Home Archive by category ರಾಜಕೀಯ (Page 23)

ಮಣಿಪುರ ಹೊತ್ತಿ ಉರಿಯುವಾಗ ದೇಶದ ಪ್ರಧಾನಿ ಕರ್ನಾಟಕದಲ್ಲಿ ಚುನಾವಣಾ ಪ್ರಚಾರ, ಆನಂತರ ವಿದೇಶಿ ಪ್ರವಾಸ ; ನರೇಂದ್ರ ನಾಯಕ್ ವ್ಯಂಗ್ಯ

ಕಳೆದ ಮೇ ತಿಂಗಳ ಮೂರರಂದು ಮಣಿಪುರದಲ್ಲಿ ಹಿಂಸೆ ಪ್ರಾರಂಭವಾದಾಗ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದಲ್ಲಿ ಅಬ್ಬರದ ಚುನಾವಣಾ ಪ್ರಚಾರದಲ್ಲಿ ತಲ್ಲಿನರಾಗಿದ್ದರು ಆನಂತರ ವಿದೇಶ ಪ್ರವಾಸದಲ್ಲಿಯೇ ಖುಷಿ ಪಡೆಯುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಇತಿಹಾಸ ಕ್ಷಮಿಸದು ಎಂದು ಅಖಿಲ ಭಾರತ ವಿಚಾರವಾದಿ ಸಂಘದ ರಾಷ್ಟ್ರ ಅಧ್ಯಕ್ಷರಾದ ಪ್ರೊಫೆಸರ್ ನರೇಂದ್ರ ನಾಯಕ್

ಬಿಜೆಪಿ ಯುವ ಮೋರ್ಚ ವತಿಯಿಂದ ಸ್ಪೀಕರ್ ವಿರುದ್ಧ ಪ್ರತಿಭಟನೆ

ಕರ್ನಾಟಕ ರಾಜ್ಯ ಅಧಿವೇಶನದಲ್ಲಿ ಭಾರತೀಯ ಜನತಾ ಪಕ್ಷದ ಸದಸ್ಯರು ಸ್ಪೀಕರ್ ವಿರುದ್ಧ ಪ್ರತಿಭಟನೆ ನಡೆಸಿದರು ಎಂದು ಆರೋಪಹರಿಸಿ 10 ಮಂದಿ ಬಿಜೆಪಿ ಶಾಸಕರನ್ನು ಅಮಾನತು ಮಾಡಿರುವ ಕಾಂಗ್ರೆಸ್ ಪಕ್ಷದ ನಡವಳಿಕೆ ಹಾಗೂ ನಿಷ್ಪಕ್ಷಪಾತವಾಗಿ ನ್ಯಾಯ ನೀಡಬೇಕಾಗಿದ್ದ ಸ್ಪೀಕರ್ ವಿರುದ್ಧ ಬಿಜೆಪಿ ಯುವ ಮೋರ್ಚ ಸುರತ್ಕಲ್ ನಲ್ಲಿ ಪ್ರತಿಭಟನೆ ನಡೆಸಿತು. ಪ್ರತಿಭಟನೆಯಲ್ಲಿ ಮಂಗಳೂರು ಉತ್ತರಮಂಡಲ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಭರತ್ ರಾಜ್ ಕೃಷ್ಣಾಪುರ ರಾಜ್ಯ ಯುವ ಮೋರ್ಚಾ

