ಕಾರ್ಯಕರ್ತರ ಶ್ರಮದಿಂದ ಬಿಜೆಪಿ ಗೆಲುವು ಸಾಧ್ಯವಾಗಿದೆ. ಅದ್ದರಿಂದ ಕಾರ್ಯಕರ್ತರಿಗೆ ವಿಶೇಷ ಅಭಿನಂದನೆ ಸಲ್ಲಬೇಕಾಗಿದೆ ಎಂದು ಮುಲ್ಕಿ ಮೂಡಬಿದಿರೆ ಕ್ಷೇತ್ರದ ಶಾಸಕರಾದ ಉಮಾನಾಧ ಕೋಟ್ಯಾನ್ ಹೇಳಿದರು. ಅವರು ಪಡುಪಣಂಬೂರಿನ ಮೂಲ್ಕಿ ಸೀಮೆ ಅರಮನೆ ಧರ್ಮಚಾವಡಿಯಲ್ಲಿ ನಡೆದ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು. ವಿರೋಧ
ಉಡುಪಿ : ಇತ್ತೀಚೆಗೆ ಉಡುಪಿ ಜಿಲ್ಲೆಯ ಉದ್ಯಾವರದ ಬೊಳ್ಜೆ ಪರಿಸರದಲ್ಲಿ ಬಿಜೆಪಿ ಕಾರ್ಯಕರ್ತ ರಕ್ಷಿತ್ ಸಾಲಿಯಾನ್ ಮೇಲೆ ಅಪರಿಚಿತರಾದ ಮೂವರು ಮಾರಕಾಯುಧಗಳಿಂದ ಹಲ್ಲೆ ಮಾಡಲು ಯತ್ನಿಸಿದ ಘಟನೆ ವರದಿಯಾಗಿತ್ತು. ಈ ಬಗ್ಗೆ ಉಡುಪಿ ಜಿಲ್ಲೆಯ ಕಾಪು ಪೋಲಿಸ್ ಠಾಣೆಯುಲ್ಲಿ ದೂರು ದಾಖಲಾಗಿದ್ದು ಈ ಕುರಿತಂತೆ ಪೋಲೀಸರು ವಿಚಾರಣೆ ನಡೆಸಲು ಪ್ರಾರಂಭಿಸಿದಾಗ ಈ ಹಿಂದೆ ಹಲವಾರು ದರೋಡೆ, ಕಳ್ಳತನ ಕೊಲೆ ಇತ್ಯಾದಿ ಆರೋಪಗಳನ್ನು ಹೊತ್ತು, ಇದೀಗ ಜಾಮೀನಿನ ಮೇಲೆ ತಿರುಗಾಡುತ್ತಿರುವ
ಉಡುಪಿ : ರಾಜ್ಯದ ಮಹಿಳೆಯರಿಗೆ ನಗರ ಸಾರಿಗೆ, ಸಾಮಾನ್ಯ ಹಾಗೂ ವೇಗದೂತ ಕೆ ಎಸ್ ಆರ್ ಟಿ ಸಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕಾಗಿ ಆರಂಭಿಸಿರುವ ರಾಜ್ಯ ಸರಕಾರದ ಶಕ್ತಿ ಯೋಜನೆಗೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಉಡುಪಿಯ ಕೆ ಎಸ್ ಆರ್ ಟಿ ಸಿ ಡಾ. ವಿ. ಎಸ್. ಆಚಾರ್ಯ ಬಸ್ ನಿಲ್ದಾಣದಲ್ಲಿ ಜೂನ್ 11ರ ರವಿವಾರದಂದು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ರಾಜ್ಯ ಸರ್ಕಾರವು ರಾಜ್ಯದ ಮಹಿಳೆಯರಿಗೆ […]
ಉಡುಪಿ : ರಾಜ್ಯ ಸರ್ಕಾರದಿಂದ ಪಠ್ಯ ಬದಲಾವಣೆ ವಿಚಾರವಾಗಿ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮಾಧ್ಯಮದೊಂದಿಗೆ ಮಾತನಾಡಿ, ಸರ್ಕಾರ ಯಾವಾಗಲೂ ವ್ಯಕ್ತಿಗಳ ಆಧಾರದಲ್ಲಿ ನಡೆಯುವುದಿಲ್ಲ. ಬದಲಾಗಿ ಸರ್ಕಾರ ನಡೆಯುವುದು ಶಾಸನದ ಆಧಾರದಲ್ಲಿ. ಒಂದು ಸರ್ಕಾರ ಮಾಡಿದ ನಿರ್ಧಾರವನ್ನು ಮತ್ತೊಂದು ಸರಕಾರ ಪರಿಶೀಲನೆ ಮಾಡದೆ ಬದಲು ಮಾಡುವುದು ಸರಿಯಲ್ಲ. ಸಾರ್ವಜನಿಕವಾಗಿ ಇಂತಹ ಬೆಳವಣಿಗೆಗಳು ಗೌರವ ತರುವುದಿಲ್ಲ. ಬನ್ನಂಜೆ ಗೋವಿಂದಾಚಾರ್ಯರ ಪಾಠವನ್ನು ವಾಪಸ್ಸು
