Home Archive by category ಕರಾವಳಿ (Page 906)

ವಲ್ಡ್ ವಾಲಿಬಾಲ್ ಚಾಂಪಿಯನ್ ಶಿಪ್ ಗೆ ಆಯ್ಕೆ ಪ್ರಕ್ರಿಯೆ- ಇಬ್ರಾಹಿಂ ಗೋಳಿಕಟ್ಟೆ

ಪುತ್ತೂರು: ಫೆಡರೇಶನ್ ಆಫ್ ಇಂಟರ್‌ನ್ಯಾಶನಲ್ ವಾಲಿಬಾಲ್ ಇವರ ಆಶ್ರಯದಲ್ಲಿ ಆ. 24ರಿಂದ ಸೆ. 2ರವರೆಗೆ ಇರಾನಿನ ತೆಹ್ರಾನ್‌ನಲ್ಲಿ 19 ವರ್ಷ ವಯೋಮಿತಿಯ ಹುಡುಗರ ವರ್ಲ್ಡ್ ವಾಲಿಬಾಲ್ ಚಾಂಪಿಯನ್‌ಶಿಪ್ ನಡೆಯಲಿದೆ. ಇದರಲ್ಲಿ ಭಾಗವಹಿಸುವ ಭಾರತೀಯ ತಂಡವನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ಒಡಿಸ್ಸಾದ ಭುವನೇಶ್ವರದ ಕಿಟ್ಟ್ ಯುನಿವರ್ಸಿಟಿಯಲ್ಲಿ ಜುಲೈ 22 ಮತ್ತು 23ರಂದು

ನನ್ನಿಂದ ತುಳುನಾಡಿಗೆ ಅಪಚಾರವಾಗಿದೆ ಎನ್ನುವ ಬಿಜೆಪಿ ಹೇಳಿಕೆಯನ್ನು ತಿರಸ್ಕರಿಸುತ್ತೇನೆ : ಮಂಜುನಾಥ ಪೂಜಾರಿ

ಕಾರ್ಕಳ: ಒಬ್ಬ ತುಳುವನಾಗಿ ತುಳುನಾಡಿನ ಸಂಸ್ಕøತಿ ಮತ್ತು ಸಂಸ್ಕಾರದ ಬಗ್ಗೆ ವಿಶೇಷ ಗೌರವವನ್ನು ಹೊಂದಿರುವ ನನ್ನಿಂದ ತುಳುನಾಡಿಗೆ ಅಪಚಾರವಾಗಿದೆ ಎನ್ನುವ ಬಿಜೆಪಿ ಹೇಳಿಕೆಯನ್ನು ತಿರಸ್ಕರಿಸುತ್ತಿರುವುದಾಗಿ ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಪೂಜಾರಿ ಹೇಳಿದ್ದಾರೆ. ಅವರು ಕಾರ್ಕಳದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಉಡುಪಿಗೆ ಆಗಮಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಕಾರ್ಕಳಕ್ಕೆ ಬರಮಾಡಿಕೊಳ್ಳಲು ಆಹ್ವಾನಿಸುವ ಜತೆಗೆ,

