Home Archive by category ಕರಾವಳಿ (Page 870)

ಖಾಸಗಿ ಬಸ್ಸುಗಳ ಪ್ರಯಾಣ ದರ ವಿಪರೀತ ಏರಿಕೆಯನ್ನು ಖಂಡಿಸಿ ಜಿಲ್ಲಾಡಳಿತದ ಏಕಪಕ್ಷೀಯ ನಿರ್ಧಾರವನ್ನು ವಿರೋಧಿಸಿ ಐಕ್ಯ ಹೋರಾಟಕ್ಕೆ ನಿರ್ಧಾರ

ಖಾಸಗಿ ಬಸ್ಸುಗಳ ಪ್ರಯಾಣ ದರದಲ್ಲಿ ವಿಪರೀತ ಏರಿಕೆಯನ್ನು ಹಾಗೂ ದ.ಕ. ಜಿಲ್ಲಾಡಳಿತದ ಏಕಪಕ್ಷೀಯ ನಿರ್ಧಾರವನ್ನು ಕಾಂಗ್ರೆಸ್, ಸಿಪಿಐ(ಎಂ), ಸಿಪಿಐ, ಜಾತ್ಯಾತೀತ ಜನತಾದಳ ಸೇರಿದಂತೆ ವಿದ್ಯಾರ್ಥಿ ಯುವಜನ ಮಹಿಳಾ ದಲಿತ ಸಂಘಟನೆಗಳ ಒಕ್ಕೂಟವು ಪ್ರಬಲವಾಗಿ ಖಂಡಿಸಿದ್ದು, ಸದ್ಯಕ್ಕೆ ದರ ಏರಿಕೆಯನ್ನು ತಡೆಹಿಡಿದು ಕೂಡಲೇ ಸಾರಿಗೆ ಪ್ರಾಧಿಕಾರದ ಸಭೆಯನ್ನು ಕರೆಯಬೇಕೆಂದು

ಮಲಬಾರ್ ಗೋಲ್ಡ್ & ಡೈಮಂಡ್ಸ್:9ನೇ ಆವೃತ್ತಿಯ ಬ್ರೈಡ್ಸ್ ಆಫ್ ಇಂಡಿಯಾ ಅಭಿಯಾನಕ್ಕೆ ಚಾಲನೆ

ಜಗತ್ತಿನ ಅತಿದೊಡ್ಡ ಚಿನ್ನ ಮತ್ತು ವಜ್ರಾಭರಣಗಳ ರಿಟೇಲ್ ಚೈನ್ ಮಾರಾಟದ ಸಂಸ್ಥೆಗಳಲ್ಲಿ ಒಂದಾಗಿರುವ ಮಲಬಾರ್ ಗೋಲ್ಡ್ & ಡೈಮಂಡ್ಸ್ ತನ್ನ 9ನೇ ಆವೃತ್ತಿಯ ಬ್ರೈಡ್ಸ್ ಆಫ್ ಇಂಡಿಯಾ ಅಭಿಯಾನಕ್ಕೆ ಚಾಲನೆ ನೀಡಿದೆ. ಈ ಬಾರಿ ವಿಶೇಷ ವಿವಾಹ ಗೀತೆಯಾಗಿ #MakeWayForTheBride  ಅನ್ನು ಪ್ರಸ್ತುತಪಡಿಸಿದ್ದು, ಆಧುನಿಕ ದಿನಮಾನಗಳ ಭಾರತೀಯ ವಿವಾಹ ಸಮಾರಂಭಗಳ ಹೆಗ್ಗುರುತಾಗಿರುವ ವಧುವಿನ ಅದ್ಧೂರಿ ಪ್ರವೇಶವನ್ನು ಚಿತ್ರಿಸಿದೆ. ಕಲಾತ್ಮಕವಾಗಿ ಚಿತ್ರೀಸಲಾದ 3 ನಿಮಿಷಗಳ ಈ

