Home Archive by category ವಿಟ್ಲ (Page 2)

ವಿಟ್ಲ : ಬಾಲವಿಕಾಸದಲ್ಲಿ ಮಕ್ಕಳ ದಿನದ ಸಂಭ್ರಮಾಚರಣೆ

ವಿಟ್ಲ : ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಅತ್ಯoತ ಸಂಭ್ರಮದಿಂದ ಆಚರಿಸಲಾಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಹ್ಲಾದ್ ಶೆಟ್ಟಿ ಜೆ ಇವರು ಮಾತನಾಡಿ, “ಸತತ ಪ್ರಯತ್ನದಿಂದ ಸಾಧನೆ ಸಾಧ್ಯ. ಮಕ್ಕಳ ದಿನಾಚರಣೆ ಎಂಬುದು ಒಂದು ಸಾಮೂಹಿಕ

ವಿಟ್ಲ: ಉಡುಪಿ-ಕಾಸರಗೋಡು ವಿದ್ಯುತ್ ಪ್ರಸರಣ ಕಾಮಗಾರಿ: ವಿಟ್ಲದಲ್ಲಿ ಕಾಮಗಾರಿ ಮುಂದುವರಿಸಲು ಬಿಡುವುದಿಲ್ಲ: ಸಂಜೀವ ಮಠಂದೂರು

ವಿಟ್ಲ: ಉಡುಪಿ ಕಾಸರಗೋಡು 400 ಕೆ ವಿ. ವಿದ್ಯುತ್ ಪ್ರಸರಣ ಕಾಮಗಾರಿಯನ್ನು ಮತ್ತೆ ವಿಟ್ಲದಲ್ಲಿ ಆರಂಭಿಸಲು ಪ್ರಯತ್ನಿಸಿದ್ದು ಇದನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ತಿಳಿಸಿದರು. ವಿಟ್ಲದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯುಕೆಟಿಎಲ್ ಗುತ್ತಿಗೆ ನೀಡಿ ಸ್ಟರ್ಲೈಟ್ ಕಂಪೆನಿ ಸ್ಥಳ ಸರ್ವೇ ಮೂಲಕ ವಿದ್ಯುತ್ ಲೈನ್ ಅಳವಡಿಕೆಯ ಕಾರ್ಯಾರಂಭಕ್ಕೆ ಮುಂದಾಗಿದೆ ಇದನ್ನು ವಿರೋಧಿಸುವುದಾಗಿ ತಿಳಿಸಿದರು. ಯೋಜನೆ ಕೇಂದ್ರ

ವಿಟ್ಲ ;ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಬೈಕ್ ಸವಾರ ಗಂಭೀರ

ವಿಟ್ಲ : ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಚಂದಳಿಕೆ ಸಿಪಿಸಿಆರ್ ಐ ಎಂಬಲ್ಲಿ ನಡೆದಿದೆ. ಬೊಳಂತಿಮೊಗರು ನಿವಾಸಿ ಬೈಕ್ ಸವಾರ ಅಬ್ದುಲ್ ಆಸೀಫ್ ಗಂಭೀರ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಹ ಸವಾರ ಇಮ್ರಾನ್ ಅಪಾಯದಿಂದ ಪಾರಾಗಿದ್ದಾರೆ. ಇವರು ವಿಟ್ಲ ಕಡೆಯಿಂದ ಕಂಬಳಬೆಟ್ಟು ಕಡೆಗೆ ತೆರಳುತ್ತಿದ್ದಾಗ ಹಿಂಬದಿಯಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.

ವಿಟ್ಲ: ಸಿಡಿಲು ಬಡಿದು ತೆಂಗಿನ ಮರ ಬೆಂಕಿಗಾಹುತಿ

ವಿಟ್ಲ: ತೆಂಗಿನ ಮರವೊಂದಕ್ಕೆ ಸಿಡಿಲು ಬಡಿದು ಬೆಂಕಿ ಕಾಣಿಸಿಕೊಂಡ ಘಟನೆ ಬುಡೋಳಿ ಜಂಕ್ಷನ್ ನಲ್ಲಿ ನಡೆದಿದೆ.ಬುಡೋಳಿ ಫಾತಿಮಾ ಸ್ಟೋರ್ ಮಾಲಕ ಸಿದ್ದೀಕ್ ಅವರ ಮನೆಯಂಗಳದಲ್ಲಿ ಇರುವ ತೆಂಗಿನ ಮರಕ್ಕೆ ಸಿಡಿಲು ಬಡಿದಿದೆ. ಸಿಡಿಲು ಬಡಿದ ಪರಿಣಾಮವಾಗಿ ತೆಂಗಿನ ಮರದಲ್ಲಿ ಬೆಂಕಿ ಕಾಣಿಸಿಕೊಂಡಿದ್ದಲ್ಲದೆ, ಮರ ಸುಟ್ಟು ಹೋಗಿದೆ.ಮನೆಯಂಗಳದಲ್ಲಿ ತೆಂಗಿನ ಮರ ಇದೆಯಾದರೂ ಅದೃಷ್ಟವಶಾತ್ ಮನೆಯವರಿಗೆ ಯಾವುದೇ ಅಪಾಯವಾಗಿಲ್ಲ ಎಂದು ತಿಳಿಸಿದ್ದಾರೆ. ಇದರ ಪಕ್ಕದಲ್ಲೇ ಇವರಿಗೆ

