Home Archive by category ಕ್ರೈಮ್ (Page 20)

ಮೂಡುಬಿದರೆ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಮೂಡುಬಿದಿರೆ: ಮಹಾವೀರ ಕಾಲೇಜು ಬಳಿಯ ಕೀರ್ತಿನಗರದ ನಿವಾಸಿ ಅಲ್ಫೋನ್ಸ್ ( 68) ಎಂಬವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಅಲ್ಫೋನ್ಸ್ ಅವರು ಕಳೆದ ಕೆಲವು ಸಮಯಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರೆನ್ನಲಾಗಿದೆ. ಮನೆಯವರು ರಾತ್ರಿ ಮಲಗಿದ್ದ ಸಂದರ್ಭದಲ್ಲಿ ಬಾವಿಗೆ ಹಾರಿದ್ದು ಬೆಳಿಗ್ಗೆ ಹುಡುಕಾಡಿದಾಗ ಮೃತ ದೇಹ

ಸುರತ್ಕಲ್ ಫಾಜಿಲ್ ಕೊಲೆ ಪ್ರಕರಣ ಪ್ರವೀಣ್ ನೆಟ್ಟಾರು ಕೊಲೆಗೆ ಪ್ರತೀಕಾರವಾಗಿ ನಡೆದ ಕೊಲೆ ?

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯಾಗಿ ಎರಡು ದಿನದ ಬಳಿಕ ಸುರತ್ಕಲ್ ನಲ್ಲಿ ಕೊಲೆಯಾದ ಫಾಝಿಲ್ ಪ್ರಕರಣದಲ್ಲಿ ನಗರ ಪೆÇಲೀಸರು ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಮಂಗಳವಾರ ಉಡುಪಿ ಉದ್ಯಾವರ ಸಮೀಪ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ. ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಅವರು ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದರು. ಜುಲೈ 28ರಂದು

ಬೆಳ್ಳಾರೆ ಪ್ರವೀಣ್ ಹತ್ಯೆ ಪ್ರಕರಣ ಮತ್ತಿಬ್ಬರು ಆರೋಪಿಗಳ ಬಂಧನ

ಪುತ್ತೂರು: ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿ ಪೊಲೀಸರು ಮತ್ತೆ ಇಬ್ಬರು ಆರೋಪಿಗಳನ್ನು ಆ.2 ರಂದು ಬಂಧಿಸಿದ್ದಾರೆ. ಬೆಳ್ಳಾರೆ ಪಲ್ಲಿಮಜಲು ನಿವಾಸಿಗಳಾದ ಸದ್ದಾಂ(32ವ) ಮತ್ತು ಹಾರಿಸ್(42ವ) ರವರು ಬಂಧಿತ ಆರೋಪಿಗಳು. ಈ ಪ್ರಕರಣದಲ್ಲಿ ಈಗಾಗಲೇ ಇಬ್ಬರು ಆರೋಪಿಗಳಾದ ಶಫೀಕ್ ಮತ್ತು ಜಾಕೀರ್ ಅವರನ್ನು ಜು.28 ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದ ಬಳಿಕ ಪೆÇಲೀಸರು ಆರೋಪಿಗಳ ಹೆಚ್ಚಿನ ವಿಚಾರಣೆಗೆ ಪೊಲೀಸ್

ಮಜಿಲ ನಿವಾಸಿ ಮೃತದೇಹ ನೇತ್ರಾವತಿಯಲ್ಲಿ ಪತ್ತೆ

ಉಳ್ಳಾಲ: ಪಾಂಡೇಶ್ವರ ಠಾಣಾ ವ್ಯಾಪ್ತಿಯಿಂದ ನಾಪತ್ತೆಯಾಗಿದ್ದ ವೃದ್ಧರೋರ್ವರ ಮೃತದೇಹ ಉಳ್ಳಾಲ ಉಳಿಯ ನೇತ್ರಾವತಿ ನದಿತೀರದಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದೆ.ಜೆಪ್ಪು ಮಜಿಲ ನಿವಾಸಿ ಕುಮಾರ್(೭೮) ಎಂಬವರ ಮೃತದೇಹ ಇಂದು ಪತ್ತೆಯಾಗಿದೆ. ಗುರುವಾರ ಬೆಳಿಗ್ಗೆಯಿಂದ ನಾಪತ್ತೆಯಾಗಿದ್ದ ಇವರ ಕುರಿತು ಮನೆಮಂದಿ ಪಾಂಡೇಶ್ವರ ಪೊಲೀಸ್‌ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ಕುಮಾರ್‌ ಅವರು ಚರ್ಮರೋಗವಿದ್ದ ಹಿನ್ನೆಲೆಯಲ್ಲಿ ಖಿನ್ನತೆಗೆ ಒಳಗಾಗಿದ್ದರು. ಕೆಲ ದಿನಗಳ

