Home Archive by category ರಾಜಕೀಯ (Page 10)

ಮೋದಿಯವರ ಧ್ಯಾನ ನಿಶ್ಶಬ್ದ ಕಾಲದ ದುರುಪಯೋಗ:ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ನೇರ ದೂರು

ಪ್ರಚಾರ ನಡೆಸಬಾರದ 48 ಗಂಟೆಗಳ ಕಾಲ ಧ್ಯಾನ ಮಾಡುವ ಮೋದಿಯವರ ಕಾರ್ಯವು ಸ್ಪಷ್ಟವಾಗಿ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. ಜೂನ್ 1ರಂದು ಮೋದಿಯವರ ವಾರಣಾಸಿ ಕ್ಷೇತ್ರಕ್ಕೂ ಸೇರಿ ಕೊನೆಯ ಹಂತದ ಲೋಕಸಭಾ ಚುನಾವಣೆಯ ಮತದಾನ ನಡೆಯುತ್ತಿದೆ. ಅದರಲ್ಲಿ ಲಾಭ ಪಡೆಯಲು ಪ್ರಧಾನಿ ಮೋದಿಯವರು ಪ್ರಚಾರ ಮಾಡಬಾರದ 48 ಗಂಟೆಗಳ

ಪುತ್ತೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಗೆಲುವು ಖಚಿತ – ಪ್ರತಾಪ ಸಿಂಹ ನಾಯಕ್ ವಿಶ್ವಾಸ

ಪುತ್ತೂರು: ರಾಜ್ಯ ವಿಧಾನ ಪರಿಷತ್‌ನ ಆರು ಸ್ಥಾನಗಳಿಗೆ ಜೂನ್ 3ರಂದು ನಡೆಯುವ ಚುನಾವಣೆಯಲ್ಲಿ ಎಲ್ಲ ಆರು ಸ್ಥಾನಗಳಲ್ಲೂ ಬಿಜೆಪಿ- ಜೆಡಿಎಸ್ ಮೈತ್ರಿಕೂಟ ಗೆಲುವು ಸಾಧಿಸಲಿದೆ. ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯಲ್ಲಿ ಬಂಡಾಯವಿದ್ದರೂ, ಬಿಜೆಪಿಯಂಥ ರಾಷ್ಟ್ರೀಯ ಪಕ್ಷದ ಸಂಘಟನಾ ಸಾಮರ್ಥ್ಯದ ಎದುರು ಬಂಡಾಯ ಅಭ್ಯರ್ಥಿ ಗೆಲುವು ಸಾಧಿಸಲು ಸಾಧ್ಯವೇ ಇಲ್ಲ ಎಂದು ಹಿರಿಯ ಬಿಜೆಪಿ ಮುಖಂಡರೂ, ವಿಧಾನ ಪರಿಷತ್ ಸದಸ್ಯರೂ ಆದ ಪ್ರತಾಪ ಸಿಂಹ ನಾಯಕ್ ಹೇಳಿದರು.

ಕಾಂಗ್ರೆಸ್ ಪ್ರಚಾರ ಪುಸ್ತಕದಲ್ಲಿ ಬಿಜೆಪಿ ನಾಯಕನ ಪೋಟೋ!?

ವಿಧಾನ ಪರಿಷತ್ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಕಾಂಗ್ರೆಸ್ ಪ್ರಚಾರ ಪತ್ರದಲ್ಲಿ ಕಾಂಗ್ರೆಸ್ ಮುಖಂಡರೊಬ್ಬರ ಭಾವಚಿತ್ರದ ಬದಲು ಬಿಜೆಪಿ ಮುಖಂಡನ ಭಾವಚಿತ್ರ ಮುದ್ರಿಸಲ್ಪಟ್ಟಿದೆ! ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾಕ್ಟರ್ ಕೆ.ಕೆ.ಮಂಜುನಾಥ್ ಕುಮಾರ್ ಅವರ ಚುನಾವಣಾ ಪ್ರಚಾರ ಪತ್ರದಲ್ಲಿ ಈ ಎಡವಟ್ಟು ಕಂಡು ಬಂದಿದ್ದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಈ ಪ್ರಚಾರ ಪತ್ರದಲ್ಲಿ ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಕುಮಾರ್ ಶೆಟ್ಟಿಯ ಬದಲು ಬಿಜೆಪಿ

