Home Archive by category Fresh News (Page 101)

ಬೆಳ್ಳಾರೆ: ಜೂ. 8ರಂದು ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ಲಿ.: ಬೆಳ್ಳಾರೆಯಲ್ಲಿ 26ನೇ ಶಾಖೆ ಪ್ರಾರಂಭ

ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ಲಿ. ಇದರ 26ನೇ ಶಾಖೆಯ ಬೆಳ್ಳಾರೆಯ ಪ್ರಸಾದ್ ಟೆಕ್ಸ್ ಟೈಲ್ ಕಟ್ಟಡದ ನೆಲ ಮಹಡಿಯಲ್ಲಿ ಜೂನ್ 8ರಂದು ಉದ್ಘಾಟನೆಗೊಳ್ಳಲಿದೆ. ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ೨೬ನೇ ಶಾಖೆಯನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ರಾಮಕೃಷ್ಣ ಕ್ರೆಡಿಟ್ ಕೊ ಓಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಕೆ. ಜೈರಾಜ್

ಮಂಗಳೂರು : ವಾಮಂಜೂರಿನ ಎಸ್‌ಜೆಇಸಿಯಲ್ಲಿ ಅಂತಿಮ ವರ್ಷದ ಯುಜಿ ವಿದ್ಯಾರ್ಥಿಗಳಿಗೆ ವಿದಾಯ ಕಾರ್ಯಕ್ರಮ

ಮಂಗಳೂರಿನ ವಾಮಂಜೂರಿನ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ಅಂತಿಮ ವರ್ಷದ ಯುಜಿ ವಿದ್ಯಾರ್ಥಿಗಳಿಗೆ ಸಾಮಾನ್ಯ ವಿದಾಯ ಕಾರ್ಯಕ್ರಮವು ಕಲಾಂ ಸಭಾಂಗಣದಲ್ಲಿ ನಡೆಯಿತು. ಎಸ್‌ಜೆಇಸಿಯ ಪ್ರಾಂಶುಪಾಲರಾದ ಡಾ. ರಿಯೋ ಡಿಸೋಜಾ ಅವರು ಸ್ವಾಗತಿಸಿದರು. ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಸನತ್ ಸರಳಾಯ ಅವರು ಅಭಿನಂದನಾ ಭಾಷಣ ಮಾಡಿದರು.ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ಎಂಜಿನಿಯರಿಂಗ್ ವಿಭಾಗದ ಸರ್ವಿಕಾ ಮತ್ತು

ಮಂಗಳೂರು ಕರ್ನಾಟಕ ಏರ್ ಸ್ಕ್ವಾಡ್ರನ್ ಎನ್‌ಸಿಸಿ ವತಿಯಿಂದ ವಾಮಂಜೂರಿನ ಎಸ್‌ಜೆಇಸಿಯಲ್ಲಿ ತರಬೇತಿ ಶಿಬಿರ

ಸ್ಕ್ವಾಡ್ರನ್ ಎನ್‌ಸಿಸಿ, ಮಂಗಳೂರು ವತಿಯಿಂದ 10 ದಿನಗಳ ಕಾಲ ವಾರ್ಷಿಕ ತರಬೇತಿ ಶಿಬಿರವನ್ನುಆಯೋಜಿಸಿರು. ಮೇ 24ರಂದ ಜೂನ್ 2ರ ವರೆಗೆ ವಾರ್ಷಿಕ ತರಬೇತಿ ಶಿಬಿರವನ್ನು ಹಮ್ಮಿಕೊಂಡಿದ್ದಾರೆ, ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳ 11 ವಿವಿಧ ಸಂಸ್ಥೆಗಳ 433 ಉತ್ಸಾಹಿ ಕೆಡೆಟ್‌ಗಳನ್ನು ಸಮಗ್ರ ಮತ್ತು ಸಮೃದ್ಧ ತರಬೇತಿ ಅನುಭವಕ್ಕಾಗಿ ಒಟ್ಟುಗೂಡಿಸಿದೆ. ಈ ಶಿಬಿರವು ಕೆಡೆಟ್‌ಗಳಲ್ಲಿ ದೇಶಭಕ್ತಿ, ಏಕತೆ, ಶಿಸ್ತು, ನಾಯಕತ್ವ ಮತ್ತು ಸೌಹಾರ್ದತೆಯನ್ನು ಬೆಳೆಸುವ

