Home Archive by category ಕರಾವಳಿ (Page 880)

ಅಜೇಂದ್ರ ಶೆಟ್ಟಿ‌ ಮರ್ಡರ್ ಕೇಸ್: ಹೊಸ ಕಾರು ಕೊಟ್ಟಿತು ಆರೋಪಿಯ ಸುಳಿವು!?

ಕುಂದಾಪುರ: ಫೈನಾನ್ಸ್ ಸಂಸ್ಥೆಯ ಮಾಲೀಕ ಅಜೇಂದ್ರ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಫೈನಾನ್ಸ್ ಸಂಸ್ಥೆಯ ಪಾಲುದಾರ ಅನೂಪ್‌ ಶೆಟ್ಟಿ ಗೋವಾದ ಹೊಟೇಲ್ ಒಂದರಲ್ಲಿ ಮೂರು ದಿನಗಳ‌ ಹಿಂದೆಯೇ ರೂಮ್‌ ಕಾಯ್ದಿರಿಸಿದ್ದ ಎನ್ನುವ ಬಲವಾದ ಮಾಹಿತಿ ಬಯಲಾಗಿದೆ. ಅನೂಪ್ ಶೆಟ್ಟಿಯನ್ನು ಗೋವಾದಿಂದ ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದಾಗ ಕೆಲವು ಮಹತ್ತರವಾದ

ರೈತ ಕಾರ್ಮಿಕರ ಹೋರಾಟದ ಪ್ರಚಾರಾಂದೋಲನದ ಭಾಗವಾಗಿ ಸಿಐಟಿಯುನಿಂದ ಪಾದಯಾತ್ರೆ

ಕ್ವಿಟ್ ಇಂಡಿಯಾ ಚಳುವಳಿಯ ಸವಿನೆನಪಿನಲ್ಲಿ ರೈತ ಕಾರ್ಮಿಕರ ಸಖ್ಯತೆಯಲ್ಲಿ ಬ್ರಹತ್ ಹೋರಾಟವು ಆಗಸ್ಟ್ 9 ರಂದು ದೇಶಾದ್ಯಂತ ನಡೆಯಲಿದ್ದು, ಅದರ ಪ್ರಚಾರಾಂದೋಲನದ ಭಾಗವಾಗಿ ನಗರದಲ್ಲಿಂದು  CITU ನೇತ್ರತ್ವದಲ್ಲಿ ಪಾದಯಾತ್ರೆಯನ್ನು ನಡೆಸಿ ಸಾರ್ವಜನಿಕರಲ್ಲಿ ಜಾಗ್ರತಿ ಮೂಡಿಸಲಾಯಿತು. ಪಾದಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದ CITU ದ.ಕ.ಜಿಲ್ಲಾಧ್ಯಕ್ಷರಾದ ಜೆ.ಬಾಲಕ್ರಷ್ಣ ಶೆಟ್ಟಿಯವರು, ದೇಶವನ್ನಾಳುವ ನರೇಂದ್ರ ಮೋದಿ ಸರಕಾರವು ಪ್ರತೀ ಹೆಜ್ಜೆಯಲ್ಲಿಯೂ ರೈತ ಕಾರ್ಮಿಕ