22 ಮಂದಿಯ 16 ಲಕ್ಷ ಕೋಟಿ ರೂಪಾಯಿ ಸಾಲ:ಮೋದಿಯವರನ್ನು ಟೀಕಿಸಿದ ರಾಹುಲ್ ಗಾಂಧಿ

ಪ್ರಧಾನಿ ಮೋದಿಯವರ ಸರಕಾರವು 22 ಮಂದಿ ಉದ್ಯಮಿಗಳ 16 ಲಕ್ಷ ಕೋಟಿ ರೂಪಾಯಿ ಸಾಲ ಮನ್ನಾ ಮಾಡಿ, ಹಿಮಾಚಲ ಪ್ರದೇಶಕ್ಕೆ 9,000 ಕೋಟಿ ರೂಪಾಯಿ ನೆರೆ ಪರಿಹಾರ ನೀಡದೆ ತಾರತಮ್ಯ ಮಾಡಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಹೇಳಿದರು. ಹಿಮಾಚಲ ಪ್ರದೇಶದ ಸಿಮ್ಲಾದಲ್ಲಿ ಚುನಾವಣಾ ಪ್ರಚಾರ ನಡೆಸಿದ ರಾಹುಲ್ ಗಾಂಧಿಯವರು ಪ್ರವಾಹ ಪರಿಹಾರ ನೀಡದೆಯೇ ಮೋದಿಯವರು ನೆರೆ ಪರಿಹಾರ ನೀಡಿದ್ದು ಬೇರೆಯದಕ್ಕೆ ಬಳಕೆ ಮಾಡಿದ್ದಾರೆ ಎಂದು ಹಸಿ ಸುಳ್ಳು ಹೇಳುತ್ತಿದ್ದಾರೆ. ಅಷ್ಟೇ

ಮುಂಬೈ: NDA ಸರ್ಕಾರ ನೀಡಿದ ಭರವಸೆ ಈಡೇರಿಸುವಲ್ಲಿ ವಿಫಲ – ರಮಾನಾಥ ರೈ

ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಮುಂಬಯಿ-ಕರ್ನಾಟಕದ ಜನತೆಯ ಜನ್ಮಭೂಮಿ-ಕರ್ಮಭೂಮಿಯ ರೈಲು, ವಿಮಾನ, ಬಸ್ ಪ್ರಯಾಣದ ತೊಂದರೆ ನಿಭಾಯಿಸಲಿದೆ. ಕರ್ನಾಟಕದಂತೆ ಕೇಂದ್ರ ಸರ್ಕಾರದ ಗ್ಯಾರಂಟಿ ಯೋಜನೆಗಳು ಇಂಡಿಯಾ ಕೂಟಕ್ಕೆ ವರದಾನವಾಗಲಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ತಿಳಿಸಿದರು. ಅವರು ಮುಂಬೈಯ ಅಂಧೇರಿ ಪೂರ್ವದ ಚಕಲಾ ಹೊಟೇಲ್ ಸಾಯಿ ಪ್ಯಾಲೇಸ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ ಕಳೆದ ಹತ್ತು ವರ್ಷಗಳಲ್ಲಿ ಎನ್‌ಡಿಎ ಸರ್ಕಾರವು

ರಘುಪತಿ ಭಟ್ ಅವರು ದುಡುಕಿನ ನಿರ್ಧಾರ ತೆಗೆದುಕೊಳ್ಳದಂತೆ ಮನವಿ : ಸುನಿಲ್ ಕುಮಾರ್

ವಿಧಾನ ಪರಿಷತ್ ಚುನಾವಣೆಗೆ ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ಅವರು ಪಕ್ಷೇತರಾಗಿ ಸ್ಪರ್ಧೆ ಮಾಡುವುದಾಗಿ ನಿರ್ಧರಿಸಿದ್ದು, ಅವರ ಮನೆಗೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಭೇಟಿ ನೀಡಿ ಮಾತುಕತೆ ನಡೆಸಿದರು. ಈ ವೇಳೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸುನೀಲ್ ಕುಮಾರ್ ಅವರು, ಪರಿಷತ್ ಚುನಾವಣೆಗೆ ಸ್ಪರ್ಧಿಸಬೇಕು ಎಂಬ ಭಾವನೆಯನ್ನು ರಘುಪತಿ ಭಟ್ ವ್ಯಕ್ತಪಡಿಸಿದ್ದಾರೆ. ದುಡುಕಿನ ತೀರ್ಮಾನ ತೆಗೆದುಕೊಳ್ಳಬೇಡಿ ಎಂದು ಹೇಳಿದ್ದೇನೆ. ಈ ಹಿಂದೆ

ಮಾಜಿ ಶಾಸಕ ರಘುಪತಿ ಭಟ್ ಗೆ ಕೈ ತಪ್ಪಿದ ನೈರುತ್ಯ ಪದವೀಧರ ಕ್ಷೇತ್ರದ ಟಿಕೆಟ್ : ಪಕ್ಷೇತರವಾಗಿ ಸ್ಪರ್ಧೆಗೆ ನಿರ್ಧಾರ

ಉಡುಪಿ: ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಮಾಜಿ ಶಾಸಕ ಕೆ. ರಘುಪತಿ ಭಟ್ ಅವರು, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಉಡುಪಿ ಕರಂಬಳ್ಳಿಯ ಸ್ವಗೃಹದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಘುಪತಿ ಭಟ್ ಅವರು, ಬಿಜೆಪಿ ಕಾರ್ಯಕರ್ತರ ಪ್ರತಿನಿಧಿಯಾಗಿ ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾನು ಸ್ಪರ್ಧೆ ಮಾಡುತ್ತೇನೆ ಎಂದು ಘೋಷಣೆ ಮಾಡಿದರು.

