Home Archive by category Fresh News (Page 138)

ಮಂಗಳೂರು: ವಿನೂತನ ಸೌಲಭ್ಯದೊಂದಿಗೆ ಎಸ್ ಸಿಡಿಸಿಸಿ ಬ್ಯಾಂಕ್ ಕಲ್ಲಡ್ಕ ಶಾಖೆ ಲೋಕಾರ್ಪಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಇದರ ಕಲ್ಲಡ್ಕ ಶಾಲೆಯು ಹಲವು ವಿನೂತನ ಸೌಲಭ್ಯದೊಂದಿಗೆ ಮುಖ್ಯರಸ್ತೆಯಲ್ಲಿರುವ ಕಾವೇರಿ ಸಂಕೀರ್ಣದ ನೆಲ ಅಂತಸ್ತಿಗೆ ಸೋಮವಾರ ಸ್ಥಳಾಂತರಗೊಂಡಿತು. ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರು ದೀಪ ಬೆಳಗಿಸುವ ಮೂಲಕ ಶಾಖೆಯನ್ನು ಉದ್ಘಾಟಿಸಿದರು. ಬಳಿಕ ಮಾತಾಡಿದ ಅವರು, “ಅವಿಭಜಿತ

ಗಂಗೊಳ್ಳಿ ಮೀನುಗಾರಿಕಾ ಬಂದರು ಆಧುನಿಕರಣ ಆಡಳಿತ ಮಂಜೂರಾತಿ : ಶಾಸಕ ಗುರುರಾಜ್‌ ಗಂಟಿ ಹೊಳೆ

ಬೈಂದೂರು: ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿಯಲ್ಲಿ ಹಾಲಿ ಇರುವ ಮೀನುಗಾರಿಕೆ ಬಂದರುಗಳು ಆಧುನಿಕರಣ ಹಾಗೂ ಇನ್ನಿತರ ನಿರ್ವಹಣೆ ಕಾಮಗಾರಿಗಳಿಗೆ ರಾಜ್ಯ ಸರ್ಕಾರದಿಂದ ಆಡಳಿತ ಅನುಮೋದನೆ ನೀಡಲಾಗಿದೆ ಎಂದು ಶಾಸಕ ಗುರುರಾಜ್‌ ಗಂಟಿಹೊಳೆ ತಿಳಿಸಿದರು.ಕುಂದಾಪುರ ತಾಲೂಕಿನ ಗಂಗೊಳ್ಳಿ ಮೀನುಗಾರಿಕಾ ಬಂದರಿನ 22.18 ಕೋಟಿ ರೂ. ಅಂದಾಜು ಮೊತ್ತದ ಮೂಲ ಸೌಕರ್ಯ ಕಾಮಗಾರಿಗಳಿಗೆ ಕೇಂದ್ರದ ಅನುಮೋದನೆ ಆಗಿದ್ದು ರಾಜ್ಯ ಸರ್ಕಾರದ ಆಡಳಿತ ಅನೋಮೋದನೆ ಬಾಕಿ