ವಿಧಾನಸಭೆಯಿಂದ ಅಮಾನತುಗೊಂಡ ಬಿಜೆಪಿ ಶಾಸಕರು ಅಮಾನತು

ಬೆಂಗಳೂರು: ಆಡಳಿತ ಮತ್ತು ವಿರೋಧ ಪಕ್ಷದ ನಾಯಕರ ಮಾತಿನ ಚಕಮಕಿ ನಡೆದು ಸದನದಲ್ಲಿ ಬಜೆಪಿ ಶಾಸಕರು ವಿಧಾನಸಭೆ ಉಪ ಸಭಾಧ್ಯಕ್ಷರ ಮೇಲೆ ಕಾಗದ ಚೂರುಗಳನ್ನು ತೂರಿದ ಘಟನೆಗೆ ಸಂಬಂಧಿಸಿ 10 ಮಂದಿ ಬಿಜೆಪಿ ಶಾಸಕರನ್ನು ವಿಧಾನಸಭೆಯಿಂದ ಅಧಿವೇಶನ ಮುಗಿಯುವವರೆಗೆ ಅಮಾನತು ಮಾಡಲಾಗಿದೆ. ಅಶ್ವತ್ಥ ನಾರಾಯಣ, ಆರ್.ಅಶೋಕ್, ವೇದವ್ಯಾಸ ಕಾಮತ್, ಅರಗಜ್ಞಾನೇಂದ್ರ, ಸುನೀಲ್ ಕುಮಾರ್, ಅರವಿಂದ ಬೆಲ್ಲದ್, ಯಶ್‍ಪಾಲ್ ಸುವರ್ಣ, ಧೀರಜ್ ಮುನಿರಾಜ್, ಉಮಾನಾಥ್ ಕೋಟ್ಯಾನ್, ಭರತ್

ಕಾಂಗ್ರೆಸ್ ಯಾವತ್ತೂ ದ್ವೇಷ ರಾಜಕೀಯ ಮಾಡಿಲ್ಲ : ಮಾಜಿ ಸಚಿವ ರಮಾನಾಥ್ ರೈ

ಜಿಲ್ಲೆಯಲ್ಲಿ ಒಂದು ವರ್ಗದ ಹತ್ಯೆ ಆಗಿದೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದು ಎರಡು ತಿಂಗಳು ಆಗಿದೆ ಅಷ್ಟೇ. ಈ ಹತ್ಯೆಯಲ್ಲಿ ಭಾಗಿಯಾಗಿದವರು ಒಬ್ಬರು ಕೂಡಾ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಲ್ಲ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು. ಅವರು ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಿಲ್ಲ. ಕಾಂಗ್ರೆಸ್ ಪಕ್ಷ ಆಡಳಿತಕ್ಕೆ

ಸುಳ್ಯದಲ್ಲಿ ಕಾಂಗ್ರೇಸ್ ಬಣಗಳ ನಡುವೆ ವಾಕ್ಸಮರ, ಬಡಿದಾಟ

ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೇಸ್ ಸೋಲಿನ ಪರಾಮರ್ಶೆ ಸಭೆಯಲ್ಲಿ ಎರಡು ಬಣಗಳ ಮಧ್ಯೆ ಅಸಮಾಧಾನ ಸ್ಪೋಟಗೊಂಡು, ಬಡಿದಾಟ ಮಾರಾಮಾರಿ ನಡೆದಿದೆ. ಕಡಬ ಅಂಬೇಡ್ಕರ್ ಭವನದಲ್ಲಿ ನಡೆದ ಪರಾಮರ್ಶೆ ಸಭೆಯು ಕಾಂಗ್ರೇಸ್ ಮುಖಂಡರಾದ ಜಿ.ಕೃಷ್ಣಪ್ಪ ಹಾಗೂ ನಂದಕುಮಾರ್ ಬಣದ ನಾಯಕರ ಕಾರ್ಯಕರ್ತರ ವಾಕ್ಸಮರ, ಕೈ ಕೈ ಮಿಲಾಯಿಸಿಕೊಳ್ಳವ ರಣರಂಗಕ್ಕೆ ವೇದಿಕೆಯಾಯಿತು. ರಾಜ್ಯದಲ್ಲಿ ಕಾಂಗ್ರೇಸ್ ಅಭೂತಪೂರ್ವ ಗೆಲವು ಸಾಧಿಸಿದರೂ ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿನ ಹೀನಾಯ ಸೋಲು

