Home Archive by category Fresh News (Page 16)

ಮಂಗಳೂರು, ಉಡುಪಿ, ಪುತ್ತೂರಿನಲ್ಲಿ ಕಟ್ಟೆಮಾರ್ ಸಿನಿಮಾದ ಪ್ರೀಮಿಯರ್ ಶೋ

ಕೋಸ್ಟಲ್‌ವುಡ್‌ನ ಬಹುನಿರೀಕ್ಷೆಯ ಸಿನಿಮಾ ಕಟ್ಟೆಮಾರ್. ಜನವರಿ ೨೩ರಂದು ಕರಾವಳಿಯಾದ್ಯಂತ ಸಿನಿಮಾ ಬಿಡುಗಡೆಗೊಳಲ್ಲಿದೆ. ಅದಕ್ಕಿಂತ ಮುಂಚಿತವಾಗಿ ಮಂಗಳೂರು, ಪುತ್ತೂರು ಮತ್ತು ಉಡುಪಿಯಲ್ಲಿ ಸಿನಿಮಾದ ಪ್ರೀಮಿಯರ್ ಶೋ ಪ್ರದರ್ಶನ ನಡೆಯಲಿದೆ.ಸಚಿನ್ ಕಟ್ಲ ಮತ್ತು ರಕ್ಷಿತ್ ಗಾಣಿಗ ಆಕ್ಷನ್ ಕಟ್ ನಿರ್ದೇಶನದಲ್ಲಿ ಮೂಡಿ ಬಂದಿದರುವ ಕಟ್ಟೆಮಾರ್ ಈಗಾಗಲೇ ತನ್ನ ಪೋಸ್ಟರ್,

ಕಳ್ಳತನಕ್ಕೆ ಯತ್ನ ಪ್ರಕರಣದಲ್ಲಿ ಕುಖ್ಯಾತ ಕಳ್ಳನ ಬಂಧನ

ಕಾರ್ಕಳ: ತಾಲೂಕಿನ ಬಜಗೋಳಿ ಬಂಟ್ಸ್ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಯಲ್ಲಿ ಜ.16 ರಂದು ಕಳ್ಳತನಕ್ಕೆ ಯತ್ನಿಸಿದ ಪ್ರಕರಣದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನಿಟ್ಟೆ ಗ್ರಾಮದ ಸುರೇಶ್‌ ಪೂಜಾರಿ ಎಂದು ಗುರುತಿಸಲಾಗಿದೆ. ಈತನ ಮೇಲೆ ಈಗಾಗಲೇ ಕಾರ್ಕಳ ನಗರ, ಕಾರ್ಕಳ ಗ್ರಾಮಾಂತರ, ಪಡುಬಿದ್ರೆ, ಬೆಳ್ತಂಗಡಿ, ಉಡುಪಿ ನಗರ, ಗೋವಾ ಸೇರಿದಂತೆ ವಿವಿಧ ಪೊಲೀಸ್‌ ಠಾಣೆಗಳಲ್ಲಿ ಕಳ್ಳತನ ಪ್ರಕರಣ ದಾಖಲಾಗಿದೆ. ಜ.16ರಂದು ಈತ ಸೊಸೈಟಿ ಬೀಗ

ಕನ್ನಡ ಚಿತ್ರರಂಗದ ನಟ ಕುಮಾರ್ ಬಂಗಾರಪ್ಪ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ

ಕಾಪು:ಕರ್ನಾಟಕ ಸರಕಾರದ ಮಾಜಿ ಸಚಿವ ಹಾಗೂ ಕನ್ನಡ ಚಿತ್ರರಂಗದ ನಟ ಕುಮಾರ್ ಬಂಗಾರಪ್ಪ ಅವರು ಪತ್ನಿ ಸಮೇತ ಮಕ್ಕಳ ಜೊತೆ ದಿನಾಂಕ 17 ಶನಿವಾರದಂದು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಭೇಟಿ ನೀಡಿದರು. ಭೇಟಿ ನೀಡಿದ ಅವರು ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರುಶನ ಪಡೆದು ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ನೀಡಿದ ಅಮ್ಮನ ಅನುಗ್ರಹ ಪ್ರಸಾದ ಸ್ವೀಕರಿಸಿ ಗೌರವಕ್ಕೆ ಪಾತ್ರರಾದರು. ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ

ವಿದ್ಯಾರ್ಥಿಗಳಿಗೆ ಎಂಡಿಎಂಎ ಮಾದಕ ವಸ್ತು ಮಾರಾಟ: ಆರೋಪಿಯ ಬಂಧನ

ಮಂಗಳೂರು: ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಯುವಕನೋರ್ವನನ್ನು ಕದ್ರಿ (ಮಂಗಳೂರು ಪೂರ್ವ ಠಾಣೆ) ಠಾಣಾ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಕೇರಳದ ಎರ್ನಾಕುಂ ಜಿಲ್ಲೆಯ ಮುತೊಲಪುರಂ ನಿವಾಸಿ ಜೂಡ್ ಮಾಥ್ಯೂ (20) ಬಂಧಿತ ಆರೋಪಿ. ಆತನಿಂದ 5.20 ಗ್ರಾಂ ತೂಕದ MDMA ಮಾದಕ ವಸ್ತು, ಕೃತ್ಯಕ್ಕೆ ಬಳಸಿದ ಬೈಕ್ ಸಮೇತ ಒಟ್ಟು 70,000 ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪದವು ಗ್ರಾಮದ ಕೈಲಾಸ