ಪ್ರಧಾನಿ ಮತ್ತು ರಾಹುಲ್‍ರಿಗೆ ಬಹಿರಂಗ ಚರ್ಚೆಗೆ ಕರೆ

ಸುಪ್ರೀಂ ಕೋರ್ಟಿನ ಮಾಜೀ ನ್ಯಾಯಾಧೀಶರಾದ ಮದನ್ ಲೋಕೂರ್, ದಿಲ್ಲಿ ಹೈಕೋರ್ಟಿನ ನಿವೃತ್ತ ಜಸ್ಟಿಸ್ ಎ. ವಿ. ಶಾ ಮತ್ತು ದ ಹಿಂದೂ ಪತ್ರಿಕೆಯ ಹಿಂದಿನ ಸಂಪಾದಕರಾದ ಎನ್. ರಾಮ್ ಅವರುಗಳು ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿಯವರನ್ನು ಬಹಿರಂಗ ಚರ್ಚೆಗೆ ಆಹ್ವಾನಿಸಿದ್ದಾರೆ. ರಾಜಕೀಯ ವೇದಿಕೆಯ ಬದಲು ಜನತಾ ವೇದಿಕೆಯಲ್ಲಿ ಜನಪರ ಕಾರ್ಯಕ್ರಮಗಳನ್ನು ಕುರಿತು ಈ ಚರ್ಚೆ ಆಗಬೇಕಾದುದು ಈಗಿನ ಅಗತ್ಯ ಎಂದು ಅವರು ತಿಳಿಸಿದ್ದಾರೆ. ಒಂದು ವೇಳೆ ಮೋದಿಯವರಿಗಾಗಲಿ,

ಬೆಳ್ತಂಗಡಿ: ಕೆ. ವಸಂತ ಬಂಗೇರರ ನಿಧನಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಸಂತಾಪ

ಬೆಳ್ತಂಗಡಿ: ಗ್ರಾಮೀಣ ಪರಿಸರದ ಓರ್ವ ವ್ಯಕ್ತಿ ಸ್ವಪ್ರಯತ್ನದಿಂದ, ಸಾಮಾಜಿಕ ಸೇವೆಯಿಂದ ಜನ ಸಂಘಟನೆಯಿಂದ ಜನಪ್ರಿಯರಾಗಿ, ರಾಜಕೀಯದ ಗಣ್ಯ ವ್ಯಕ್ತಿಯಾಗಿದ್ದ ಮಾಜಿ ಶಾಸಕ ವಸಂತ ಬಂಗೇರ ಅವರ ನಿಧನ ತೀವ್ರ ದುಃಖ ತಂದಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಕಂಬನಿ ಮಿಡಿದಿದ್ದಾರೆ.ಜನನಿಷ್ಠ ರಾಜಕಾರಣಿ, ಸ್ನೇಹ ಜೀವಿ, ಸಮರ್ಥ ಕೆಲಸಗಾರ, ಹೋರಾಟಗಾರ, ಶಿಕ್ಷಣ ಪ್ರೇಮಿ, ದೂರದೃಷ್ಟಿಯ ರಾಜಕಾರಣಿಯಾಗಿದ್ದ ಅವರು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಐದು

ಬೆಳ್ತಂಗಡಿ: ಕೆ. ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ‌ ಸಂತಾಪ

ಬೆಳ್ತಂಗಡಿ: ಹಿರಿಯ ರಾಜಕಾರಣಿ ಮಾಜಿ ಶಾಸಕ ಶ್ರೀ ಕೆ ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ‌ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕರ್ನಾಟಕದ ಪ್ರಮುಖ ಮೂರು ರಾಜಕೀಯ ಪಕ್ಷಗಳಡಿ ಸ್ಪರ್ಧಿಸಿ ವಿಧಾನಸಭೆಗೆ ಆಯ್ಕೆಯಾದ ಜಿಲ್ಲೆಯ ಏಕೈಕ ರಾಜಕಾರಣಿ ವಸಂತ ಬಂಗೇರರಾಗಿದ್ದು, ಪಕ್ಷಾತೀತವಾಗಿ ಜನತೆ ಅವರನ್ನು ಬೆಂಬಲಿಸಿದುದರ ನಿದರ್ಶನವಾಗಿದೆ. ಪ್ರಜಾಪ್ರಭುತ್ವಕ್ಕೆ ಕರಾಳವಾಗಿ ಜಾರಿಯಾಗಿದ್ದ ತುರ್ತುಪರಿಸ್ಥಿತಿ ವಿರುದ್ಧ ವಸಂತ ಬಂಗೇರರ ಹೋರಾಟ,