ಪೈಪ್ ಲೈನ್‌ಗೆ ಕನ್ನ ಕೊರೆದು ಪೆಟ್ರೋಲ್ ಕಳವು ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಬಂಟ್ವಾಳ: ತಾಲೂಕಿನ ಅರಳ ಗ್ರಾಮದ ಸೊರ್ನಾಡು ಎಂಬಲ್ಲಿ ಸಾರ್ವಜನಿಕ ಸ್ವಾಮ್ಯಕ್ಕೊಳಪಟ್ಟ ಆಯಿಲ್ ಮತ್ತು ನ್ಯಾಚುರಲ್ ಲಿಮಿಟೆಡ್ ಹಾಗೂ ಹಿಂದೂಸ್ತಾನ್ ಪೆಟ್ರೋಲಿಯಂ ಸಂಸ್ಥೆಗೆ ಸೇರಿದ ಪೆಟ್ರೋಲಿಯಂ ಪೈಪ್ ಲೈನ್‌ಗೆ ಕನ್ನ ಕೊರೆದು ಪೆಟ್ರೋಲಿಯಂ ಉತ್ಪನ್ನ ಕಳವು ನಡೆಸಿ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಸ್ಥಳೀಯ ಅರ್ಬಿ ನಿವಾಸಿ ಐವನ್ ಚಾರ್ಲ್ ಪಿಂಟೋ(43) ಹಾಗೂ ಆತನಿಗೆ ಸಹಕರಿಸಿದ ಆರೋಪದಡಿ ಪಚ್ಚನಾಡಿ ಬೋಂದೆಲ್ ನಿವಾಸಿ ಅಜಿತ್ ಮತ್ತು ಕಣ್ಣೂರು ನಿವಾಸಿ ಜೋಯೆಲ್

ದಸರಾವರೆಗೆ ಸಾರ್ವಜನಿಕ ಸೇರುವಿಕೆಗೆ ಅವಕಾಶವಿಲ್ಲ: ಜಿಲ್ಲಾಧಿಕಾರಿ ಡಾ. ರಾಜೇಂದ್ರಕೆ.ವಿ

ಮಂಗಳೂರು ಕೋವಿಡ್ 3ನೆ ಅಲೆಯ ಸಾಧ್ಯತೆಯ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲೆಯಲ್ಲಿ ಮುಂಬರುವ ದಸರಾ ಹಬ್ಬದವರೆಗೆ ಸಾರ್ವಜನಿಕರ ಸಾಮೂಹಿಕ ಭಾಗವಹಿಸುವಿಕೆಯೊಂದಿಗೆ ಹಬ್ಬ ಹರಿದಿನಗಳ ಆಚರಣೆಗೆ ಅವಕಾಶವಿರುವುದಿಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹೇಳಿದ್ದಾರೆ. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪ್ರೆಸ್‍ಕ್ಲಬ್‍ನಲ್ಲಿ ಆಯೋಜಿಸಲಾದ ಸಂವಾದ ಕಾರ್ಯಕ್ರಮದಲ್ಲಿ ಅವರು ಕೋವಿಡ್ 3ನೆ ಅಲೆಗೆ ಸಂಬಂಧಿಸಿ ದ.ಕ. ಜಿಲ್ಲಾಡಳಿತ ಕೈಗೊಂಡಿರುವ

ಯಶಸ್ವಿ ಕಾರ್ಯಾಚರಣೆ‌ : ಉರುಳಿಗೆ ಬಿದ್ದಿದ್ದ ಚಿರತೆ ಸೆರೆ

ಪೆರುವಾಜೆ ಗ್ರಾಮದ ಕಾನಾವು ಸಮೀಪದ ಪೆರುವಾಜೆ ಬ್ಲಾಕ್ ಅರಣ್ಯ ಪ್ರದೇಶದಲ್ಲಿ ಉರುಳಿಗೆ ಬಿದ್ದ ಚಿರತೆಯನ್ನು ಯಶಸ್ವಿ ಕಾರ್ಯಾಚರಣೆಯ ಮೂಲಕ ಸೆರೆ ಹಿಡಿಯಲಾಗಿದೆ. ತಜ್ಞ ವೈದ್ಯರ ತಂಡ ಅರವಳಿಕೆ ಮದ್ದು ಪ್ರಯೋಗಿಸಿದ ಅನಂತರ ಚಿರತೆಯನ್ನು ಸೆರೆ ಹಿಡಿದು ಬೋನಿನ‌ ಮೂಲಕ ಪಶ್ಚಿಮ ಘಟ್ಟದ ಕಾಡಿಗೆ ಕೊಂಡೊಯ್ಯಲಾಯಿತು. ಕಾರ್ಯಾಚರಣೆ ವೇಳೆ ಸಂದರ್ಭದಲ್ಲಿ ಪುತ್ತೂರು, ಸುಳ್ಯ ಉಪವಿಭಾಗದ ಅರಣ್ಯಧಿಕಾರಿಗಳು ಪಾಲ್ಗೊಂಡಿದ್ದರು.

