Home Archive by category Fresh News (Page 135)

ಕುಕ್ಕೆ:ಮಾ.24ರಂದು ಮಾಂಗಲ್ಯ ಭಾಗ್ಯ ಸರಳ ಸಾಮೂಹಿಕ ವಿವಾಹ:ಅರ್ಜಿಆಹ್ವಾನ

ಕಡಬ : ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ನಾಗಾರಾಧನೆಯ ಪುಣ್ಯ ತಾಣ ಮತ್ತು ರಾಜ್ಯದ ನಂಬರ್ ವನ್ ಆದಾಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾ.24ರಂದು ಜನಸಾಮಾನ್ಯರ ಅನುಕೂಲಕ್ಕಾಗಿ ಸರಳ ಸಾಮೂಹಿಕ ವಿವಾಹ ಮಾಂಗಲ್ಯ ಭಾಗ್ಯ ನಡೆಯಲಿದೆ. ಸಾಮೂಹಿಕ ವಿವಾಹವಾಗಲು ಬಯಸುವವರು ಶ್ರೀ ದೇವಳದ ಕಚೇರಿಯಿಂದ ಅರ್ಜಿ ಫಾರಂ

ಮೂಡುಬಿದಿರೆ: 25 ಗೂಡಂಗಡಿಗಳಿಂದ ಕಳವು ಗೈದ ಆರೋಪಿಗಳನ್ನು ಬಂಧಿಸಿದ ಮೂಡುಬಿದಿರೆ ಪೊಲೀಸರು

ಮೂಡುಬಿದಿರೆ: ಕಳೆದ 3 ವರುಷಗಳಿಂದ ವಿವಿಧ ಕಡೆಗಳಲ್ಲಿರುವ 25 ಗೂಡಂಗಡಿಗಳಿಂದ ಅಂದಾಜು 3,55,000/- ಮೌಲ್ಯದ ವಸ್ತುಗಳನ್ನು ಕಳವುಗೈದಿರುವ ಆರೋಪಿಗಳನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ನಿಡ್ಡೋಡಿಯ ನೀರುಡೆ ನಿವಾಸಿ ರೋಶನ್ ವಿಲ್ಸನ್ ಕ್ವಾಡ್ರಸ್, ಕೊಂಪದವು ನೆಲ್ಲಿ ತೀರ್ಥದ ನಿವಾಸಿ ನಿಶಾಂಕ್ ಪೂಜಾರಿ, ತೆಂಕು ಎಕ್ಕಾರು ಗ್ರಾಮದ ನಿವಾಸಿ ರೋಹಿತ್ ಮಸ್ಕರೇನಸ್ ಬಂಧಿತ ಕಳ್ಳರು. ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಪುತ್ತಿಗೆ ಗ್ರಾಮದ ಮುಲ್ಕಿ ಕ್ರಾಸ್

ಮಹಾ ಕುಂಭಮೇಳದಲ್ಲಿ ಕನ್ನಡಿಗರ ಪಾತ್ರ – ಪ್ರಮುಖ ದ್ವಾರಗಳಿಗೆ ಲೆಕ್ಸಾ ದೀಪಾಲಂಕಾರ

ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭಮೇಳ ನಡೆಯುತ್ತಿದ್ದು, ಪುಣ್ಯಭೂಮಿಗೆ ಪ್ರವೇಶಿಸುವ ಮುಖ್ಯದ್ವಾರಗಳಾದ ಗಂಗಾ ದ್ವಾರ, ಯಮುನಾ ದ್ವಾರ ಹಾಗೂ ಸರಸ್ವತಿ ದ್ವಾರಗಳಿಗೆ ದೀಪಾಲಂಕಾರ ಮಾಡುವ ಸದಾವಕಾಶ ದೇಶಾದ್ಯಂತ ದೀಪಾಲಂಕಾರದ ಮೂಲಕವೇ ಹೆಸರುವಾಸಿಯಾದ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯ ಲೆಕ್ಸಾ ಲೈಟಿಂಗ್ ಸಂಸ್ಥೆಗೆ ದೊರೆತಿದೆ. ಪ್ರಸ್ತುತ ಪ್ರಯಾಗರಾಜ್ ದಲ್ಲಿ ಪ್ರಾರಂಭಗೊಂಡಿರುವುದು 12 ವರ್ಷಕ್ಕೊಮ್ಮೆ ನಡೆಯೋ ಕುಂಭಮೇಳವಲ್ಲ, ಶತಮಾನಗಳಿಗೊಮ್ಮೆ

