Home Archive by category Fresh News (Page 114)

ಡಾ. ಹರಿಕೃಷ್ಣ ರೈಯವರಿಗೆ ಅಮೆರಿಕಾದಲ್ಲಿ ನಡೆದ “ಜಿ. ಇ ಹೆಲ್ತ್ ಕೇರ್ ವಿಶ್ವ ಸಂಶೋಧನಾ ಸ್ಪರ್ಧೆ”ಯಲ್ಲಿ ಪೀಪಲ್ ಚಾಯ್ಸ್ ಅವಾರ್ಡ್ 2025

ಸುಳ್ಯದ ಡಾ. ಹರಿಕೃಷ್ಣ ರೈ ಯವರು ಬೆಂಗಳೂರಿನ ಜಿ.ಇ ಹೆಲ್ತ್ ಕೇರ್ ಸಂಸ್ಥೆಯಲ್ಲಿ ಸೀನಿಯರ್ ಪ್ರಾಡಕ್ಟ್ ಮ್ಯಾನೇಜರ್ ಆಗಿ ಸೇವೆ ಸಲ್ಲಿಸುತ್ತಿದ್ದು, ಎ.4 ರಂದು ಅಮೇರಿಕಾದ ವಿಸ್ಕಾನ್ಸಿನ್ ರಾಜ್ಯದ ಮಿಲ್ವಾಕೀ ನಗರದಲ್ಲಿ ನಡೆದ ಜಿ ಇ ಹೆಲ್ತ್ ಕೇರ್ ವಿಶ್ವ ಸಂಶೋಧನಾ ಸ್ಪರ್ಧೆ 2025 ರಲ್ಲಿ ಭಾಗವಹಿಸಿ, ಅವರು ಪ್ರದರ್ಶಿಸಿದ ” ಎಂ.ಆರ್.ಐ ಸ್ಕ್ಯಾನರ್ ನಲ್ಲಿ

ತೋಕೂರು: ಏ.6ರಿಂದ ಏ.13ರ ವರೆಗೆ ಬೇಸಿಗೆ ಶಿಬಿರ

ತೋಕೂರಿನ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ, ಬ್ರಹ್ಮಶ್ರೀ ನಾರಾಯಣ ಗುರು ಮಹಿಳಾ ವೇದಿಕೆ, ಯುವ ವೇದಿಕೆಯ ಪ್ರಾಯೋಜಕತ್ವದಲ್ಲಿ ಉಚಿತ ಬೇಸಿಗೆ ಶಿಬಿರ ನಡೆಯಲಿದೆ. ಎಪ್ರಿಲ್ 6ರಿಂದ ಎಪ್ರಿಲ್ 13ರ ವರೆಗೆ ಬೇಸಿಗೆ ಶಿಬಿರ ನಡೆಯಲಿದೆ. ಎಪ್ರಿಲ್ 6ರಂದು ತೋಕೂರಿನ ಎಸ್. ಕೋಡಿ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಶಿಬಿರದಲ್ಲಿ ವ್ಯಕ್ತಿತ್ವ ವಿಕಸನ ಮತ್ತು ನೀತಿ ಶಿಕ್ಷಣ, ನೃತ್ಯ ತರಬೇತಿ, ಭಜನೆ ಮತ್ತು ಸಂಗೀತ, ನೀತಿ ಕಥೆಗಲು,

