Home Archive by category ರಾಷ್ಟ್ರೀಯ (Page 14)

ಟಿವಿ ನಿರೂಪಕನನ್ನು ಅಪಹರಿಸಿದ ತರುಣಿ

ಮದುವೆ ಪ್ರಸ್ತಾಪ ತಿರಸ್ಕರಿಸಿದ ಟಿವಿ ನಿರೂಪಕನನ್ನು ಅಪಹರಿಸಿ ಮದುವೆಗೆ ಒತ್ತಾಯಿಸಿದ ಮಹಿಳಾ ಉದ್ಯಮಿ ಒಬ್ಬರು ಈಗ ಪೋಲೀಸು ಕಸ್ಟಡಿ ಸೇರಿರುವ ಘಟನೆಯು ಹೈದರಾಬಾದ್‌ನಲ್ಲಿ ನಡೆದಿದೆ.ಬಂಧಿತ ಯುವತಿ ಭೋಗಿರೆಡ್ಡಿ ತ್ರಿಶಾ. ಈಕೆ ಐದು ಸ್ಟಾರ್ಟಪ್ ಕಂಪೆನಿಗಳ ವ್ಯವಸ್ಥಾಪಕ ನಿರ್ದೇಶಕಿ ಆಗಿದ್ದಾರೆ. ಮ್ಯಾಟ್ರಿಮೊನಿ ಜಾಲ ತಾಣದ ಮೂಲಕ ಟಿವಿ ಸಂಗೀತ ಚಾನಲ್ ಒಂದರ ನಿರೂಪಕ

ವಿಜಯವಾಡಾದಲ್ಲಿ ಕಾಂಗ್ರೆಸ್ ಪ್ರತಿಭಟನೆ : ವೈ. ಎಸ್. ಶರ್ಮಿಳಾ ಬಂಧನ

ಜಿಲ್ಲಾ ಆಯ್ಕೆ ಸಮಿತಿಯಿಂದ ಶಿಕ್ಷಕರ ನೇಮಕಾತಿ ಪಟ್ಟಿ ಆಗಿದ್ದರೂ ಸಚಿವಾಲಯವು ಆ ಪಟ್ಟಿ ತಡೆ ಹಿಡಿದಿರುವುದರ ವಿರುದ್ಧ ವಿಜಯವಾಡಾದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ಈ ವೇಳೆ ಎಪಿಸಿಸಿ ಅಧ್ಯಕ್ಷೆ ವೈ. ಎಸ್. ಶರ್ಮಿಳಾ ಮತ್ತಿತರರನ್ನು ಪೋಲೀಸರು ವಶಕ್ಕೆ ಪಡೆದರು.ಮನೆಗೆ ಹೋದರೆ ಗೃಹ ಬಂಧನಕ್ಕೆ ಒಳಪಡಿಸಬಹುದು ಎಂದು ರಾತ್ರಿ ಕಾಂಗ್ರೆಸ್ ಕಚೇರಿಯಲ್ಲೇ ಮಲಗಿದ್ದ ಶರ್ಮಿಳಾ ಅವರು ಬೆಳಿಗ್ಗೆ ನೇರ ಪ್ರತಿಭಟನಾ ಸ್ಥಳಕ್ಕೆ ಬಂದಿದ್ದರು. ಶರ್ಮಿಳಾ ಅವರು ಆಂಧ್ರದ

ರೈತ ಶುಭಕರಣ್ ಸಿಂಗ್ ಸಾವು : ದಿಲ್ಲಿ ಹರಿಯಾಣ ಗಡಿಯಲ್ಲಿ ಕೊಲೆ : ಸೂಕ್ತ ಪರಿಹಾರಕ್ಕೆ ರೈತರ ಆಗ್ರಹ

