Home Archive by category Fresh News (Page 127)

ಪಾವಂಜೆ: ತುಳುನಾಡಿನ ಸಾಂಪ್ರದಾಯಿಕ ಕೆಡ್ಡಸ ಆಚರಣೆ: ನಂದಿನಿ ಕ್ರಿಕೆಟರ್ಸ್ ಅರಂದ್‌ದ ವಾರ್ಷಿಕೋತ್ಸವ

ನಂದಿನಿ ಕ್ರಿಕೆಟರ್ಸ್ ಅರಂದ್ ವತಿಯಿಂದ ತುಳುನಾಡಿನ ಸಾಂಪ್ರದಾಯಿಕ ಆಚರಣೆ, ಕೆಡ್ಡಸ ಹಾಗೂ ಸಂಘಟನೆಯ ವಾರ್ಷಿಕೋತ್ಸವವನ್ನು ನೆರವೇರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಮೇಶ್ ಪೂಜಾರಿ ಚೇಳಾಯರುರವರು ವಹಿಸಿ ಹಿರಿಯರು ನಡೆಸುತ್ತಾ ಬಂದ ಸಂಸ್ಕೃತಿ ಸಂಸ್ಕಾರಗಳನ್ನು ಉಳಿಸಿಕೊಳ್ಳುವ ಯುವ ಸಂಘಟನೆಯ ಪಾತ್ರ ನಿಜಕ್ಕೂ ಶ್ಲಾಘನೀಯ ಎಂಬ ಅಭಿಪ್ರಾಯವನ್ನು

ಬಿಜೆಪಿಯಿಂದ “ಸಮಪ೯ಣಾ ದಿನ” ಆಚರಣೆ

ಮೂಡುಬಿದಿರೆ: ಸ್ವಯಂಸೇವಕ ಸಂಘದ ಸ್ವಯಂಸೇವಕರಾಗಿ ತಮ್ಮ ಜೀವನವನ್ನು ರಾಷ್ಟ್ರ ನಿರ್ಮಾಣಕ್ಕೆ ಸಮರ್ಪಿಸಿ ದೇಶದ ಯುವಜನತೆಗೆ ಮಾರ್ಗದರ್ಶಿಯಾದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಪುಣ್ಯತಿಥಿಯ “ಸಮರ್ಪಣಾ ದಿನವನ್ನು” ಭಾರತೀಯ ಜನತಾ ಪಾರ್ಟಿ ಮುಲ್ಕಿ-ಮೂಡುಬಿದಿರೆ ಮಂಡಲ ಹಾಗೂ ಮೂಡುಬಿದಿರೆ ಮಹಾಶಕ್ತಿಕೇಂದ್ರದ ವತಿಯಿಂದ ಬಿಜೆಪಿ ಕಚೇರಿಯಲ್ಲಿ ಆಚರಿಸಲಾಯಿತು. ಈ ಸಂಧರ್ಭದಲ್ಲಿ ಮೂಡುಬಿದಿರೆ ಮಹಾಶಕ್ತಿಕೇಂದ್ರ ಅಧ್ಯಕ್ಷ ಲಕ್ಷ್ಮಣ್ ಪೂಜಾರಿ, ಮಂಡಲ ಪ್ರಧಾನ

ಮೂಡುಬಿದಿರೆ:ಪುರಸಭೆಯ ಪೌರಕಾಮಿ೯ಕೆ ಆತ್ಮಹತ್ಯೆ

ಮೂಡುಬಿದಿರೆ : ಇಲ್ಲಿನ ಪುರಸಭೆಯ ಪೌರ ಕಾಮಿ೯ಕೆಯೋವ೯ರು ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುರಸಭಾ ವ್ಯಾಪ್ತಿಯ ಬಿರಾವಿನಲ್ಲಿ ಮಂಗಳವಾರ ನಡೆದಿದೆ.ಬಿರಾವು ಅರಂತ ಕಂಪೌಂಡ್ ನ ನಿವಾಸಿ ದಿ. ಚಂದ್ರಹಾಸ್ ಅವರ ಪತ್ನಿ ಯಶೋಧ (43ವ) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಈಕೆ ಕಳೆದ ಕೆಲವು ವರುಷಗಳಿಂದ ಪೌರಕಾಮಿ೯ಕೆಯಾಗಿ ಪುರಸಭೆಯಲ್ಲಿ ದುಡಿಯುತ್ತಿದ್ದು ಎರಡು ವಷ೯ಗಳ ಹಿಂದೆ ಹುದ್ದೆ ಖಾಯಂ ಆಗಿತ್ತು.ಇವರಿಗೆ ಇಬ್ಬರು ಗಂಡು ಮಕ್ಕಳಿದ್ದು ಓವ೯ ಕಾಲೇಜು