ಬೈಂದೂರು ಕ್ಷೇತ್ರಕ್ಕೆ ಹೊಸ ಸರ್ಕಾರಿ ಗೋ ಶಾಲೆ ಮಂಜೂರಾತಿಗೆ ಆಗ್ರಹ

ಬೈಂದೂರು: ಪತ್ರಿಕೆ ಗಳಲ್ಲಿ ವರದಿ ಆದಂತೆ ಗೋಶಾಲೆ ಗಳಿಗೆ ಅಗತ್ಯ ಪ್ರಮಾಣದಲ್ಲಿ ಗೋವುಗಳು ಬರುತ್ತಿಲ್ಲ ಹಾಗಾಗಿ ಹೊಸ ಗೋಶಾಲೆ ಗಳನ್ನು ನಿರ್ಮಿಸುವ ಬದಲು ಈಗಿರುವ ಗೋಶಾಲೆ ಗಳನ್ನು ಬಲವರ್ಧನೆ ಮಾಡುತ್ತೇವೆ ಎಂಬ ಸಚಿವರು ನೀಡಿರುವ ಹೇಳಿಕೆ ಹಾಗೂ ಸ್ಪಷ್ಟೀಕರಣಕ್ಕೆ ಶಾಸಕ ಗುರುರಾಜ್‌ ಗಂಟೊಹೊಳೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈಗಾಗಲೇ ಇರುವ ಗೋಶಾಲೆ ಗಳಿಗೆ ಗೋವುಗಳು ಬರುತ್ತಿಲ್ಲ ಎಂದು ಎಲ್ಲಾ ಜಿಲ್ಲೆಗಳಿಗೂ ಅನ್ವಯವಾಗುವಂತೆ ಹೇಳಿಕೆ ಸರಿಯಲ್ಲ ಉಡುಪಿ ಜಿಲ್ಲೆಯಲ್ಲಿ

ಬೈಂದೂರು: ಗುಡ್ಡಮ್ಮಾಡಿ ಶ್ರೀ ಸುಬ್ರಹ್ಮಣ್ಯ ದೇವರ ಷಷ್ಠಿ ಮಹೋತ್ಸವ ಸಂಪನ್ನ

ಬೈಂದೂರು: ಸೌಪರ್ಣಿಕ ನದಿ ತಟದಲ್ಲಿರುವ ರಮ್ಯ ರಮಣೀಯ ತಾಣವೇ ಶ್ರೀ ಕ್ಷೇತ್ರ ಗುಡ್ಡಮ್ಮಾಡಿ.ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಪ್ರಸಿದ್ಧ ಶ್ರೀ ಕ್ಷೇತ್ರ ಗುಡ್ಡಮ್ಮಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ಷಷ್ಠಿ ಮಹೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಭಾನುವಾರ ನಡೆಯಿತು. ಷಷ್ಠಿ ಮಹೋತ್ಸವ ಕಾರ್ಯಕ್ರಮದ ಪ್ರಯುಕ್ತ ಸಂತಾನ ಕಾರಕನಾದ ಶ್ರೀ ಸುಬ್ರಹ್ಮಣ್ಯ ದೇವರಿಗೆ ಹೂವಿನ ಅಲಂಕಾರ

ಮೂಡುಬಿದಿರೆ: ಬ್ಯಾಟರಿ ಕಳವು ಪ್ರಕರಣ – 4 ಬ್ಯಾಟರಿ ಸಹಿತ ಇಬ್ಬರು ಆರೋಪಿಗಳ ಬಂಧನ

ಮೂಡುಬಿದಿರೆ: ಕಳೆದ 6 ತಿಂಗಳ ಹಿಂದೆ ನಾಪತ್ತೆ 25 ಬ್ಯಾಟರಿಗಳಲ್ಲಿ ನಾಲ್ಕು ಬ್ಯಾಟರಿ ಸಹಿತ ಇಬ್ಬರು ಆರೋಪಿಗಳನ್ನು ಮೂಡುಬಿದಿರೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಳೆದ ವಷ೯ ಏ.24ರಂದು ಮೂಡುಬಿದಿರೆಯ ಮಚ್ಲಿ ಹೊಟೇಲ್ ಬಳಿ ಕೆಲಸ ಮಾಡಲೆಂದು ತೋಡಾರು ಪಂಚಶಕ್ತಿ ರಂಜಿತ್ ಪೂಜಾರಿ ಅವರಿಗೆ ಸೇರಿದ ಹಿಟಾಚಿಯನ್ನು ಕೆಲಸ ಮುಗಿಸಿ ಸಂಜೆ ಸುಮಾರು 7 ಗಂಟೆ ಸಮಯದಲ್ಲಿ ನಿಲ್ಲಿಸಿದ್ದು ಮರುದಿನ ಬೆಳಿಗ್ಗೆ 7 ಗಂಟೆಗೆ ಹಿಟಾಚಿಯ ಬಳಿ ಬಂದು ನೋಡಿದಾಗ ಎರಡೂ ಹಿಟಾಚಿಗಳ 4