21ರ ಪ್ರಾಯದ ಶುಭಕರಣ್ ಸಿಂಗ್ ಎರಡು ಎಕರೆ ಹೊಲ ಹೊಂದಿದ್ದಾನೆ. ತಂಗಿಯ ಮದುವೆಗಾಗಿ ಸಾಲ ಮಾಡಿದ್ದ. ಈಗ ರೈತರ ಚಳವಳಿಯಲ್ಲಿ ದಿಲ್ಲಿ ಹರಿಯಾಣ ಗಡಿಯಲ್ಲಿ ಸರಕಾರದ ರೈತ ಚಳವಳಿ ಹತ್ತಿಕ್ಕುವ ಹೋರಾಟದಲ್ಲಿ ಬಲಿಯಾಗಿದ್ದಾನೆ.ಪಂಜಾಬದ ಭಟಿಂಡಾ ಜಿಲ್ಲೆಯ ಬಾಲೋಕ್ ಗ್ರಾಮದ ಯುವಕ ರೈತನಿವನು. ಈಗ ಪೋಲೀಸರ ದಾಳಿಯಲ್ಲಿ ರೈತರ ಪ್ರಕಾರ ಕೊಲೆಯಾಗಿದ್ದಾನೆ. ಸರಕಾರ ಸರಿಯಾದ ಪರಿಹಾರ ಕೊಡಬೇಕು ಎಂದು ಒತ್ತಾಯಿಸಿರುವ ರೈತ ನಾಯಕರು ತಾವೇ ಒಂದಷ್ಟು ಸಣ್ಣ ಪ್ರಮಾಣದಲ್ಲಿ ಪರಿಹಾರ ಒಟ್ಟು

ದಿಲ್ಲಿ ಲೋಕ ಸಭಾ ಕ್ಷೇತ್ರ : ಕಾಂಗ್ರೆಸ್ ಎಎಪಿ ಮೈತ್ರಿ ಹಂಚಿಕೆ : ಎಎಪಿ 4, ಕಾಂಗ್ರೆಸ್ 3 ಕಡೆ ಸ್ಪರ್ಧೆ

ದಿಲ್ಲಿ ಲೋಕಸಭಾ ಕ್ಷೇತ್ರಗಳ ಬಗೆಗೆ ಇಂಡಿಯಾ ಮೈತ್ರಿಕೂಟದ ಅಂಗ ಪಕ್ಷಗಳಾದ ಎಎಪಿ ಮತ್ತು ಕಾಂಗ್ರೆಸ್ ಪಕ್ಷಗಳು ಇಂದು ಒಡಂಬಡಿಕೆಗೆ ಬಂದವು. ಅದರಂತೆ ದಿಲ್ಲಿಯ 7 ರಲ್ಲಿ 4 ಕಡೆ ಎಎಪಿ ಮತ್ತು 3 ಕಡೆ ಕಾಂಗ್ರೆಸ್ ಪಕ್ಷಗಳು ಸ್ಪರ್ಧಿಸಲಿವೆ.ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರೀವಾಲ್ ಅವರು ಈ ಬಗೆಗೆ ಒಡಂಬಡಿಕೆ ಮಾಡಿಕೊಂಡು ದಿಲ್ಲಿಯಲ್ಲಿ ಮಾಹಿತಿ ನೀಡಿದ್ದಾರೆ. ಅವರ ಮಾತಿನಂತೆ ದಿಲ್ಲಿ ಪೂರ್ವ ಮತ್ತು

ಬಿಜೆಪಿಯು ನಮ್ಮ ಹಣ ಕದಿಯುತ್ತಿದೆ : ಕೆ. ಸಿ. ವೇಣುಗೋಪಾಲ್

ಯುವ ಕಾಂಗ್ರೆಸ್ ಮತ್ತು ಎನ್‌ಎಸ್‌ಯುಐ ಹಾಗೂ ಕಾಂಗ್ರೆಸ್ಸಿನ ಬ್ಯಾಂಕ್ ಖಾತೆಗಳಿಂದ ಆದಾಯ ತೆರಿಗೆ ಇಲಾಖೆಯು 65.89 ಕೋಟಿ ರೂಪಾಯಿ ಕತ್ತರಿಸಿಕೊಳ್ಳುತ್ತಿದೆ ಇದು ಬಿಜೆಪಿ ಕದಿಯುತ್ತಿರುವ ಹಣ ಎಂದು ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಆಪಾದಿಸಿದರು.ನಾವು ಕೇಂದ್ರದಲ್ಲಿ ಆಳುತ್ತಿದ್ದಾಗ ಬಿಜೆಪಿ ವಿಷಯದಲ್ಲಿ ನಾವು ಹೀಗೆ ಎಂದೂ ಹೀಗೆ ನಡೆದುಕೊಂಡಿಲ್ಲ. ಬಿಜೆಪಿಯು ರಾಜಕೀಯ ಪಕ್ಷವಾಗಿ ಎಂದೂ ತೆರಿಗೆ ಕಟ್ಟಿಲ್ಲ. ಆದರೆ ನಮ್ಮ ಖಾತೆಗೆ ತೆರಿಗೆ ಎನ್ನುತ್ತಿದೆ. ಯಾರು