ಮೂಡುಬಿದಿರೆ :ವಿಶ್ರಾಂತ ಮುಖ್ಯ ಶಿಕ್ಷಕ ಫಣಿರಾಜ್ ಜೈನ್ ನಿಧನ

ಮೂಡುಬಿದಿರೆ : ತಾಲೂಕಿನ ಪಡುಮಾರ್ನಾಡು ಪ್ರೀತಿ ನಿವಾಸದ ವಿಶ್ರಾಂತ ಮುಖ್ಯ ಶಿಕ್ಷಕ ಫಣಿರಾಜ ಜೈನ್(67ವ.) ಜ13ರಂದು ರಾತ್ರಿ ನಿಧನರಾದರು.ಪತ್ನಿ ಮೂವರು ಪುತ್ರಿಯರು ಹಾಗು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಬೆಳುವಾಯಿ ಬಂಗ್ಲೆ ಶಾಲೆ ಕೆಸರ್ ಗದ್ದೆ ಮೈನ್ ಶಾಲೆ ಮುಖ್ಯ್ಯೊ ಪಾಧ್ಯಾಯರಾಗಿ ಗುರುಪುರ, ಸುಳ್ಯ, ಮಡಿಕೇರಿ ಪ್ರೌಢಶಾಲೆ ಶಿಕ್ಷಕ ರಾಗಿ, ಸಾಕ್ಷರತ ಅಂದೋಲನ, ಮುಂದುವರಿಕ ಶಿಕ್ಷಣ ಕೇಂದ್ರಗಳಲ್ಲಿ ಸೇವೆ ಸಲ್ಲಿಸಿದ್ದರು. ಮಾರ್ನಾಡು ಶ್ರೀ ವರ್ಧಮಾನ ಸ್ವಾಮಿ

ಮಂಜೇಶ್ವರ: ಕುಂಬಳೆಯಲ್ಲಿ ಕಾರು ಅಪಘಾತ : ಮಹಿಳೆ ಸಾವು

ಮಂಜೇಶ್ವರ: ಸೋಮವಾರ ಮಧ್ಯಾಹ್ನ ಮಟ್ಟಂ ಶಿರಿಯಾ ಬಳಿ ನಡೆದ ವಾಹನ ಅಪಘಾತದಲ್ಲಿ ಗಾಯಗೊಂಡ 62 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ ಕಾಇಾಂಗಾಡಿನ ಕೊವ್ವಲ್ಪಳ್ಳಿ ಮಾನ್ಯಾಟ ವಿಷ್ಣುಮೂರ್ತಿ ದೇವಸ್ಥಾನದ ಬಳಿ ನಿವಾಸಿ ನಫೀಸ (62) ಸಾವನ್ನಪ್ಪಿದ ದುರ್ದೈವಿ. ಅಪಘಾತದಲ್ಲಿ ತೀವ್ರ ಗಾಯಗೊಂಡ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವು ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡ ಇತರ ನಾಲ್ಕು ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ಮಂಗಳೂರು: ಜ.19ರಂದು ಮಂಗಳೂರಿನಲ್ಲಿ “ವಿಶಿಷ್ಟರಿಗಾಗಿ ವಿಶಿಷ್ಟ ಮೇಳ”