ಮಂಗಳೂರು: ಸೋಶಿಯಲ್ ಮೀಡಿಯಾದಲ್ಲಿ ಪ್ರಚೋದನಾಕಾರಿ ಪೋಸ್ಟ್- 6 ಮಂದಿಯ ಬಂಧನ

ಸಾಮಾಜಿಕ ಮಾಧ್ಯಮಗಳ ಮೂಲಕ ಕೋಮು ದ್ವೇಷ ಹರಡುವುದರ ವಿರುದ್ಧದ ಪ್ರಮುಖ ಕಾರ್ಯಾಚರಣೆಯಲ್ಲಿ, ಮಂಗಳೂರು ನಗರ ಪೊಲೀಸರು ನಗರ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಾಮಾಜಿಕ ಸಾಮರಸ್ಯವನ್ನು ಕದಡುವ ಗುರಿಯನ್ನು ಹೊಂದಿರುವ ಪ್ರಚೋದನಕಾರಿ ವಿಷಯವನ್ನು ಪ್ರಸಾರ ಮಾಡಿದ್ದಕ್ಕಾಗಿ ಐವರನ್ನು ಬಂಧಿಸಿದ್ದಾರೆ. ಗುಪ್ತಚರ ಮಾಹಿತಿಯ ಮೇರೆಗೆ ತ್ವರಿತವಾಗಿ ಕಾರ್ಯನಿರ್ವಹಿಸಿದ ನಗರ ಆಯುಕ್ತರು, ಪ್ರಚೋದನಾಕಾರಿ ಪೋಸ್ಟ್‌ಗಳಿಗೆ ಕಾರಣರಾದವರನ್ನು ಗುರುತಿಸಲು ಮತ್ತು ಬಂಧಿಸಲು

ಉಡುಪಿ : ನೂತನ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಹರಿರಾಂ ಶಂಕರ್ ರವರಿಗೆ ಕರ್ನಾಟಕ ಪತ್ರಕರ್ತರ ಸಂಘ (ರಿ) ಉಡುಪಿ ಜಿಲ್ಲಾ ಘಟಕದ ವತಿಯಿಂದ ಗೌರವ

ಕರ್ನಾಟಕ ಪತ್ರಕರ್ತರ ಸಂಘ (ರಿ) ಉಡುಪಿ ಜಿಲ್ಲಾ ಘಟಕದ ವತಿಯಿಂದ ಉಡುಪಿ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯವರಾಗಿರುವ ಶ್ರೀ ಹರಿರಾಂ ಶಂಕರ್ ಅವರನ್ನು ಜಿಲ್ಲೆಗೆ ಸ್ವಾಗತಿಸುವ ಮೂಲಕ ಗೌರವಿಸಲಾಯಿತು. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಯನ್ನು ಬಲಪಡಿಸಿ ಶಾಂತಿ ಕಾಪಾಡುವಂತೆ, ಅಕ್ರಮ ವ್ಯವಹಾರಗಳಿಗೆ ಕಡಿವಾಣ ಹಾಕಬೇಕೆಂದು ಕರ್ನಾಟಕ ಪತ್ರಕರ್ತರ ಸಂಘ ದ ವತಿಯಿಂದ ವಿನಂತಿಸಲಾಯಿತು.ಕರ್ನಾಟಕ ಪತ್ರಕರ್ತರ ಸಂಘ ದ ಜಿಲ್ಲಾಧ್ಯಕ್ಷರಾದ ಕಿರಣ್ ಪೂಜಾರಿ,

ಮೂಡುಬಿದಿರೆ : ಎಸ್. ಎನ್. ಮೂಡುಬಿದಿರೆ ಪಾಲಿಟೆಕ್ನಿಕ್ : ಅಂತಾರಾಷ್ಟ್ರೀಯ ಗ್ಲೋಬಲ್ ಯೂಥ್ ಸಮ್ಮಿಟ್ ಗೆ ಆಯ್ಕೆ

ಮೂಡುಬಿದಿರೆ : ಎಸ್.ಎನ್. ಮೂಡುಬಿದಿರೆ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆಯ ಐದು ವಿದ್ಯಾರ್ಥಿಗಳು ಜೂನ್ 4 ರಿಂದ 7ರ ತನಕ ಮಂಗಳೂರಿನ ಯೆನಪೋಯ ವಿಶ್ವ ವಿದ್ಯಾಲಯದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಮಟ್ಟದ ಗ್ಲೋಬಲ್ ಯೂಥ್ ಸಮ್ಮಿಟ್ 2025 ಕ್ಕೆ ಆಯ್ಕೆಯಾಗಿರುತ್ತಾರೆ ಎಂದು ಕಾಲೇಜಿನ ಪ್ರಾಂಶುಪಾಲೆ ನೊರೊನ್ಹಾ ತರೀನಾ ರೀಟಾ ತಿಳಿಸಿದ್ದಾರೆ. ಈ ಸಮ್ಮೇಳನದಲ್ಲಿ ಭಾರತದ 20 ರಾಜ್ಯಗಳಿಂದ ಹಾಗು 10 ಇತರ ದೇಶಗಳನ್ನು ಒಳಗೊಂಡಂತೆ ಸುಮಾರು 500ಕ್ಕೂ ಹೆಚ್ಚು ಯುವ