ಉದ್ಯಮದ ಕನಸು ಕಂಡಿದ್ದ ಯುವಕ ನೇಣಿಗೆ ಶರಣು

ಮೂಡುಬಿದಿರೆ: ಇಲ್ಲಿನ ರಿಂಗ್ ರೋಡ್ ಬಳಿಯಲ್ಲಿ ಹೊಟೇಲ್ ಉದ್ಯಮವನ್ನು ಆರಂಭಿಸಬೇಕೆಂದು ಕನಸು ಕಂಡಿದ್ದ ಯುವಕನೋವ೯ ನೇಣಿಗೆ ಶರಣಾದ ಘಟನೆ ಶನಿವಾರ ಮಧ್ಯಾಹ್ನ ನಾಗರಕಟ್ಟೆಯಲ್ಲಿ ನಡೆದಿದೆ. ನಾಗರಕಟ್ಟೆ-ಒಂಟಿಕಟ್ಟೆ ಕ್ರಾಸ್ ರಸ್ತೆಯ ಬಳಿ ಕಬ್ಬಿನ ಜ್ಯೂಸ್ ನ ಮಾರಾಟ ಮಾಡುತ್ತಿರುವ ಶ್ರೀನಿವಾಸ್ ಅವರ ಮಗ ದೀಕ್ಷಿತ್ (35) ಆತ್ಮಹತ್ಯೆ ಮಾಡಿಕೊಂಡ ಯುವಕ. ದುಬೈನಲ್ಲಿ ಉದ್ಯೋಗ ಮಾಡುತ್ತಿದ್ದ ದೀಕ್ಷಿತ್ ಕಳೆದ ಒಂದೂವರೆ ವಷ೯ಗಳಿಂದ ಊರಿನಲ್ಲಿಯೇ ಇದ್ದು ಹೊಟೇಲ್ ನಡೆಸುವ

ಕಲೆಯ ಮೂಲಕ ವಿದ್ಯಾರ್ಥಿಗಳಲ್ಲಿ ತುಳು ಅಭಿರುಚಿ ಶ್ಲಾಘನೀಯ : ರಾಜೇಶ್ ಶೆಟ್ಟಿ

ಮಂಗಳೂರು : ವಿವಿಧ ಕಲಾ ಪ್ರಕಾರಗಳ ಮೂಲಕ ವಿದ್ಯಾರ್ಥಿಗಳಲ್ಲಿ ತುಳು ಭಾಷೆಯ ಬಗ್ಗೆ ಅಭಿರುಚಿ ಅಭಿಮಾನ ಮೂಡಿಸುವ ಕಾರ್ಯ ಶ್ಲಾಘನೀಯ ಎಂದು ಕೆ.ಎಸ್.ಆರ್ .ಟಿ.ಸಿ. ಮಂಗಳೂರು ವಿಭಾಗೀಯ ನಿಯಂತ್ರಾಣಾಧಿಕಾರಿ ರಾಜೇಶ್ ಶೆಟ್ಟಿ ಅವರು ಹೇಳಿದರು.ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಮಂಗಳೂರಿನ ತುಳುಭವನದಲ್ಲಿ ಹಮ್ಮಿಕೊಂಡ ‘ಜೋಕ್ಲೆ ಕಲಾ ಚಾತುರ್ಪು’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಾಲಾ ಕಾಲೇಜು ಹಂತದಲ್ಲಿ ವಿವಿಧ

ಮಂಗಳೂರು: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಮಂಗಳೂರು ತಾಲೂಕು ಪಣಂಬೂರು ಠಾಣಾ ವ್ಯಾಪ್ತಿಯ ಪಣಂಬೂರು ಕಡಲ ಕಿನಾರೆ ಬ್ರೇಕ್ ವಾಟರ್ ಬಳಿ ಸಮುದ್ರದ ದಡದಲ್ಲಿ ಜ.೧೬ರಂದು ಬೆಳಿಗ್ಗೆ ೬.೩೦ಕ್ಕೆ ಅಪರಿಚಿತ ಗಂಡಸಿನ ಮೃತದೇಹ ಪತ್ತೆಯಾಗಿದೆ. ಮೃತರ ವಾರಿಸುದಾರರು ಪತ್ತೆಯಾಗದೆ ಇರುವುದರಿಂದ ಮೃತದೇಹವನ್ನು ಮಂಗಳೂರಿನ ಸರ್ಕಾರಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಗಂಡಸಿನ ಪ್ರಾಯ ಸುಮಾರು55-60 ವರುಷ. ಎತ್ತರ ಸುಮಾರು 5.5 ಅಡಿ. ಮೈಯಲ್ಲಿ ಯಾವುದೇ ಬಟ್ಟೆಗಳು ಇರುವುದಿಲ್ಲದೃಡಕಾಯ ಶರೀರ, 3

