Home Archive by category Fresh News (Page 147)

ಉಳ್ಳಾಲ: ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಮೃತ್ಯು

ಉಳ್ಳಾಲ: ರೆಸಾರ್ಟ್‌ವೊಂದರ ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಮೃತಪಟ್ಟ ಘಟನೆ ನಡೆದಿದೆ. ಸೋಮೇಶ್ವರದಲ್ಲಿ ಭಾನುವಾರ ಬೆಳಿಗ್ಗೆ ನಡೆದಿರುವ ಘಟನೆಯಲ್ಲಿ ಮೈಸೂರು ದೇವರಾಜ ಮೊಹಲ್ಲಾದ ನವೀನ್ ಕುಮಾರ್ ಅವರ ಪುತ್ರಿ ಕೀರ್ತನಾ ಎನ್ (21), ಮೈಸೂರು ಕುರುಬರ ಹಳ್ಳಿ 4ನೇ ಕ್ರಾಸ್ ನಿವಾಸಿ ಮಲ್ಲೇಶ್ ಅವರ ಪುತ್ರಿ ನಿಶಿತಾ ಎಂ.ಡಿ (21) ಹಾಗೂ ಮೈಸೂರು ಕೆ.ಆರ್.ಮೊಹಲ್ಲ

ಕಾಪು: ಹಿಟ್ & ರನ್: ಬೈಕ್ ಸವಾರ ಮೃತ್ಯು

ಜೀಪೊಂದು ಢಿಕ್ಕಿ ಹೊಡೆದ ನಿಲ್ಲಿಸದೇ ಪರಾರಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಬೆಳಪುವಿನ ಮಿಲಿಟರಿ ಕಾಲೋನಿ ಎಂಬಲ್ಲಿ ನಡೆದಿದೆ. ಮೃತರನ್ನು ಬೆಳಪುವಿನ ಮುಹಮ್ಮದ್ ಹುಸೇನ್(39) ಎಂದು ಗುರುತಿಸ ಲಾಗಿದೆ. ಇವರು ನ.11ರಂದು ಬೆಳಗಿನ ಜಾವ 5ಗಂಟೆ ಸುಮಾರಿಗೆ ಬೈಕಿನಲ್ಲಿ ಹೋಗುತ್ತಿದ್ದಾಗ ಎದುರಿನಲ್ಲಿ ಬಂದ ಜೀಪು ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಬಳಿಕ ಚಾಲಕ ಪ್ರಜ್ವಲ್ ಶೆಟ್ಟಿ ಜೀಪನ್ನು ನಿಲ್ಲಿಸದೆ ಪರಾರಿಯಾಗಿದ್ದನು.ಬಗ್ಗೆ ಪ್ರಕರಣ ದಾಖಲಿಸಿಕೊಂಡ ಶಿರ್ವ

ಲಂಚ ಸ್ವೀಕರಿಸುತ್ತಿದ್ದ ಆರೋಪ: ಉಡುಪಿ ಖಜಾನೆಯ ಉಪನಿರ್ದೇಶಕ ಲೋಕಾಯುಕ್ತ ಬಲೆಗೆ

ನಿವೃತ್ತ ಶಿಕ್ಷಕರೊಬ್ಬರಿಗೆ ಪೆನ್ಶನ್ ಹಣವನ್ನು ಬಿಡುಗಡೆಗೊಳಿಸಲು ಲಂಚ ಪಡೆಯುತ್ತಿದ್ದ ವೇಳೆ ಉಡುಪಿ ಖಜಾನೆಯ ಉಪನಿರ್ದೇಶಕರು ಹಾಗೂ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ನಿವೃತ್ತ ಶಿಕ್ಷಕ ಹಿತೇಂದ್ರ ಭಂಡಾರಿ ಎಂಬವರು ತಮ್ಮ ಪೆನ್ಶನ್ ಹಣವನ್ನು ಪಡೆಯಲು ಕಳೆದ ೫ ತಿಂಗಳಿನಿಂದ ಖಜಾನೆಯ ಉಪನಿರ್ದೇಶಕರಾದ ರವಿಕುಮಾರ್ ಮತ್ತು ಸಹಾಯಕ ರಾಘವೇಂದ್ರ ಎಂಬವರು ಸತಾಯಿಸುತ್ತಿದ್ದು ರೂ ೫೦೦೦ ಲಂಚ ನೀಡುವಂತೆ ಒತ್ತಾಯಿಸಿದ್ದರು. ಈ ಬಗ್ಗೆ ಹಿತೇಂದ್ರ ಭಂಡಾರಿಯವರು

