Home Archive by category ವಿಶ್ವ (Page 3)

ದುಬೈ : “ಮಿಡ್ಲ್ ಕ್ಲಾಸ್ ಫ್ಯಾಮಿಲಿ ” ತುಳು ಚಿತ್ರದ ಪ್ರೀಮಿಯರ್ ಟಿಕೆಟ್ ಬಿಡುಗಡೆ ಕಾರ್ಯಕ್ರಮ

ದುಬೈ : ಯುವ ನಟ – ನಿರ್ದೇಶಕ ರಾಹುಲ್ ಅಮೀನ್ ನಿರ್ದೇಶಿಸಿ, ವಿನೀತ್ ಕುಮಾರ್ ನಾಯಕ ನಟನಾಗಿ ಅಭಿನಯಿಸಿದ “ಮಿಡ್ಲ್ ಕ್ಲಾಸ್ ಫ್ಯಾಮಿಲಿ” ತುಳು ಚಿತ್ರದ ಯುಎಇ ರಾಷ್ಟ್ರದ ಪ್ರೀಮಿಯರ್ ಪ್ರದರ್ಶನದ ಟಿಕೆಟ್ ಬಿಡುಗಡೆ ಕಾರ್ಯಕ್ರಮವು ಇತ್ತೀಚೆಗೆ ಜರುಗಿತು. ಡಿಸೆಂಬರ್ .8 ರಂದು ದುಬೈನ ಮಾರ್ಕೊ ಪೋಲೊ ಹೊಟೇಲ್ ನ ಸಭಾಂಗಣದಲ್ಲಿ ನಡೆದ ಟಿಕೆಟ್

ದಿಲ್ಲಿ : ವಿಮಾನಗಳಲ್ಲಿ ಬಾಂಬಿಟ್ಟ ಸುಳ್ಳು ಕರೆಗಳ ಸರಣಿ: ಮರಳಿ ಬಂದಿಳಿದ ಲಂಡನ್ ದಿಲ್ಲಿ ವಿಮಾನ

ಇದೇ ಸೋಮವಾರದಿಂದ ವಿಮಾನಗಳಲ್ಲಿ ಬಾಂಬ್ ಇಟ್ಟಿರುವ ಬೆದರಿಕೆ ಕರೆಗಳು ಬರುತ್ತಿದ್ದು, ಕಳೆದ ೨೪ ಗಂಟೆಗಳಲ್ಲಿನ 3 ಸೇರಿ ಒಟ್ಟು ೩೫ಕ್ಕೂ ಹೆಚ್ಚು ಬಾಂಬ್ ಬೆದರಿಕೆ ಕಾರಣಕ್ಕೆ ವಿಮಾನಗಳನ್ನು ಬೇರೆಡೆ ತಿರುಗಿಸಿದೆ, ಇಲ್ಲವೇ ತುರ್ತಾಗಿ ಅಲ್ಲೇ ಕೆಳಕ್ಕೆ ಇಳಿಸಲಾಯಿತು. ಕಳೆದ 24 ಗಂಟೆಗಳಲ್ಲಿ ಮೂರು ಪ್ರಮುಖ ವಿಮಾನ ಯಾನಗಳು ತತ್ತರಿಸಿವೆ. ವಿಸ್ತಾರ ಸೇವೆಯ ಲಂಡನ್ ದಿಲ್ಲಿ ವಿಮಾನವನ್ನು ಜರ್ಮನಿಯ ಫ್ರಾಂಕ್‌ಫರ್ಟ್‌ಗೆ ತಿರುಗಿಸಲಾಗಿದೆ. ಜೈಪುರ ದುಬಾಯಿ, ಬೆಂಗಳೂರು

Big Breaking: ಭಾರತದ ಹೆಮ್ಮೆಯ ಉದ್ಯಮಿ ರತನ್‌ ಟಾಟಾ ಇನ್ನಿಲ್ಲ

ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್‌ ಟಾಟಾ ಅವರು ಇನ್ನಿಲ್ಲ. ರತನ್‌ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್‌ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎನ್ನುವ ಸುದ್ದಿಯನ್ನೇ

