ಯೇಸುವಿನ ವಾರ್ಷಿಕ ಮಹೋತ್ಸವದ ಸಂಭ್ರಮದ ಹೊರೆ ಕಾಣಿಕೆ ಮೆರವಣಿಗೆ

ಬಾಲ ಯೇಸುವಿನ ವಾರ್ಷಿಕ ಮಹೋತ್ಸವಕ್ಕೆ ಸಿದ್ಧತೆಯಾಗಿ ಜನವರಿ 3, 2026 ಶನಿವಾರ, ಕೊರ್ಡೆಲ್ ಚರ್ಚ್ ನಿಂದ ಬಿಕರ್ನಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರದ ವರೆಗೆ ಭಕ್ತಿಭಾವಪೂರ್ಣ ಹೊರೆ ಕಾಣಿಕೆ ಮೆರವಣಿಗೆ ನಡೆಯಿತು. ಅನೇಕ ಭಕ್ತರು ಕೃತಜ್ಞತೆ, ನಂಬಿಕೆ ಮತ್ತು ಆಶಯದೊಂದಿಗೆ ಕಾಣಿಕೆಗಳನ್ನು ಸಮರ್ಪಿಸಿದರು. ವಂ. ವಿಜಯ್ ಮೊಂತೆರೋ, (ಸಹಾಯಕ ಧರ್ಮಗುರು , ಕೊರ್ಡೆಲ್ ಚರ್ಚ್) ಆಶೀರ್ವಾದ ನೀಡಿ, ಶ್ರೀಮತಿ ರೂತ್ ಕ್ಯಾಸ್ಟೆಲಿನೊ, (ಉಪಾಧ್ಯಕ್ಷೆ, ಕೊರ್ಡೆಲ್ ಚರ್ಚ್)

ಶ್ರೀಮಾಧವ ಮಂಗಲ ಪೂಜಾರ್ಯರ ಬ್ರಹತ್ ಕಂಚಿನ ಪುತ್ಥಳಿ ನಿರ್ಮಾಣದ ಮನವಿ ಪತ್ರ ಹಾಗೂ ರಶೀದಿ ಪುಸ್ತಕ ಬಿಡುಗಡೆ

ಉಚ್ಚಿಲ:ಮೊಗವೀರ ಸಮಾಜದ ಮೂಲ ಧಾರ್ಮಿಕ ಕೇಂದ್ರವಾದ ಬೆಣ್ಣೆಕುದ್ರು ಶ್ರೀ ಕುಲಮಹಾಸ್ತ್ರೀ ಅಮ್ಮನವರ ದೇವಸ್ಥಾನದಲ್ಲಿ ಲಭ್ಯವಿರುವ ಲಿಖಿತ ಮಾಹಿತಿಯಂತೆ, ಸುಮಾರು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಗುರು ಪರಂಪರೆಯ 9ನೇ ಹಾಗೂ ಕೊನೆಯ ಗುರುಗಳಾದ ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಬ್ರಹತ್ ಕಂಚಿನ ಪುತ್ಥಳಿಯನ್ನು ಅಂದಾಜು 3 ಕೋಟಿ ರೂಪಾಯಿಗಳ ವೆಚ್ಚದಲ್ಲಿ ನಿರ್ಮಾಣ ಮಾಡುವ ಸಲುವಾಗಿ ರೂಪಿಸಿದ ಮನವಿ ಪತ್ರ ಹಾಗೂ ರಶೀದಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ಇಂದು ಶ್ರೀ

ಪದ್ಮಾ ಆರ್. ಶೇಟ್ ನಿಧನ

ಮಂಗಳೂರಿನ ಲೇಡಿಹಿಲ್‌ನ ಎಸ್.ಎಲ್ ಡೈಮಂಡ್ ಹೌಸ್ ಮಾಲಕರಾದ ರವೀಂದ್ರ ಶೇಟ್ ಅವರ ಅಣ್ಣ ದಿ| ಎಂ.ರಘುನಾಥ ಶೇಟ್ ಅವರ ಪತ್ನಿ ಪದ್ಮಾ ಆರ್. ಶೇಟ್(75) ನಿಧನರಾಗಿದ್ದಾರೆ. ಪದ್ಮಾ ಆರ್. ಶೇಟ್ ಅಲ್ಪಕಾಲದ ಅನಾರೋಗ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾಗಿದ್ದಾರೆ. ಪದ್ಮಾ ಅವರು ದೈವಜ್ಞ ಬ್ರಾಹ್ಮಣ ಸಮುದಾಯದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದರು. ಮೃತರಿಗೆ ಪ್ರಸಿದ್ಧ ಉದ್ಯಮಿಗಳಾದ ಎಂ.ಪ್ರಶಾಂತ್ ಶೇಟ್, ಎಂ. ಹೇಮಂತ್ ಶೇಟ್,