ಮಂಗಳೂರು ವಿ ವಿ ಅಂತರ್ ಕಾಲೇಜು ಕುಸ್ತಿ ಪಂದ್ಯಾಟ ಆಳ್ವಾಸ್‌ ಗೆ ಸತತ 14 ನೇ ಬಾರಿ ಸಮಗ್ರ ಪ್ರಶಸ್ತಿ

ಮೂಡುಬಿದಿರೆ: ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಇವರ ಆಶ್ರಯದಲ್ಲಿ ಜರುಗಿದ ಮಂಗಳೂರು ವಿ ವಿ ಮಟ್ಟದ ಅಂತರ್ ಕಾಲೇಜು ಕುಸ್ತಿ ಸ್ಪರ್ಧೆಯ ಪುರುಷ ಹಾಗೂ ಮಹಿಳೆಯರ ವಿಭಾಗದಲ್ಲಿ 14 ಚಿನ್ನ, 03 ಬೆಳ್ಳಿ ಹಾಗೂ 02 ಕಂಚಿನ ಪದಕದೊಂದಿಗೆ ಮೂಡುಬಿದಿರೆಯ ಆಳ್ವಾಸ್ ಕುಸ್ತಿಪಟುಗಳು ಸಮಗ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ.ಫಲಿತಾಂಶ : ಪುರುಷರ ವಿಭಾಗದಲ್ಲಿ : ನಿಖಿಲ್ – 61 ಕೆಜಿ ವಿಭಾಗದಲ್ಲಿ (ದ್ವಿತೀಯ), ಗುಡ್ಡಪ್ಪ – 61 ಕೆಜಿ ವಿಭಾಗದಲಿ (ತೃತೀಯ),

ಮಂಗಳೂರು: 71ನೇ ಅಖಿಲ ಭಾರತ ಸಹಕಾರ ಸಪ್ತಾಹ:ಮಾಧ್ಯಮ ಕ್ಷೇತ್ರದ ಸಾಧನೆಗಾಗಿ ಶ್ರೀನಿವಾಸ್ ನಾಯಕ್ ಇಂದಾಜೆಗೆ ಪ್ರಶಸ್ತಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹಾಗೂ ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಗೆ ಮಾಧ್ಯಮ ಕ್ಷೇತ್ರದ ಸಾಧನೆಗಾಗಿ ಪತ್ರಿಕಾ ರಂಗದ ಸಾಧಕ ಪ್ರಶಸ್ತಿ ಯನ್ನು ನವೆಂಬರ್ 16 ರಂದು ಕರಾವಳಿ ಉತ್ಸವ ಮೈದಾನದಲ್ಲಿ ನಡೆಯುವ71 ನೇ ಅಖಿಲ ಭಾರತ ಸಹಕಾರ ಸಪ್ತಾಹ ದಲ್ಲಿ ಗಣ್ಯರ ಸಮ್ಮುಖದಲ್ಲಿ ಪ್ರದಾನ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಂಡಳ ಅಧ್ಯಕ್ಷ ಹಾಗೂ ದಕ್ಷಿಣ