ಸುಳ್ಯ : ನ್ಯಾಷನಲ್ ಡಿಫೆನ್ಸ್ ಅಕಾಡೆಮಿ 2025(NDA)ಪ್ರವೇಶ ಪರೀಕ್ಷೆ 2025

⭕ವಿದ್ಯಾರ್ಹತೆ:ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ಮತ್ತು ಈಗಾಗಲೇ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು. ⭕ಭಾರತೀಯ ಭೂ ಸೇನೆಯ ಪ್ರವೇಶ ಬಯಸುವ ಅಭ್ಯರ್ಥಿಗಳು ಪಿಯುಸಿ ಯಲ್ಲಿ ಯಾವುದೇ ವಿಷಯವನ್ನು ಅಧ್ಯಯನ ಮಾಡಿರಬಹುದು. ⭕ನೌಕಾ ಸೇನೆ ಮತ್ತು ವಾಯು ಸೇನೆಯ ಪ್ರವೇಶ ಬಯಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಪಿಯುಸಿ ಯಲ್ಲಿ ವಿಜ್ಞಾನ ವಿಷಯದಲ್ಲಿ ಅಧ್ಯಯನ ಮಾಡಿರಬೇಕು. ⭕ವಯಸ್ಸಿನ ಮಿತಿ :ಅಭ್ಯರ್ಥಿಯು 02.01.2007 ರಿಂದ

ಸುಳ್ಯ : ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ- ವಿಶ್ವ ತಂಬಾಕು ರಹಿತ ದಿನಾಚರಣೆ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆಯನ್ನು ಕಾಲೇಜಿನ ಅಗದ ತಂತ್ರ, ಸ್ವಸ್ಥವೃತ್ತ ವಿಭಾಗದ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಹಯೋಗದೊಂದಿಗೆ ಆಚರಿಸಲಾಯಿತು.ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ ವಿಯವರು ದೀಪ ಬೆಳಗಿಸಿ ಕಾರ್ಯಕ್ರಮ ವನ್ನು ಉದ್ಘಾಟಿಸಿ, ಶುಭ ಹಾರೈಸಿದರು. ತಂಬಾಕು ಸೇವನೆಯ ದುಷ್ಪರಿಣಾಮಗಳು, ಇದರಿಂದ ಉಂಟಾಗುವ ಕಾಯಿಲೆಗಳು ಹಾಗೂ ಸೇವನೆಯ ಚಟದಿಂದ ಹೊರಬರುವ ವಿಧಾನಗಳನ್ನು

ಕಡಬ: ಸೈಂಟ್ ಜೋಕಿಮ್ ವಿದ್ಯಾ ಸಂಸ್ಥೆಯಲ್ಲಿ ಶಾಲಾ ಪ್ರಾರಂಭೋತ್ಸವ

ಕಡಬ:ಸೈಂಟ್ ಜೋಕಿಮ್ ವಿದ್ಯಾ ಸಂಸ್ಥೆಯಲ್ಲಿ 2025 -26 ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ದೀಪ ಬೆಳಗಿಸುವುದರ ಮೂಲಕ ಶಾಲಾ ಶೈಕ್ಷಣಿಕ ಚಟುವಟಿಕೆಗಳಿಗೆ ಚಾಲನೆಯನ್ನು ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಸಂಚಾಲಕರಾದ ವಂದನೀಯ ಪ್ರಕಾಶ್ ಪೌಲ್ ಡಿಸೋಜಾ ವಿದ್ಯಾರ್ಥಿಗಳನ್ನು ಸ್ವಾಗತಿಸಿ ಶುಭ ಹಾರೈಸಿದರು. ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರಾದ ವಂದನೀಯ ಸುನಿಲ್ ಪ್ರವೀಣ್ ಪಿಂಟೋ ರವರು ಪ್ರಾಸ್ತಾವಿಕ

ಬೈಂದೂರು: ಹೊಸಂಗಡಿ, ನಾಡ ಹಾಗೂ ಹೇರೂರು ಗ್ರಾಮದಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಕಟ್ಟಡಕೆ ಜಾಗ ಮಂಜೂರು ಶೀಘ್ರದಲ್ಲೇ ಕಟ್ಟಡ ನಿರ್ಮಾಣಕ್ಕೆ ಚಾಲನೆ : ಶಾಸಕ ಗಂಟಿಹೊಳೆ

ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಆರೋಗ್ಯ ಕ್ಷೇತ್ರವನ್ನು ಬಲ ವರ್ಧನೆ ಮಾಡುವ ನಿಟ್ಟಿನಲ್ಲಿ 2023-24 ನೇ ಸಾಲಿನಲ್ಲಿ 15 ನೇ ಹಣಕಾಸು ಆಯೋಗದಡಿ ರಾಜ್ಯದ ಆರೋಗ್ಯ ವಲಯದ ಕಾರ್ಯಕ್ರಮ ಗಳಿಗೆ ಕೇಂದ್ರ ಸರಕಾರ ಅನುಮೋದನೆ ನೀಡಿದ ಕಾರ್ಯಕ್ರಮ ಇದಾಗಿದೆ. ಕ್ಷೇತ್ರದ 3 ಕಡೆ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಕಟ್ಟಡಕ್ಕೆ ಸರಕಾರಿ ಜಾಗ ಮಂಜೂರಾತಿ ಮಾಡಲಾಗಿದ್ದು ಶೀಘ್ರದಲ್ಲೇ ಹೊಸದಾಗಿ 1.95 ಕೋಟಿ ವೆಚ್ಚದಲ್ಲಿ 3 ಕಡೆ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಕಟ್ಟಡ