ಪ್ಯಾರಾಲಿಂಪಿಕ್ಸ್: ಬ್ಯಾಡ್ಮಿಂಟನ್ ಸಿಂಗಲ್ಸ್‌ನಲ್ಲಿ ಚಿನ್ನ ಗೆದ್ದ ನಿತೇಶ್

ಪ್ಯಾರಿಸ್ ಪ್ಯಾರಾಲಿಂಪಿಕ್ಸ್​ನಲ್ಲಿ ಭಾರತಕ್ಕೆ ಇಂದು ಎರಡನೇ ಚಿನ್ನದ ಪದಕ ಲಭಿಸಿದೆ. ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ ಎಸ್​ಎಲ್3 ವಿಭಾಗದಲ್ಲಿ ಭಾರತದ ನಿತೇಶ್ ಕುಮಾರ್ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡರು. ರೋಚಕತೆಯಿಂದ ಕೂಡಿದ್ದ ಈ ಪಂದ್ಯದಲ್ಲಿ ನಿತೇಶ್ 21-14, 18-21, 23-21 ರಿಂದ ಗೆಲುವು ಸಾಧಿಸಿ ಚಿನ್ನಕ್ಕೆ ಮುತ್ತಿಟ್ಟರು. ಇದರೊಂದಿಗೆ ಭಾರತ ಈ ಬಾರಿಯ ಪ್ಯಾರಾಲಿಂಪಿಕ್ಸ್‌ನಲ್ಲಿ ಇದುವರೆಗೆ ಒಟ್ಟು 9 ಪದಕಗಳನ್ನು ತನ್ನದಾಗಿಸಿಕೊಂಡಂತ್ತಾಗಿದೆ.

18ರ ಲಗ್ನ ವಿಘ್ನ, 21ರ ವಿವಾಹ ವಿಚಾರಗಳು

ಮಗು ಮದುವೆ, ಬಾಲ್ಯ ವಿವಾಹ ಭಾರತ ಮತ್ತು ಕರ್ನಾಟಕದ ಒಂದು ಅಂಟು ಜಾಡ್ಯವಾಗಿ ಬಲಿತು ಕುಳಿತಿದೆ.ಲಗ್ನದ ವಯಸ್ಸನ್ನು 21ಕ್ಕೆ ಏರಿಸಿದರೂ ಸಮಸ್ಯೆ ಪರಿಹಾರ ಆಗಿಲ್ಲ. ಮದುವೆಯ ವಯಸ್ಸು 21 ಎಂದಾಗ ಹೆಣ್ಣು ಉನ್ನತ ಓದು ಮುಗಿಸಿರುವುದು ಸಾಧ್ಯ. 18 ಎಂದರೆ ಕಲಿಕೆ ಕಡೆ ಇಲ್ಲವೇ ಸಂಸಾರ ತೂಗಿಸಿಕೊಂಡು ಓದಬೇಕು. 21ಕ್ಕೆ ಹೆಣ್ಣು ಕೆಲಸಕ್ಕೆ ಸೇರಿರುವುದೂ ಸಾಧ್ಯ. ಇದು ಸಂಸಾರಕ್ಕೆ ಅನುಕೂಲ. ಭಾರತೀಯ ಸಮಾಜದಲ್ಲಿ ಅನಾನುಕೂಲವೂ ಆಗಬಹುದು. 21ರಲ್ಲಿ ಹೆಣ್ಣು ಸ್ವತಂತ್ರವಾಗಿ