ಜಮ್ಮು-ಕಾಶ್ಮೀರದ ಮಾಜೀ ರಾಜ್ಯಪಾಲ ಸತ್ಯಪಾಲ್ ಮಲಿಕ್ ಮನೆ ಮೇಲೆ ಸಿಬಿಐ ದಾಳಿ

ಜಮ್ಮು ಮತ್ತು ಕಾಶ್ಮೀರದ ಹೈಡಲ್ ಯೋಜನೆ ಗುತ್ತಿಗೆ ನೀಡುವುದರಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪದ ಮೇಲೆ ಜಮ್ಮು ಕಾಶ್ಮೀರದ ಮಾಜೀ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರ ಮನೆಯ ಮೇಲೆ ಸಿಬಿಐ ದಾಳಿ ನಡೆಸಿತು.ಸತ್ಯಪಾಲ್ ಮಲಿಕ್‌ರಿಗೆ ಸೇರಿದ ಮತ್ತು ಆ ಪ್ರಕರಣ ಸಂಬಂಧಿ 40 ಸ್ಥಳಗಳಲ್ಲಿ ಏಕ ಕಾಲದಲ್ಲಿ ದಾಳಿ ನಡೆಯಿತು. ಗುರುವಾರ ಮುಂಜಾನೆಯೇ ಸಿಬಿಐ ಅಧಿಕಾರಿಗಳ ತಂಡ ಮಾಜೀ ರಾಜ್ಯಪಾಲರ ಮನೆ ಹೊಕ್ಕಿತು.2200 ಕೋಟಿ ರೂಪಾಯಿ ಮೊತ್ತದ ಹಲವು ಕಿರು ಜಲವಿದ್ಯುತ್ ಯೋಜನೆ

ಇಂಗ್ಲೆಂಡಿನಲ್ಲಿ ಭಾರತೀಯನ ಸಾವು : ಕೊಲೆ ನಡೆಯಿತೇ, ಅಪಘಾತವೇ?

ಲಂಡನ್ : ಇಂಗ್ಲೆಂಡಿನಲ್ಲಿ ಭಾರತೀಯ ಮೂಲದ 36ರ ವಿಘ್ನೇಶ್ ಪಟ್ಟಾಭಿರಾಮನ್ ಎಂಬವರ ಸಾವು ಆಗಿದೆ. ಸೈಕಲಿನಲ್ಲಿ ಮನೆಗೆ ಹೋಗುವಾಗ ಅಪಘಾತವಾಗಿ ಸಾವಾಗಿದೆ ಎಂದು ಒಂದು ವರದಿ ಹೇಳಿದರೆ ಇನ್ನೊಂದು ಅದು ಕೊಲೆ ಎಂದು ವರದಿ ಮಾಡಿದೆ.ಬ್ರಿಟನ್ನಿನ ವೆಲ್ ರೀಡಿಂಗ್‌ನಲ್ಲಿ ಹೋಟೆಲೊಂದರ ಮ್ಯಾನೇಜರ್ ಆಗಿ ವಿಘ್ನೇಶ್ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿ ಮನೆಗೆ ಹೋಗುವಾಗ ಹೋಟೆಲಿಗೆ ಹತ್ತಿರದ ಪ್ಲೇಸ್ ಜಂಕ್ಷನ್‌ನಲ್ಲಿ ಸೈಕಲಿನಿಂದ ಅವರು ಬಿದ್ದು ಮೃತರಾಗಿದ್ದಾರೆ. ಬೀಳಲು

ರೈತರ ಖಾತೆ ನಿರ್ಬಂಧಿಸಲು ಆದೇಶ :ಒಲ್ಲೆ ಎಂದ ಎಕ್ಸ್ ಪೋಸ್ಟ್ ಸಂಸ್ಥೆ

ದಿಲ್ಲಿ : ರೈತರ ದಿಲ್ಲಿ ಚಲೋ ಚಳವಳಿಗೆ ಸಂಬಂಧಿಸಿದಂತೆ ಪೋಸ್ಟ್ ಮಾಡುತ್ತಿರುವ 177 ರೈತರ ಎಕ್ಸ್ ಪೋಸ್ಟ್ ಖಾತೆಗಳನ್ನು ನಿರ್ಬಂಧಿಸುವಂತೆ ಒಕ್ಕೂಟ ಬಿಜೆಪಿ ಸರಕಾರದ ಐಟಿ ಸಚಿವಾಲಯ ಹೇಳಿದ್ದು ಆ ಕೋರಿಕೆಯನ್ನು ಸೋಶಿಯಲ್ ಮೀಡಿಯಾ ನೆಟ್‌ವರ್ಕ್ ಎಕ್ಸ್ ಪೋಸ್ಟ್ ಸಂಸ್ಥೆ ಮಾನ್ಯ ಮಾಡಿಲ್ಲ.ಹಿಂದಿನ ಟ್ವಿಟರ್ ಎಕ್ಸ್ ಪೋಸ್ಟ್ ರೂಪ ತಾಳಿದ ಮೇಲೆ ಅದರ ಪೋಸ್ಟ್‌ಗಳು ಹೆಚ್ಚೆಚ್ಚು ಜನಪರ ಹೋರಾಟಗಳ ಪರ ಆಗತೊಡಗಿದೆ ಎನ್ನುವುದು ಕೆಲವರ ಅಂಬೋಣ. ಎಲೆಕ್ಟ್ರಾನಿಕ್ ಮತ್ತು ಮಾಹಿತಿ