ಉಡುಪಿ : ಭಾರತೀಯ ಜನತಾ ಪಾರ್ಟಿ ಮಹಾಶಕ್ತಿ ಕೇಂದ್ರ ಮುದರಂಗಡಿ ಇದರ ವತಿಯಿಂದ ಜೂನ್ 7 ರ ಬುಧವಾರದಂದು, ಉಡುಪಿ ಜಿಲ್ಲೆಯ ಮುದರಂಗಡಿಯ ಸ್ಪಂದನ ಸಭಾಭವನದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಅಭಿನಂದನಾ ಸಮಾರಂಭ ನೆರವೇರಿತು. ಈ ಸಂದರ್ಭದಲ್ಲಿ ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್, ಬಿಜೆಪಿ ಕಾಪು ಮಂಡಲದ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ
ಉಡುಪಿ : ಕಾಂಗ್ರೆಸ್ ನ ಉಚಿತ 5 ಗ್ಯಾರಂಟಿಗಳು ಕೇವಲ ಚುನಾವಣೆ ಗೆಲ್ಲಲು ರೂಪಿಸಿರುವ ತಂತ್ರ ಎಂದು ಬಿಜೆಪಿ ಮೊದಲಿನಿಂದಲೂ ಟೀಕಿಸುತ್ತಾ ಬಂದಿತ್ತು. ಇದೀಗ ಬಿಜೆಪಿ ಟೀಕೆಗಳು ಅಕ್ಷರಶಃ ಸತ್ಯವೆಂಬಂತೆ ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ ಅವರ ಹೇಳಿಕೆಯೇ ಸಾಕ್ಷಿ ಎಂಬಾಂತಾಗಿದೆ. ಸಚಿವ ಎನ್ ಚೆಲುವರಾಯಸ್ವಾಮಿ ಮಾಧ್ಯಮದ ಮುಂದೆ ಕಾಂಗ್ರೆಸ್ ನ ಉಚಿತ ಗ್ಯಾರಂಟಿಗಳ ಬಗ್ಗೆ ಮಾತನಾಡುವಾಗ, ಚುನಾವಣೆಯಲ್ಲಿ ಗೆಲ್ಲಬೇಕು ಎಂದಾಗ ಈ ರೀತಿಯ ಚೀಪ್ ಪಾಪ್ಯುಲಾರಿಟಿ ಮಾಡಬೇಕಾಗುತ್ತೆ
ಉಡುಪಿ : ನೆನ್ನೆಯಿಂದ ಕರಾವಳಿ ಜಿಲ್ಲೆಗಳ ಪ್ರವಾಸದಲ್ಲಿರುವ ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ ಇಂದು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಳಕ್ಕೆ ಭೇಟಿ ನೀಡಿದ್ದಾರೆ. ಕೊಲ್ಲೂರು ಮೂಕಾಂಬಿಕಾ ದೇವಳದ ಪ್ರಧಾನ ಅರ್ಚಕ ಸುಬ್ರಹ್ಮಣ್ಯ ಅಡಿಗರ ನೇತ್ರತ್ವದಲ್ಲಿ ನೆಡೆದ ಚಂಡಿಹೋಮ ಹಾಗೂ ಇತರೆ ವಿಶೇಷ ಪೂಜೆಯಲ್ಲಿ ಭಾಗಿಯಾದರು. ಇವರ ಆತ್ಮೀಯರು ಮತ್ತು ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಹಾಕಯ್ ಅಕ್ಷಯ ಎಂ . ಇವರೊಂದಿಗೆ ಭಾಗಿಯಾಗಿದ್ದರು.