ಕಾರ್ಕಳ : ಪತಿಯ ಸಾವಿನಿಂದ ನೊಂದ ಪತ್ನಿ ಆತ್ಮಹತ್ಯೆಗೆ ಶರಣು

ಕಾರ್ಕಳ : ಕಳೆದ ಒಂದು ತಿಂಗಳ ಹಿಂದೆ ಗಂಡ ತೀರಿಕೊಂಡ ಬಳಿಕ ಮಾಸಿಕವಾಗಿ ಕೊರಗುತ್ತಿದ್ದಂತ ಅಂಗನವಾಡಿ ಟೀಚರ್ ಮನೆ ಸಮೀಪದ ಬಾವಿಗೆ‌ಹಾರಿ ಆತ್ಮಹತ್ಯೆಗೈದ ಘಟನೆ ಮಿಯ್ಯಾರು ಕುಂಟಿಬೈಲ್ ಮಂಜಡ್ಕ ಎಂಬಲ್ಲಿ ನಡೆದಿದೆ. ಸೌಮ್ಯ(39) ಎಂಬವರು ಘಟನೆಯಲ್ಲಿ ಬದುಕಿಗೆ ಅಂತ್ಯ ಹೇಳಿದವರು. ಮಿಯ್ಯಾರು ಚಚ್ ೯ ಬಳಿಯ ಅಂಗನವಾಡಿಯಲ್ಲಿ ಟೀಚರ್ ಆಗಿ ಕಳೆದ 15 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ಇಬ್ಬರು ಹೆಣ್ಣು ಮಕ್ಕಳೊಂದಿಗೆ ಸಂಸಾರ ನಡೆಸುತ್ತಿದ್ದ ಇವರ ಪತಿ ಕಳೆದೊಂದು

ಕಾರ್ಕಳ : ಅಣ್ಣನ ತಿಥಿಗೆ ಪೂರ್ವ ಸಿದ್ಧತೆ ಮಾಡುತ್ತಿದ್ದ ತಂಗಿ ವಿದ್ಯುತ್ ಅಘಾತಕ್ಕೊಳಗಾಗಿ ದಾರುಣ ಸಾವು

ಕಾರ್ಕಳ : ಅಣ್ಣನ ತಿಥಿಗೆ ಪೂರ್ವ ಸಿದ್ಧತೆ ಮಾಡುತ್ತಿದ್ದ ತಂಗಿ ವಿದ್ಯುತ್ ಅಘಾತಕ್ಕೊಳಗಾಗಿ ದಾರುಣ ರೀತಿಯಲ್ಲಿ ಮೃತ ಪಟ್ಟ ಘಟನೆ ನಿಟ್ಟೆ ಪರಪ್ಪಾಡಿ ಎಂಬಲ್ಲಿ ಸಂಭವಿಸಿದೆ. ಗುರುವಾರ ರಾತ್ರಿ ಈ ಘಟನೆಯಲ್ಲಿ ಲಲಿತಾ ಬೋಂಡ್ರ ಮೃತಪಟ್ಟ ಮಹಿಳೆ. ನಿಟ್ಟೆ ಪರಪ್ಪಾಡಿಯ ರಾಘು ಬೋಂಡ್ರ ಎಂಬವರು ಕೆಲ ದಿನಳ ಹಿಂದೆ ಮೃತಪಟ್ಟಿದ್ದರು. ಅಣ್ಣನ‌ ತಿಥಿಯ ಪೂರ್ವ ಸಿದ್ಧತೆಗಾಗಿ ಬಂದಿದ್ದ ತಂಗಿ ಲಲಿತಾ ಬೋಂಡ್ರ ಅವರು ಗುರುವಾರ ರಾತ್ರಿ ಅಡುಗೆ ಪಾತ್ರೆಗಳನ್ನು ತೊಳೆಯುತ್ತಿದ್ದರು.