ಮಂಗಳೂರು-ಯಶವಂತಪುರ ರೈಲಿಗೆ ವಿಸ್ಟಾಡೋಮ್ ಬೋಗಿ: ಜುಲೈ 11ರಿಂದ ಸಂಚಾರ ಆರಂಭ

ಯಶವಂತಪುರ-ಮಂಗಳೂರು ನಡುವೆ ಹಗಲು ಸಂಚರಿಸುವ ರೈಲಿಗೆ ಗಾಜಿನ ಛಾವಣಿಯನ್ನು ಹೊಂದಿರುವ ಆಕರ್ಷಕ ವಿಸ್ಟಾಡೋಮ್ ಬೋಗಿಗಳು ಸೇರ್ಪಡೆಗೊಂಡು ಸಂಚಾರ ಆರಂಭಿಸಲಿರುವ ಸೇವೆಗೆ ಜುಲೈ 11ರಂದು ಬೆಳಗ್ಗೆ 9 ಗಂಟೆಗೆ ಮಂಗಳೂರು ಜಂಕ್ಷನ್ (ಪಡೀಲ್) ರೈಲು ನಿಲ್ದಾಣದಲ್ಲಿ ಚಾಲನೆ ಸಿಗಲಿದೆ.ಮಂಗಳೂರು ಜಂಕ್ಷನ್‌ನಿಂದ ಹೊರಡುವ ಯಶವಂತಪುರ ಮಂಗಳೂರು ಎಕ್ಸ್‌ಪ್ರೆಸ್ ವಿಶೇಷ ರೈಲಿನಲ್ಲಿ ಈ ವಿಸ್ಟಾ ಡೋಮ್ ಅಳವಡಿಕೆಯಾಗಲಿದೆ. ಈ ವಿಶೇಷ ಬೋಗಿಯು ಪಶ್ಚಿಮ ಘಟ್ಟದ ನಡುವೆ ಸಂಚರಿಸುವ ಸಂದರ್ಭ

ಸ್ಟ್ಯಾನ್ ಸ್ವಾಮಿಗೆ ನ್ಯಾಯ ಒದಗಿಸುವಂತೆ ವಿನೋದ್ ವಾಲ್ಟರ್ ಪಿಂಟೊ ಒತ್ತಾಯ

ಮೂಡುಬಿದಿರೆ: ಎಲ್ಗಾರ್ ಪರಿಷದ್ ಪ್ರಕರಣದಲ್ಲಿ ಜೈಲು ಸೇರಿ ಕಾನೂನು ಹೋರಾಟ ನಡೆಸುತ್ತಿರುವಾಗಲೇ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಇತ್ತೀಚೆಗೆ ಮೃತಪಟ್ಟ ಧರ್ಮಗುರು, ಸಾಮಾಜಿಕ ಹೋರಾಟಗಾರ ಸ್ಟ್ಯಾನ್ ಸ್ವಾಮಿ ಅವರಿಗೆ ಇನ್ನಾದರು ಸರ್ಕಾರ ನ್ಯಾಯ ಒದಗಿಸಬೇಕೆಂದು ವಿನೋದ್ ವಾಲ್ಟರ್ ಪಿಂಟೊ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದ್ದಾರೆ. ಸ್ಟ್ಯಾನ್ ಸ್ವಾಮಿ ಅವರ ಆರೋಪವನ್ನು ಸಾಬೀತುಪಡಿಸಲು ತನಿಖಾಧಿಕಾರಿಗಳಿಗಾಗಲಿ, ಸರ್ಕಾರಕ್ಕಾಗಲಿ ಸಾದ್ಯವಾಗಿಲ್ಲ. ತೀವ್ರ

ಮೂಡುಬಿದಿರೆಯಲ್ಲಿ ರಾಣಿ ಅಬ್ಬಕ್ಕ ಬಿದಿರು ಉದ್ಯಾನವನ ಲೋಕಾರ್ಪಣೆ

ಮೂಡುಬಿದಿರೆ: ಆನೆಗಳ ಆಹಾರವಾಗುವ ಬಿದಿರಿನ ತಳಿಗಳನ್ನು ಕಾಡಿನಂಚಿನಲ್ಲಿ ನೆಟ್ಟರೆ ಆನೆಗಳು ನಾಡಿಗೆ ಬರುವ ಪ್ರಮೇಯ ತಪ್ಪುತ್ತದೆ. ಅಂತಹ ಬಿದಿರಿನ ತಳಿಗಳನ್ನು ಬೆಳೆಸುವ ಅವಶ್ಯಕತೆಯಿದೆ ಎಂದು ಅರಣ್ಯ ಸಚಿವ ಅರವಿಂದ ಲಿಂಬಾವಳಿ ಹೇಳಿದರು. ಒಂಟಿಕಟ್ಟೆಯ ಕಡಲ ಕೆರೆ ನಿಸರ್ಗಧಾಮದ ಸಾಲುಮರ ತಿಮ್ಮಕ್ಕ ಸಸ್ಯೋದ್ಯಾನವನ ಆವರಣದಲ್ಲಿ ರಾಣಿ ಅಬ್ಬಕ್ಕ ಬಿದಿರು ಉದ್ಯಾನವನವನ್ನು ಶುಕ್ರವಾರ ಸಾಯಂಕಾಲ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಪರಿಸರವನ್ನು ನಾವು ಸಂರಕ್ಷಿಸಿದಲ್ಲಿ

ಬಂಟ್ವಾಳದ ಕಲ್ಲಗುಡ್ಡೆಯಲ್ಲಿ ಮನೆ ಮೇಲೆ ಆವರಣಗೋಡೆ ಕುಸಿತ: ಮನೆಮಂದಿ ಪವಾಡ ಸದೃಶ ಪಾರು

ಬಂಟ್ವಾಳ: ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಗೆ ಬಂಟ್ವಾಳದ ಕಲ್ಲಗುಡ್ಡೆ ಎಂಬಲ್ಲಿ ಮಣ್ಣು ಸಹಿತ ಆವರಣ ಗೋಡೆ ಮನೆಯೊಂದರ ಮೇಲೆ ಕುಸಿದು ಬಿದ್ದು ಮನೆಮಂದಿ ಪವಾಡ ಸದೃಶ್ಯರಾಗಿ ಪಾರಾದ ಘಟನೆ ನಡೆದಿದೆ. ಘಟನೆಯಲ್ಲಿ ಮನೆ ಸಂಪೂರ್ಣ ಜಖಂಗೊಂಡಿದ್ದು 5 ಲಕ್ಷ ರೂಪಾಯಿಗಿಂತಲೂ ಅಧಿಕ ನಷ್ಟ ಸಂಭವಿಸಿದೆ. ಸೋಮನಾಥ ಕುಲಾಲ್ ಎಂಬವರಿಗೆ ಸೇರಿದ ಈ ಮನೆಯನ್ನು ನವೀನ್ ಎಂಬವರಿಗೆ ವಾಸ್ತವ್ಯಕ್ಕಾಗಿ ಬಾಡಿಗೆಗೆ ನೀಡಲಾಗಿತ್ತು. ಅವರು ಪತ್ನಿ ಪವಿತ್ರ ಹಾಗೂ ಮಗಳೊಂದಿಗೆ ಈ ಮನೆಯಲ್ಲಿ

ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆಗೆ ಪೊಲೀಸರ ತಡೆ

ಮಂಗಳೂರು:ಕಾಂಗ್ರೆಸ್ ಕಾರ್ಯಕರ್ತ ರಾಧಾಕೃಷ್ಣ ಹಿರ್ಗಾನ್ ಎಂಬುವವರ ಮೇಲೆ ಕಾರ್ಕಳ ಪೊಲೀಸರು ನಡೆಸಿರೋ ದೌರ್ಜನ್ಯವನ್ನು ಖಂಡಿಸಿ ಮಂಗಳೂರು ನಗರದ ಎಸ್ ಪಿ ಕಚೇರಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆಗೆ ಪೊಲೀಸರು ತಡೆಯೊಡ್ಡಿದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಕಾರ್ಕಳದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲಿನ ಹಲ್ಲೆಯನ್ನು ಖಂಡಿಸಿ ಎಸ್ ಪಿ ಕಚೇರಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಗೆ ಸಂಜೆ ಜಮಾಯಿಸಿದ್ದರು. ಈ ವೇಳೆ ಪ್ರತಿಭಟನೆಗೆ ಮುಂದಾಗಿದ್ದ