ಬಡ ಕುಟುಂಬಕ್ಕೆ ಆಸರೆಯಾದ ಸುಧೀರ್ ಶೆಟ್ಟಿ ಕಣ್ಣೂರು:ಕೇಶವ ಸದನದ ಗೃಹ ಪ್ರವೇಶ ಕಾರ್ಯಕ್ರಮ

ಮಂಗಳೂರು: 30ನೇ ಕೊಡಿಯಾಲ್ ಬೈಲ್ ವಾರ್ಡ್‌ನ ವಿವೇಕ ನಗರ ಬಳಿ ಮಾಜಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಅವರು ಗಣೇಶ್ ಹಾಗೂ ರೋಹಿಣಿ ದಂಪತಿಗಳಿಗೆ ತಮ್ಮ ವೈಯಕ್ತಿಕ ನೆಲೆಯಲ್ಲಿ ನಿರ್ಮಿಸಿಕೊಟ್ಟ ‘ಕೇಶವ ಸದನ’ದ ಗೃಹ ಪ್ರವೇಶ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ಸುಧೀರ್ ಶೆಟ್ಟಿ ಕಣ್ಣೂರು ಅವರು, “ನನ್ನ ಹುಟ್ಟುಹಬ್ಬದ ಸಂದರ್ಭದಲ್ಲಿ ಇಂತಹ ಸಮಾಜಮುಖಿ ಕೆಲಸದಲ್ಲಿ ತೊಡಗಿಕೊಂಡಿರುವುದು ಖುಷಿ ಎನಿಸುತ್ತದೆ.

ಮಂಗಳೂರು: ಎಸ್‌ ವಿಟಿ ಟ್ರೋಫಿ-2025: ಟ್ರೋಫಿ ಮತ್ತು ಜರ್ಸಿ ಬಿಡುಗಡೆ

ಎಸ್‌ವಿಟಿ ವೊಲಂಟೀಯರ್ಸ್ ಅಸೋಸಿಯೇಷನ್ ಹಾಗೂ ಆಭರಣ ಜ್ಯುವೆಲರ್ಸ್ ಜೊತೆ ಪ್ರಸ್ತುತ ಪಡಿಸುತ್ತಿರುವ ಎಸ್‌ವಿಟಿ ಟ್ರೋಫಿ-2025 ಜಿಎಸ್‌ಬಿ ವೊಲಂಟೀಯರ್ಸ್ ಪ್ರೀಮಿಯರ್ ಲೀಗ್ ಸೀಸನ್-3ರ ಟ್ರೋಫಿ ಅನಾವರಣ ಮತ್ತು ಜರ್ಸಿ ಲಾಂಚ್ ನಗರದ ಅಳಕೆಯ ಸಮೀಪದಲ್ಲಿರುವ ಪರ್ಫೆಕ್ಟ್ ಪಾಸ್ ಎಂಬಲ್ಲಿ ನಡೆಯಿತು.  ಎಸ್ ವಿ ಟಿ ವೊಲಂಟೀಯರ್ಸ್ ಅಸೋಸಿಯೇಷನ್ ಅಧ್ಯಕ್ಷರಾದ ಸುರೇಶ್ ವಿ ಕಾಮತ್ ಅವರು ಟ್ರೋಫಿ ಅನಾವರಣಗೊಳಿಸಿದರು. ನಂತರ ಎಲ್ಲಾ ಕೆಟಗರಿಯ ತಂಡಗಳು ತಮ್ಮ ತಂಡದ

ಮಂಜೇಶ್ವರ: ಹೊತ್ತಿ ಉರಿದ ಎಂಎಫ್ ಫ್ರೇಂ ವರ್ಕ್ ಪ್ಲೈವುಡ್ ಕಾರ್ಖಾನೆ: ಭಾರೀ ಪ್ರಮಾಣದ ಸಾಮಾಗ್ರಿಗಳು ನಾಶ