ಈ ಬಜೆಟ್ ಎಲ್ಲಾ ವರ್ಗದ ಜನರ ಪರವಾದ ಬಜೆಟ್ : ರಮನಾಥ ರೈ

BEST KARNATAKA BUDGET HAS EVER SEEN: RAMANATHA RAI ಸಿಎಂ ಸಿದ್ದರಾಮಯ್ಯರವರು ಮಂಡಿಸಿದ 2023-24ನೇ ಸಾಲಿನ ಬಜೆಟ್ ಈವರೆಗೆ ಕರ್ನಾಟಕದಲ್ಲಿ ಮಂಡನೆಯಾಗಿರುವ ಬಜೆಟ್’ಗಳ ಪೈಕಿ ಶ್ರೇಷ್ಠ ಬಜೆಟ್. ಈ ಬಜೆಟ್ ಅಪರೂಪದಲ್ಲೇ ಅಪರೂಪದ ಬಜೆಟ್. ಐದು ಗ್ಯಾರಂಟಿ ಯೋಜನೆಗಳಿಗೆ ಅನುದಾನ ಒದಗಿಸುವುದರ ಜೊತೆಗೆ ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳ ಪೈಕಿ 76 ಪ್ರಣಾಳಿಕೆಗಳನ್ನು ಈ ಬಜೆಟ್ ನಲ್ಲಿ ಜಾರಿ ಮಾಡಿ ಘೋಷಣೆ ಮಾಡಲಾಗಿದೆ. ಈ ಬಜೆಟ್ ಎಲ್ಲಾ

ಬಜೆಟ್ ಸುಳ್ಳು ಭರವಸೆಗಳ ಕಂತೆ : ನಳಿನ್‌ಕುಮಾರ್ ಕಟೀಲ್

ಮಂಗಳೂರು : ಗ್ಯಾರಂಟಿ ಭರವಸೆಗಳನ್ನು ಸಮರ್ಪಕವಾಗಿ ಈಡೇರಿಸದೆ ರಾಜ್ಯದ ಜನತೆಯನ್ನು ವಂಚಿಸಿದ ಕಾಂಗ್ರೆಸ್ ಸರಕಾರ ಇದೀಗ ಸುಳ್ಳು ಭರವಸೆಗಳ ಬಜೆಟ್ ಮಂಡಿಸಿ ಮತ್ತೆ ಜನರ ವಂಚಿಸಲು ಪ್ರಯತ್ನಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಗ್ಯಾರಂಟಿಗಳ ಜಾರಿಗೆ 57,910 ಕೋಟಿ ರೂ. ವೆಚ್ಚ ಎಂದು ಬಜೆಟ್‌ನಲ್ಲಿ ತಿಳಿಸಲಾಗಿದೆ. ಆದರೆ ಆದಾಯ ಸಂಗ್ರಹದ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ. ನಿರುದ್ಯೋಗಿ ಪದವೀಧರರಿಗೆ ಮಾಸಿಕ ಭತ್ಯೆ

ಕಡಬ : ಶಾಸಕಿ ಭಾಗೀರಥಿ ಮುರುಳ್ಯ ಅವರ ನೂತನ ಕಚೇರಿ ಉದ್ಘಾಟನೆ

ಸುಳ್ಯ ತಾಲೂಕಿನ ಶಾಸಕಿ ಭಾಗೀರಥಿ ಮುರುಳ್ಯ ಅವರ ಕಡಬದ ನೂತನ ಕಛೇರಿಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಡಬ ಮಿನಿ ವಿಧಾನ ಸೌಧದಲ್ಲಿ ನೂತನ ಕಚೇರಿ ಉದ್ಘಾಟಿಸಲಾಯಿತು. ಬೆಳಿಗ್ಗೆ ಗಣಹೋಮ ಪೂಜೆ ನಡೆಸಿದ ಬಳಿಕ ಉದ್ಘಾಟನೆ ನೆರವೇರಿಸಲಾಯಿತು. ಜನಸಂಘ ಹಗೂ ಬಿಜೆಪಿಯ ಹಿರಿಯ ಕಾರ್ಯಕರ್ತರಾದ ಹರಿಶ್ಚಂದ್ರ ರೈ ಪಟ್ಟೆಗುತ್ತು ಪೆರಾಬೆ ಹಾಗೂ ತನಿಯಪ್ಪ ಮಜ್ಜಗುಡ್ಡೆ ಕಡಬ, ಕುಶಾಲಪ್ಪ ಗೌಡ ಕುಡಾಲ ದೀಪ ಬೆಳಗಿಸಿ ಉದ್ಘಾಟನೆ ನೆರವೇರಸಿದರು. ಶಾಸಕಿ ಭಾಗೀರಥಿ ಮುರುಳ್ಯ ಅವರು 94