ಅಖಿಲ ಭಾರತ ಅಂತರ್ ವಿವಿ ಮಹಿಳಾ ಬಾಲ್‌ಬ್ಯಾಡ್ಮಿಂಟನ್ : ಮಂಗಳೂರು ವಿವಿ ರನ್ನರ್ ಅಪ್

ಮೂಡುಬಿದಿರೆ: ತಮಿಳುನಾಡಿನ ಕಾರೈಕುಡಿಯ ಅಲಗಪ್ಪ ವಿವಿ ಆಶ್ರಯದಲ್ಲಿ ನಡೆದ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಮಹಿಳಾ ಬಾಲ್‌ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್‌ನಲ್ಲಿ ಮಂಗಳೂರು ವಿವಿ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದು, ತಂಡದ 10 ಜನ ಆಟಗಾರ್ತಿಯರ ಪೈಕಿ ನಾಯಕಿ ಸಹನಾ ಎಚ್. ಎಂ ಸೇರಿದಂತೆ 9 ಕ್ರೀಡಾಪಟುಗಳು ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದರು.ಕ್ವಾಟರ್‌ಫೈನಲ್ ಪಂದ್ಯಾಟದಲ್ಲಿ ಮಂಗಳೂರು ವಿವಿಯು ತಮಿಳುನಾಡಿನ ಯೂನಿವರ್ಸಿಟಿ ಆಫ್ ಮದ್ರಾಸ್

ಮಂಗಳೂರು:ಏ.5ರಂದು ರೋಹನ್ ಕಾರ್ಪೋರೇಶನ್ ಸಂಸ್ಥೆಯ ಹೊಸ ರೆಸಿಡೆನ್ಶಿಯಲ್ ಯೋಜನೆ ‘ರೋಹನ್ ಮಿರಾಜ್’ಗೆ ಭೂಮಿ ಪೂಜೆ

ಕರಾವಳಿ ಕರ್ನಾಟಕದ ರಿಯಲ್ ಎಸ್ಟೇಟ್ ಸಂಸ್ಥೆ ರೋಹನ್ ಕಾರ್ಪೊರೇಶನ್ ತನ್ನ ಮತ್ತೊಂದು ಹೊಸ ಅಪಾರ್ಟ್’ಮೆಂಟ್ ಯೋಜನೆ ‘ರೋಹನ್ ಮಿರಾಜ್’ಗೆ ನಾಳೆ (ಶನಿವಾರ 05, 2025ರಂದು) ಸಂಜೆ 5.00 ಗಂಟೆಗೆ ಭೂಮಿಪೂಜೆಯನ್ನು ನಡೆಸಲಿದೆ. ಈ ಹೊಸ ಯೋಜನೆಯು ಕುಲಶೇಖರ ಬೈತುರ್ಲಿಯ ಪ್ರಧಾನ ರಸ್ತೆಯ ರೋಹನ್ ಎಸ್ಟೇಟ್ ಬಡಾವಣೆಯ ಮುಖ್ಯದ್ವಾರದಲ್ಲಿ ತಲೆ ಎತ್ತಲಿದೆ. ರೋಹನ್ ಮಿರಾಜ್: ರೋಹನ್ ಮಿರಾಜ್ ಮಂಗಳೂರಿನ ನಗರ ಜೀವನವನ್ನು ಪುನರ್ವ್ಯಾಖ್ಯಾನಿಸುವ ಉದ್ದೇಶದಿಂದ ಯೋಜನಾಬದ್ಧವಾಗಿ

ಮುರೂರು ಧ್ವಾರಕಾನಗರ ಶ್ರೀಕೃಷ್ಣ ಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಒಂದೂವರೆ ಲಕ್ಷ ಅನುದಾನ ಮಂಜೂರು

ಮಂಡೆಕೋಲು ಗ್ರಾಮದ ಮುರೂರು ಧ್ವಾರಕಾನಗರದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ಕೃಷ್ಣ ಭಜನಾ ಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ರೂಪಾಯಿ ಒಂದೂವರೆ ಲಕ್ಷ ಧನಸಹಾಯ ಮಂಜೂರಾಗಿದ್ದು ಇದರ ಮಂಜೂರಾತಿ ಪತ್ರವನ್ನು ತಾಲೂಕು ಯೋಜನಾಧಿಕಾರಿಗಳಾದ ಮಾದವ ಗೌಡರವರು ವಿತರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಮಾಧವ ಗೌಡರವರು ಶ್ರೀ ಕ್ಷೇತ್ರ ಧರ್ಮಸ್ಥಳ ಚತುರ್ದಾನಗಳಿಗೆ ಹೆಸರುವಾಸಿಯಾಗಿದ್ದು ಕಳೆದ 800 ವರ್ಷಗಳಿಂದ ಕ್ಷೇತ್ರದಲ್ಲಿ ಅನ್ನದಾನ, ವಿಧ್ಯಾದಾನ,

ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ ಉದ್ಯಮಶೀಲತೆ ಮತ್ತು ನಾವೀನ್ಯತೆಯ ಕುರಿತು ಸಮೂಹ ಚರ್ಚೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜು(ಸ್ವಾಯುತ್ರ), ವ್ಯವಹಾರ ಆಡಳಿತ ವಿಭಾಗದ ಆಶ್ರಯದಲಿ.. “ಉದ್ರಮಶೀಲತೆ ಮತ್ತು ನಾವೀನ್ಯತೆಯ ಅನುಭವಾತ್ಮಕ ಸಮೂಹ ಚರ್ಚೆ” ಪ್ರಾಯೋಗಿಕ ತರಬೇತಿ ಕಾರ್ಯಕ್ರಮವನ್ನುಸಂಪನ್ಮೂಲ ವ್ಯಕ್ತಿಯಾದ ಜೇಸಿ ಕೃಷ್ಣಮೋಹನ್ ಅವರು ಮೊದಲಿಗೆ ಪದವಿ ಶಿಕ್ಷಣದ ನಂತರ ಸ್ಪರ್ಧಾತ್ಮಕ ಜಗತ್ತಿನಲಿ. ಮುಂದುವರೆಯಲು ಅಳವಡಿಸಿಕೊಳ್ಳಬೇಕಾದ ಜೀವನ ಮೌಲ್ಯಗಳು ಹಾಗೂ ಉದ್ಯೋಗವಕಾಶಗಳ ಬಗ್ಗೆ, ಅರಿತು ಭಾನ ಸಂಪಾದಿಸಲು ಇರುವ ಮೂಲಗಳ ಕುರಿತು

ಮಂಗಳೂರು : ಕಣಚೂರು ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳಿಂದ ಆರ್‌ಜಿಯುಎಚ್‌ಎಸ್ ವಿಶ್ವವಿದ್ಯಾಲಯದ ಪರೀಕ್ಷೆಗಳಲ್ಲಿ ಸಾಧನೆ

ಮಂಗಳೂರು : ಕಣಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಪದವಿಪೂರ್ವ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ (ಆರ್‌ಜಿಯುಎಚ್‌ಎಸ್) ಪರೀಕ್ಷೆಗಳಲ್ಲಿ ಗಮನಾರ್ಹ ಯಶಸ್ಸನ್ನು ಸಾಧಿಸಿದ್ದಾರೆ, ಈ ಸಾಧನೆಯು ಅವರ ಕಠಿಣ ಪರಿಶ್ರಮ, ದೃಢನಿಶ್ಚಯ ಮತ್ತು ಅವರ ಸಮರ್ಥ ಅಧ್ಯಾಪಕರ ಮಾರ್ಗದರ್ಶನದಿಂದ ಸಾಧ್ಯವಾಗಿದ್ದು, ಇದು ಸಂಸ್ಥೆಗೆ ಮತ್ತೊಂದು ಗೌರವವನ್ನು ತಂದಿದೆ. ಸ್ನಾತಕೋತ್ತರ ವಿಭಾಗದ ಸಾಧಕರು: 1. ಡಾ. ಬಿ.ಆರ್. ಚೇತನ್

