Home Archive by category ಕರಾವಳಿ (Page 74)

ಅತಿ ಹೆಚ್ಚು ಬ್ಲೂ ಬೆರಿ ರಫ್ತು ಮಾಡುವ ದೇಶ ಯಾವುದು?

ಅತಿ ಹೆಚ್ಚು ಬ್ಲೂ ಬೆರಿ ರಫ್ತು ಮಾಡುವ ದೇಶ ಪೆರು; ಆಮದು ಮಾಡಿಕೊಂಡು ರಫ್ತು ಮಾಡುವ ದೇಶಗಳು ಯುಎಸ್‍ಎ ಹಾಗೂ ನೆದರ್‍ಲ್ಯಾಂಡ್ಸ್. ಜಾಗತಿಕವಾಗಿ 10 ಲಕ್ಷ ಟನ್ ಬ್ಲೂ ಬೆರಿ ಪ್ರತಿ ವರುಷ ರಫ್ತು ಆಗುತ್ತದೆ. ಜಾಗತಿಕ ರಫ್ತು ಪ್ರಮಾಣದಲ್ಲಿ ಪೆರು ಪಾಲು 31 ಶೇಕಡಾ. ಚಿಲಿ, ಸ್ಪೆಯಿನ್, ಮೊರಾಕೊಗಳ ರಫ್ತು ಪಾಲು ತಲಾ 8 ಶೇಕಡಾ, ಯುಎಸ್‍ಎ ಲೋಕ ರಫ್ತು ಪ್ರಮಾಣ 7 ಶೇಕಡಾ.

ಕಾಪು ಮಾರುಕಟ್ಟೆ ವತಿಯಿಂದ ನಡೆದ 79 ನೇ ಸ್ವಾತಂತ್ರ್ಯ ದಿನಾಚರಣೆ

ಕಾಪು ಮಾರುಕಟ್ಟೆ ವತಿಯಿಂದ ನಡೆದ 79 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಧ್ವಜಾರೋಹಣವನ್ನು ನೆರವೇರಿಸಿ ಸ್ವಾತಂತ್ರ್ಯೋತ್ಸವದ ಶುಭಾಶಯ ತಿಳಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ವಿನಯಕುಮಾರ್ ಸೊರಕೆ, ಕಾಪು ಪುರಸಭೆಯ ಸದಸ್ಯರು ಹಾಗೂ ಅಧಿಕಾರಿಗಳು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಕಚೇರಿಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರಿಂದ ಧ್ವಜಾರೋಹಣ

ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಕಚೇರಿಯಲ್ಲಿ ನಡೆದ 79ನೇ ಸ್ವಾತಂತ್ರ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಕಾಪು ಮಂಡಲ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾದ ಸಂತೋಷ್ ಮೂಡುಬೆಳ್ಳೆ ಹಾಗೂ

ಮಂಗಳೂರು: ಪಂಪವೆಲ್ ರೋಹನ್ ಸ್ಕ್ವೇರ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆ

ಮಂಗಳೂರು: ಭಾರತದ 79ನೇ ಸ್ವಾತಂತ್ರ್ಯ ದಿನವನ್ನು ರೋಹನ್ ಕಾರ್ಪೋರೇಶನ್ ಸಂಸ್ಥೆ ಇಂದು ಪಂಪ್ ವೆಲ್‌ನ ರೋಹನ್ ಸ್ಕ್ವೇರ್ ಆವರಣದಲ್ಲಿ ಭವ್ಯವಾಗಿ ಆಚರಿಸಿತು. ಕಾರ್ಯಕ್ರಮವು ಬೆಳಿಗ್ಗೆ 8ಗಂಟೆಗೆ ರಾಷ್ಟ್ರಧ್ವಜಾರೋಹಣದೊಂದಿಗೆ ಪ್ರಾರಂಭವಾಯಿತು. ಸಂಸ್ಥೆಯ ಸಿಬ್ಬಂದಿಗಳು, ಕಾರ್ಮಿಕರು ಹಾಗೂ ಸ್ಥಳೀಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನಿವೃತ್ತ ಸೇನಾ ಅಧಿಕಾರಿ ಸುಬೇದಾರ್ ಅಪ್ಪು ಶೆಟ್ಟಿ ರವರು ರಾಷ್ಟ್ರಧ್ವಜಾರೋಹಣ