ಮೂಡುಬಿದಿರೆ: ಗುತ್ತಿಗೆದಾರ ಜಯ ಮೇಸ್ತ್ರಿ ನಿಧನ

ಮೂಡುಬಿದಿರೆ: ಇಲ್ಲಿನ ಪ್ರಸಿದ್ಧ ಕಟ್ಟಡಗಳ ಹಾಗೂ ಹಲವಾರು ಖ್ಯಾತನಾಮರ ಮನೆಗಳ ಕೆಲಸಗಳನ್ನು ಎಂಜಿನಿಯರ್ ನಂತೆ ಅಚ್ಚುಕಟ್ಟಾಗಿ ನಿಮಿ೯ಸಿ ಕೊಟ್ಟು ಜಯ ಮೇಸ್ತ್ರಿ ಎಂದೇ ಮೂಡುಬಿದಿರೆ ಪರಿಸರದಲ್ಲಿ ಖ್ಯಾತರಾಗಿದ್ದ ಸಂಪಿಗೆ ಕೋಂಟಡ್ಕ ನಿವಾಸಿ ಜಯ ಗೌಡ (68) ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ ನಿಧನರಾಗಿದ್ದಾರೆ. ಇತ್ತೀಚೆಗೆ ಮೂಡುಬಿದಿರೆ ಕನ್ನಡಭವನದಲ್ಲಿ ನಡೆದಿದ್ದ ‘ತುಳುವೆರ್ ಬೆದ್ರ’ ಸಂಘಟನೆಯ ನಾಟಕ ಪ್ರದರ್ಶನ ವೇಳೆ ಜಯ ಮೇಸ್ತ್ರಿ ಅವರನ್ನು

ಮಂಜೇಶ್ವರ: ವ್ಯಕ್ತಿಯೋರ್ವನನ್ನು ಇರಿದು ಕೊಲೆ

ಮಂಜೇಶ್ವರ : ವ್ಯಕ್ತಿಯೋರ್ವನನ್ನು ಕಡಿದು ಕೊಲೆ ಮಾಡಿದ ಘಟನೆ ಮಂಜೇಶ್ವರದ ಉಪ್ಪಳದಲ್ಲಿ ನಡೆದಿದೆ. ಕಣ್ಣೂರು ಪಯ್ಯನ್ನೂರು ನಿವಾಸಿ ಹಾಗೂ ಉಪ್ಪಳ ಮೀನು ಮಾರುಕಟ್ಟೆ ಸಮೀಪದ ಫ್ಲಾಟಿನ ನೌಕರನಾಗಿರುವ ಸುರೇಶ್ ಕುಮಾರ್ (48) ಸಾವನ್ನಪ್ಪಿದ ದುರ್ದೈವಿ. ಮಂಗಳವಾರ ರಾತ್ರಿ ಉಪ್ಪಳ ಮೀನು ಮಾರುಕಟ್ಟೆ ಪರಿಸರದಲ್ಲಿ ಈ ದುಷ್ಕೃತ್ಯ ನಡೆದಿದೆ. ಘಟನೆಗೆ ಸಂಬಂಧಿಸಿ ಉಪ್ಪಳ ಫತ್ವಾಡಿ ಕಾರ್ಗಿಲ್ ನಿವಾಸಿ ಸವಾದ್( 23) ಎಂಬಾತನನ್ನು ಮಂಜೇಶ್ವರ ಪೊಲೀಸರು  ವಶಕ್ಕೆ ತೆಗೆದಿದ್ದಾರೆ.

ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ : ಅಧ್ಯಕ್ಷರಾಗಿ ಕೆ.ಸಿ.ಸದಾನಂದ,ಉಪಾಧ್ಯಕ್ಷರಾಗಿ ದಿನೇಶ್ ಮಡಪ್ಪಾಡಿ ಆಯ್ಕೆ

ಸುಳ್ಯ: ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ – ಆಪರೇಟಿವ್ ಸೊಸೈಟಿ ನೂತನ ಅಧ್ಯಕ್ಷರಾಗಿ ಕೆ.ಸಿ.ಸದಾನಂದ ಹಾಗೂ ಉಪಾಧ್ಯಕ್ಷರಾಗಿ ದಿನೇಶ್ ಮಡಪ್ಪಾಡಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಇಂದು ನಡೆದ ಅಧ್ಯಕ್ಷ – ಉಪಾಧ್ಯಕ್ಷ ಸ್ಥಾನಕ್ಕೆ ಒಂದೊಂದೇ ನಾಮಪತ್ರ ಸಲ್ಲಿಕೆಯಾದ ಕಾರಣ ಅವಿರೋಧ ಆಯ್ಕೆ ನಡೆಯಿತು. ಸಹಕಾರ ಇಲಾಖೆಯ ಶೋಭಾ ಎನ್.ಎಸ್. ಚುನಾವಣಾಧಿಕಾರಿಯಾಗಿದ್ದರು.ನಿರ್ದೇಶಕರಾದ ಪಿ.ಸಿ.ಜಯರಾಮ, ಎ.ವಿ.ತೀರ್ಥರಾಮ, ಜಾಕೆ ಸದಾನಂದ ಗೌಡ, ಚಂದ್ರಾ ಕೋಲ್ಚಾರ್,

ಮಂಗಳೂರು : ಶಕ್ತಿನಗರ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಬಾಲಾಲಯ ಪ್ರತಿಷ್ಠೆ

ಮಂಗಳೂರು : ಶಕ್ತಿನಗರ ಶ್ರೀ ಕೃಷ್ಣ ಭಜನಾ ಮಂದಿರದ ರಜತಮಹೋತ್ಸವದ ಪ್ರಯುಕ್ತ ನಡೆಯಲಿರುವ ಬ್ರಹ್ಮಕಲಶೋತ್ಸವ ಹಾಗೂ ಪುನಃಪ್ರತಿಷ್ಠೆ ಕಾರ್ಯಕ್ರಮಗಳಿಗೆ ಪೂರ್ವಭಾವಿಯಾಗಿ ಬಾಲಾಲಯ ಪ್ರತಿಷ್ಠೆಯು ಸೋಮವಾರ ಶ್ರೀ ಕ್ಷೇತ್ರದಲ್ಲಿ ನಡೆಯಿತು. ಪ್ರಾತಃಕಾಲ ಬ್ರಹ್ಮಶ್ರೀ ಕದ್ರಿ ಕೃಷ್ಣ ಅಡಿಗರ ನೇತೃತ್ವದಲ್ಲಿ ಗಣಪತಿ ಹೋಮ, ಮೃತ್ಯುಂಜಯ ಹೋಮ ನಡೆದು, ಸಾನಿಧ್ಯದಲ್ಲಿ ಸಂಕೋಚದ ವಿಧಿ ವಿಧಾನಗಳನ್ನು ನಡೆಸಿ ಶ್ರೀ ಕೃಷ್ಣದೇವರನ್ನು ಬಾಲಾಲಯದಲ್ಲಿ ಪ್ರತಿಷ್ಠಾಪಿಸಲಾಯಿತು. ನಂತರ

ಅಪ್ಪಣ್ಣ ಕಟ್ಟೆಯ ಶೆಟ್ಟಿ ಆಟೋ ಪಾರ್ಕ್ ಮೇಲ್ಛಾವಣಿ ಅಭಿವೃದ್ಧಿ – ಶಾಸಕ ವೇದವ್ಯಾಸ ಕಾಮತ್ ಉದ್ಘಾಟನೆ