ಏ.6ರಂದು ಬೆಂಗಳೂರಿನಲ್ಲಿ ವಿಸ್ಡಮ್ ಎಡ್ ಉದ್ಘಾಟನೆ

ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕೆ ಭದ್ರ ಬುನಾದಿಯನ್ನು ಹಾಕುತ್ತಿರುವ ವಿಸ್ಡಮ್ ಎಡ್ ಬೆಂಗಳೂರಿನಲ್ಲಿ ಶುಭಾರಂಭಗೊಳ್ಳಲಿದೆ. ಪಿಯುಸಿ, ಡಿಗ್ರಿ ನಂತರ ಉನ್ನತ ವ್ಯಾಸಂಗ ಅಥವಾ ಉದ್ಯೋಗ ಅರಸುವವರಿಗೆ ಸಿಹಿ ಸುದ್ದಿ ಎಂಬಂತೆ ವಿಸ್ಡಮ್ ಎಡ್ ಕೇಂದ್ರ ಬೆಂಗಳೂರಿನಲ್ಲೂ ತನ್ನ ಸೇವೆಯನ್ನು ಮುಂದುವರಿಸಲು ನಿರ್ಧರಿಸಿದೆ. ಬೆಂಗಳೂರಿನ ಐಟಿಐ ಲೇಔಟ್ ಸಮೀಪದ ನಂ.೩೯ ಫಸ್ಟ್ ಪ್ಲೋರ್‌ನಲ್ಲಿ ಏಪ್ರಿಲ್ 6ರಂದು ವಿಸ್ಡಮ್ ಎಡ್ ಸಂಸ್ಥೆ ಕಾರ್ಯಾರಂಭಗೊಳ್ಳಲಿದೆ. ಹೆಚ್ಚಿನ

ಕಾರ್ಕಳ: ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣದ ಆರೋಪಿ ದಿಲೀಪ್ ಹೆಗ್ಡೆಗೆ ಹೈಕೋರ್ಟ್ ಜಾಮೀನು ಮಂಜೂರು

ಕಾರ್ಕಳ: ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯ ದೆಪ್ಪುತ್ತೆ ಬಾಲಕೃಷ್ಣ ಪೂಜಾರಿ(44) ಕೊಲೆ ಪ್ರಕರಣದ ಆರೋಪಿ ದಿಲೀಪ್ ಹೆಗ್ಡೆ(28)ಗೆ ರಾಜ್ಯ ಹೈಕೋರ್ಟ್ ಜಾಮೀನು ನೀಡಿ ಆದೇಶಿಸಿದೆ. ದಿಲೀಪ್ ಹೆಗ್ಡೆ ಜಾಮೀನು ಅರ್ಜಿಯನ್ನು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಉಡುಪಿ ಸಂಚಾರಿ ಪೀಠ ಕಾರ್ಕಳ ಮಾರ್ಚ್ 4ರಂದು ತಿರಸ್ಕರಿಸಿದ್ದು, ಈ ಹಿನ್ನೆಲೆಯಲ್ಲಿ ಆರೋಪಿ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದನು. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿ

ಮೂಡುಬಿದಿರೆ : ವೃದ್ಧೆಯ ಕತ್ತಿನಿಂದ ಕರಿಮಣಿ ಸರ ಎಗರಿಸಿ ಪರಾರಿ

ದಾರಿ ಕೇಳುವ ನೆಪದಲ್ಲಿ ವೃದ್ಧೆಯೋವ೯ರ ಕುತ್ತಿಗೆಯಿಂದ 3-4 ಪವನಿನ ಕರಿಮಣಿ ಸರವನ್ನು ಎಗರಿಸಿದ ಘಟನೆ ಬೆಳುವಾಯಿ ಸಮೀಪ ಸೋಮವಾರ ನಡೆದಿದೆ.ಬೆಳುವಾಯಿ ಗ್ರಾಮದ ಕಾಯಿದೆ ಮನೆಯ ನಿವಾಸಿ ಎಪ್ಪತ್ತರ ಹರೆಯದ ಇಂದಿರಾ ಅವರು ಸೋಮವಾರದಂದು ತನ್ನ ಅಳಿಯ ಭಾಸ್ಕರ ಅವರ ಗೃಹಪ್ರವೇಶ ಮುಗಿಸಿಕೊಂಡು ಬೆಳುವಾಯಿ- ಕರಿಯಣಂಗಡಿ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದರು.ಈ ಸಂದರ್ಭದಲ್ಲಿ ಬೈಕ್ ನಲ್ಲಿ ಬಂದ ಅಪರಿಚಿತ ಯುವಕನೊಬ್ಬ ಬೆಳುವಾಯಿಗೆ ಹೋಗುವ ದಾರಿ ಯಾವುದು ‘ ಎಂದು