ಮಂಜೇಶ್ವರ: ಮಂಜೇಶ್ವರ ಬಟ್ಟಿ ಪದವಿನಲ್ಲಿ ಕಾಯಾಚರಿಸುತ್ತಿರುವ ಎಂ ಎಫ್ ಫ್ರೇಂ ವರ್ಕ್ ಕಾರ್ಖಾನೆಯಲ್ಲಿ ಶನಿವಾರ ಸಂಜೆ ವೇಳೆಗೆ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಇದರ ಪರಿಣಾಮವಾಗಿ, ಕಾರ್ಖಾನೆ ಬಹುತೇಕ ಹೊತ್ತಿ ಉರಿದು ಭಾರೀ ಪ್ರಮಾಣದ ಸಾಮಾಗ್ರಿಗಳು ನಾಶಗೊಂಡಿದೆ. ಮಾಹಿತಿ ಅರಿತು ಉಪ್ಪಳದಿಂದ ಆಗಮಿಸಿದ ಅಗ್ನಿಶಾಮಕದಳ ಹಾಗೂ ಸ್ಥಳೀಯರು ಬೆಂಕಿಯನ್ನು ನಂದಿಸುವಲ್ಲಿ ಯಶಸ್ಸುಗೊಂಡಿದ್ದಾರೆ.ಮಂಗಳೂರು ನಿವಾಸಿಗಳಾದ ಎಕೆ ನಿಯಾಸ್ ಹಾಗೂ ಅನಿಲ್ ಕುಮಾರ್ ರವರ

ಸುಳ್ಯ: ಡಾ. ಅನುರಾಧಾ ಕುರುಂಜಿಯವರಿಗೆ “ಚೈತನ್ಯ ಶ್ರೀ ಪ್ರಶಸ್ತಿ ಪ್ರದಾನ

     ಕರ್ನಾಟಕ ರಾಜ್ಯ ವೈಜ್ಞಾನಿಕ ಪರಿಷತ್ತ್ ನವರು ಪ್ರಥಮ  ಬಾರಿಗೆ  ಕೊಡಮಾಡಿದ ಪ್ರತಿಷ್ಠಿತ  “ಚೈತನ್ಯ ಶ್ರೀ- 2024” ಪ್ರಶಸ್ತಿ ಪ್ರದಾನ ಸಮಾರಂಭವು ಬೆಂಗಳೂರಿನ ಯಲಹಂಕದ ವಿ ಜೆ ಇಂಟರ್ ನ್ಯಾಷನಲ್ ಶಾಲಾ ಮೈದಾನದಲ್ಲಿ ರಾಜ್ಯ ಮಟ್ಟದ ನಾಲ್ಕನೇ ಬೃಹತ್ ವೈಜ್ಞಾನಿಕ ಸಮ್ಮೇಳನದಲ್ಲಿ ಹಮ್ಮಿಕೊಂಡಿದ್ದರು.   ಈ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಪ್ರಥಮ ಬಾರಿಗೆ ಭಾಜನರಾದ ಸುಳ್ಯದ ಬಹುಮುಖ ಸಾಧಕಿ ಡಾ. ಅನುರಾಧಾ ಕುರುಂಜಿಯವರಿಗೆ ಶೈಕ್ಷಣಿಕ ಕ್ಷೇತ್ರದ

ಆಳ್ವಾಸ್‌ಗೆ ಸತತ 17ನೇ ಬಾರಿ ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಪ್ರಶಸ್ತಿ

ಮೂಡುಬಿದಿರೆ: ಪದವಿ ಪೂರ್ವ ಶಿಕ್ಷಣ ಇಲಾಖೆ ಇದರ ವತಿಯಿಂದ ರಾಯಚೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಮೂಡುಬಿದಿರೆಯ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಬಾಲಕ ಬಾಲಕಿಯರು ಭಾಗವಹಿಸಿದ ತಂಡ ಎರಡು ವಿಭಾಗದ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.ಬಾಲಕರ ವಿಭಾಗದ ಫೈನಲ್ಸ್ ಪಂದ್ಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ತಂಡ, ಮೈಸೂರು ಜಿಲ್ಲಾ ತಂಡವನ್ನು 35-11