ವಿಟ್ಲ: ದ್ವಿಚಕ್ರ ವಾಹನ ಮತ್ತು ಆಟೋ ರಿಕ್ಷಾ ನಡುವೆ ಅಪಘಾತ: ಆಟೋದಲ್ಲಿದ್ದ ಪ್ರಯಾಣಿಕ ಮೃತ್ಯು

ಸ್ಕೂಟಿ ಮತ್ತು ಆಟೋ ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಪೆರುವಾಯಿ-ಬೆರಿಪದವು ರಸ್ತೆಯಲ್ಲಿ ನಡೆದಿದೆ.ಪೆರುವಾಯಿ-ಬೆರಿಪದವು ರಸ್ತೆಯಲ್ಲಿ ಇನ್ನೊಂದು ವಾಹನವನ್ನು ಓವರ್ ಟೇಕ್ ಮಾಡುವ ಭರದಲ್ಲಿ ಸ್ಕೂಟಿ ಮತ್ತು ಆಟೋರಿಕ್ಷಾ ಮುಖಾಮುಖಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಗಂಭೀರ ಗಾಯಗೊಂಡಿದ್ದ ಆಟೋ ಪ್ರಯಾಣಿಕ ಪೆರುವೋಡಿ ನಿವಾಸಿ ನಾಗೇಶ್ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಬಾಲವಿಕಾಸದಲ್ಲಿ ಶಾರದಾ ಪೂಜೆ

ವಿಟ್ಲ : ಅಕ್ಟೋಬರ್ 21 : ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನವರಾತ್ರಿ ಹಬ್ಬದ ಪ್ರಯುಕ್ತ ಶಾರದಾ ಪೂಜೆ ನೆರವೇರಿತು. ಮೊದಲಿಗೆ ಶಾಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದದಿಂದ ಭಜನಾ ಕಾರ್ಯಕ್ರಮ ನಡೆಯಿತು. ನಂತರ ವೇದಮೂರ್ತಿ ಅನಂತ್ ಭಟ್ ಕಶೆಕೋಡಿಯವರ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಜರುಗಿದ ಪೂಜಾ ಕೈಂಕರ್ಯದಲ್ಲಿ ಶಾರದಾ ಪೂಜೆ ಹಾಗೂ ಶಾಲಾ ವಾಹನಗಳಿಗೆ ಪೂಜೆ ನಡೆಯಿತು. ಇದರ ಜೊತೆಗೆ ಶಾಲಾ ಗಣಕಯಂತ್ರಗಳು, ಶಾಲಾ

ವಿಟ್ಲ: ನೇಣು ಬಿಗಿದು ಯುವಕ ಆತ್ಮಹತ್ಯೆ

ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಸಮೀಪದ ಪುಣಚದಲ್ಲಿ ನಡೆದಿದೆ. ಪುಣಚ ಚೆಕ್ಕುತ್ತಿ ನಿವಾಸಿ ಶ್ರೀ ಕೃಷ್ಣ (26) ಆತ್ಮಹತ್ಯೆ ಮಾಡಿಕೊಂಡ ಯುವಕ. ಶ್ರೀ ಕೃಷ್ಣ ಸೆಂಟ್ರಿoಗ್ ಕೆಲಸ ನಿರ್ವಹಿಸುತ್ತಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಾಯಿ, ಸಹೋದರ, ಸಹೋದರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಾರ್ಬಲ್‌ ತುಂಬಿಕೊಂಡಿದ್ದ ಲಾರಿ ಪಲ್ಟಿ : ನಾಲ್ಕು ಜನ ಗಂಭೀರ