ಡಾ. ಬಿ. ವಿ. ಮಂಜುನಾಥ್ ಅವರಿಗೆ ಗೌರವಾನ್ವಿತ FRCP (ಗ್ಲಾಸ್ಗೋ–ಯುಕೆ) ಪ್ರಶಸ್ತಿ

ಎ. ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರವು ಹೆಮ್ಮೆಯಿಂದ ತಿಳಿಸುವುದೇನೆಂದರೆ, ಯುನೈಟೆಡ್ ಕಿಂಗ್ಡಮ್‌ನ ರಾಯಲ್ ಕಾಲೇಜ್ ಆಫ್ ಫಿಸಿಷಿಯನ್ಸ್ ಅಂಡ್ ಸರ್ಜನ್ಸ್ ಆಫ್ ಗ್ಲಾಸ್ಗೋ ಸಂಸ್ಥೆಯು ಹೃದಯರೋಗ ಕ್ಷೇತ್ರದಲ್ಲಿ ಅವರ ವಿಶಿಷ್ಟ ವೈದ್ಯಕೀಯ ಮತ್ತು ಶೈಕ್ಷಣಿಕ ಸಾಧನೆಗಳನ್ನು ಗುರುತಿಸಿ, ಕಾರ್ಡಿಯಾಲಜಿ ವಿಭಾಗದ ಪ್ರಾಧ್ಯಾಪಕರಾಗಿಯೂ ಮುಖ್ಯಸ್ಥರಾಗಿರುವ ಹಾಗೂ ಮುಖ್ಯ ಇಂಟರ್ವೆನ್ಶನಲ್ ಕಾರ್ಡಿಯಾಲಜಿಸ್ಟ್ ಆಗಿರುವ ಡಾ. ಬಿ. ವಿ. ಮಂಜುನಾಥ್ ಅವರಿಗೆ ಅತ್ಯಂತ

ಮಂಜೇಶ್ವರ: ಕೊಲೆ ಪ್ರಕರಣ ಭೇದಿಸಿದ ಪೊಲೀಸರು: ಆರೋಪಿ ಬಂಧನ

ಮಂಜೇಶ್ವರ: ಬದಿಯಡ್ಕ ಸಮೀಪದ ಕುಂದ್ಲಾಜೆ ಪಂಚಾಯತಿನ ಮವ್ವಾರು ಆಜಿಲ ಎಂಬಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ವೃದ್ಧ ಮಹಿಳೆಯ ಸಾವು ಕೊಲೆಯಾಗಿದೆಂಬ ಮರಣೋತ್ತರ ಪರೀಕ್ಷಾ ವರದಿ ಬಂದ ಬೆನ್ನಲ್ಲೇ ಪ್ರಕರಣಕ್ಕೆ ಸಂಬಂಧಿಸಿ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಆಜಿಲ ನಿವಾಸಿ ಪುಷ್ಪಲತಾ ವಿ. ಶೆಟ್ಟಿ (65) ಗುರುವಾರ ಸಾವನ್ನಪ್ಪದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇವರ ಮುಖದಲ್ಲಿ ಉಗುರಿನಿಂದ ಪರಚಿದ ಗಾಯಗಳಿತ್ತು. ಅಲ್ಲದೇ ಮಹಿಳೆಯನ್ನು ಕತ್ತು ಹಿಡಿದು ಉಸಿರುಗಟ್ಟಿಸಿ

ಪರಂಪರಾಗತ ಕೃಷಿ ವಿಕಾಸ ಯೋಜನೆ ಮಾಹಿತಿ ಕಾರ್ಯಗಾರ

ತೋಟಗಾರಿಕೆ ಇಲಾಖೆ ದಕ್ಷಿಣ ಕನ್ನಡ, ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರು ಸುಳ್ಯ ಹಾಗೂ ಪರಿವಾರ ಪಂಜ ರೈತ ಉತ್ಪಾದಕ ಕಂಪನಿ ಲಿಮಿಟೆಡ್ ಇವರ ಸಹಯೋಗ ದಲ್ಲಿ ಪರಂಪರಾಗತ ಕೃಷಿ ವಿಕಾಸ ಯೋಜನೆ ಅಡಿಯಲ್ಲಿ ಗುಚ್ಛ ದ ರೈತರಿಗೆ ಸಾವಯವ ಕೃಷಿ, ಪಿ ಜಿ ಎಸ್ ದೃಡೀಕರಣ ಹಾಗೂ ಬೆಳೆ ರೋಗ ನಿರ್ವಹಣೆ ಬಗ್ಗೆ ತರಬೇತಿ ಕಾರ್ಯಕ್ರಮ ಹಾಗೂ ಮಾಹಿತಿ ಕಾರ್ಯಾಗಾರ ಪಂಜ ಲಯನ್ಸ್ ಸಭಾಭವನ ದಲ್ಲಿ ಜ.13 ರಂದು ನಡೆಯಿತು. ಪರಿವಾರ ಪಂಜ ರೈತ ಉತ್ಪಾದಕ ಕಂಪನಿ […]