ಮಂಜಣ್ಣ ಸೇವಾ ಬ್ರಿಗೇಡ್ ಟ್ರಸ್ಟ್ (ರಿ) ಮಂಗಳೂರು ಸಂಸ್ಥೆಯ ಮುಂದಾಲತ್ವದಲ್ಲಿ ಲೋಕ ಕಲ್ಯಾಣಕ್ಕಾಗಿ ಕಷ್ಟ ಕಾರ್ಪಣ್ಯಗಳ ನಿವಾರಣೆಗೆ ಪರಮ ಪಾದದಿಂದ ಮೂಲ ಪಾಡದೆಡೆಗೆ ಸುಭಿಜ್ಞಾ ಸಮಾಜದ ಗುರಿಯೊಂದಿಗೆ ನಡೆಯುವ 6ನೇ ವರ್ಷದ ಭಕ್ತ ಜನರ ಭಕ್ತಿ ಧರ್ಮದ ನಡೆ ಪಾದಯಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಚಿತ್ರಾಪುರ ಶ್ರೀ
ಕುಂದಾಪುರ: ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಜಿಲ್ಲಾ ಸಮಿತಿ ವತಿಯಿಂದ ನಾಡ (ಪಡುಕೋಣೆ) ಶಾಖೆ ಪುನರ್ರಚನೆ,ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಾಗೂ ಜನಶಕ್ತಿ ಸಮಾವೇಶದಲ್ಲಿ ನಾಡ ಗ್ರಾಮ ಪಂಂಚಾಯಿತಿ ಸಭಾಭವನದಲ್ಲಿ ನಡೆಯಿತು. ಗಾಯಕ ರವಿ ಬನ್ನಾಡಿ ತಮ್ಮ ಕಂಠ ಸಿರಿ ಮೂಲಕ ಸಂಗೀತ ಕಾರ್ಯಕ್ರಮವನ್ನು ನಡೆಸಿಕೊಟ್ಟರು.ಜಿಲ್ಲಾ ಸಂಘಟನಾ ಸಂಚಾಲಕ ಸುರೆಶ ಹಕ್ಲಾಡಿ ನಾಡ ಶಾಖೆಯ ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು.ಅಶಕ್ತ ಕುಟುಂಬಗಳಿಗೆ
ಮೊಟ್ಟ ಮೊದಲ ಬಾರಿಗೆ ಕರಾವಳಿಯ ಯುವಕರ ತಂಡ ಹೊಸತನದ ಆಯಾಮವನ್ನು ಸೃಷ್ಟಿ ಮಾಡಲು ನೈಜ್ಯ ಆಧಾರಿತ ಕಥೆಯನ್ನು ವೆಬ್ ಸೀರೀಸ್ ಮೂಲಕ ಹೇಳಲು ಹೊರಟಿದೆ. ದೀಪಾವಳಿಯ ಪ್ರಯುಕ್ತ ಇದರ ಪಸ್ಟ್ ಲುಕ್ ಪೋಸ್ಟರ್ ಅನ್ನು ಇಂದು ನಟ – ನಿರ್ದೇಶಕ ಸಂದೇಶ್ ಶೆಟ್ಟಿ ಆಜ್ರಿ ಬಿಡುಗಡೆ ಮಾಡಿ ಯುವಕರ ತಂಡಕ್ಕೆ ಶುಭ ಹಾರೈಸಿದ್ದಾರೆ. ಕರಾವಳಿ ಭಾಗದಲ್ಲಿ ಸೋಶಿಯಲ್ ಮೀಡಿಯಾ ಸ್ಟಾರ್ ಎಂದೇ ಪ್ರಖ್ಯಾತಿಯಾದ ಲಕ್ಕಿ ನಾಗೇಶ್ ಚೊಚ್ಚಲ ನಿರ್ದೇಶನದ ಕರ್ಮ ವೆಬ್ ಸೀರೀಸ್ ಇದಾಗಿದೆ. ಇದರ
ಸಂಘೇ ಶಕ್ತಿ ಕಲವ್ ಯುಗೇ ಕಲಿಯುಗದಲ್ಲಿ ಸಂಘಶಕ್ತಿಯಿಂದ ಸರ್ವವೂ ಸಾಧ್ಯ. ಬಲಿಷ್ಠ ಸೌಹಾರ್ದ ಸಂಘಟನೆಯಿಂದ ಸ್ವಾಸ್ಥ್ಯ ಸಮಾಜ ನಿರ್ಮಾಣವಾಗುತ್ತದೆ ಎಂಬುದಕ್ಕೆ ಇಲ್ಲಿನ ಭಜನಾ ಮಂದಿರ ,ಮಾತೃ ಮಂಡಳಿ, ಯುವ ಸಂಘಟನೆ, ಯಕ್ಷಗಾನ ಸಂಘಟನೆ, ಮಂದಿರ ಟ್ರಸ್ಟ್ ಒಂದು ಉದಾಹರಣೆ ಎಂದು ಖ್ಯಾತ ನ್ಯಾಯವಾದಿ ಶ್ರೀ ರಾಮ್ ಪ್ರಸಾದ್ ಇವರು, ಶ್ರೀ ಧರ್ಮಶಾಸ್ತ್ರ ಮಂದಿರ ಟ್ರಸ್ಟ್( ರಿ) ಇದರ ಸಾಂಸ್ಕೃತಿಕ ಸಿಂಚನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಮುಖ್ಯ