ವಿಟ್ಲ: ಮಾರ್ಬಲ್‌ ತುಂಬಿಕೊಂಡು ಬಂದ ಲಾರಿ ಪಲ್ಟಿಯಾಗಿ ನಾಲ್ಕು ಜನ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದಲ್ಲಿ ನಡೆದಿದೆ. ಲಾರಿ ಪಲ್ಟಿಯಾಗಿ ಕಾರ್ಮಿಕರ ಕೈ-ಕಾಲು ಛಿದ್ರ ಛಿದ್ರಗೊಂಡಿದ್ದು, ಗಂಭೀರ ಗಾಯಗೊಂಡ ಗಾಯಾಳುಗಳನ್ನು ನಾಲ್ಕು ಆಂಬ್ಯುಲೆನ್ಸ್‌ ಮೂಲಕ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಗಾಯಾಳುಗಳನ್ನು ಉತ್ತರ ಭಾರತದ ಮೂಲದವರು ಎಂದು ಗುರುತಿಸಲಾಗಿದ್ದು, ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲಿನೆ

ವಿಟ್ಲ: 40 ಅಡಿ ಅಳದ ಹೊಳೆಗೆ ಬಿದ್ದ ವ್ಯಕ್ತಿಯ ರಕ್ಷಣೆ

ವಿಟ್ಲ: ಬೈಕ್ ಸೇತುವೆಗೆ ಡಿಕ್ಕಿ ಸವಾರ 40 ಅಡಿ ಆಳದ ಹೊಳೆಗೆ ಬಿದ್ದಿದ್ದು, ಸ್ಥಳೀಯ ಮುಸ್ಲಿಂ ಯುವಕರು ರಕ್ಷಣೆ ಮಾಡಿದ ಘಟನೆ ವಿಟ್ಲ ಪಡ್ನೂರು ಗ್ರಾಮದ ಕೊಡಂಗಾಯಿಯಲ್ಲಿ ನಡೆದಿದೆ. ಕೊಳ್ನಾಡು ಗ್ರಾಮದ ಮಂಕುಡೆ ನಿವಾಸಿ ಪಾಕ ಪ್ರವೀಣ ಹರ್ಷವರ್ಧನ ಭಟ್(55) ಅವರು ಕಾರ್ಯನಿಮಿತ್ತ ಶನಿವಾರ ಮುಂಜಾನೆ 4ಗಂಟೆ ಸುಮಾರಿಗೆ ತನ್ನ ಬೈಕಿನಲ್ಲಿ ವಿಟ್ಲ ಕಡೆ ಹೊರಟಿದ್ದರು. ವಿಟ್ಲ-ಸಾಲೆತ್ತೂರು ರಸ್ತೆಯ ಕೊಡಂಗಾಯಿ ಸೇತುವೆಯ ತಡೆಗೋಡೆಗೆ ಬೈಕ್ ಡಿಕ್ಕಿ ಹೊಡೆದು ಸವಾರ ಹರ್ಷವರ್ಧನ

ವಿಟ್ಲ: ಚಂದಳಿಕೆ ಕಾರ್ತಿಕ್ ಫ್ರೆಂಡ್ಸ್ ಕ್ಲಬ್‍ನಿಂದ ಸಾರ್ವಜನಿಕ ಗಣೇಶೋತ್ಸವ ಆಚರಣೆ

ವಿಟ್ಲ ಚಂದಳಿಕೆ ಕಾರ್ತಿಕ್ ಫ್ರೆಂಡ್ಸ್ ಕ್ಲಬ್, ಸಾರ್ವಜನಿಕ ಶ್ರೀ ಗಣೇಶೋತ್ಸವ ಬೆಳ್ಳಿ ಹಬ್ಬ ಸಮಿತಿ ವತಿಯಿಂದ 25 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಉದ್ಘಾಟನೆಗೊಂಡಿತು. ಕನ್ಯಾನ ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಿ ಕ್ಷೇತ್ರದ ಶ್ರೀ ಮಹಾಬಲೇಶ್ವರ ಸರಸ್ವತಿ ಸ್ವಾಮೀಜಿ ಉದ್ಘಾಟಿಸಿ, ಆಶೀರ್ವಚನ ನೀಡಿದರು. ಭಕ್ತರ ಸತ್ಸಂಕಲ್ಪಕ್ಕೆ ದೇವರ ಅನುಗ್ರಹ ಸದಾ ಇದೆ. ಧಾರ್ಮಿಕ ಕಾರ್ಯಕ್ರಮಗಳು ಬದುಕಿನ ಸಂಸ್ಕಾರ – ಸಂಸ್ಕೃತಿಯ ಉದ್ದೀಪನಕ್ಕೆ ಪೂರಕವಾಗಿದೆ.