ಕಡಬ: ಆರು ವರ್ಷಗಳಿಂದ ವಾಸವಾಗಿದ್ದ ಮನೆ ನೆಲಸಮ-ವೃದ್ಧರು ಅತಂತ್ರ

ಸರಕಾರಿ ಜಾಗದಲ್ಲಿ ಮನೆ ನಿರ್ಮಿಸಿ 6 ವರುಷಗಳಿಂದ ವಾಸವಾಗಿದ್ದ ವೃದ್ಧ ದಂಪತಿಗಳ ಮನೆಯನ್ನು ಏಕಏಕಿಯಾಗಿ ಮಂಗಳವಾರ ಬೆಳ್ಳಂಬೆಳಗೆ ಪೊಲೀಸರ ಸಹಾಯದೊಂದಿಗೆ ಕಡಬದ ಕಂದಾಯ ಅಧಿಕಾರಿಗಳು ನೆಲಸಮ ಮಾಡಿದ ಘಟನೆ ನಡೆದಿದೆ.ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದಲ್ಲಿ ವಾಸವಾಗಿರುವ ರಾಧಮ್ಮ ಮತ್ತು ಮುತ್ತುಸ್ವಾಮಿ ವೃದ್ಧ ದಂಪತಿಗಳಿಗೆ ಸೇರಿದ ಮನೆಯಾಗಿದೆ.ದಂಪತಿ ಮೂಲತಃ ಚಿತ್ರದುರ್ಗ ಜಿಲ್ಲೆಯ ಹಟ್ಟಿಯವರು. ಕೂಲಿ ಕೆಲಸಕ್ಕಾಗಿ ಕರಾವಳಿಗೆ ಆಗಮಿಸಿ ಕಡಬ ತಾಲೂಕಿನ ಉಪ್ಪಿನಂಗಡಿ

ಮಂಜೇಶ್ವರ : ಶಾಲು ಗ್ರೈಂಡರ್ ಗೆ ಸಿಲುಕಿ ಗೃಹಿಣಿಯ ದಾರುಣ ಸಾವು

ಮಂಜೇಶ್ವರ : ಗೃಹಿಣಿಯೊಬ್ಬಳು ಮಕ್ಕಳನ್ನು ಶಾಲೆಗೆ ಕಳಿಸಲು ತಿಂಡಿ ತಯಾರಿಸುವ ತರಾತುರಿಯಲ್ಲಿ ಶಾಲ್ ಗ್ರೈಂಡರ್ ಗೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿದ್ದಾಳೆ. ಬುಧವಾರ ಮುಂಜಾನೆ 7 ಗಂಟೆಯ ಸುಮಾರಿಗೆ ಉಪ್ಪಳ ಗೇಟ್ ಅಪ್ನಾ ಗಲ್ಲಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.ಉಪ್ಪಳ ಗೇಟ್ ಅಪ್ನಾ ಗಲ್ಲಿ ನಿವಾಸಿ ಮುಂಬೈಯಲ್ಲಿ ಉದ್ಯಮಿಯಾಗಿರುವ ಇಬ್ರಾಹಿಂ ಎಂಬವರ ಪತ್ನಿ ಮೈಮೂನ (40) ಸಾವನ್ನಪ್ಪಿದ ದುರ್ದೈವಿ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಮಂಜೇಶ್ವರ: ದರೋಡೆಗೆ ಯತ್ನ ಪ್ರಕರಣ: ಪರಾರಿಯಾಗಿದ್ದ ಓರ್ವನ ಸೆರೆ

ಮಂಜೇಶ್ವರ: ಬ್ಯಾಂಕ್ ದರೋಡೆಗೈಯಲು ಹೊಂಚು ಹಾಕಿ ಮಾರಕಾಯುಧಗಳ ಸಹಿತ ಕಾರಿನಲ್ಲಿ ಸಂಚರಿಸುತ್ತಿರುವ ಮಧ್ಯೆ ಊರವರು ಬೆನ್ನಟ್ಟಿ ಹಿಡಿಯುವಾಗ ಪರಾರಿಯಾದ ನಾಲ್ಕು ಮಂದಿ ಆರೋಪಿಗಳ ಪೈಕಿ ಒಬ್ಬನನ್ನು ಮಂಜೇಶ್ವರ ಪೊಲೀಸರು ಸೆರೆ ಹಿಡಿದಿದ್ದಾರೆ. ಕಾಸರಗೋಡು ಪರಿಸರವಾಸಿಯಾದ ಈತ ಹಲವು ಕಳವು ಪ್ರಕರಣಗಳಲ್ಲಿ ಆರೋಪಿಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.2024 ಫೆಬ್ರವರಿ 8ರಂದು ಅಡ್ಯನಡ್ಕದ ಕರ್ನಾಟಕ ಬ್ಯಾಂಕ್‌ ಶಾಖೆ ಕಳವು ಪ್ರಕರಣದ ಆರೋಪಿಗಳಲ್ಲಿ ಈತನೂ