Home Archive by category ಕ್ರೈಮ್ (Page 2)

ಪಣಂಬೂರು ;ಮಾದಕ ವಸ್ತು ಸಾಗಾಟ ಮತ್ತು ಮಾರಾಟ ಪ್ರಕರಣದಲ್ಲಿ ಹೊರ ರಾಜ್ಯದ ಇಬ್ಬರು ಆರೋಪಿಗಳ ಸೆರೆ

ಮಂಗಳೂರು ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತುವನ್ನು ಮಾರಾಟ ಮತ್ತು ಸಾಗಾಟ ಮಾಡಿದ ಆರೋಪಿತರನ್ನು ಪಣಂಬೂರು ಪೊಲೀಸರು ದಸ್ತಗಿರಿ ಮಾಡಿ ಮಾದಕ ವಸ್ತುಗಳನ್ನು ಮತ್ತು ಮೊಬೈಲ್ ಫೋನ್ ಗಳನ್ನು ಸ್ವಾಧೀನಪಡಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ 62 ನೇ ತೋಕೂರು ಗ್ರಾಮದ, ತೋಕೂರು ರೈಲ್ವೇ ಸ್ಟೇಶನ್ ಬಳಿ

ನೋಯ್ಡಾ:ವರದಕ್ಷಿಣೆ ಬಾಕಿಗೆ ಸುಟ್ಟು ಕೊಲೆ ಆರು ವರುಷದ ಮಗನೆದುರು ಹತ್ಯೆ

ನೋಯ್ಡಾದಲ್ಲಿ ವರದಕ್ಷಿಣೆ ಬಾಕಿಗಾಗಿ ಆರು ವರುಷದ ಮಗನ ತಾಯಿಯನ್ನು ಗಂಡನ ಮನೆಯವರು ಜೀವಂತ ಸುಟ್ಟು ಕೊಂದುದರ ಸಂಬಂಧ ಪೋಲೀಸರು ಮೂವರನ್ನು ಬಂಧಿಸಿದ್ದಾರೆ.ಆರು ವರುಷದ ಹುಡುಗನ ಹೇಳಿಕೆ ಹೀಗಿದೆ. ಮೊದಲು ಅವರ ಅಮ್ಮನ ಮೇಲೆ ಏನೋ ಸುರಿದರು. ಅನಂತರ ಕೆನ್ನೆಗೆ ಹೊಡೆದರು. ಅಪ್ಪ ಲೈಟರ್‌ನಿಂದ ಬೆಂಕಿ ಹಚ್ಚಿದಾಗ ಅಮ್ಮ ದಗದಗ ಬೆಂಕಿಯಲ್ಲಿ ಅರಚುತ್ತ ಸುಟ್ಟು ಹೋದಳು. ನನ್ನನ್ನು ಗಟ್ಟಿಯಾಗಿ ಮುಖ ಅಮುಕಿ ಹಿಡಿದುಕೊಂಡಿದ್ದಾರೆ. ಗಂಡನ ಮನೆಯಲ್ಲಿ ಬೆಂಕಿ ಇಡಲ್ಪಟ್ಟು

ಉಡುಪಿ:ಅಂತರ ರಾಜ್ಯ ಕಳ್ಳನ ಬಂಧನ

ಉಡುಪಿ ಜಿಲ್ಲೆಯ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಮತ್ತು ಬೈಂದೂರು ಪೊಲೀಸ್ ಠಾಣಾ ಸರಹದ್ದಿನಲ್ಲಿ ನಡೆದ ಮೂಕಾಂಬಿಕಾ ಸಹಕಾರಿ ಸೇವಾ ಸಂಘ ಸೊಸೈಟಿ ದರೋಡೆ ಪ್ರಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಪಡುಬಿದ್ರಿ ಠಾಣಾ ಪೊಲೀಸರು ದ.ಕ ಜಿಲ್ಲೆಯ ಪುತ್ತೂರು ಬನ್ನೂರಿನ ನೌಶಾದ್ (ಹಾಲಿ ವಾಸ ಮಡಿಕೇರಿ ಜಿಲ್ಲೆಯ ಕುಶಾಲನಗರ) ಎಂಬಾತನನ್ನು ಬಂಧಿಸಿದ್ದು ಆತನಿಂದ ಪಡುಬಿದ್ರೆ ಠಾಣಾ ವ್ಯಾಪ್ತಿಯಲ್ಲಿ ನೆಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ

ಸುಪ್ರೀಂ ಕೋರ್ಟು ತೀರ್ಪು :ಬೀದಿ ನಾಯಿಗಳು ಮತ್ತೆ ಬೀದಿಗೆ ಬರಲಿ! ಬೀದಿಯಲ್ಲಿ ತಿನಿಸು ಕೊಡುವುದು ಅಪರಾಧ

ಬೀದಿ ನಾಯಿಗಳು ಮತ್ತೆ ಬೀದಿಗೆ ಬಂದು ತಿರುಗಾಡಬಹುದು ಆದರೆ ಬೀದಿಯಲ್ಲಿ ಬೀದಿ ನಾಯಿಗಳಿಗೆ ತಿನಿಸು ಕೊಡುವುದು ಅಪರಾಧ ಎಂದು ಸುಪ್ರೀಂ ಕೋರ್ಟು ಹಿಂದಿನ ತೀರ್ಪನ್ನು ಬದಲಿಸಿ ತೀರ್ಪಿತ್ತಿದೆ.ಎಲ್ಲ ಬೀದಿ ನಾಯಿಗಳಿಗೆ ನಾಯಿ ಮನೆ ಕಟ್ಟುವುದು ಕಷ್ಟ ಎಂದು ದಿಲ್ಲಿಯ ಬಿಜೆಪಿ ಸರಕಾರವು ಹೇಳಿತ್ತು. ನಾಯಿ ಪ್ರಿಯರುಗಳು ಬೀದಿ ನಾಯಿಗಳ ಮೇಲೆ ಕಠಿಣ ಕ್ರಮ ಸರಿಯಲ್ಲ ಎಂದು ವಾದಿಸಿದ್ದವು. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ, ಎನ್. ವಿ. ಅಂಜಾರಿಯಾ

ಉಳ್ಳಾಲ : ಬೈಕ್ ಢಿಕ್ಕಿ ಹೊಡೆದು ಗಂಭೀರಗೊಂಡಿದ್ದ ಪಾದಚಾರಿ ಸಾವು

ಹೆದ್ದಾರಿ ದಾಟುತ್ತಿದ್ದ ವೇಳೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಪಾದಚಾರಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟ ಘಟನೆ ತೊಕ್ಕೊಟ್ಟು ಸಮೀಪದ ಕಾಪಿಕಾಡು ಎಂಬಲ್ಲಿ ನಡೆದಿದೆ. ಕುಂಪಲ ಚೇತನ ನಗರ ನಿವಾಸಿ ಲೋಕೇಶ್ (48)ಮೃತ ವ್ಯಕ್ತಿ. ತೊಕ್ಕೊಟ್ಟಿನ ವಾಣಿಜ್ಯ ಸಂಕೀರ್ಣವೊಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಲೋಕೇಶ್ ಅವರು ಆ.15 ರ ಸಂಜೆ ರಾತ್ರಿ ಪಾಳಿ ಕೆಲಸಕ್ಕೆ ತೆರಳುವಾಗ ಕಾಪಿಕಾಡು ಎಂಬಲ್ಲಿ ಹೆದ್ದಾರಿ

ದೇರಳಕಟ್ಟೆಯ ಮುತ್ತೂಟ್ ಪೈನಾನ್ಸ್ ಬ್ಯಾಂಕ್ ಕಳ್ಳತನ ಯತ್ನ ಪ್ರಕರಣದಲ್ಲಿ ತಲೆಮರೆಸಿಕೊಂಡ ಆರೋಪಿಯ ಸೆರೆ

