ಕುಂದಾಪುರ: ಕೆಆರ್ಎಸ್ ಅಣೆಕಟ್ಟಿನ ಮಾಮೂಲಿ ನಿರ್ವಹಣೆಯ ಕಾಮಗಾರಿಗಾಗಿ ಹಣ ಬಿಡುಗಡೆ ಆಗಿರಬಹುದು. ಬಿರುಕು ಹಾಗೂ ಇನ್ನಿತರ ತಾಂತ್ರಿಕ ಮಾಹಿತಿಗಳನ್ನು ನೀಡಲು ಪರಿಣಿತ ತಾಂತ್ರಿಕ ತಜ್ಙರ ವಿಭಾಗವೇ ಇದೆ. ಅವರ ವರದಿ ಹಾಗೂ ಸಲಹೆ ಆಧಾರದಲ್ಲಿಯೇ ಕಾಮಗಾರಿಗಳು ನಡೆಯುತ್ತದೆ. ಸುಮ್ಮನೆ ಜನರಿಗೆ ಆತಂಕ ಮೂಡಿಸುವುದು ಹಾಗೂ ಪ್ರಚಾರಕ್ಕಾಗಿ ಹೇಳಿಕೆ ನೀಡುವುದನ್ನು ಎಲ್ಲರೂ
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪಚ್ಚನಾಡಿಯಲ್ಲಿರುವ ಒಳಚರಂಡಿಯ ತ್ಯಾಜ್ಯ ನೀರು ಶುದ್ಧೀಕರಣ ಘಟಕ ಮತ್ತು ಪಿಲಿಕುಳದಲ್ಲಿರುವ ಟರ್ಶಿಯರಿ ಟ್ರೀಟ್ ಮೆಂಟ್ ಪ್ಲಾಂಟ್ಗೆ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ ಮತ್ತು ಕಾರ್ಯಪಾಲಕ ಅಭಿಯಂತರ ಗುರುಪ್ರಸಾದ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಚ್ಚನಾಡಿಯಲ್ಲಿರುವ ಒಳಚರಂಡಿಯ ತ್ಯಾಜ್ಯ ನೀರು ಶುದ್ಧೀಕರಣ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮೇಯರ್ ಪ್ರೇಮಾನಂದ ಶೆಟ್ಟಿ ಪ್ರತಿಕ್ರಿಯೆ ನೀಡಿ,
ವಿಟ್ಲ: ಮನೆಗೆ ಸಿಡಿಲು ಬಡಿದು ಮೂವರು ಗಾಯಗೊಂಡು ಮನೆ ಭಾಗಶಃ ಹಾನಿಗೊಂಡ ಘಟನೆ ವೀರಕಂಬ ಗ್ರಾಮದ ಕಲ್ಮಲೆ ಎಂಬಲ್ಲಿ ಸಂಭವಿಸಿದೆ.ಜಯಂತಿ ಮಕ್ಕಳ ಮಕ್ಕಳಾದ ಪ್ರಜೀತಾ(19) ರಕ್ಷಿತ (24) ಅವರು ಗಾಯಗೊಂಡಿದ್ದು, ವಿಟ್ಲ ಸಮುದಾಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವೀರಕಂಬ ಕಲ್ಮಲೆ ಜಯಂತಿ ಮತ್ತು ರಘುನಾಥ ಶೆಟ್ಟಿ ದಂಪತಿಗಳ ಮನೆಗೆ ಸಂಜೆ ವೇಳೆ ಸಂಭವಿಸಿದ ಭಾರೀ ಸಿಡಿಲು ಅವರ ಮನೆಗೆ ಬಡಿದಿದೆ. ಇದರಿಂದ ಮನೆ ಭಾಗಶಃ ಹಾನಿಗೊಂಡಿದೆ. ಮನೆಯಲ್ಲಿದ್ದ ವಿದ್ಯುತ್ ಉಪಕರಣಗಳು
ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಸಾಗರ ಮಾಲಾ ಯೋಜನೆ ಕರ್ನಾಟಕ ಕರಾವಳಿ ಜಿಲ್ಲೆಗಳ ಮೀನುಗಾರ ಸಮುದಾಯದಲ್ಲಿ ಆತಂಕವನ್ನು ಸೃಷ್ಟಿಸುತ್ತಿದೆ. ಮಂಗಳೂರು ಬೆಂಗರೆಯ ಪಲ್ಗುಣಿ ನದಿ ದಂಡೆಯಲ್ಲಿ ಸಾಗರ ಮಾಲಾ ಯೋಜನೆಯಡಿ ದೇಶೀಯ ಹಡಗುಗಳ ನಿಲುಗಡೆಗಾಗಿ ಕೋಸ್ಟಲ್ ಬರ್ತ್ ನೂರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿದೆ. ಇದು ಸ್ಥಳೀಯ ಸಾಂಪ್ರದಾಯಿಕ ನಾಡದೋಣಿ ಮೀನುಗಾರಿಕೆಗೆ ಬಲವಾದ ಪೆಟ್ಟು ನೀಡುತ್ತದೆ, ದುಡಿಮೆಯ ಅವಕಾಶವನ್ನು ನಾಶಗೊಳಿಸುತ್ತದೆ. ಮೀನುಗಾರರ
ಪೆಟ್ರೋಲ್ ಡೀಸೆಲ್ ಅಡುಗೆ ಅನಿಲ ಸೇರಿದಂತೆ ಜೀವನಾವಶ್ಯಕ ವಸ್ತುಗಳ ವಿಪರೀತ ಬೆಲೆಯೇರಿಕೆಯನ್ನು ಖಂಡಿಸಿ CPIM ನೇತ್ರತ್ವದಲ್ಲಿ ಮಂಗಳೂರು ನಗರದಾದ್ಯಂತ ವಾರಾಚರಣೆ ನಡೆಯತ್ತಿದ್ದು, ಇಂದು ನಗರದ ಹ್ರದಯ ಭಾಗವಾದ ಹಂಪನಕಟ್ಟಾ ಪ್ರದೇಶದಲ್ಲಿ ಪ್ರತಿಭಟನಾ ಪ್ರದರ್ಶನವನ್ನು ನಡೆಸಲಾಯಿತು.ಬೆಲೆಯೇರಿಕೆಗೆ ಕಾರಣವಾದ ಕೇಂದ್ರ ಹಾಗೂ ರಾಜ್ಯ ಸರಕಾರಗಳ ತಪ್ಪು ಆರ್ಥಿಕ ನೀತಿಗಳ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ಭರಿತರಾಗಿ ಘೋಷಣೆಗಳನ್ನು ಕೂಗುವ ಮೂಲಕ ಸರಕಾರದ ಕ್ರಮವನ್ನು
ಕೇಂದ್ರ ಸಚಿವ ಸಂಪುಟದ ಪುನರ್ ರಚನೆ ಇಂದು ಸಂಜೆ 6ಕ್ಕೆ ನಡೆಯಲಿದ್ದು, ಹಲವು ಮಂದಿ ಹೊಸಬರಿಗೆ ಸಚಿವ ಸ್ಥಾನ ದೊರೆಯಲಿದೆ. ಹಾಲಿ ಸಚಿವರ ಪೈಕಿ ಕೆಲವೊಬ್ಬರನ್ನು ಸಂಪುಟದಿಂದ ಕೈಬಿಡುವ ಸಾಧ್ಯತೆ ಇದೆ. ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದಗೌಡ ಸೇರಿದಂತೆ ಆರು ಮಂದಿ ಸಚಿವರು ರಾಜೀನಾಮೆ ನೀಡಿದ್ದಾರೆ.ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್, ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್, ರಾಜ್ಯ ಖಾತೆ ಸಚಿವರಾದ ರಾವೋಸಾಹೇಬ್ ದನ್ವೆ, ಸಂಜಯ್
ಉಳ್ಳಾಲ: ಎರಡು ಮನೆಗಳಿಗೆ ಬಾಗಿಲು ಮುರಿದು ನುಗ್ಗಿದ ಕಳ್ಳರ ತಂಡ, ಮನೆಯೊಳಗಿದ್ದ ಸೊತ್ತುಗಳನ್ನು ಹಾನಿಗೈದು ಒಂದು ಮನೆಯಿಂದ ವಾಚ್ ಕಳವುಗೈದು ಪರಾರಿಯಾಗಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೊಲ್ಯ ಮೂಕಾಂಬಿಕಾ ದೇವಸ್ಥಾನ ಬಳಿ ವೇಳೆ ನಡೆದಿದೆ. ವಿದೇಶದಲ್ಲಿ ನೆಲೆಸಿರುವ ಸುರೇಶ್ ಎಂಬವರಿಗೆ ಸೇರಿದ ಮನೆಯ ಬಾಗಿಲು ಒಡೆದು ಒಳನುಗ್ಗಿರುವ ಕಳ್ಳರು ಕಪಾಟು ಪುಡಿಗೈದು, ಮನೆಯೊಳಗಿನ ಸಾಮಗ್ರಿಗಳನ್ನು ಚೆಲ್ಲಾಪಿಲ್ಲಿಗೈದು ಹಣ ಹಾಗೂ ಒಡವೆಗಾಗಿ ಹುಡುಕಾಡಿ ಏನೂ ಸಿಗದೇ