ಮಂಗಳೂರು: ಸೇವಾ ಭಾರತಿ(ರಿ) ಮಂಗಳೂರು ಕಳೆದ 33 ವರ್ಷಗಳಿಂದ ದಿವ್ಯಾಂಗರ ಜೀವನ ಸ್ತರ ಸುಧಾರಿಸಲು ಶ್ರಮಿಸುತ್ತಿದೆ. ತನ್ನ ಅಂಗಸಂಸ್ಥೆಗಳ ಮೂಲಕ ಅವರಿಗೆ ಅವಶ್ಯವಿರುವ ಶಿಕ್ಷಣ, ತರಬೇತಿ, ಚಿಕಿತ್ಸೆ ಇತ್ಯಾದಿ ಈ ಪೈಕಿ 1998ರಲ್ಲಿ ಸೌಕರ್ಯಗಳನ್ನು ಒದಗಿಸಿಕೊಟ್ಟು ತನ್ನ ಸೇವಾ ವ್ಯಾಪ್ತಿಯನ್ನು ವಿಸ್ತರಿಸುತ್ತಿದೆ. ಆರಂಭವಾದ “ಆಶಾಜ್ಯೋತಿ”ಯೂ ಒಂದು. ಆಶಾಜ್ಯೋತಿಯು ದಿವ್ಯಾಂಗರು ಮತ್ತು ಅವರ ಹೆತ್ತವರ ಒಂದು ವೇದಿಕೆ. ಅದು ಈ ಕೆಳಗಿನ ಚಟುವಟಿಕೆಗಳನ್ನು ನಡೆಸುವ

ಮೂಡುಬಿದಿರೆ: ಸಮಾಜ ಸೇವಕ, ಹೊಸಂಗಡಿ ಗ್ರಾಂ.ಪಂ.ಮಾಜಿ ಅಧ್ಯಕ್ಷ ಹರಿಪ್ರಸಾದ್ ನಿಧನ

ಮೂಡುಬಿದಿರೆ: ಸಮಾಜ ಸೇವಕ, ಹೊಸಂಗಡಿ ಗ್ರಾ.ಪಂ.ನ ಮಾಜಿ ಅಧ್ಯಕ್ಷ, ಪ್ರಸ್ತುತ ಸದಸ್ಯರಾಗಿರುವ ಹರಿಪ್ರಸಾದ್ ಅವರು ಹೃದಯಾಘಾತದಿಂದ ಭಾನುವಾರ ನಿಧನ ಹೊಂದಿದರು. ಹೊಸಂಗಡಿ ನಿವಾಸಿಯಾಗಿರುವ ಅವರು ಹರಿಯಣ್ಣ ಎಂದೇ ಚಿರಪರಿಚಿತರಾಗಿದ್ದರು. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಧರಣೇಂದ್ರ ಕುಮಾರ್ ಅವರ ಸಹೋದರ. ಪೆರಾಡಿ ಸೊಸೈಟಿ ಬ್ಯಾಂಕ್ ನಿರ್ದೇಶಕರಾಗಿ ಸೇವೆ ಸಲ್ಲಿಸಿರುವುದು ಮಾತ್ರವಲ್ಲದೆ ಹಲವಾರು ಸಮಾಜಮುಖಿ ಸಂಘ ಸಂಸ್ಥೆಗಳಲ್ಲಿ ತನ್ನನ್ನು ಸಕ್ರಿಯವಾಗಿ

ಮೂಲ್ಕಿ : ಕ್ಯಾನ್ ಕೋಸ್ ಗಿವ್ ವೇ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