ನೀಟ್ ಫಲಿತಾಂಶ, ರಾಜಸ್ತಾನ, ಗುಜರಾತ್, ತಮಿಳುನಾಡು ಉತ್ತಮ ಸಾಧನೆ

ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ವಲಯವಾರು ನೀಟ್ ಫಲಿತಾಂಶ ಪ್ರಕಟವಾಗಿದ್ದು ರಾಜಸ್ತಾನ, ಗುಜರಾತ್ ಮತ್ತು ತಮಿಳುನಾಡಿನ ಕೆಲವು ಪ್ರದೇಶಗಳು ಉತ್ತಮ ಸಾಧನೆ ಮಾಡಿವೆ. ಹರಿಯಾಣದ 720ಕ್ಕೆ 720 ಪಡೆದಿದ್ದ ಒಬ್ಬರು ಕೂಡ ಮತ್ತೆ ಆ ಸಾಧನೆ ಪಡೆದಿಲ್ಲ. 700ಕ್ಕೆ ಮೇಲೆ ಅಂಕ ಗಳಿಸಿದವರಿಗೆ ಮರು ಪರೀಕ್ಷೆ ನಡೆಸಲಾಗಿತ್ತು. ನೀಟ್ ಫಲಿತಾಂಶದಂತೆ 2,250 ಮಂದಿ ಸೊನ್ನೆ ಅಂಕ ಪಡೆದಿದ್ದಾರೆ ಮತ್ತು 9,400 ವಿದ್ಯಾರ್ಥಿಗಳು ನಕಾರಾತ್ಮಕ ಅಂಕ ಪಡೆದಿದ್ದಾರೆ. ಪ್ರಶ್ನೆಪತ್ರಿಕೆ

ವಿಜಯ ಅಮೃತರಾಜ್, ಲಿಯಾಂಡರ್‌ರಿಗೆ ಸಾಧನೆಗೆ ಪುರಸ್ಕಾರ

ಭಾರತದ ಪ್ರಸಿದ್ಧ ಟೆನ್ನಿಸ್ ಆಟಗಾರರಾದ ವಿಜಯ ಅಮೃತರಾಜ್ ಮತ್ತು ಲಿಯಾಂಡರ್ ಪಯಸ್‌ರಿಗೆ ಅಂತರರಾಷ್ಟ್ರೀಯ ಟೆನ್ನಿಸ್ ಹಾಲ್ ಆಫ್ ಫೇಮ್ ಗೌರವ ಸಂದಿದೆ. ಟೆನ್ನಿಸ್ ಆಟಗಾರರಾಗಿ ಲಿಯಾಂಡರ್ ಪಯಸ್ ಮತ್ತು ಟೆನ್ನಿಸ್‌ಗೆ ನೀಡಿರುವ ಕೊಡುಗೆಗಾಗಿ ವಿಜಯ ಅಮೃತ್‌ರಾಜ್ ಅವರುಗಳಿಗೆ ಈ ಗೌರವ ಸಲ್ಲುತ್ತಿದೆ. ಇಲ್ಲಿಗೆ ೨೮ ದೇಶಗಳ ೨೬೭ ಜನರು ಟೆನ್ನಿಸ್ ಹಾಲ್ ಆಫ್ ಫೇಮ್ ಗೌರವ ಪಡೆದಂತಾಯಿತು ಎಂದು ಇಂಟರ್ನ್ಯಾಶನಲ್ ಟೆನ್ನಿಸ್ ಹಾಲ್ ಆಫ್ ಫೇಮ್ ಒಕ್ಕೂಟವು ತಿಳಿಸಿದೆ.ಟೆನ್ನಿಸ್

ಹಿಂದೂ ಪಾಕಿಸ್ತಾನದ ದೊಡ್ಡ ಅಲ್ಪಸಂಖ್ಯಾಕ ಸಮುದಾಯ

ಪಾಕಿಸ್ತಾನದಲ್ಲಿ ಅಧಿಕೃತ ಜನಗಣತಿಯ ವರದಿ ಡಾನ್ ಪತ್ರಿಕೆ ಮೂಲಕ ವರದಿಯಾಗಿದ್ದು, ಹಿಂದೂ ಮತ್ತು ಕ್ರಿಶ್ಚಿಯನರ ಸಂಖ್ಯೆಯು ಅಲ್ಪ ಪ್ರಮಾಣದಲ್ಲಿ ಏರಿಕೆಯಾಗಿದೆ. ಈಗ ಪಾಕಿಸ್ತಾನದಲ್ಲಿ ಹಿಂದೂಗಳು ಅತಿ ದೊಡ್ಡ ಅಲ್ಪಸಂಖ್ಯಾಕ ಸಮುದಾಯವಾಗಿದ್ದಾರೆ. ಪಾಕಿಸ್ತಾನದ ಜನಸಂಖ್ಯೆಯು ಈಗ ೨೪.೦೮ ಕೋಟಿ. ಮುಸ್ಲಿಂ ಜನಸಂಖ್ಯೆಯು ೨೦೧೭ರಲ್ಲಿ ೯೬.೪೬ ಶೇಕಡಾ ಇದ್ದುದು ೯೬.೩೫ ಶೇಕಡಾಕ್ಕೆ ತುಸು ಕೆಳ ಸರಿದಿದೆ. ಹಿಂದೂಗಳ ಜನಸಂಖ್ಯೆಯು ೨೦೧೭ರಲ್ಲಿ ೩೫ ಲಕ್ಷ ಇದ್ದುದು ೨೦೨೩ರಲ್ಲಿ ೩೮