ನಿಂತಿಕಲ್ಲು ಮಾಸಾಶನ ಪತ್ರ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಸುಳ್ಯ ತಾಲೂಕಿನ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ನಿಂತಿಕಲ್ಲು ವಲಯದ ಕುಕ್ಕಯ್ಯಕೇಡಿ ಎಂಬಲ್ಲಿ ವಾಸವಾಗಿರುವ ತೀರ ಬಡತನದಲ್ಲಿರುವ ಸದಸ್ಯರಾದ ಬಾಬು ರೈ ಮತ್ತು ದೈಯಕ್ಕು ದಂಪತಿಗಳಿಗೆ ಶ್ರೀ ಕ್ಷೇತ್ರದಿಂದ ತಿಂಗಳಿಗೆ 2000/- ಮಾಸಾಶನ ಮೊತ್ತ ಮಂಜೂರಾಗಿದ್ದು, ಇವರಿಗೆ ಮಂಜೂರಾತಿ ಪತ್ರವನ್ನು ಊರಿನ ಗಣ್ಯರಾದ ಶ್ರೀಯುತ ಸುಧೀರ್‌ ಕುಮಾರ್‌ ಶೆಟ್ಟಿ ಕುಕ್ಕಯ್ಯಕೇಡಿ ಇವರು ವಿತರಿಸಿದರು.ಈ

ಕೆವಿಜಿ ಪಾಲಿಟೆಕ್ನಿಕ್ : ಎನ್ಎಸ್ಎಸ್ ಚಟುವಟಿಕೆಗಳಿಗೆ ಚಾಲನೆ

ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆಯ 2025 -26 ನೇ ಸಾಲಿನ ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು.ಕೆವಿಜಿ ಪಾಲಿಟೆಕ್ನಿಕ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಅಣ್ಣಯ್ಯ ಕೆ ಅಧ್ಯಕ್ಷತೆ ವಹಿಸಿ ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ ನೀಡಿದರು. ಮುಖ್ಯ ಅತಿಥಿಗಳಾಗಿ ಕಾಲೇಜಿನ ಲೆಕ್ಕ ಅಧೀಕ್ಷಕ ಧನಂಜಯ ಕಲ್ಲುಗದ್ದೆ ಹಾಗೂ ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಚಾಲಕ ವಿವೇಕ್ ಪಿ ಉಪಸ್ಥಿತರಿದ್ದು

ಬೆಳ್ಳಾರೆ :ಗ್ರಾ.ಪಂ‌.ವತಿಯಿಂದ ಐತಿಹಾಸಿಕ ಬಂಗ್ಲೆಗುಡ್ಡೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಬೆಳ್ಳಾರೆ: ಬೆಳ್ಳಾರೆ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಬೆಳ್ಳಾರೆ ಗ್ರಾಮದ ಐತಿಹಾಸಿಕ ಸ್ಥಳ ಬಂಗ್ಲೆಗುಡ್ಡೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮ ನಾಳೆ(ಆ.15) ಪೂ. 08.30ಕ್ಕೆ ನಡೆಯಲಿದೆ. ಗ್ರಾಮಸ್ಥರುಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಬೆಳ್ಳಾರೆ ಗ್ರಾಮ ಪಂಚಾಯತ್ ಪ್ರಕಟಣೆ ತಿಳಿಸಿದೆ. 1837ರಲ್ಲಿ ನಡೆದ ಅಮರ ಸುಳ್ಯ ಸ್ವಾತಂತ್ರ್ಯ ಹೋರಾಟದಲ್ಲಿ ಹೋರಾಟಗಾರರು ಬ್ರಿಟೀಷರ ಖಜಾನೆಯಾಗಿದ್ದ

ಸುಳ್ಯ: ನಗರ ಮಹಿಳಾ ಗೌಡ ಘಟಕದ ವತಿಯಿಂದ ನಿವೃತ್ತ ಶಿಕ್ಷಕಿ ಶ್ರೀಮತಿ ಪ್ರೇಮಾವತಿ ಸಿ.ಯವರಿಗೆ ಗೌರವ