ಉಡುಪಿ : ನೂತನ ರಾಜ್ಯ ಸರಕಾರ ಪುನಃ ಪಠ್ಯಪುಸ್ತಕ ಪರಿಷ್ಕರಣೆ ಮಾಡುವುದಾಗಿ ಹೇಳಿಕೆ ನೀಡಿರುವ ಹಿನ್ನಲೆಯಲ್ಲಿ, ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ಮತ್ತು ಮಾಜಿ ಸಚಿವ ವಿ ಸುನಿಲ್ ಕುಮಾರ್ ಅವರು ಇಂದು ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂಡ 1 ತಿಂಗಳ ಅವಧಿಯೊಳಗೆ ಪಠ್ಯ ಪುಸ್ತಕಗಳನ್ನು ಪರಿಷ್ಕರಣೆ ಮಾಡುವುದಾಗಿ ಹೇಳಿರುವುದು ಆಶ್ಚರ್ಯ ಪಡುವಂತಹ ಸಂಗತಿ. ರಾಷ್ಟ್ರೀಯತೆ, ಸಂಸ್ಕೃತಿ, ದೇಶಪ್ರೇಮ ಇವೆಲ್ಲವೂ ಪಠ್ಯ
ಉಡುಪಿ : ಕರಾವಳಿ ಜಿಲ್ಲೆಗಳ ಪ್ರವಾಸದಲ್ಲಿರುವ ಗೃಹ ಸಚಿವ ಜಿ. ಪರಮೇಶ್ವರ್, ಇಂದು ಸಂಜೆ ಉಡುಪಿ ಎಸ್ಪಿ ಕಚೇರಿಯಲ್ಲಿ ಉಡುಪಿ ಎಡಿಜಿಪಿ ಅಲೋಕ್ ಕುಮಾರ್, ಐಜಿಪಿ ಚಂದ್ರಗುಪ್ತ, ಉಡುಪಿ ಎಸ್ಪಿ ಅಕ್ಷಯ್, ಎಎನ್ ಎಫ್ ಎಸ್ ಪಿ ಪ್ರಕಾಶ್ ನಿಕ್ಕಂ ನೇತೃತ್ವದದಲ್ಲಿ ಪರಿಶೀಲನಾ ಸಭೆ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಾವಳಿ ಪ್ರದೇಶದಲ್ಲಿ ನಡೆಯುತ್ತಿರುವ ಘಟನೆಗಳ ಮಾಹಿತಿ ಪಡೆದಿದ್ದೇನೆ. ನೈತಿಕ ಪೊಲೀಸ್ ಗಿರಿ ಹತ್ತಿಕ್ಕುವ ಕ್ರಮದ ಬಗ್ಗೆ ಚರ್ಚೆಯಾಗಿದೆ.
ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳವನ್ನ ಖಂಡಿಸಿ, ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆಯನ್ನ ಹಮ್ಮಿಕೊಂಡಿದ್ದು, ಅದರಂತೆ ಮಂಗಳೂರಿನಲ್ಲೂ ಬಿಜೆಪಿ ಪ್ರತಿಭಟನೆ ನಡೆಸಿದೆ.ಬಿಜೆಪಿ ದಕ್ಷಿಣ ಮಂಡಳದಿಂದ ಪ್ರತಿಭಟನೆ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಶಾಸಕ ವೇದವ್ಯಾಸ್ ಕಾಮತ್ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದ ಜನತೆಗೆ ಸುಳ್ಳು ಭರವಸೆ ಮೂಲಕ ಅಧಿಕಾರಕ್ಕೆ ಬಂದಿದ್ದೀರಿ.ಗ್ಯಾರಂಟಿ ನೀಡ್ತೇವೆ ಹೇಳಿ ಅಧಿಕಾರಕ್ಕೆ ಬಂದು. ಇದೀಗಾ



