ಹಳೆಯಂಗಡಿಯ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್‌ನಿಂದ ಆಟಿದ ನೆಂಪು ಕಾರ್ಯಕ್ರಮ

ಮಂಗಳೂರು :ಆಟಿ ತಿಂಗಳ ತಿಂಡಿ ತಿನಿಸುಗಳು ಆಹಾರ ಕ್ರಮಗಳು ತನ್ನದೇ ಆದ ವೈಶಿಷ್ಟ್ಯಗಳನ್ನು ಹೊಂದಿದೆ. ಈ ಸಮಯದಲ್ಲಿ ಪ್ರಕೃತಿ ದತ್ತವಾಗಿ ಸಿಗುವ ಆಹಾರಗಳು ಜೌಷಧಿಯ ಗುಣಗಳನ್ನು ಹೊಂದಿದೆ. ಅಮಾಸ್ಯೆ ದಿನದ ಹಾಳೆ ಮರದ ಕೆತ್ತೆ ಅತ್ಯಧಿಕ ರೋಗ ನಿರೋಧಕ ಶಕ್ತಿಯಿಂದ ಕೂಡಿದೆ.ಇದರ ಕಷಾಯ ಸೇವಿಸಿದರೆ ರೋಗ ರುಜಿನಗಳು ದೂರವಾಗುವುದು ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು  ಇದರ ಸದಸ್ಯ ನಾಗೇಶ್ ಕುಲಾಲ್  ಅವರು ಅಭಿಪ್ರಾಯ ಪಟ್ಟರು. ಆ.1 ರಂದು ಶ್ರೀ ಸುಬ್ರಹ್ಮಣ್ಯ

ಪೆರುವಾಜೆಯ ಕಾನಾವಿನಲ್ಲಿ ಉರುಳಿಗೆ ಬಿದ್ದ ಚಿರತೆ

ಕಾಣಿಯೂರು : ಪೆರುವಾಜೆ ಗ್ರಾಮದ ಕಾನಾವುನಲ್ಲಿ ಚಿರತೆಯೊಂದು ಉರುಳಿಗೆ ಬಿದ್ದ ಘಟನೆ ನಡೆದಿದೆ. ಅರಣ್ಯ ಪ್ರದೇಶದಲ್ಲಿ ಯಾರೋ ಹಂದಿಗೆ ಇಟ್ಟ ಉರುಳಿಗೆ ಚಿರತೆ ಬಿದ್ದಿದ್ದು ಚಿರತೆ ಜೀವಂತವಾಗಿದೆ. ಪೆರುವಾಜೆ ವಲಯ ಅರಣ್ಯಾಧಿಕಾರಿ ಪ್ರಸಾದ್ ಕೆ.ಜೆ.ಮತ್ತು ಸಿಬ್ಬಂದಿ ವರ್ಗದವರು ಸ್ಥಳಕ್ಕೆ ಆಗಮಿಸಿದ್ದಾರೆ. ಅರವಳಿಕೆ ತಜ್ಞರು ಬಂದ ಬಳಿಕ ಅರವಳಿಕೆ ಮದ್ದು ನೀಡಿ ಚಿರತೆಯನ್ನು ಹಿಡಿಯಬೇಕಷ್ಟೆ ಎಂದು ತಿಳಿದು ಬಂದಿದೆ.

ಖಾಸಗಿ ಬಸ್ ಪ್ರಯಾಣ ದರ ಏರಿಕೆ ತಡೆ ಹಿಡಿಯಿರಿ: ಜಾತ್ಯಾತೀತ ಮತ್ತು ಸಮಾನ ಮನಸ್ಕ ಸಂಘಟನೆಗಳಿಂದ ಆಗ್ರಹ