ಜನಸಂಖ್ಯೆ ತೀವ್ರ ಇಳಿಕೆಯ ಆತಂಕದಲ್ಲಿ ಜಪಾನ್

ನೀವು ಏಕೆ ಮದುವೆ ಆಗುವುದಿಲ್ಲ ಎಂದು ಪ್ರಶ್ನಿಸುತ್ತಿದೆ ಜಪಾನ್ ಸರಕಾರ.ನಿಮ್ಮ ತುಮುಲ ತಿಳಿದರೆ ನಾವು ಕೃತಜ್ಞರು ಎನ್ನುತ್ತ ಜಪಾನ್ ಮಕ್ಕಳು ಮತ್ತು ಕಲ್ಯಾಣ ಸಚಿವೆ ಆಯುಕೋ ಕತೋ ಅವರು ಯುವ ಜನಾಂಗವನ್ನು ಕೇಳುತ್ತ ದೇಶದ ಜನಸಂಖ್ಯೆ ಇಳಿಮುಖವಾಗಿರುವುದಕ್ಕೆ ಪರಿಹಾರ ಹುಡುಕುತ್ತಿದ್ದಾರೆ. ಚಿಲ್ಡ್ರನ್ ಆಂಡ್ ಫ್ಯಾಮಿಲೀಸ್ ಏಜೆನ್ಸಿ ಮೂಲಕ ಜಪಾನ್ ಸರಕಾರವು ಅಲ್ಲಿನ ಯುವ ಜನಾಂಗವು ನಿಮಗೆ ಮದುವೆ ಆಗಲು ಇರುವ ಸಮಸ್ಯೆ ಏನು ಎಂದು ಪ್ರಶ್ನಿಸುತ್ತಿದೆ. ಡೇಟಿಂಗ್, ಮ್ಯಾಚ್

ಪುರಿ ಜಗನ್ನಾಥ ರಥೋತ್ಸವ ನೂಕು ನುಗ್ಗಲು

ಪುರಿ ಜಗನ್ನಾಥ ದೇವಾಲಯದ ರಥೋತ್ಸವದಲ್ಲಿ ನೂಕು ನುಗ್ಗಲಿನಲ್ಲಿ ಒಬ್ಬ ಸತ್ತುದರಿಂದ ತೇರು ಎಳೆಯುವುದನ್ನು ಸೋಮವಾರಕ್ಕೆ ಮುಂದೂಡಲಾಗಿದೆ. ತೇರು ಎಳೆಯುವ ಸಮಯದಲ್ಲಿ ಹೆಚ್ಚು ಭಕ್ತರು ಸೇರಿದ್ದರು. ರಥ ಎಳೆಯಲು ಮುನ್ನುಗ್ಗಿದ್ದರಿಂದ ನೂಕು ನುಗ್ಗಲು ಉಂಟಾಯಿತು. ಒಬ್ಬ ಉಸಿರು ಕಟ್ಟಿ ಸತ್ತರೆ ಹಲವರು ಕೆಳಕ್ಕೆ ಬಿದ್ದು ಗಾಯಗೊಂಡರು. ಒಬ್ಬಿಬ್ಬರು ಗಂಭೀರ ಎಂದು ತಿಳಿದು ಬಂದಿದೆ. ಭಾನುವಾರ ಸಂಜೆ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್