ಇಂಡಿಯನ್ ನ್ಯಾಷನಲ್ ರ್‍ಯಾಲಿ ಚಾಂಪಿಯನ್ಸ್ ಆಗಿ ಹೊರಹೊಮ್ಮಿದ ಮಂಗಳೂರಿನ ಯುವಕರು

ಮಂಗಳೂರಿನ ಆರೂರು ಅರ್ಜುನ್ ರಾವ್ ಮತ್ತು ಸಹ-ಚಾಲಕ ಸತೀಶ್ ರಾಜಗೋಪಾಲ್ ಅವರು ಇಂಡಿಯನ್ ನ್ಯಾಷನಲ್ ರ್‍ಯಾಲಿ ಚಾಂಪಿಯನ್ಸ್- 2023 ಆಗಿ ಹೊರಹೊಮ್ಮಿದರು. ಮಂಗಳೂರಿನ ಆರೂರು ಅರ್ಜುನ್ ರಾವ್ ಮತ್ತು ಸಹ-ಚಾಲಕ ಸತೀಶ್ ರಾಜಗೋಪಾಲ್ ಅವರು ಫೆಡರೇಶನ್ ಆಫ್ ಮೋಟಾರ್ ಸ್ಪೋರ್ಟ್ಸ್ ಕ್ಲಬ್ಸ್ ಆಫ್ ಇಂಡಿಯಾದಿಂದ ಇಂಡಿಯನ್ ನ್ಯಾಷನಲ್ ರ್‍ಯಾಲಿ ಚಾಂಪಿಯನ್ಸ್ – 2023 ಕಿರೀಟವನ್ನು ಪಡೆದರು.ಈ ಮಟ್ಟದ ಮೋಟಾರ್‌ಸ್ಪೋರ್ಟ್‌ನಲ್ಲಿ ಮಂಗಳೂರಿನ ಯುವಕನೊಬ್ಬ ಚಾಲಕರ ವಿಭಾಗದಲ್ಲಿ

17ನೇ ಲೋಕ ಸಭೆಗೆ ವಿದಾಯ ಹೇಳುವ ಮೊದಲು

17ನೇ ಲೋಕ ಸಭೆಯು 88% ನಿಗದಿತ ಕೆಲಸ ಮಾಡಿದೆ ಎಂದು ವರದಿ ಆಗಿದೆ. ಆದರೆ ಅವರೆಲ್ಲ ಲೋಕಸಭೆಯಲ್ಲಿ ಗದ್ದಲ ಮಾಡಿದ್ದರ ಬಗೆಗೇ ಮಾಧ್ಯಮಗಳಲ್ಲಿ ಹೆಚ್ಚು ವರದಿಯಾಗಿತ್ತು. ಗದ್ದಲ ಮಾಡಿದ, ಕೂಗಾಡಿದ, ಕಲಾಪ ಮುಂದೂಡಿದ, ಹೊರ ನಡೆದ, ಹಾಜರಿ ಹಾಕಿ ಭತ್ಯೆ ಪಡೆದು ಕ್ಯಾಂಟೀನ್‍ನಲ್ಲಿ ಕುಳಿತ ಕಾಲ ಎಷ್ಟು ಎಂದು ಲೆಕ್ಕ ಸಿಕ್ಕಿಲ್ಲ. ಬಹುತೇಕ ಸಂಸದರು ತಮ್ಮ ಅನುಕೂಲದ ಹೊರತಾಗಿ ಬೇರೆಯದರ ಬಗೆಗೆ ತಲೆ ಕೆಡಿಸಿಕೊಂಡುದು, ತಲೆ ಓಡಿಸಿದ್ದು ಕಡಿಮೆ. ಹಾಲಿ ಲೋಕ ಸಭೆಯ ಅವಧಿ ಮುಗಿಯಲು