ತಲಪಾಡಿ ಗಡಿಯಲ್ಲಿ ಕೋವಿಡ್ ಟೆಸ್ಟ್‌ಗೆ ಸಾಲುಗಟ್ಟಿ ನಿಂತ ಜನತೆ

ಕೇರಳದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದು ಕರ್ನಾಟಕಕ್ಕೆ ಆಗಮಿಸುವ ಜನರ ಮೇಲೆ ಗಡಿಭಾಗಗಳಲ್ಲಿ ತೀವ್ರ ನಿಗಾ ವಹಿಸಲಾಗಿದೆ. ಕೇರಳದಿಂದ ಕರ್ನಾಟಕಕ್ಕೆ ಬರುವ ಜನರಿಗೆ ನೆಗೆಟಿವ್ ವರದಿ ಕಡ್ಡಾಯ ಮಾಡಿದ್ದು, ಇಂದು ಮಂಗಳೂರಿಗೆ ಅಗಮಿಸುವ ಜನರು ತಲಪಾಡಿ ಗಡಿಯಲ್ಲಿ ಕೋವಿಡ್ ಟೆಸ್ಟ್‌ಗೆ ಸಾಲುಗಟ್ಟಿ ನಿಂತ ದೃಶ್ಯ ಕಂಡುಬಂತು. ಆರ್‌ಟಿಪಿಸಿಆರ್ ಟೆಸ್ಟ್‌ಗೆ ಬೆಳಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಟೆಸ್ಟ್ ಮಾಡಿಸಿಕೊಳ್ಳುತ್ತಿದ್ದಾರೆ. ಬಸ್ ಮತ್ತು

ಮಂಗಳೂರಿನ ಪರಪ್ಪಾದೆಯಲ್ಲಿ ಕರಾವಳಿ ಮ್ಯೂಸಿಕಲ್ ಕ್ಯಾಂಪ್ ಕುಡ್ಲದ ಉದ್ಘಾಟನೆ

ಕರಾವಳಿಯ ಸಂಗೀತ ಪ್ರೀಯರಿಗೆ ಸಿಹಿ ಸುದ್ದಿ, ನಗರದ ಮಾಲೆಮಾರ್-ದೇರೆಬೈಲ್ ಪರಪ್ಪಾದೆಯಲ್ಲಿ ಕರಾವಳಿ ಮ್ಯೂಸಿಕಲ್ ಕ್ಯಾಂಪ್ ಕುಡ್ಲ ಇದರ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕರಾವಳಿ ಮ್ಯೂಸಿಕಲ್ ಕ್ಯಾಂಪ್ ಕುಡ್ಲ ಇದರ ಉದ್ಘಾಟನಾ ಕಾರ್ಯಕ್ರಮವು ನಗರದ ಮಾಲೆಮಾರ್ ದೇರಬೈಲ್ ಪರಪ್ಪಾದೆಯ ಬಾಬು ವರ್ಗೀಸ್ ಎಂಬವರ ಮನೆಯ ಮೇಲ್ಚಾವಣಿಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಫೇಮಸ್ ಪ್ಲೇಬ್ಯಾಕ್ ಸಿಂಗರ್ ಅಜೆಯ್ ವಾರಿಯರ್ ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು

ಕೇಂದ್ರ ಮತ್ತು ರಾಜ್ಯದಲ್ಲಿ ಭ್ರಷ್ಟ ಬಿಜೆಪಿ ಸರ್ಕಾರವಿದೆ: ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್

 ಕೇಂದ್ರ ಮತ್ತು ರಾಜ್ಯದಲ್ಲಿ ಭ್ರಷ್ಟ ಬಿಜೆಪಿ ಸರಕಾರವಿದೆ. ಎಷ್ಟೇ ಆರೋಪ ಬಂದರೂ ಕೂಡ ತನಿಖೆಗೊಳಗಾಗುವ ನೈತಿಕ ಧೈರ್ಯವು ಈ ಸರಕಾರಕ್ಕಿಲ್ಲ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಆರೋಪಿಸಿದ್ರು. ಈ ಕುರಿತು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರ ಪುತ್ರ ವಿಜಯೇಂದ್ರ 20 ಸಾವಿರ ಕೋ.ರೂ. ಭ್ರಷ್ಟಾಚಾರ ಎಸಗಿದ್ದಾರೆ ಎಂದು ಸ್ವತಃ ಬಿಜೆಪಿಗರೇ ಆರೋಪಿಸುತ್ತಿದ್ದಾರೆ. ಆದಾಗ್ಯೂ