ಕಡಬ: ಕೋಡಿಂಬಾಳ ಸಮೀಪದ ಪುಳಿಕುಕ್ಕು ಮುರಚೆಡವು ಬಳಿ ಚಲಿಸುತ್ತಿದ್ದ ಸ್ಕೂಟಿಯ ಮೇಲೆ ದೂಪದ ಮರ ಬಿದ್ದು ಎಡಮಂಗಲ ಗ್ರಾಮದ ದೇವಸ್ಯ ನಿವಾಸಿ ಸೀತಾರಾಮ ಗೌಡ ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದು ಎರಡು ದಿನ ಕಳೆದರೂ ಅವರು ಸ್ಕೂಟಿಯಲ್ಲಿ ಕೊಂಡೊಯ್ಯುತ್ತಿದ್ದ ಕೋಳಿ ಮಾತ್ರ ಘಟನೆ ನಡೆದ ಸ್ಥಳವನ್ನು ಬಿದ್ದು ಕದಲಿಲ್ಲ. ಸೀತಾರಾಮ ಅವರು ದೀಪಾವಳಿ ಪ್ರಯುಕ್ತ ಎಡಮಂಗಲದ ತನ್ನ ಮನೆಯಲ್ಲಿ ನಡೆಯಲಿದ್ದ ದೈವದ ಹರಕೆಗಾಗಿ ಕೋಡಿಂಬಾಳದಿಂದ ಕೋಳಿ ತೆಗೆದುಕೊಂಡು ಸ್ಕೂಟಿಯಲ್ಲಿ
ಮಂಗಳೂರಿನ ಬಂಟ್ಸ್ ಹಾಸ್ಟೆಲ್ ಸಮೀಪದಲ್ಲಿರುವ ಶ್ರೀ ರಾಮಕೃಷ್ಣ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಿದರು. ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಶಿಕ್ಷಕಿ ಶಶಿಕಲಾ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಸಾಂಸ್ಕೃತಿಕ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಸಂಸ್ಥೆಯ ಪ್ರಾಂಶುಪಾಲೆ ಡಾ. ಅನುಸೂಯಾ ರೈ, ಉಪಪ್ರಾಂಶುಪಾಲರು ವಿದ್ಯಾರ್ಥಿಗಳ ಪೋಷಕರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ
ಪುತ್ತೂರು ತಾಲ್ಲೂಕು ಕುಂಬ್ರದ ಒಳಮೊಗ್ರು ಗ್ರಾಮದ ಉರ್ವದಲ್ಲಿ ತಲೆಬುರುಡೆ ಮತ್ತು ಎಲುಬುಗಳು ಪತ್ತೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಶಂಕೆ. ಪುತ್ತೂರು: ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ತಲೆ ಬುರುಡೆ ಹಾಗೂ ಎಲುಬುಗಳು ಒಳಮೊಗ್ರು ಗ್ರಾಮದ ಉರ್ವದಲ್ಲಿ ನ.3ರಂದು ಪತ್ತೆಯಾಗಿದೆ. ಉರ್ವ ನಿವಾಸಿ ಸಂಜೀವ ಎಂಬವರ ಪತ್ನಿ ನಳಿನಿ ಎಂಬಾಕೆ ತನ್ನ ಮನೆಯ ಎದುರಿನ ಕಾಡೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಇದು ಮನೆಯವರಿಗೆ ಒಂದು ತಿಂಗಳ ಬಳಿಕ