ಮೂಲ್ಕಿಯ ಕ್ಯಾನ್ ಕೋಸ್ ಡ್ರೈ ಫ್ರುಡ್ಸ್ ಸ್ಟೋರ್ ಮೂಲ್ಕಿ ಯಲ್ಲಿ ಕ್ಯಾನ್ ಕೋಸ್ ಗಿವ್ ವೇ ಎಂಬ ಸ್ಪರ್ಧೆಯನ್ನು ಸೋಶಿಯಲ್ ಮೀಡಿಯಾ ಕಾಂಪೊಸಿವ್ ನಲ್ಲಿ ಏರ್ಪಡಿಸಲಾಗಿತ್ತು ಇದಕ್ಕೆ ಸಂಬಂಧ ಪಟ್ಟ ಹತ್ತಿರದ ಉತ್ತರವನ್ನು ನೀಡಿದ ಆಯುಷ್ ಪೂಜಾರಿ ಯವರು ವಿಜೇತರಾದರು. ಪ್ರಶಸ್ತಿಯನ್ನು ಮೂಲ್ಕಿಯ ಲಯನ್ಸ್ ಕ್ಲಬ್ ಅಧ್ಯಕ್ಷರಾದ ರೊಲ್ಪಿ ಡಿ’ಕೊಸ್ತ ವಿಜೇತರಿಗೆ ಪ್ರಶಸ್ತಿಯನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸದಾಶಿವ ಕೋಟ್ಯಾನ್ ಫಲಿಮಾರು,ಉದಯ ಅಮೀನ್

ಪುತ್ತೂರು : ‘ಇಲ್ಲಗೊಂಜಿ ಗೇನೊದ ಬಂಡಾರ’ – ತುಳು ಅಕಾಡೆಮಿಯ ಮನೆ ಮನೆ ಗ್ರಂಥಾಲಯ ಅಭಿಯಾನಕ್ಕೆ ಚಾಲನೆ

ಕರ್ನಾಟ‌ಕ ತುಳು ಸಾಹಿತ್ಯ ಅಕಾಡೆಮಿಯು ಹಮ್ಮಿಕೊಂಡಿರುವ ‘ಇಲ್ಲಗೊಂಜಿ ಗೇನೊದ‌ ಬಂಡಾರ’ ( ಮನೆಗೊಂದು ತುಳು ಗ್ರಂಥಾಲಯ) ಅಭಿಯಾನಕ್ಕೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಕೋಡಿಂಬಾಡಿಯ ಮನೆಯಲ್ಲಿ ಶನಿವಾರ ಚಾಲನೆ‌ ನೀಡಲಾಯಿತು. ಅಕಾಡೆಮಿ ಪ್ರಕಟಿಸಿದ ಹಾಗೂ ಇತರ ತುಳು ಪುಸ್ತಕಗಳು ಸೇರಿದಂತೆ ಹತ್ತು ಸಾವಿರ ರೂಪಾಯಿ ಮೌಲ್ಯದ 150 ಕೃತಿಗಳನ್ನು ಖರೀದಿಸುವ ಮೂಲಕ ಅಶೋಕ್ ರೈ ಅವರು ‘ಇಲ್ಲಗೊಂಜಿ ಗೇನೊದ ಬಂಡಾರ’ ಅಭಿಯಾನಕ್ಕೆ

ಪುತ್ತೂರು: ನಿರೂಪಕರಾದ ಬಾಲಕೃಷ್ಣ ರೈ ಪೊರ್ದಾಲ್ ರವರಿಗೆ ಪುತ್ತೂರು ತಾಲೂಕು ಯುವ ಪ್ರಶಸ್ತಿ

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪುತ್ತೂರು, ತಾಲೂಕು ಯುವಜನ ಒಕ್ಕೂಟ ಪುತ್ತೂರು ಇವುಗಳ ಸಹಯೋಗದೊಂದಿಗೆ ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ಕೊಡಮಾಡುವ ಪುತ್ತೂರು ತಾಲೂಕು ಯುವ ಪ್ರಶಸ್ತಿಗೆ ಖ್ಯಾತ ನಿರೂಪಕರಾದ ಬಾಲಕೃಷ್ಣ ರೈ ಪೊರ್ದಾಲ್ ಆಯ್ಕೆಯಾಗಿದ್ದಾರೆ. ಪುತ್ತೂರು ದರ್ಬೆ ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ಸಹಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್ ಇವರು ಬಹುಮುಖ ಪ್ರತಿಭಾವಂತ ಯುವ ಸಾಧಕರು.ರಂಗ