ಎಲ್ಲೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ದನಗಳಿಗೆ ವಿಚಿತ್ರ ಖಾಯಿಲೆ: ಆತಂಕದಲ್ಲಿ ಸ್ಥಳೀಯರು

ಜನವಿರೋಧಿಯಾಗಿ ಕಾರ್ಯಾಚರಿಸುತ್ತಿರುವ ಎಲ್ಲೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ತಲೆ ಎತ್ತಿದ ಯುಪಿಸಿಎಲ್ ಕಂಪನಿಯ ಸುತ್ತಲ ಪ್ರದೇಶದಲ್ಲಿ ದನಗಳಿಗೆ ವಿಚಿತ್ರ ಖಾಯಿಲೆ ಕಾಣಿಸಿಕೊಂಡು ಬಹಳಷ್ಟು ದನಗಳು ಮರಣ ಹೊಂದುತ್ತಿದ್ದು ಪಶು ವೈದ್ಯರು ಮರಣೋತ್ತರ ಪರೀಕ್ಷೆ ನಡೆಸಿದರೂ ಯಾವುದೇ ವರದಿ ನೀಡುತ್ತಿಲ್ಲ ಎಂಬುದಾಗಿ ಸ್ಥಳೀಯರು ಆರೋಪಿಸಿದ್ದಾರೆ. ಈ ಬಗ್ಗೆ ಎಲ್ಲೂರು ಗ್ರಾಮದ ತಜೆ ನಿವಾಸಿ ಹೈನುಗಾರಿಕೆಯನ್ನೇ ಜೀವನಾಧಾರವಾಗಿ ನಡೆಸಿಕೊಂಡು ಬಂದು ಇದೀಗ ಹತ್ತಕ್ಕೂ ಅಧಿಕ

ನಿವೃತ್ತ ವೀರಯೋಧ ಲಾರೆನ್ಸ್ ಡಿಸೋಜ ನಿಧನ: ನಿವೃತ್ತ ಸೈನಿಕರ ಸಂಘದಿಂದ ಅಂತಿಮ ಗೌರವ

ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ ವೀರಯೋಧ (ನಿವೃತ್ತ) ಲಾರೆನ್ಸ್ ಡಿಸೋಜ ಪಣಪಿಲ ಇವರು ನಿಧನರಾಗಿದ್ದು ನಿವೃತ್ತ ಸೈನಿಕರ ಸಂಘ ಮೂಡುಬಿದಿರೆ ಇವರಿಂದ ಅಂತಿಮ ಗೌರವ ಸಲ್ಲಿಸಲಾಯಿತು. ದೇಶದ ತ್ರಿವರ್ಣ ಧ್ವಜವನ್ನು ಮೃತದೇಹದ ಮೇಲೆ ಹೊದಿಸಿ ಸರ್ಕಾರಿ ಸಮಾನ ಗೌರವ ಅರ್ಪಿಸಲಾಯಿತು. ಮೃತ ಯೋಧ ಲಾರೆನ್ಸ್ ಡಿಸೋಜರವರು ಭಾರತೀಯ ಭೂಸೇನೆಯಲ್ಲಿ ಸುಮಾರು ೨೭ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಜಮ್ಮು ಕಾಶ್ಮೀರ, ಅಲಹಾಬಾದ್ ಸೇರಿದಂತೆ ವಿವಿದೆಡೆ ಸೇವೆ ಸಲ್ಲಿಸಿದ್ದರು. ೯೮

ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ವಿಶ್ವಾಸ್ ಕುಮಾರ್ ದಾಸ್ ಅವರ ಪದಗ್ರಹಣ ಸಮಾರಂಭ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗ ನೂತನ ಅಧ್ಯಕ್ಷರಾದ ವಿಶ್ವಾಸ್ ಕುಮಾರ್ ದಾಸ್ ರವರ ಪದಗ್ರಹಣ ಹಾಗೂ ವಿಭಾಗದ ಜಿಲ್ಲಾ ಪದಾಧಿಕಾರಿಗಳ ಹಾಗೂ ಬ್ಲಾಕ್ ಅಧ್ಯಕ್ಷರ ಆದೇಶ ಪತ್ರ ವಿತರಣಾ ಸಮಾರಂಭವೂ ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಹಾಗೂ ಎಐಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಬಿ.ಕೆ. ಹರಿಪ್ರಸಾದ್ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಕೆಪಿಸಿಸಿ ಹಿಂದುಳಿದ ವರ್ಗ ಗಳ ವಿಭಾಗ