ಮಂಗಳೂರು ನಗರದ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ದೇರಳಕಟ್ಟೆ ಪರಿಸರದ ಮುತ್ತೂಟ್ ಪೈನಾನ್ಸ್ ಬ್ಯಾಂಕ್ ಕಳ್ಳತನಕ್ಕೆ ಪ್ರಯತ್ನ ನಡೆಸಿದ ಪ್ರಕರಣದಲ್ಲಿ ದಸ್ತಗಿರಿಯಾಗದೇ ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ. ದಿನಾಂಕ: 29-03-2025 ರಂದು ರಾತ್ರಿ ಸಮಯ ದೇರಳಕಟ್ಟೆ ಪರಿಸರದಲ್ಲಿರುವ ಹೆಚ್.ಎಮ್ ಕಾಂಪ್ಲೇಕ್ಸ್ ನ ಮುತ್ತೂಟ್ ಪೈನಾನ್ಸ್ ಕಚೇರಿಯ ಮುಂದಿನ ಬಾಗಿಲಿನ ಸೈರನ್ ಹೂಟರ್ ನ ಕೇಬಲ್

ಮಂಗಳೂರು: ಸೋಶಿಯಲ್ ಮೀಡಿಯಾದಲ್ಲಿ ಪ್ರಚೋದನಾಕಾರಿ ಪೋಸ್ಟ್- 6 ಮಂದಿಯ ಬಂಧನ

ಸಾಮಾಜಿಕ ಮಾಧ್ಯಮಗಳ ಮೂಲಕ ಕೋಮು ದ್ವೇಷ ಹರಡುವುದರ ವಿರುದ್ಧದ ಪ್ರಮುಖ ಕಾರ್ಯಾಚರಣೆಯಲ್ಲಿ, ಮಂಗಳೂರು ನಗರ ಪೊಲೀಸರು ನಗರ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಾಮಾಜಿಕ ಸಾಮರಸ್ಯವನ್ನು ಕದಡುವ ಗುರಿಯನ್ನು ಹೊಂದಿರುವ ಪ್ರಚೋದನಕಾರಿ ವಿಷಯವನ್ನು ಪ್ರಸಾರ ಮಾಡಿದ್ದಕ್ಕಾಗಿ ಐವರನ್ನು ಬಂಧಿಸಿದ್ದಾರೆ. ಗುಪ್ತಚರ ಮಾಹಿತಿಯ ಮೇರೆಗೆ ತ್ವರಿತವಾಗಿ ಕಾರ್ಯನಿರ್ವಹಿಸಿದ ನಗರ ಆಯುಕ್ತರು, ಪ್ರಚೋದನಾಕಾರಿ ಪೋಸ್ಟ್‌ಗಳಿಗೆ ಕಾರಣರಾದವರನ್ನು ಗುರುತಿಸಲು ಮತ್ತು ಬಂಧಿಸಲು