ನಗರದ ಅಪ್ಪಣ್ಣ ಕಟ್ಟೆಯ ಶೆಟ್ಟಿ ಆಟೋ ಪಾರ್ಕ್ ನ ಮೇಲ್ಛಾವಣಿಯನ್ನು ಶಾಸಕರ ನಿಧಿಯಲ್ಲಿ ಅಭಿವೃದ್ಧಿ ಪಡಿಸಲಾಗಿದ್ದು ಶಾಸಕ ವೇದವ್ಯಾಸ ಕಾಮತ್ ರವರು ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು, ಮಂಗಳೂರು ಮಹಾನಗರ ಪಾಲಿಕೆಯ 41ನೇ ಸೆಂಟ್ರಲ್ ವಾರ್ಡಿನ ವ್ಯಾಪ್ತಿಯ ಈ ಆಟೋ ಪಾರ್ಕ್ ಜಿಲ್ಲೆಯ ಅತೀ ಹಳೆಯ ನಿಲ್ದಾಣಗಳಲ್ಲಿ ಒಂದಾಗಿದ್ದು ಸಾರ್ವಜನಿಕರಿಗೆ ಅತ್ಯುತ್ತಮ ಸೇವೆ ಒದಗಿಸುತ್ತಾ ಬಂದಿದೆ. ದಿನನಿತ್ಯ ದುಡಿಯುವ ಆಟೋ ಚಾಲಕರದ್ದು ಶ್ರಮಿಕ ವರ್ಗವಾಗಿದ್ದು ಅವರುಗಳು

ಮೂಡುಬಿದಿರೆ : 2ನೇ ವಷ೯ದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

ಮೂಡುಬಿದಿರೆ : ಶ್ರೀ ಇಟಲ ಬಾಕ್ಯಾರ್ ಫ್ರೆಂಡ್ಸ್ ದರೆಗುಡ್ಡೆ ಇದರ ವತಿಯಿಂದ ದಿ |ಬಿ. ಜಯರಾಜ್ ಕೆಲ್ಲಪುತ್ತಿಗೆ ಅರಮನೆ ಇವರ ಸ್ಮರಣಾರ್ಥ 2ನೇ ವರ್ಷದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಶನಿವಾರ ನಡೆಯಿತು.ರಾಜವರ್ಮ ಬೈಲಂಗಡಿ ಹಾಗೂ ರಾಜೇಂದ್ರ ಬೈಲಂಗಡಿ ಪೆರಿಂಜೆ ಅವರು ಪಂದ್ಯಾಟವನ್ನು ಉದ್ಘಾಟಿಸಿ ಶುಭ ಹಾರೈಸಿದರು. ದರೆಗುಡ್ಡೆ ಗ್ರಾಮ ಪಂಚಾಯತ್ ನ ಅಧ್ಯಕ್ಷ ಅಶೋಕ್ ಶೆಟ್ಟಿ ಬೇಲೊಟ್ಟು ಅಧ್ಯಕ್ಷತೆಯಲ್ಲಿ ನಡೆದ ಕಾಯ೯ಕ್ರಮದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ

ಮೂಡುಬಿದಿರೆ : ತರಕಾರಿ ಮಾರುಕಟ್ಟೆಯ ಸುಂಕ ವಸೂಲಿ ಗುತ್ತಿಗೆ ರದ್ದು ಪಡಿಸಿದ ಪುರಸಭೆ

ಮೂಡುಬಿದಿರೆ : ಇಲ್ಲಿನ ಪುರಸಭಾ ವ್ಯಾಪ್ತಿಯ ಸ್ವರಾಜ್ಯ ಮೈದಾನದಲ್ಲಿ ಕಾಯ೯ಚರಿಸುತ್ತಿದ್ದ ದಿನವಹಿ ತಾತ್ಕಾಲಿಕ ತರಕಾರಿ ಮಾರುಕಟ್ಟೆಯ ವರಿ ವಸೂಲಿನ ಗುತ್ತಿಗೆಯನ್ನು ಪುರಸಭೆಯು ಸೋಮವಾರ ಸಂಜೆ ರದ್ದುಪಡಿಸಿದೆ.ಕಳೆದ ಡಿಸೆಂಬರ್ 20 ರಂದು ನಡೆದಿದ್ದ ದಿನವಹಿ ತಾತ್ಕಾಲಿಕ ತರಕಾರಿ ಮಾರುಕಟ್ಟೆಯ ಬಹಿರಂಗ ಏಲಂ ಪ್ರಕ್ರಿಯೆಯಲ್ಲಿ ನಿಡ್ಡೋಡಿಯ ಸುಂದರ ಪೂಜಾರಿ ಅವರು ಅತೀ ಹೆಚ್ಚು ಬಿಡ್ಡು ( 42,00,350) + 7,56,073 ( 18% ಜಿ.ಎಸ್.ಟಿ)ದಾರರಾಗಿ ವರಿವಸೂಲಿನ ಹಕ್ಕನ್ನು