ಸುಳ್ಯ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಶ್ರೀಮತಿ ಪ್ರೇಮಾವತಿ ಸಿ. ಯವರು ಜು.31ರಂದು ತಮ್ಮ 28 ವರ್ಷಗಳ ಶಿಕ್ಷಕ ಸೇವೆಯಿಂದ ನಿವೃತ್ತಿ ಹೊಂದಿದ ಹಿನ್ನಲೆಯಲ್ಲಿ ಸುಳ್ಯ ನಗರ ಮಹಿಳಾ ಗೌಡ ಘಟಕದ ಸದಸ್ಯರು ಆ.13 ರಂದು ಅವರ ಮನೆಗೆ ತೆರಳಿ ಶಾಲು, ಪೇಟ, ಫಲ ಪುಷ್ಪ ನೀಡಿ ಗೌರವ ಸಲ್ಲಿಸಿದರು. ಶಿಕ್ಷಕಿ ಪ್ರೇಮಾವತಿ ಟೀಚರ್‌ರವರ ಕುರಿತು ತಾ.ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಪಿಎಸ್ ಗಂಗಾಧರ್, ನಿವೃತ್ತ ವಿಜಯಬ್ಯಾಂಕ್ ಉದ್ಯೋಗಿ ಜನಾರ್ಧನ ಕೊಳಂಜಿರೋಡಿ

ಸುಳ್ಯ :ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ: ವಿಶ್ವ ಅಂಗದಾನ ದಿನಾಚರಣೆ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಸುಳ್ಯದಲ್ಲಿ ದಿನಾಂಕ 13-08-2025ರಂದು ರಚನಾ ಶಾರೀರ ವಿಭಾಗದ ಮುಂದಾಳತ್ವದಲ್ಲಿ, ವಿಶ್ವ ಅಂಗಧಾನ ದಿನಾಚರಣೆ ಪ್ರಯುಕ್ತ ಮಾನವ ಶರೀರದ ಅಂಗಾಂಗ ಮಾದರಿಯ ವಸ್ತು ಪ್ರದರ್ಶನ, ಬೀದಿ ನಾಟಕ ಹಾಗೂ ಅಂಗಾಂಗ ದಾನದ ನೈಜ ಘಟನೆಯನ್ನಾದರಿಸಿದ ನಾಟಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಕಾಲೇಜಿನ ಶಲ್ಯ ತಂತ್ರ ವಿಭಾಗ ಮುಖ್ಯಸ್ಥರಾದ ಡಾ. ಹರ್ಷವರ್ಧನ ಕೆ., ವಹಿಸಿ ಅಂಗಾಂಗದಾನಿಗಳ ಸಂಖ್ಯೆ

ಬೈಂದೂರು: ಪೊಲೀಸ್‌ ಇಲಾಖೆಯ ಮಹತ್ವಕಾಂಕ್ಷೆಯ ದೃಷ್ಟಿ ಯೋಜನೆ ಉದ್ಘಾಟನೆ

ಉಡುಪಿ ಜಿಲ್ಲಾ ಪೊಲೀಸ್‌ ಹಾಗೂ ಆರಕ್ಷಕ ಠಾಣೆ ಬೈಂದೂರು ಇದರ ವತಿಯಿಂದ ಪೊಲೀಸ್‌ ಇಲಾಖೆಯ ಮಹತ್ವಕಾಂಕ್ಷೆಯ ದೃಷ್ಟಿ ಯೋಜನೆ ಉದ್ಘಾಟನೆ ಬೈಂದೂರು ರೋಟರಿ ಭವನದಲ್ಲಿ ನಡೆಯಿತು. ಜಿಲ್ಲಾ ಪೊಲೀಸ್‌ ವರಿಷ್ಠ ಹರಿರಾಂ ಶಂಕರ್ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಉಡುಪಿ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯದಲ್ಲಿ ಯೇ ಪ್ರಥಮ ಬಾರಿಗೆ ದೃಷ್ಟಿ ಎಂಬ ವಿನೂತನ ಕ್ರಮ ಅಳವಡಿಸುತ್ತಿದ್ದೇವೆ. ದೃಷ್ಟಿ ಯೋಜನೆಯನ್ನು