ಮಂಗಳಮುಖಿಯರಿಗೆ ಹಲ್ಲೆ ನಡೆಸಿದ್ದ ಪ್ರಕರಣ: ನವಸಹಜ ಅಧ್ಯಕ್ಷ ನಿಖಿಲ್ ಬಂಧನ

ಮಂಗಳೂರು: ಮಂಗಳಮುಖಿಯರಿಗೆ ಹಲ್ಲೆ ನಡೆಸಿದ ಆರೋಪದ ಮೇಲೆ ನವಸಹಜ ಸಂಘಟನೆಯ ಅಧ್ಯಕ್ಷ ನಿಖಿಲ್ ಎಂಬಾತನನ್ನು ಪಣಂಬೂರು ಪೊಲೀಸರು ಉಡುಪಿಯಲ್ಲಿ ಬಂಧಿಸಿದ್ದಾರೆ. ಸಂಘಟನೆಯ ಇತರ ಆರೋಪಿಗಳು ತಪ್ಪಿಸಿಕೊಂಡಿದ್ದು ಪೊಲೀಸರು ಅವರ ಹುಡುಕಾಟ ನಡೆಸುತ್ತಿದ್ದಾರೆ. ಜುಲೈ 26ರಂದು ರಾತ್ರಿ ನಿಖಿಲ್ ತನ್ನ ಇತರ ಸಂಗಡಿಗರಾದ ಅರುಂಧತಿ, ರಾಶಿ, ರೇಖಾ, ಪ್ರೀಯಾ ಮತ್ತಿತರು ಸೇರಿ ಶಾಂತಾ ಪೂರ್ಣಿಮಾ, ನೀಲಾ, ಹುಲಿಗೆಮ್ಮ ಮತ್ತು ಪಾರ್ವತಿ ಎಂಬವರ ಮೇಲೆ ಬೈಕಂಪಾಡಿ ರೈಲ್ವೆ ಗೇಟ್ ಬಳಿ

ಕೋವಿಡ್-19 ಸೋಂಕು ನಿಯಂತ್ರಣ ಹಿನ್ನಲೆ:ಕಾಸರಗೋಡಿಗೆ ಸರ್ಕಾರಿ, ಖಾಸಗಿ ಬಸ್ ಸಂಚಾರವಿಲ್ಲ: ನಳೀನ್ ಕುಮಾರ್ ಕಟೀಲು

ಮಂಗಳೂರು:  ನೆರೆಯ ಕೆರಳದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ತೀವ್ರಗೊಂಡಿರುವ ಹಿನ್ನಲೆಯಲ್ಲಿ ಜಿಲ್ಲೆಯಿಂದ ಕಾಸರಗೋಡುಗೆ ಸಂಚರಿಸುವ ಸರ್ಕಾರಿ ಹಾಗೂ ಖಾಸಗಿ ಬಸ್‍ಗಳನ್ನು ಆಗಸ್ಟ್ 1 ರಿಂದ ಒಂದು ವಾರದ ಕಾಲ ಸ್ಥಗಿತಗೊಳಿಸಲಾಗುವುದು ಎಂದು ಸಂಸದರಾದ ನಳೀನ್ ಕುಮಾರ್ ಕಟೀಲು ಅವರು ತಿಳಿಸಿದರು.ಅವರು ಜುಲೈ 31ರ ಶನಿವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದ ಜಿಲ್ಲಾ ವಿಪತ್ತು ನಿರ್ವಹಣಾ