ಕೋಮು ಗಲಭೆ ಪ್ರಚೋದಿಸುವ ಪೋಸ್ಟ್ ಗಳನ್ನು ಹರಿಯ ಬಿಡುವವರ ವಿರುದ್ಧ ಕ್ರಮಕ್ಕೆ ಶಾಸಕ ಡಾ. ಭರತ್ ಶೆಟ್ಟಿ ಮನವಿ

ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂಗಳ ಭಾವನೆಗೆ ದಕ್ಕೆ ತರುವ, ಕೋಮು ಗಲಭೆ ಪ್ರಚೋದಿಸುವ ಪೋಸ್ಟ್ ಗಳನ್ನು ಹರಿಯಬಿಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮಂಗಳೂರು ನಗರ ಉತ್ತರ ಶಾಸಕರಾದ ಡಾ. ಭರತ್ ಶೆಟ್ಟಿಯವರು ಮಂಗಳೂರು ಪೊಲೀಸ್ ಕಮೀಷನರ್ ಕುಲದೀಪ್ ಜೈನ್ ಅವರಿಗೆ ಮನವಿ ಮಾಡಿದ್ದಾರೆ. ಪೊಲೀಸ್ ಕಮೀಷನರ್ ಅವರನ್ನು ಕಚೇರಿಯಲ್ಲಿ ಭೇಟಿ ಮಾಡಿದ ಶಾಸಕರು ಸಾಮರಸ್ಯ, ಸಹಬಾಳ್ವೆ ಮತ್ತು ಶಾಂತಿ ಸುವ್ಯವಸ್ಥೆ ತುಂಬಿರುವ ಜಿಲ್ಲೆಯಲ್ಲಿ ಅವಹೇಳನಕಾರಿ ಪೋಸ್ಟ್ ಮೂಲಕ

ಬಿಜೆಪಿಯಲ್ಲಿ ಮನೆಯೊಂದು 10 ಬಾಗಿಲು ಎಂಬಂತಾಗಿದೆ : ಮಂಗಳೂರಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಟೀಕೆ

ಬಿಜೆಪಿಯಲ್ಲಿ ಮನೆಯೊಂದು ಬಾಗಿಲು ಹತ್ತು ಎಂಬಂತಾಗಿದೆ. ಯಾರು ಏನು ಮಾತನಾಡುತ್ತಾರೆಂದು ಗೊತ್ತಾಗುತ್ತಿಲ್ಲ. ರಾಜ್ಯ ಬಿಜೆಪಿಯ ಪರಿಸ್ಥಿತಿಯನ್ನು ನಿಯಂತ್ರಿಸಲು 56 ಇಂಚಿನ ಎದೆಯವರಿಗೂ ಸಾಧ್ಯವಾಗುತ್ತಿಲ್ಲ ಎಂದು ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಟೀಕಿಸಿದ್ದಾರೆ. ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಬಿಜೆಪಿಯಲ್ಲಿ ಉದ್ಭವಿಸಿರುವ ಗೊಂದಲಗಳನ್ನು ನಿವಾರಿಸಲು ಕೇಂದ್ರದ ವರಿಷ್ಠರಿಗೂ ಸಾಧ್ಯವಾಗದ