ಮೂಡುಬಿದಿರೆ: ಕೇಂದ್ರದಲ್ಲಿರುವ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಅಮೆರಿಕ ಸಾಮ್ರಾಜ್ಯಶಾಹಿಯ ಅಡಿಯಾಳು ಆಗಬಾರದು ಎಂದು ಸಿಪಿಐಎಂನ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಕೆ ಯಾದವ್ ಶೆಟ್ಟಿ ಹೇಳಿದರು. ಅವರು ಭಾನುವಾರ ಸಮಾಜ ಮಂದಿರದಲ್ಲಿ ನಡೆದ ಸಿಪಿಐಎಂ ಮೂಡುಬಿದಿರೆ ತಾಲೂಕು ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.ಪ್ಯಾಲೆಸ್ತೀನ್ ನಾಗರಿಕರನ್ನು ಅತ್ಯಂತ ಅಮಾನವೀಯವಾಗಿ ಕೊಲ್ಲುತ್ತಿರುವ ಇಸ್ರೇಲಿಗೆ ಸರ್ವ ರೀತಿಯ ಸಹಕಾರ ನೀಡುತ್ತಿರುವ ಅಮೆರಿಕ ಮತ್ತು
ರಾಷ್ಟೀಯ ಹೆದ್ದಾರಿ 66ರ ಇಕ್ಕೆಲಲ್ಲಿ ನಿಂತಿದ್ದ ಲಾರಿಗೆ ಟೂರಿಸ್ಟ್ ವಾಹನ ಡಿಕ್ಕಿ ಹೊಡೆದು ಪ್ರವಾಸಿಗರು ಗಾಯಗೊಂಡ ದುರ್ಘಟನೆ ಇಂದು ಮುಂಜಾನೆ ಉದ್ಯಾವರ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ. ಕೊಲ್ಲೂರಿನತ್ತ ತೆರಳುತ್ತಿದ್ದ ಹೊರ ರಾಜ್ಯದ ಟೂರಿಸ್ಟ ವಾಹನವು ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದ್ದು, ಮಹಿಳೆಯರೂ ಸೇರಿದಂತೆ ಪ್ರವಾಸಿಗರು ಗಂಭೀರ ಗಾಯಗೊಂಡಿದ್ದಾರೆ. ಸ್ಥಳೀಯರ ಸಹಕಾರದಿಂದ ಗಾಯಾಳುಗಳನ್ನು
ಟ್ಯಾಂಕರ್ ಬೈಕ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತ ಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು ಕೊಪ್ಪಲಂಗಡಿ ಬಳಿ ನಡೆದಿದೆ. ಮಂಗಳೂರುನಿಂದ ಉಡುಪಿ ಕಡೆ ಹೋಗತ್ತಿದ್ದ ಟ್ಯಾಂಕರ್ ಅದೇ ದಿಕ್ಕಿನಲ್ಲಿ ಹೋಗುತ್ತಿದ್ದ ಬೈಕ್ ನ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರ ಗಂಭೀರ ಗಾಯಗೊಂಡು ಮೃತ ಪಟ್ಟಿದ್ದು ಹರೀಶ್ ಕುಮಾರ್(45) ಮೃತ ದುರ್ದೈವಿ. ಟ್ಯಾಂಕರ್ ಚಾಲಕನ ನಿರ್ಲಕ್ಷದ ಚಾಲನೆಯೇ ಘಟನೆಗೆ ಕಾರಣ ಎನ್ನಲಾಗಿದೆ.ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




