ಮಾದಕ ವಸ್ತು ಗಾಂಜಾ ಸಾಗಾಟ ಮತ್ತು ಮಾರಾಟ ತಡೆಗಟ್ಟುವ ಉದ್ದೇಶದಿಂದ ಆರೋಪಿಗಳ ಬಂಧನ

ಉಡುಪಿ ಜಿಲ್ಲೆಯಲ್ಲಿ ಮಾದಕ ವಸ್ತು ಗಾಂಜಾ ಸಾಗಾಟ ಮತ್ತು ಮಾರಾಟ ಮಾಡುತ್ತಿರುವ ಆರೋಪಿಗಳ ಬಗ್ಗೆ ಕಡಿವಾಣ ಹಾಕಲು ಹಾಗೂ ಮಾದಕ ವಸ್ತು ಗಾಂಜಾ ಸಾಗಾಟ ಮತ್ತು ಮಾರಾಟ ತಡೆಗಟ್ಟುವ ಉದ್ದೇಶದಿಂದ ಪದೇ ಪದೇ ಪ್ರಕರಣಗಳಲ್ಲಿ ಭಾಗಿಯಾಗಿರುವ ಜಿಲ್ಲೆಯ ಹಲವು ಠಾಣೆಯಲ್ಲಿ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳ ವಿರುದ್ದ ಪಿಟ್ ಎನ್.ಡಿ.ಪಿ.ಎಸ್ ಕಾಯಿದೆ ಅಡಿಯಲ್ಲಿ ಕೃಷ್ಣ ಆಚಾರಿ @ ಕೃಷ್ಣ(43), ಕೊಳಲಗಿರಿ ಉಪ್ಪೂರು ಗ್ರಾಮ, ಬ್ರಹ್ಮಾವರದ ಅಬ್ದುಲ್‌ ಜಬ್ಬಾರ್‌ @ ಜಬ್ಬಾರ್‌ (27),

ಮಂಗಳೂರು:ಸುಹಾಸ್ ಶೆಟ್ಟಿ ಹತ್ಯೆ: 8 ಆರೋಪಿಗಳ ಬಂಧನ:ಗೃಹ ಸಚಿವ ಡಾ. ಜಿ. ಪರಮೇಶ್ವರ್

ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಎಂಟು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಗೃಹಸಚಿವ ಜಿ.ಪರಮೇಶ್ವರ ತಿಳಿಸಿದರು. ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ‘ ಎಲ್ಲ ಆರೋಪಿಗಳು ಪೊಲೀಸ್ ಕಸ್ಟಡಿಯಲ್ಲಿದ್ದಾರೆ’ ಎಂದರು. ಆರೋಪಿಗಳ ವಿವರ ನೀಡಿದ ಪೊಲೀಸ್ ಕಮಿಷನರ್ ಅನುಪಮ್‌ ಅಗ್ರವಾಲ್ ‘ಕಿನ್ನಿಪದವಿನಲ್ಲಿ ಮೇ 1 ರಂದು ರಾತ್ರಿ ಸುಹಾಸ್ ಶೆಟ್ಟಿ ಕೊಲೆ ನಡೆದಿತ್ತು. ಕಿನ್ನಿಪದವಿನಲ್ಲಿ ವಾಸವಾಗಿರುವ

ಮಂಜೇಶ್ವರ: ವ್ಯಕ್ತಿಯೋರ್ವನನ್ನು ಇರಿದು ಕೊಲೆ

ಮಂಜೇಶ್ವರ : ವ್ಯಕ್ತಿಯೋರ್ವನನ್ನು ಕಡಿದು ಕೊಲೆ ಮಾಡಿದ ಘಟನೆ ಮಂಜೇಶ್ವರದ ಉಪ್ಪಳದಲ್ಲಿ ನಡೆದಿದೆ. ಕಣ್ಣೂರು ಪಯ್ಯನ್ನೂರು ನಿವಾಸಿ ಹಾಗೂ ಉಪ್ಪಳ ಮೀನು ಮಾರುಕಟ್ಟೆ ಸಮೀಪದ ಫ್ಲಾಟಿನ ನೌಕರನಾಗಿರುವ ಸುರೇಶ್ ಕುಮಾರ್ (48) ಸಾವನ್ನಪ್ಪಿದ ದುರ್ದೈವಿ. ಮಂಗಳವಾರ ರಾತ್ರಿ ಉಪ್ಪಳ ಮೀನು ಮಾರುಕಟ್ಟೆ ಪರಿಸರದಲ್ಲಿ ಈ ದುಷ್ಕೃತ್ಯ ನಡೆದಿದೆ. ಘಟನೆಗೆ ಸಂಬಂಧಿಸಿ ಉಪ್ಪಳ ಫತ್ವಾಡಿ ಕಾರ್ಗಿಲ್ ನಿವಾಸಿ ಸವಾದ್( 23) ಎಂಬಾತನನ್ನು ಮಂಜೇಶ್ವರ ಪೊಲೀಸರು  ವಶಕ್ಕೆ ತೆಗೆದಿದ್ದಾರೆ.