ಖಾಸಗೀ ಬಸ್ ಪ್ರಯಾಣ ದರದ ವಿಪರೀತ ಏರಿಕೆಯನ್ನು ಖಂಡಿಸಿ, ದ.ಕ.ಜಿಲ್ಲಾಡಳಿತದ ಏಕಪಕ್ಷೀಯ ನಿರ್ಧಾರವನ್ನು ವಿರೋಧಿಸಿ, ದಕ.ಜಿಲ್ಲೆಯ ಜಾತ್ಯಾತೀತ ಪಕ್ಷಗಳ ಹಾಗೂ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟದ ನೇತ್ರತ್ವದಲ್ಲಿ ದ.ಕ.ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಮನವಿಯನ್ನು ಅರ್ಪಿಸಲಾಯಿತು. ಸಾರಿಗೆ ಪ್ರಾಧಿಕಾರದ ಸಭೆಯನ್ನು ಕರೆಯದೆ ಏಕಾಏಕಿಯಾಗಿ ಬಸ್ ಪ್ರಯಾಣ ದರವನ್ನು ಏರಿಸಿದ್ದು ಸರ್ವಥಾ ಸರಿಯಲ್ಲ. ಕೊರೋನಾ ಸಂಕಷ್ಟದ ಕಾಲಘಟ್ಟದಲ್ಲಿ ಜಿಲ್ಲೆಯ ಲಕ್ಷಾಂತರ ಜನತೆ

ಹಿದಾಯ ಫೌಂಡೇಶನ್ ಗೆ ರಾಜೀನಾಮೆ ನೀಡಿದ ಟೀಂ ಬಿ-ಹ್ಯೂಮನ್ ಸಂಸ್ಥಾಪಕ

ಮಂಗಳೂರಿನ ಖ್ಯಾತ ಸಮಾಜ ಸೇವಾ ಸಂಸ್ಥೆಯಾದ ಟೀಂ ಬಿ-ಹ್ಯೂಮನ್ ಇದರ ಸಂಸ್ಥಾಪಕರಾದ ಆಸಿಫ್ ಡೀಲ್ಸ್ ರವರು ಹಿದಾಯ ಫೌಂಡೇಶನ್ ನ ಎಲ್ಲ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಕಳೆದ 13 ವರ್ಷಗಳಿಂದ ಸಕ್ರಿಯವಾಗಿ ಹಿದಾಯ ಫೌಂಡೇಶನ್ ಸದಸ್ಯರಾಗಿದ್ದು ಪ್ರಸ್ತುತ ವೈಸ್ ಚೇರ್ಮನ್ ಹಾಗೂ ಟ್ರಸ್ಟಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇಷ್ಟು ವರ್ಷಗಳಿಂದ ಯಾವುದೇ ಪೂರ್ವಾಗ್ರಹವಿಲ್ಲದೆ ಎರಡೂ ಸಂಸ್ಥೆಗಳಲ್ಲಿ ಸಮಾನವಾಗಿ ತನ್ನನ್ನು ತಾನು ತೊಡಗಿಸಿಕೊಂಡು ಸೇವೆಗೈಯುತ್ತಿದ್ದುದು

ಕನ್ನಡ ದಿನಪತ್ರಿಕೆ – ಕನ್ನಡ ಪುಸ್ತಕ ಓದಿ : ಸುನಿಲ್ ಕುಮಾರ್

ಬೆಂಗಳೂರು ಆಗಸ್ಟ್ 11-ಪ್ರತಿದಿನ ಕನ್ನಡ ಪತ್ರಿಕೆಯೊಂದನ್ನು ಓದುವ ಹಾಗೂ ತಿಂಗಳಿಗೊಂದು ಕನ್ನಡ ಪುಸ್ತಕ ಕೊಂಡು ಓದುವ, ಹಾಗೆಯೇ ಎರಡು ತಿಂಗಳಿಗೊಂದು ಕನ್ನಡ ಚಲನಚಿತ್ರ ನೋಡುವ ಅಭ್ಯಾಸ ಮಾಡಿಕೊಂಡರೆ ಆ ಮೂಲಕವೇ ಕನ್ನಡ ಭಾಷೆ ಮತ್ತು ಸಂಸ್ಕೃತಿ ಬೆಳೆಸುವಲ್ಲಿ ಜನರೂ ಸಹ ಪಾಲುಗೊಳ್ಳಲು ಸಾಧ್ಯವಾಗುತ್ತದೆ ಎಂದು ಮತ್ತು ಸಂಸ್ಕೃತಿ ಹಾಗೂ ಇಂಧನ ಸಚಿವ ವಿ. ಸುನೀಲ್ ಕುಮಾರ್ ಹೇಳಿದ್ದಾರೆ. ಅವರು ಇಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಭಾರತಾಂಬೆ ಹಾಗೂ