ಪ್ರವೀಣ್ ನೆಟ್ಟಾರು ಕೊಲೆ : ಆರೋಪಿಗಳಿಬ್ಬರಿಗೆ ನ್ಯಾಯಾಂಗ ಬಂಧನ

ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಆರೋಪಿಗಳಿಬ್ಬರಿಗೆ ಪುತ್ತೂರು ನ್ಯಾಯಾಲಯ ಆ.11ರ ತನಕ 14ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.ಕಡಬ ತಾಲೂಕಿನ ಸವಣೂರಿನಲ್ಲಿ ಫಾಸ್ಟ್ಫುಡ್ ಅಂಗಡಿ ವ್ಯವಹಾರ ನಡೆಸುತ್ತಿರುವ ಮಹಮ್ಮದ್ ಝಾಕೀರ್ ಮತ್ತು ಬೆಳ್ಳಾರೆಯವನಾಗಿದು,ಸುಳ್ಯ ತಾಲೂಕಿನ ಗುತ್ತಿಗಾರಿನ ಅಡಿಕೆ ಖರೀದಿ ಅಂಗಡಿಯೊಂದರಲ್ಲಿ ಕೆಲಸಕ್ಕಿರುವ ಶಫೀಕ್ ನ್ಯಾಯಾಂಗ

ಜನ್ಮದಿನದಂದೇ ಮಣ್ಣಲ್ಲಿ ಮಣ್ಣಾದ ಫಾಜೀಲ್

ಸುರತ್ಕಲ್ ಸಮೀಪದ ತಾತ್ಕಾಲಿಕ ಮಾರುಕಟ್ಟೆಯಲ್ಲಿ ಗುರುವಾರ ರಾತ್ರಿ ಕೊಲೆಯಾದ ಮಂಗಳಪೇಟೆಯ ನಿವಾಸಿ ಫಾಝಿಲ್ ನ ಅಂತ್ಯಸಂಸ್ಕಾರ ಶುಕ್ರವಾರ ಬೆಳಿಗ್ಗೆ ಮಂಗಳಪೇಟೆ ಜುಮ್ಮಾ ಮಸೀದಿಯಲ್ಲಿ ನಡೆದಿದೆ. ಸಾವಿವಾರು ಜನರ ನಡುವ ಫಾಝಿಲ್ ಮೃತದೇಹವನ್ನು ಮೆರವಣಿಗೆಯಲ್ಲಿ ಸಾಗಿಸಿ ಅಂತ್ಯಸಂಸ್ಕಾರ ನಡೆಸಲಾಯಿತು. ಪೋಲೀಸ್ ಬಿಗಿ ಭದ್ರತೆಯಲ್ಲಿ ಧಾರ್ಮಿಕ ಕಾರ್ಯಗಳು ನೆರವೇರಿತು. ಪೋಲೀಸ್ ಆಯುಕ್ತ ಎನ್ ಶಶಿಕುಮಾರ್, ಹಾಸನದ ಎಸ್ ಪಿ ಹರಿರಾಂ ಶಂಕರ್ ಭದ್ರತೆಯ ಉಸ್ತುವಾರಿ ವಹಿಸಿದ್ದರು.

ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ 12 ಮಂದಿ ವಶಕ್ಕೆ

ಮಂಗಳೂರು ನಗರ ಪೆÇಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿ ಗುರುವಾರ ರಾತ್ರಿ ವೇಳೆ ಅನಗತ್ಯವಾಗಿ ಸಂಚರಿಸುತ್ತಿದ್ದ 12 ಮಂದಿಯನ್ನು ಪೋಲೀಸರು ವಶಕ್ಕೆ ಪಡೆದಿದ್ದಾರೆ. ಸುರತ್ಕಲ್ ನಲ್ಲಿ ಕಳೆದ ರಾತ್ರಿ ನಡೆದ ಮುಹಮ್ಮದ್ ಫಾಝಿಲ್ ಕೊಲೆಯ ಹಿನ್ನೆಲೆಯಲ್ಲಿ ಮಂಗಳೂರು ಪೆÇಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ವಿಧಿಸಲಾಗಿದೆ. ರಾತ್ರಿ ವೇಳೆ ಅನಗತ್ಯ ಜನ ಸಂಚಾರವನ್ನು ನಿಷೇಧಿಸಲಾಗಿದೆ. ಈ ಸಂಬಂಧ 12 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ

ಪ್ರವೀಣ್ ಹತ್ಯೆ ಆರೋಪಿಗಳ ಅಂಗಡಿಗಳಿಗೆ ಹಾನಿ

ಬಿಜೆಪಿ ಮುಖಂಡ ಪ್ರವೀಣ್ ಹತ್ಯೆಗೆ ಸಂಬಂಧಿಸಿದಂತೆ ಪೋಲೀಸರಿಂದ ಬಂಧಿಸಲ್ಪಟ್ಟ ಬೆಳ್ಳಾರೆ ಮೂಲದ ಶಫೀಕ್ ಕೆಲಸ ಮಾಡುತ್ತಿದ್ದ ಗುತ್ತಿಗಾರಿನ ಅಡಿಕೆ ಅಂಗಡಿಯನ್ನು ಆಕ್ರೋಶಿತರು ಧ್ವಂಸಗೊಳಿಸಿದ ಘಟನೆ ನಡೆದಿದೆ. ಪ್ರವೀಣ್ ಹತ್ಯೆ ಪ್ರಕರಣದಲ್ಲಿ ಬೆಳ್ಳಾರೆ ಮೂಲದ ಶಫೀಕ್ ಬಂಧಿತನಾಗಿದ್ದಾನೆ ಎಂಬ ಮಾಹಿತಿ ತಿಳಿಯುತ್ತಿದ್ದಂತೆ ಆಕ್ರೋಶಿತರಾದ ಕೆಲವರು ಆತ ಕೆಲಸ ನಿರ್ವಹಿಸುತ್ತಿದ್ದ ಗುತ್ತಿಗಾರಿನ ಅಡಿಕೆ ಅಂಗಡಿಯ ಮೇಲೆ ದಾಳಿ ನಡೆಸಿ ಧ್ವಂಸಗೊಳಿಸಿದ್ದಾರೆ. ಬಿಗು ಪೋಲೀಸ್

ಹುಟ್ಟೂರಿನಲ್ಲಿ ಪ್ರವೀಣ್ ಅವರ ಪ್ರಾರ್ಥಿವ ಶರೀರಕ್ಕೆ ಅಂತಿಮ ನಮನ

ಸುಳ್ಯ: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂ ಕಾರ್ಯಕರ್ತ, ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರ್ ಅವರ ಸ್ವಗ್ರಾಮ ಬೆಳ್ಳಾರೆಯ ನೆಟ್ಟಾರುವಿನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಬಿಲ್ಲವ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನಡೆಸಲಾಯಿತು. ಈ ವೇಳೆ ಕುಟುಂಬಸ್ಥರಿಗೆ ಮಾತ್ರ ಅವಕಾಶ ನೀಡಲಾಗಿದೆ. ಪ್ರವೀಣ್‌ ಪತ್ನಿ, ತಂದೆ-ತಾಯಿ ಸೇರಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ತಂದೆಯೇ ಮಗನ ಚಿತೆಗೆ ಅಗ್ನಿ ಸ್ಪರ್ಶ ನೀಡುವ ಮೂಲಕ ಅಂತಿಮ ಸಂಸ್ಕಾರ ನಡೆಸಲಾಯಿತು.

ಪ್ರವೀಣ್ ನೆಟ್ಟಾರ್ ಹತ್ಯೆ ಬಿಜೆಪಿ ಸರಕಾರದ ದುರಾಡಳಿತದ ಫಲಶ್ರುತಿ : ಮಸೂದ್, ಪ್ರವೀಣ್ ಕುಟುಂಬಗಳಿಗೆ ತಾರತಮ್ಯ ವಿಲ್ಲದೆ ಪರಿಹಾರ ಒದಗಿಸಿ : ಡಿವೈಎಫ್ಐ ಆಗ್ರಹ

ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆಗೆ ಬಿಜೆಪಿ ಸರಕಾರದ ದುರಾಡಳಿತ ಹಾಗೂ ಮತೀಯವಾದಿ ನೀತಿಗಳೇ ನೇರ ಕಾರಣ. ಬಿಜೆಪಿ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ಪೂರ್ತಿ ಕುಸಿದಿದ್ದು, ಕೋಮುವಾದಿ ಸಂಘಟನೆಗಳು ಅಂಕೆ ಮೀರಿ ವರ್ತಿಸುತ್ತಿವೆ. ಬೆಳ್ಳಾರೆಯಲ್ಲಿ ನಡೆದಿರುವ ಮಸೂದ್ ಹಾಗೂ ಪ್ರವೀಣ್ ನೆಟ್ಟಾರ್ ಕೊಲೆಗಳು ಮತೀಯ ಸಂಘರ್ಷ ಭುಗಿಳೇಲುವ ಭೀತಿಗೆ ಕಾರಣವಾಗಿದೆ. ಮುಖ್ಯಮಂತ್ರಿ ಬೊಮ್ಮಾಯಿ‌ ಈಗಲಾದರು ಎಚ್ಚೆತ್ತುಕೊಂಡು ತಮ್ಮ ಪರಿವಾರವೂ ಸೇರಿದಂತೆ