ಮಂಗಳೂರಿನ ಹಲವೆಡೆ ಬೆಲೆ ಏರಿಕೆ ವಿರುದ್ಧ ಸಿಪಿಐಂ ವತಿಯಿಂದ ಪ್ರತಿಭಟನೆ

ಪೆಟ್ರೋಲ್ ಡೀಸೆಲ್ ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯೇರಿಕೆಯನ್ನು ಖಂಡಿಸಿ CPIM ನೇತ್ರತ್ವದಲ್ಲಿ ಮಂಗಳೂರು ನಗರದಾದ್ಯಂತ ನಡೆಯುತ್ತಿರುವ ವಾರಾಚರಣೆಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದ್ದು,ಇಂದು ನಗರದ ಜಪ್ಪಿನಮೊಗರು, ಜಲ್ಲಿಗುಡ್ಡ,ಕಾವೂರು,ಶಕ್ತಿನಗರ ಸೇರಿದಂತೆ ಹಲವಾರು ಕಡೆಗಳಲ್ಲಿ ಪ್ರತಿಭಟನೆಗಳು ಜರುಗಿ ಕೇಂದ್ರ ಹಾಗೂ ರಾಜ್ಯ ಸರಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು. ಜಪ್ಪಿನಮೊಗರುನಲ್ಲಿ CPIM ಮಹಿಳಾ ಕಾರ್ಯಕರ್ತೆಯರು

ಮಂಗಳೂರು ಉವ೯ ಮಾರುಕಟ್ಟೆ ಹಸ್ತಾಂತರ ಕುರಿತು ಸಭೆ

ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಉವ೯ ಮಾರುಕಟ್ಟೆಯನ್ನು ಮೂಡದಿಂದ ಪಾಲಿಕೆಗೆ ಹಸ್ತಾಂತರಗೊಳಿಸುವ ಕುರಿತು ಮೇಯರ್ ಪ್ರೇಮಾನಂದ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಪಾಲಿಕೆಯ ಸಮಿತಿ ಸಭಾಂಗಣದಲ್ಲಿ ಸಭೆ ಕರೆಯಲಾಗಿತ್ತು. ಮೂಡ ಕಛೇರಿಯಿಂದ ಈಗಾಗಲೇ ಉವ೯ ಮಾರುಕಟ್ಟೆಯಲ್ಲಿನ ಮೇಲಿನ ಮಹಡಿಗಳಲ್ಲಿರುವ ಕಛೇರಿ ಉಪಯೋಗಿತ ಕೆಲವೊಂದು ಅಂಗಡಿಗಳನ್ನು ಹರಾಜು ರೂಪದಲ್ಲಿ ನೀಡಲು ಹರಾಜು ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ. ಈ ಹಿಂದೆ ಹಳೇ ಮಾರುಕಟ್ಟೆಯಲ್ಲಿ ವ್ಯಾಪಾರ

ವಿನಾಯಕ ಬಾಳಿಗಾ ಕೊಲೆ ಪ್ರಕರಣ ಸದನದಲ್ಲಿ ಪ್ರತಿಧ್ವನಿಸಲಿದೆ: ಡಿಕೆಶಿ ಭರವಸೆ

ಆರ್‌ಟಿಐ ಕಾರ್ಯಕರ್ತ ವಿನಾಯ ಬಾಳಿಗರವರ ಅಮಾನುಷ ಹತ್ಯೆ ನಡೆದು ಇಂದಿಗೆ 5 ವರುಷಗಳೇ ಸಂದರೂ ನೈಜ ಕೊಲೆ ಆರೋಪಿಗಳಿಗೆ ಇನ್ನೂ ಕೂಡ ಶಿಕ್ಷೆಯಾಗದಿರುವ ಹಿನ್ನೆಲೆಯಲ್ಲಿ ದುಃಖ ತೃಪ್ತ ಬಾಳಿಗಾ ಕುಟುಂಬ ಸದಸ್ಯರು ಮತ್ತು ಜಸ್ಟೀಸ್ ಫಾರ್ ವಿನಾಯಕ ಬಾಳಿಗ ಫೋರಂ, ಕಾನೂನು ಹೋರಾಟಗಾರರು ಸೇರಿಕೊಂಡು ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ.ಶಿವಕುಮಾರ್ ಅವರಲ್ಲಿ ತಮ್ಮ ಸಂಕಟವನ್ನು ವ್ಯಕ್ತಪಡಿಸಿದರು. ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಿ ಸಹಾಯ ಹಸ್ತ ಕಾರ್ಯಕ್ರಮದಲ್ಲಿ