ಪೆಟ್ರೋಲ್ ಮತ್ತು ಡೀಸೆಲ್, ಅಡುಗೆ ಅನಿಲ ಬೆಲೆಯೇರಿಕೆ ಖಂಡಿಸಿ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಕೆ.ಅಭಯಚಂದ್ರ ಜೈನ್ ಅವರು ಮೂಡುಬಿದಿರೆಯಲ್ಲಿ ಒಂಟಿಯಾಗಿ ಪ್ರತಿಭಟನೆ ನಡೆಸಿ ಗಮನಸೆಳೆದರು. ಇಂಧನ ತೈಲ, ಅಡುಗೆ ಅನಿಲ ಬೆಲೆಯೇರಿಕೆ ವಿರುದ್ಧ ಇಂದು ಕಾಂಗ್ರೆಸ್ ಪಕ್ಷದ ವತಿಯಿಂದ ಮೂಡುಬಿದಿರೆಯಲ್ಲಿ ಸೈಕಲ್ ಜಾಥಾ ಮೂಲಕ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಮೂಡುಬಿದಿರೆ ಪೊಲೀಸರು ಇದಕ್ಕೆ ಅನುಮತಿ ನಿರಾಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅಭಯಚಂದ್ರ ಜೈನ್
ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಬೆಲೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧ ಸೈಕಲ್ ರ್ಯಾಲಿ ಮತ್ತು ಪಾದಯಾತ್ರೆಯನ್ನು ಹಮ್ಮಿಕೊಂಡರು. ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಪಿವಿಎಸ್ ಸರ್ಕಲ್ ಮುಖಾಂತರ ಮಂಗಳೂರು ಪಾಲಿಕೆ ಕಚೇರಿ ವರೆಗೆ ಸೈಕಲ್ ರ್ಯಾಲಿ ಮತ್ತು ಪಾದಯಾತ್ರೆ ನಡೆಯಿತು. ರ್ಯಾಲಿಯಲ್ಲಿ ಕಾಂಗ್ರೆಸ್ ಮುಖಂಡರಾದ ಮಿಥುನ್ ರೈ, ವಿಶ್ವಾಸ್ದಾಸ್ ಕುಮಾರ್, ಎಸಿ ವಿನಯರಾಜ್, ಟಿ.ಕೆ ಸುಧೀರ್ ಸೇರಿದಂತೆ ಮತ್ತಿತ್ತರ
ಕುಂದಾಪುರ: ರಾಜಕೀಯ ದ್ವೇಷ ಸಾಧನೆಗಾಗಿ ಯಡಮೊಗೆಯಲ್ಲಿ ಬಿಜೆಪಿ ಪಕ್ಷದ ಮುಖಂಡರು ತಮ್ಮ ಪಕ್ಷದವರೇ ಆದ ಉದಯ್ ಗಾಣಿಗ ಅವರನ್ನು ಅಮಾನುಷವಾಗಿ ಹತ್ಯೆ ನಡೆಸಿರುವುದು ಖಂಡನೀಯ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು.ತಾಲೂಕಿನ ಯಡಮೊಗೆಯ ಹೊಸಬಾಳು ಉದಯ್ ಗಾಣಿಗ ಅವರ ಮನೆಗೆ ಮಂಗಳವಾರ ಸಂಜೆ ಭೇಟಿ ನೀಡಿ ಅವರ ಪತ್ನಿ ಹಾಗೂ ಕುಟುಂಬಿಕರಿಗೆ ಸಾಂತ್ವನ ಹೇಳಿದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಪಕ್ಷ, ಜಾತಿ, ಧರ್ಮದ ನೆಲೆಯಲ್ಲಿ


















